Connect with us

    LATEST NEWS

    ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆಗೆ ಮಣಿದ ಮಂಗಳೂರು ಪಾಲಿಕೆ

    Published

    on

    ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ಅನಿರ್ಧಿಷ್ಟಾವಧಿ ಪ್ರತಿಭಟನೆಗೆ ಮನಪಾ ಅಧಿಕಾರಿಗಳು ಮಣಿದಿದ್ದು, ಗೂಡಂಗಡಿ ತೆರವು ಕಾರ್ಯಾಚರಣೆಯನ್ನು ಮುಂದಿನ ತೀರ್ಮಾನದವರೆಗೆ ಹಿಂಪಡೆಯುತ್ತೇವೆ ಎಂದು ಭರವಸೆ ನೀಡಿದ್ದಾರೆ.


    ಕೆಲವು ದಿನಗಳಿಂದ ಮನಪಾ ವತಿಯಿಂದ ಬೀದಿಬದಿ ವ್ಯಾಪರಸ್ಥರನ್ನು ಏಕಾಏಕಿ ತೆರವುಗೊಳಿದರ ವಿರುದ್ಧ ದ.ಕ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಹಾಗೂ ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರಪಾಲಿಕೆ ಮುಂಭಾಗ ಇಂದು ಬೆಳಗ್ಗೆಯಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿತ್ತು.

    bangalore

    ಅಬ್ಬಬ್ಬಾ! ಖತರ್ನಾಕ್ ಗರ್ಲ್ ಫ್ರೆಂಡ್; ಪ್ರಿಯಕರನನ್ನೇ ರಾಬರಿ ಮಾಡಿಸಿದ ಯುವತಿ, ಯಾಕೆ ಗೊತ್ತಾ!?

    Published

    on

    ಮಂಗಳೂರು/ ಬೆಂಗಳೂರು: ಇತ್ತೀಚೆಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೆಲವೊಂದು ಪ್ರಕರಣಗಳು ವಿಚಿತ್ರವಾಗಿರುತ್ತವೆ. ಇಲ್ಲೊಬ್ಬಾಕೆ ಪ್ರಿಯತಮನ ಮೊಬೈಲ್‌ನಲ್ಲಿದ್ದ ತನ್ನ ಫೋಟೋ ಹಾಗೂ ವೀಡಿಯೊಗಳನ್ನು ಡಿಲೀಟ್ ಮಾಡಿಸಲೆಂದು ರಾಬರಿ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಸಿನಿಮೀಯ ರೀತಿ ಪ್ರಿಯತಮೆಯೇ ಪ್ರಿಯಕರನ ಮೇಲೆ ರಾಬರಿ ಮಾಡಿಸಿ ಸಿಕ್ಕಿಬಿದ್ದಿದ್ದಾಳೆ.

    ಬೆಳ್ಳಂದೂರು ಪೊಲೀಸರು ಟೆಕ್ಕಿ ಶ್ರುತಿ ಸೇರಿ ಮೂವರನ್ನು ಬಂಧಿಸಿದ್ದಾರೆ.

    ಆ್ಯಕ್ಸಿಡೆಂಟ್ – ಡ್ರಾಮಾ :
    ಕಳೆದ ಸೆಪ್ಟೆಂಬರ್ 20 ರಂದು ಪ್ರಿಯಕರ ವಂಶಿಕೃಷ್ಣರೆಡ್ಡಿ ಎಂಬಾತ ಶ್ರುತಿ ಭೇಟಿಗೆ ತೆರಳಿದ್ದ. ಭೇಟಿಯಾಗಿ ಹೊರಬರುತ್ತಿದ್ದಂತೆ ಸ್ವಿಫ್ಟ್ ಕಾರಿನಲ್ಲಿ ಬಂದ ಅಪರಿಚಿತರು ವಂಶಿಕೃಷ್ಣರೆಡ್ಡಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಜಗಳ ತೆಗೆದ ಅಪರಿಚಿತರು ಆತನ ಬಳಿಯಿದ್ದ ಮೊಬೈಲ್ ಕಸಿದಿದ್ದರು. ಅಲ್ಲದೇ, ವಂಶಿ ಜತೆಯಲ್ಲಿಯೇ ಇದ್ದ ಶ್ರುತಿಯ ಮೊಬೈಲ್‌ ಅನ್ನು ಕಸಿದುಕೊಂಡಿದ್ದರು. ಬಳಿಕ ದೂರು ಕೊಡುವುದು ಬೇಡ ಮೊಬೈಲ್ ಹೋದರೆ ಹೋಯಿತು ಎಂದು ಬಾಯ್‌ಫ್ರೆಂಡ್‌ ವಂಶಿ ಮುಂದೆ ಶ್ರುತಿ ನಾಟಕವಾಡಿದ್ದಾಳೆ.
    ಆದರೆ, ಇಷ್ಟಕ್ಕೆ ಸುಮ್ಮನಾಗದ ವಂಶಿಕೃಷ್ಣ ಬೆಳ್ಳಂದೂರು ಠಾಣೆಗೆ ತೆರಳಿ ಕಾರಿನ ನಂಬರ್ ಸಮೇತ ದೂರು ನೀಡಿದ್ದರು.
    ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

    ಇದನ್ನು ಓದಿ:ಪುತ್ತೂರು ಕಾಂಗ್ರೆಸ್‌ ಮುಖಂಡನ ಅಶ್ಲೀ*ಲ ವೀಡಿಯೋ ವೈರಲ್‌..!

    ಬೇಡವಾಗಿದ್ದ ಬಾಯ್ ಫ್ರೆಂಡ್ :

    ಇತ್ತೀಚೆಗೆ ಪ್ರಿಯತಮ ವಂಶಿಕೃಷ್ಣನಿಂದ ದೂರವಾಗಲು ಶ್ರುತಿ ಯತ್ನಿಸಿದ್ದಳು. ಆದರೆ, ವಂಶಿಕೃಷ್ಣನ ಮೊಬೈಲ್‌ನಲ್ಲಿ ಶ್ರುತಿಯ ಫೋಟೋಗಳಿದ್ದವು. ನೇರವಾಗಿ ಹೇಳಿದರೆ ಎಲ್ಲಿ ವಂಶಿಕೃಷ್ಣ ವಿರೋಧ ವ್ಯಕ್ತಪಡಿಸುತ್ತಾನೋ ಎಂಬ ಭಯದಿಂದ ಶ್ರುತಿ ಮೊಬೈಲ್ ರಾಬರಿ ಮಾಡುವ ಯೋಜನೆ ರೂಪಿಸಿದ್ದಾರೆ. ಸದ್ಯ ಆರೋಪಿ ಟೆಕ್ಕಿ ಶ್ರುತಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದು, ಈ ಬಗ್ಗೆ ಬೆಳ್ಳಂದೂರು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

    Continue Reading

    BANTWAL

    ದೊಡ್ಮನೆಗೆ ಎಂಟ್ರಿ ಕೊಟ್ಟ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ಯ

    Published

    on

    ಬಂಟ್ವಾಳ : ಖ್ಯಾತ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ.
    ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ‌ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ಯ ತಮ್ಮ ಕಾಮಿಡಿ ಮ್ಯಾನರಿಸಂನಿಂದಲೇ ಫೇಮಸ್. ಹಾಸ್ಯಮಯ ವೀಡಿಯೋಗಳನ್ನು ಮಾಡಿ ಜನಮನಕ್ಕೆ ಹತ್ತಿರವಾಗಿದ್ದಾರೆ. ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ.

    ಟಿಕ್ ಟಾಕ್ ನಲ್ಲಿ ಕಾಮಿಡಿ ವೀಡಿಯೋ ಮಾಡಿ ಪ್ರಸಿದ್ದಿ ಪಡೆದಿದ್ದ ಧನರಾಜ್ ಬಳಿಕ ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಕಾಮಿಡಿ ವಿಡಿಯೋಗಳನ್ನು ಮಾಡಿ ಖ್ಯಾತಿ ಗಳಿಸಿದ್ದಾರೆ. ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿಯೂ ಗಮನ ಸೆಳೆದಿದ್ದರು.


    ವಿವಾಹದ ಬಳಿಕವೂ ಪತ್ನಿ‌ ಪ್ರಜ್ಞಾ ಆಚಾರ್ಯ ಜೊತೆಗೂಡಿ ವೀಡಿಯೋಗಳನ್ನು ಮಾಡುತ್ತಿರುವ ಧನರಾಜ್ ಆಚಾರ್ಯ ಇತ್ತೀಚೆಗಷ್ಟೇ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ.

    Continue Reading

    LATEST NEWS

    ಫಾರ್ಚೂನರ್ ಕಾರಿನಲ್ಲಿ ಬಂದು ಹಸು ಕಳ್ಳತನ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

    Published

    on

    ಮಂಗಳೂರು/ಶಿವಮೊಗ್ಗ : ಫಾರ್ಚೂನರ್ ಕಾರಿನಲ್ಲಿ ಬಂದ ಖದೀಮರು ಹಸುವನ್ನು ಕದ್ದು ಪರಾರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಹಸು ಕಳವು ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

    KA 01 MZ 5843 ನಂಬರಿನ ಬೂದು ಬಣ್ಣದ ಟೊಯೀಟಾ ಫಾರ್ಚೂನರ್ ಕಾರಿನಲ್ಲಿ ಬಂದಿದ್ದ ಕಳ್ಳರು ಮಂಕಿ ಕ್ಯಾಪ್ ಹಾಕಿಕೊಂಡು, ಹಸುವೊಂದನ್ನು ಕಳವುಗೈದಿದ್ದಾರೆ. ಹಸು ಕದ್ದ ವಿಷಯ ತಿಳಿದ ಕೂಡಲೇ ಸ್ಥಳೀಯರು ಕಾರನ್ನು ಅಡ್ಡ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಕಳ್ಳರು ಸ್ಥಳೀಯರ ಮೇಲೆ ಕಾರು ಹತ್ತಿಸಲು ಯತ್ನಿಸಿದ್ದಾರೆ.

    ಇದನ್ನೂ ಓದಿ : WATCH : ಅಪಘಾತ ತಪ್ಪಿಸಲು ಹೋಗಿ ಎಡವಟ್ಟು ಮಾಡಿಕೊಂಡ ಕಾರು ಚಾಲಕ; ವೀಡಿಯೋ ವೈರಲ್

    ಘಟನೆ ಕುರಿತು ಸ್ಥಳೀಯರು ಸೊರಬ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಗೋಕಳ್ಳರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

    ವಿಡಿಯೋ ನೋಡಿ:

     

    Continue Reading

    LATEST NEWS

    Trending