Connect with us

LATEST NEWS

ಮುತಾಲಿಕ್‌ಗೆ ರಾಜಾತಿಥ್ಯ ವಿಚಾರ: ಸ್ಪಷ್ಪನೆ ನೀಡಿದ ಮಂಗಳೂರು ಪೊಲೀಸ್‌ ಕಮೀಷನರ್‌

Published

on

ಮಂಗಳೂರು: ಇತ್ತೀಚೆಗೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಮಂಗಳೂರು ನಗರ ಪೊಲೀಸ್‌ ಆಯುಕ್ತರನ್ನು ಭೇಟಿ ಮಾಡಿದ್ದರು. ಈ ವೇಳೆ ಪೊಲೀಸ್‌ ಕಮೀಷನರ್‌ ಮುತಾಲಿಕ್‌ಗೆ ರಾಜಾಥಿತ್ಯ ನೀಡಿದ್ದರು ಎಂದು ಕೆಲವರು ಸೋಷಿಯಲ್‌ ಮೀಡಿಯಾಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಇಂದು ಅದಕ್ಕೆ ಎನ್‌.ಶಶಿಕುಮಾರ್‌ ಪ್ರತಿಕ್ರಿಯಿಸಿದ್ದಾರೆ.


ಇತ್ತೀಚೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಮಂಗಳೂರು ಭೇಟಿಯ ವೇಳೆ ಬಜ್ಪೆ ಪೊಲೀಸ್‌ ಠಾಣಾ ವ್ಯಾಪ್ತಿಯ ಇತ್ತೀಚೆಗೆ ಸುದ್ದಿಯಾಗಿದ್ದ

ಮಳಲಿ ಮಸೀದಿಗೆ ಶ್ರೀರಾಮ ಸೇನೆ ಪ್ರಮೋದ್‌ ಮುತಾಲಿಕ್‌ ಮತ್ತು ಸಹಚರರು ಭೇಟಿ ಮಾಡುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಅದಕ್ಕಾಗಿ ಸಂಘರ್ಷ ಉಂಟಾಗಬಾರದೆಂದು ಪೊಲೀಸರು ಫಾಲೋಅಪ್‌ ಮಾಡುತ್ತಿದ್ದರು.

ಈ ಮಧ್ಯೆ ಕಮೀಷನರ್‌ ಆಫೀಸ್‌ಗೆ ಮಧ್ಯಾಹ್ನದ ವೇಳೆಗೆ ಮುತಾಲಿಕ್‌ ಭೇಟಿ ನೀಡಿದ್ದಾರೆ. ಹಾಗೂ ಮಸೀದಿಗೆ ಭೇಟಿ ನೀಡಲು ಅವಕಾಶ ಕೇಳಿದಾಗ ನಾನು ಅನುಮತಿ ನಿರಾಕರಿಸಿದ್ದೇನೆ.

ಭೇಟಿ ಮುಗಿದ ನಂತರ ಎಂದಿನಂತೆ ಊಟಕ್ಕೆ ಹೊರಡಲು ತಯಾರಾದಾಗ ತೆಗೆದ ಫೋಟೋವನ್ನಿಟ್ಟುಕೊಂಡು ನಿರ್ದಿಷ್ಟ ಕೆಲ ಸಂಘಟನೆ ಮತ್ತು ಪಕ್ಷಕ್ಕೆ ಸೇರಿದವರು ವೈರಲ್‌ ಮಾಡಿದ್ದಾರೆ.

ಆದರೆ ಒಂದು ಸಾಂಧರ್ಬಿಕ ಚಿತ್ರವನ್ನು ತಪ್ಪಾಗಿ ಬಿಂಬಿಸಿರುವುದು ಸರಿಯಲ್ಲ. ಯಾರು ಇದನ್ನು ವೈರಲ್‌ ಮಾಡಿದ್ದಾರೋ ಅವರ ಪಕ್ಷದ ಪ್ರತಿನಿಧಿಗಳ ಮೇಲೂ ಸಾಕಷ್ಟು ಪ್ರಕರಣ ಇದ್ದರೂ ಪಕ್ಷದ ನೆಲೆಯಲ್ಲಿ ಗುರುತಿಸುವ ವೇಳೆ ಅವರಿಗೆ ಗೌರವ ಕೊಟ್ಟಿದ್ದೇವೆ.

ಆದ್ದರಿಂದ ಸಾಂಧರ್ಬಿಕ ಚಿತ್ರವನ್ನು ತಪ್ಪಾಗಿ ಬಿಂಬಿಸಿರುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು.

bengaluru

ಮನ್ಸಿಂದ ಯಾರೂನು ಕೆಟ್ಟೋರಲ್ಲ..ಬಿಗ್ ಬಾಸ್ ವಿನಯ್ ಕಣ್ಣೀರು

Published

on

ಬೆಂಗಳೂರು : ಬಿಗ್​ಬಾಸ್ ಮನೆಯಲ್ಲಿ ವಿನಯ್ ಅತ್ಯಂತ ಗಟ್ಟಿ ಸ್ಪರ್ಧಿ ಎಂದು ಕರೆಸಿಕೊಳ್ಳುವ ವಿನಯ್ ಗೌಡ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.ಮಂಗಳವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಮಾತ್ರ ವಿನಯ್ ಕಣ್ಣೀರು ಹಾಕಿದ್ದಾರೆ.

ಮನೆಗೆ ಇಬ್ಬರು ಹೊಸ ಸ್ಪರ್ಧಿಗಳು ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಬಂದಿದ್ದಾರೆ. ಅವರಲ್ಲಿ ಒಬ್ಬರಾದ ಪವಿ ಪೂವಪ್ಪ ಅವರು ಸ್ನೇಹಿತ್, ವಿನಯ್ ಜೊತೆ ಮಾತನಾಡುತ್ತಿದ್ದಾಗ ಸ್ನೇಹಿತ್ ಬಿಗ್​ಬಾಸ್ ಮನೆಯ ಸ್ಪರ್ಧಿಗಳ ಬಗ್ಗೆ ಹೊರಗಿರುವ ಅಭಿಪ್ರಯಾದ ಬಗ್ಗೆ ತಿಳಿಸುವಂತೆ ಹೇಳ್ತಾರೆ.ಆಗ ಪವಿ ಬಳೆಯ ಎಪಿಸೋಡ್ ಭಾರಿ ಸದ್ದು ಮಾಡಿತು ಎಂದರು.ಆ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಬಹಳ ಚರ್ಚೆಯಾಯಿತು ಎಂದು ಸಹ ಹೇಳಿದರು.

ಇದರಿಂದಾಗಿ ವಿನಯ್‌ ತೀರಾ ಡಲ್‌ ಆಗ್ಬಿಟ್ಟರು. ಬಾತ್‌ರೂಮ್‌ ಒಳಗೆ ಹೋಗಿ ವಿನಯ್ ಗಳಗಳನೆ ಅತ್ತುಬಿಟ್ಟರು. ಬಳಿಕ ‘ಬಿಗ್ ಬಾಸ್‌’ ಬಳಿ ಮಾತನಾಡಿದ್ಮೇಲೆ ವಿನಯ್ ಸಮಾಧಾನಗೊಂಡರು.

Continue Reading

DAKSHINA KANNADA

Sullia : ಕಂಠಪೂರ್ತಿ ಕುಡಿದು ಅಡ್ಡಾದಿಡ್ಡಿ ಕಾರು ಚಲಾಯಿಸಿದ ಸರ್ಕಾರಿ ಅಧಿಕಾರಿ

Published

on

ಸುಳ್ಯ : ಸರ್ಕಾರಿ ಅಧಿಕಾರಿಯೊಬ್ಬರು ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಾರ್ವಜನಿಕರಿಂದ ಬೈಗುಳ ತಿಂದ ಸುಳ್ಯದ ಅರಂಬೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರು ಕಂಠಪೂರ್ತಿ ಕುಡಿದ ಮದ್ಯದ ಮತ್ತಿನಲ್ಲಿ ಸುಳ್ಯ ಅರಂಬೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ, ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಹಲವಾರು ವಾಹನಗಳಿಗೆ ಢಿಕ್ಕಿ ಆಗುವಂತಹ ಸಂಭಾವ್ಯ ದುರಂತವೊಂದು ಸಾರ್ವಜನಿಕರ ಸಮಯ ಪ್ರಜ್ಞೆಯಿಂದ ತಪ್ಪಿದೆ. ರಸ್ತೆಯುದ್ದಕ್ಕೂ ವಿರುದ್ಧ ದಿಕ್ಕಿನಲ್ಲಿ, ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ಸಂಭವಿಸುವ ಸಾಧ್ಯತೆಯನ್ನು ಮನಗಂಡ ಕೆಲವು ವಾಹನ ಸವಾರರು ಸಾರ್ವಜನಿಕರ ಸಹಕಾರದಿಂದ ಅಡ್ಡಗಟ್ಟಿದ್ದಾರೆ. ಸರ್ಕಾರಿ ಅಧಿಕಾರಿಯ ಈ ವರ್ತನೆ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

Continue Reading

bangalore

ಕ್ಷೀಣಿಸುತ್ತಿದೆ ಹಿರಿಯ ನಟಿ ಲೀಲಾವತಿ ಆರೋಗ್ಯ-ಡಿಕೆಶಿ, ನಟ ಶಿವಣ್ಣ ಆರೋಗ್ಯ ವಿಚಾರಣೆ

Published

on

ಬೆಂಗಳೂರು: ವಯೋಸಹಜ ಅನಾರೋಗ್ಯದಿಂದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದು ಅವರ ಆರೋಗ್ಯ ವಿಚಾರಿಸುವುದಕ್ಕಾಗಿ ಅನೇಕ ನಟ ನಟಿಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.ಜೊತೆಗೆ ನಿನ್ನೆ ನಟ ಶಿವಣ್ಣ ದಂಪತಿ ಕೂಡ ಮನೆಗೆ ಭೆಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.


ಮನೆಗೆ ಆಗಮಿಸಿದ ಶಿವಣ್ಣ ಅವರನ್ನು ವಿನೋದ್‌ ರಾಜ್‌ಕುಮಾರ್‌ ಹೆಚ್ಚು ಆತ್ಮೀಯವಾಗಿ ಬರಮಾಡಿಕೊಂಡು ತಾಯಿಯ ಆರೋಗ್ಯದ ಕುರಿತು ವಿವರಣೆ ನೀಡಿದ್ದಾರೆ..


ಇನ್ನು ಮೊನ್ನೆಯಷ್ಟೇ ನಟ ಅರ್ಜುನ್‌ ಸರ್ಜಾ ಲೀಲಾವತಿ ಅವರ ಮನೆಗೆ ತೆರಳಿ ಅವರ ಆರೋಗ್ಯ ವಿಚಾರಸಿದ್ದರು.. ಅಲ್ಲದೇ ದರ್ಶನ್‌ ಸಹ ಅವರ ಮನೆಗೆ ಭೇಟಿ ನೀಡಿದ್ದರು.. ಡಿಕೆಶಿ ಕೂಡ ಆರೋಗ್ಯ  ವಿಚಾರಿಸಿದ್ದಾರೆ.

ವಯೋಸಹಜ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಅನೇಕ ಕಲಾವಿದರು ಮತ್ತು ತಂತ್ರಜ್ಞರು ಸೋಲದೇವನಹಳ್ಳಿಯಲ್ಲಿನ ಅವರ ಮನೆಗೆ ಭೇಟಿ ನೀಡುತ್ತಿದ್ದಾರೆ..

Continue Reading

LATEST NEWS

Trending