DAKSHINA KANNADA
Mangaluru: ಸಿನೆಮಾಕ್ಕೆ ಸಾವಿದೆ, ನಾಟಕಕ್ಕೆ ಸಾವಿಲ್ಲ-ವಿಜಯಕುಮಾರ್ ಕೊಡಿಯಾಲ್ ಬೈಲ್
ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿಯಾಗಿ ಗುರುವಾರದಂದು ರಂಗಕರ್ಮಿ, ನಟ, ನಿರ್ದೇಶಕ ವಿಜಯಕುಮಾರ್ ಕೊಡಿಯಾಲ್ ಬೈಲ್ ಭಾಗವಹಿಸಿದ್ದರು.
ತನ್ನ ನಾಟಕ, ಸಿನೆಮಾ, ರಂಗಭೂಮಿ ಜರ್ನಿ ಬಗ್ಗೆ ವಿಜಯಕುಮಾರ್ ಕೊಡಿಯಾಲ್ ಬೈಲ್ ಈ ಸಂದರ್ಭ ಸಂವಾದ ನಡೆಯಿತು.
ರಂಗಭೂಮಿ, ಸಿನೆಮಾ ರಂಗ ಹೀಗೆ ಎರಡೂ ಕ್ಷೇತ್ರಗಳಲ್ಲಿ ನಾನು ಇಷ್ಟೊಂದು ಬೆಳೆದುಕೊಂಡು ಬರಲು ಕಾರಣವಾಗಿದ್ದು, ಮಾಧ್ಯಮ ಮಿತ್ರರು ಹಾಗು ನಾಡಿನ ಜನತೆ.
ಪತ್ರಿಕಾ ರಂಗದ ಮಿತ್ರರು ಕೊಟ್ಟ ಸಹಕಾರ ನಾನು ಎಂದಿಗೂ ಮರೆಯಲ್ಲ ಎಂದರು. ನಾನು ನೇರ ನಡೆ ನುಡಿಯ ವ್ಯಕ್ತಿ. ಹೀಗಾಗಿ ನನ್ನ ನೇರ ಮಾತುಗಳು ಹಲವರಿಗೆ ಕಹಿ ಆಗುತ್ತಿದೆ ಎಂದು ಅವರು ನಾನು ಏಕತಾನತೆಗೆ ಶರಣಾಗಿಲ್ಲ.
ನಾಟಕದಿಂದ ನಾಟಕಕ್ಕೆ ನಾನು ಬದಲಾವಣೆ ಕೊಟ್ಟಿದ್ದೇನೆ. ಇಲ್ಲಿ ನನಗೆ ತುಂಬಾ ತೃಪ್ತಿ ಇದೆ. ಸಿನೆಮಾಕ್ಕೆ ಸಾವಿದೆ. ಆದರೆ ನಾಟಕಕ್ಕೆ ಸಾವಿಲ್ಲ.
ತುಳುನಾಡಿನಲ್ಲಿ ಎಂದಿನವರೆಗೆ ಜಾತ್ರೆ, ನಾಟಕ, ಕೋಲ ಇರುತ್ತದೆಯೋ ಅಲ್ಲಿಯವರೆಗೂ ನಾಟಕ ರಂಗ ಇದ್ದೇ ಇರುತ್ತದೆ ಎಂದರು.
ನಾನು 26 ನಾಟಕಗಳನ್ನು ಬರೆದಿದ್ದೇನೆ. ಶಾಂತಿ ಮತ್ತು ಹಿಂಸೆಯ ಸಂಘರ್ಷದ ನಾಟಕ ‘ಒಯ್ಕ್ ಲ ಆವಂದಿನಕುಲು’ ನಾಟಕ ನನಗೆ ಆತ್ಮತೃಪ್ತಿ ಕೊಟ್ಟ ನಾಟಕವಾಗಿದೆ. ಆದರೆ ಆರ್ಥಿಕವಾಗಿ ನಾನು ಅದರಲ್ಲಿ ಸೋಲು ಕಂಡೆ ಎಂದರು.
ಜನರಿಗೆ ಈಗ ಹಾಸ್ಯ ನಾಟಕಗಳು ಬೇಡವಾಗಿದೆ. ‘ಮೈತಿದಿ’ ನಾಟಕದಲ್ಲಿ ಹಾಸ್ಯ ಕಡಿಮೆ. ಆದರೂ ಜನ 2 ಗಂಟೆಗಳ ಕಾಲ ಅಲ್ಲಾಡದೇ ನಾಟಕ ನೋಡ್ತಾರೆ.
ತುಳು ಸಿನೆಮಾಗಳು ಏಕತಾನತೆಯಿಂದ ಬೋರ್ ಹೊಡೆಸುತ್ತಿದೆ. ಇದು ವಿಷಾದನೀತ ಸಂಗತಿ ಎಂದರು.
ಕಾರ್ಯಕ್ರಮವನ್ನು ನಮ್ಮ ಕುಡ್ಲ ವಾಹಿನಿ ನಿರ್ದೇಶಕ ಲೀಲಾಕ್ಷ ಕರ್ಕೇರ ಅವರು ಉದ್ಘಾಟಿಸಿ, ಮಂಗಳೂರು ಪತ್ರಕರ್ತರ ಸಂಘ ನಡೆಸುವ ಕಾರ್ಯಕ್ರಮಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.
ಈ ಸಂದರ್ಭ ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್, ಸಂಘದ ಸದಸ್ಯರು ಉಪಸ್ಥಿತರಿದ್ದರು.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
DAKSHINA KANNADA
ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ
ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.
ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM4 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA7 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!