DAKSHINA KANNADA
ಮಂಗಳೂರು : ರಸ್ತೆ ಮಧ್ಯೆ ಹೊತ್ತಿ ಉರಿದ ಕಾರು
ಮಂಗಳೂರು : ಮಂಗಳೂರಿನ ಹೊರವಲಯದ ಅಡ್ಯಾರ್ ಗಾರ್ಡನ್ ಬಳಿ ಚಲಿಸುತ್ತಿದ್ದ ಕಾರೊಂದು ಹೊತ್ತಿ ಉರಿದಿದೆ. ಕಾರಿನಲ್ಲಿ ಬೆಂ*ಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಹೊತ್ತು ಸ್ಥಗಿತಗೊಂಡಿತ್ತು.
ಏಕಾಏಕಿ ಕಾರಿಗೆ ಬೆಂ*ಕಿ ಹೊತ್ತಿಕೊಂಡಿದ್ದು ಸ್ಥಳೀಯರು ಬೆಂ*ಕಿಯನ್ನು ನಂದಿಸಲು ಯತ್ನಿಸುವ ಮೊದಲೇ ಕಾರು ಸುಟ್ಟು ಸಂಪೂರ್ಣ ಕರಕಲಾಗಿತ್ತು. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರು ಅಗ್ನಿಶಾಮಕ ದಳ ತಲುಪುವಷ್ಟರಲ್ಲಿ ಕಾರು ಸಂಪೂರ್ಣ ಭಸ್ಮವಾಗಿದೆ.
ಈ ಕಾರು ಮಾಲಕ ಬಿಸಿ ರೋಡಿನ ಗುರುದೀಪ್ ಎಂದು ತಿಳಿದು ಬಂದಿದ್ದು, ಕಾರು ಬಿ ಎಂ ಡಬ್ಲ್ಯೂ ಕಂಪೆನಿಗೆ ಸೇರಿದ 2011-12 ಮಾಡೆಲ್ನದ್ದಾಗಿದೆ.
DAKSHINA KANNADA
ಕೆಮ್ಮಾರ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮಗುಚಿ ಬಿದ್ದ ಘಟನೆ ಇಂದು(ಸೆ.28) ಕೆಮ್ಮಾರದಲ್ಲಿ ನಡೆದಿದೆ. ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಕೂಡಲೇ ಸ್ಥಳೀಯರು ಕೂಡಿಕೊಂಡು ಕಾರನ್ನು ಮೇಲೆಕ್ಕೆತ್ತಿದ್ದಾರೆ.
ಬಸ್ ನಿಲ್ದಾಣದ ಬಳಿಯೇ ಈ ಘಟನೆ ನಡೆದಿದ್ದು, ಅಷ್ಟರಲ್ಲಾಗಲೇ ಬಸ್ ಬಂದು ಹೋಗಿದ್ದರಿಂದ ಅಲ್ಲಿ ಹೆಚ್ಚಿನ ಪ್ರಯಾಣಿಕರು ಇರಲಿಲ್ಲ. ಇದರಿಂದ ಸಂಭವನೀಯ ಅವಘ*ಡವೊಂದು ತಪ್ಪಿದಂತಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ಧಾಣದ ಭದ್ರತೆಯಿಂದ ಜೂಲಿ ನಿವೃತ್ತಿ
ಸುಬ್ರಹ್ಮಣ್ಯಕ್ಕೆ ಸಂಪರ್ಕ ಕಲ್ಪಿಸುವ ಈ ರಾಜ್ಯ ಹೆದ್ದಾರಿಯು ಹಳೆಗೇಟು- ಕೊಯಿಲದವರೆಗೆ ಸಂಪೂರ್ಣ ಹದಗೆಟ್ಟಿದ್ದು, ಹೊಂಡ-ಗುಂಡಿಗಳಿಂದ ಕೂಡಿದೆ. ಹಲವು ಬಾರಿ ಈ ಬಗ್ಗೆ ಮನವಿ ಮಾಡಿದರೂ ಲೋಕೋಪಯೋಗಿ ಇಲಾಖೆ ಸ್ಪಂದಿಸುತ್ತಿಲ್ಲ ಎಂಬ ಆಕ್ರೋಶ ಕೆಮ್ಮಾರ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ವ್ಯಕ್ತವಾಗಿದೆ
DAKSHINA KANNADA
ಅಕ್ರಮ ಮರಳುಗಾರಿಕೆಯ ವಿರುದ್ಧ ಸಿಡಿದೆದ್ದ ಮಂಗಳೂರಿಗರು..! ಬೃಹತ್ ಪ್ರತಿಭಟನೆ..!
ಮಂಗಳೂರು : ಅಕ್ರಮ ಮರಳು ದಂಧೆಯ ವಿರುದ್ಧ ಮಂಗಳೂರಿನ ಜನರ ಆಕ್ರೋಶ ಮುಗಿಲು ಮುಟ್ಟಿದೆ ಅನ್ನೋದಿಕ್ಕೆ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಸಾಕ್ಷಿಯಾಗಿದೆ. ಪಾವೂರು ಉಳಿಯ, ಉಳ್ಳಾಲ ಪೊಯ್ಯೆ ಮೊದಲಾದ ದ್ವೀಪ ಪ್ರದೇಶಗಳಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿರುದ್ಧ ಜನರು ತಿರುಗಿ ಬಿದ್ದಿದ್ದಾರೆ.
ಮರಳು ಮಾಫಿಯಾದಿಂದ ದ್ವೀಪಗಳು ನಾಶವಾಗುತ್ತಿದೆ ಅಂತ ಹಲವಾರು ಬಾರಿ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಹಲವಾರು ಪ್ರತಿಭಟನೆಗಳನ್ನೂ ಕೂಡಾ ನಡೆಸಲಾಗಿತ್ತು. ಆದ್ರೆ ಇದ್ಯಾವುದಕ್ಕೂ ಜಗ್ಗದ ಅಕ್ರಮ ದಂಧೆಕೋರರು ಎಗ್ಗಿಲ್ಲದೆ ಅಕ್ರಮ ಮರಳುಗಾರಿಕೆ ನಡೆಸಿದ್ದರು. ಜಿಲ್ಲಾಡಳಿತ , ಗಣಿ ಇಲಾಖೆ ಕೂಡಾ ಇದಕ್ಕೂ ನಮಗೂ ಸಂಬಂಧವೇ ಇಲ್ಲ ಎಂಬ ರೀತಿ ವರ್ತಿಸಿತ್ತು. ಇದೀಗ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತಕ್ಕ ಪಾಠ ಕಲಿಸಲು ಜನರೇ ಮುಂದಾಗಿದ್ದು, ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ ಜನರು ಅಕ್ರಮ ಮರಳುಗಾರಿಕೆಯ ವಿರುದ್ಧ ಸಿಡಿದೆದ್ದಿದ್ದಾರೆ.
ಈ ಹೋರಾಟ ಕೇವಲ ದ್ವೀಪ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಿಸದೆ ಜಿಲ್ಲೆಯ ಎಲ್ಲೆಡೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧದ ಹೋರಾಟವಾಗಿದೆ. ಜಿಲ್ಲಾಡಳಿತ, ಹಾಗೂ ಜಿಲ್ಲೆಯ ಎರಡೂ ಪ್ರಭಲ ರಾಜಕೀಯ ಪಕ್ಷಗಳು ಈ ಅಕ್ರಮದಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಇನ್ನೂ ಅಕ್ರಮ ಮರಳುಗಾರಿಕೆ ನಡೆದಲ್ಲಿ ಪೊಲೀಸ್ ಠಾಣೆಯ ಮುಂಬಾಗದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ಪ್ರತಿಭಟನೆಯಲ್ಲಿ ನೀಡಲಾಗಿದೆ. ಮಂಗಳೂರು ಕ್ಯಾಥೋಲಿಕ್ ಸಭಾ, ಸಮಾನ ಮನಸ್ಕ ಸಂಘಟನೆ ಹಾಗೂ ಜಾತಿ, ಧರ್ಮ, ಪಕ್ಷಾತೀತ ನಿಲುವಿನ ಜನರ ಜೊತೆ ಸೇರಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು.
DAKSHINA KANNADA
300 ಕೋಟಿ ವಂಚನೆ..!ಮಥುರಾ ಕೃಷ್ಣ ದೇವಸ್ಥಾನದಲ್ಲಿದ್ದ ಆರೋಪಿಯ ಬಂಧನ..!
ಮಂಗಳೂರು/ಮುಂಬೈ : ಮಥುರಾ ಕೃಷ್ಣ ಗೋಪಾಲ ದೇವಸ್ಥಾನದ ವೃಂದಾವನದ ಮಹಾಂತ ಎಂದು ಜನರನ್ನು ವಂಚಿಸಿ 300 ಕೋಟಿ ರೂಪಾಯಿ ಪಂಗನಾಮ ಹಾಕಿದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಮಥುರಾ ಪೊಲೀಸರ ಜೊತೆ ಜಂಟಿ ಕಾರ್ಯಾಚರಣೆಯಲ್ಲಿ ಮಂಹಾಂತನ ಸೋಗಿನಲ್ಲಿದ್ದ ಆರೋಪಿ ವಿಶ್ವನಾಥ ಶಿಂಧೆಯನ್ನು ಬಂಧಿಸಲಾಗಿದೆ.
ಮಹಾರಾಷ್ಟ್ರದ ಬೀಡ್ ಜಿಲ್ಲೆಯ ನಿವಾಸಿಯಾಗಿದ್ದ ವಿಶ್ವನಾಥ ಶಿಂಧೆ, ಜಿಜಾವು ಮಾಸಾಹೇಬ್ ಮಲ್ಟಿ ಸ್ಟೇಟ್ ಬ್ಯಾಂಕ್ ನ ಠೇವಣಿದಾರರಿಗೆ 300 ಕೋಟಿ ವಂಚಿಸಿ ತಲೆಮರೆಸಿಕೊಂಡಿದ್ದ. ಈ ನಕಲಿ ಮಹಾಂತ ಶಿಂಧೆಗಾಗಿ ಅನೇಖ ದಿನದಿಂದ ಬೀಡ್ ಪೊಲೀಸರು ಹುಡುಕಾಟ ನಡೆಸಿದ್ದರು. ಈ ವೇಳೆ ಉತ್ತರ ಪ್ರದೇಶದ ಮಥುರಾ ಕೃಷ್ಣ ಗೋಪಾಲ ದೇವಸ್ಥಾನದಲ್ಲಿ ಇದ್ದಾನೆ ಎಂಬ ಸುಳಿವು ಸಿಕ್ಕಿತ್ತು. ಮಥುರಾದ ಶಿವಾಜಿನಗರ ಪೊಲೀಸರ ಸಹಾಯ ಪಡೆದ ಬೀಡ್ ಪೊಲೀಸರು ದೇವಸ್ಥಾನಕ್ಕೆ ದಾಳಿ ನಡೆಸಿದ್ದು ಈ ವೇಳೆ ಕೊಠಡಿಯೊಂದರಲ್ಲಿ ವಿಶ್ವನಾಥ ಶಿಂಧೆ ಅಡಗಿ ಕುಳಿತಿದ್ದ. ಆತ ಬಂಧನದ ಬಳಿಕ ಮಥುರಾ ನ್ಯಾಯಾಲಯಕ್ಕೆ ಹಾಜರು ಪಡಿಸಿ ಬಳಿಕ ಟ್ರಾನ್ಸಿಟ್ ವಾರೆಂಟ್ ಪಡೆದುಕೊಂಡು ಆರೋಪಿಯನ್ನು ಮುಂಬೈಗೆ ಕರೆತರಲಾಗಿದೆ. ಆರೋಪಿಯು ಈ ಹಿಂದೆ ಕೂಡಾ ಅಪರಾಧ ಪ್ರಕರಣದಲ್ಲಿ ಆರೋಪಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ.