DAKSHINA KANNADA
Mangaluru: ನಗರದ ಜನಪ್ರಿಯ ರತ್ನಾಸ್ ವೈನ್ ಗೇಟ್ 13ನೇ ಶಾಖೆ ಆರಂಭ
ಮಂಗಳೂರು: ಮಂಗಳೂರಿನ ಬಲ್ಲಾಳ್ಭಾಗ್ ಬಳಿ ನೂತನವಾಗಿ ಆರಂಭಗೊಂಡ ರತ್ನಾಸ್ ವೈನ್ ಗೇಟ್ ಉದ್ಘಾಟನೆ ಇಂದು ನಡೆಯಿತು.
ದೀಪ ಬೆಳಗಿಸುವ ಮೂಲಕ ಶ್ರೀ ದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ ಎ ಸದಾನಂದ ಶೆಟ್ಟಿ ರತ್ನಾಸ್ ವೈನ್ ಗೇಟ್ನ 13ನೇ ಕಚೇರಿಯನ್ನು ಲೋಕಾರ್ಪಣೆಗೊಳಿಸಿದರು. ಗೌರವ ಡಾಕ್ಟರೇಟ್ ಪಡೆದ ಡಾ ಸದಾನಂದ ಶೆಟ್ಟಿ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಬಳಿಕ ಮಾತನಾಡಿದ ಅವರು ವ್ಯಾಪಾರ ಮಾಡುವಾಗ ಮನುಷ್ಯನಿಗೆ ದೈವ ಬಲದ ಜೊತೆಗೆ ಮನೋಸ್ಥೈರ್ಯವೂ ಇರಬೇಕು. ರತ್ನಾಸ್ ವೈನ್ಗೇಟಿನ ಮಾಲಕರು ಇದನ್ನು ಸಾಧಿಸಿ ತೋರಿಸುವ ಮೂಲಕ ಅವರು ಜನಪ್ರೀತಿಗೆ ಪಾತ್ರರಾಗಿದ್ದಾರೆ ಎಂದರು.
ಎಂಆರ್ಜಿ ಗ್ರೂಪ್ನ ಅಧ್ಯಕ್ಷ ಕೆ ಪ್ರಕಾಶ್ ಶೆಟ್ಟಿ ಶುಭ ನುಡಿಗಳನ್ನಾಡಿ, ಏರ್ಪೋರ್ಟಿನಲ್ಲೂ ಕಂಡು ಬಾರದ ಸುಂದರವಾದ ಒಂದು ಶೋರೂಂ ಮಂಗಳೂರಿನಲ್ಲಿ ಆರಂಭಗೊಂಡಿರುವುದು ತುಂಬ ಸಂತಸವಾಗಿದೆ ಎಂದು ನುಡಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, 13ನೇ ಸಂಸ್ಥೆಯನ್ನು ಮಾಡಿದ್ದಾರೆ. ಮಾಲಕರು ಸಿಬ್ಬಂದಿಗಳಿಗೆ ಪ್ರೀತಿ ತೋರಿಸುತ್ತಿರುವುದರಿಂದ ಇಂತಹ ಸಂಸ್ಥೆ ಮಾಡಲು, ಬೆಳೆಸಲು ಸಾಧ್ಯವಾಗಿದೆ ಎಂದರು.
ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಬಿ ಕರ್ಕೇರ ಮಾತನಾಡಿ ಮಂಗಳೂರು ಸ್ಮಾರ್ಟ್ ಸಿಟಿ ಆಗಿದೆ. ಆದರೆ ಜನರಿಗೆ ಸ್ಮಾರ್ಟ್ ಸಿಟಿಯ ಕಲ್ಪನೆಯನ್ನು ರಮೇಶ್ ನಾಯ್ಕ್ ಅವರು ಹಲವು ವರ್ಷಗಳ ಹಿಂದೆಯೇ ಮಾಡಿಕೊಟ್ಟಿದ್ದಾರೆ. ಅವರ ಕಲ್ಪನೆ ಇಲ್ಲಿನ ಶೋರೂಂ ಮೂಲಕ ಸಾಕಾರಗೊಂಡಿದೆ ಎಂದರು. ಕಾರ್ಯಕ್ರಮದಲ್ಲಿ ಮಂಗಳೂರಿನ ಖ್ಯಾತ ಬಿಲ್ಡರ್ ರೋಹನ್ ಕಾರ್ಪೋರೇಶನ್ ಎಂಡಿ ರೋಹನ್ ಮೊಂತೆರೋ, ಕಟ್ಟಡದ ಮಾಲಕರಾದ ವೀರೇಂದ್ರ ಮತ್ತು ಜಯಲಕ್ಷ್ಮೀ , ಆರ್ಕಿಟೆಕ್ಟ್ ಸದಾನಂದ ನಾಯಕ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು. ಡಿ ರಮೇಶ್ ನಾಯ್ಕ್ ಅವರು ಪ್ರಸ್ತಾವಿಕ ನುಡಿಗಳನ್ನಾಡಿದರು. ಸಮಾರಂಭದಲ್ಲಿ ಉದ್ಯಮಿ ಪಡುಬಿದ್ರಿ ಸಂತೋಷ್, ದಯಾನಂದ ನಾಯ್ಕ್, ಸುಧಾಕರ್ ನಾಯ್ಕ್ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು. ರತ್ನಾಸ್ ವೈನ್ಗೇಟ್ ಶಾಖೆ ಬಲ್ಮಠ, ಪಾಂಡೇಶ್ವರ, ಹಂಪನ್ ಕಟ್ಟೆ, ಫಳ್ನೀರ್, ಬಿಜೈ, ಪಡೀಲ್, ಕುಲಶೇಖರ, ವಾಮಂಜೂರು, ಕೊಟ್ಟಾರ, ಬೈಕಂಪಾಡಿ, ಸುರತ್ಕಲ್ ಮತ್ತು ಎಂಜಿ ರಸ್ತೆಯಲ್ಲಿವೆ.
DAKSHINA KANNADA
ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!
ಮಂಗಳೂರು ( ರಾಜಸ್ಥಾನ ) : ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.
ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :
ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.
ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.
DAKSHINA KANNADA
ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ
ಮಂಗಳೂರು : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.
ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.
DAKSHINA KANNADA
ನಿಮ್ಮ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನು ಇಟ್ಟರೆ ಶುಭ
ಮಂಗಳೂರು: ವಾಸ್ತುಶಾಸ್ತ್ರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅದನ್ನು ಪಾಲಿಸಿದರೆ ಅದೃಷ್ಟ ನಿಮ್ಮದಾಗುತ್ತದೆ. ಕಚೇರಿಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ವಾಸ್ತುವಿನಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ಅನುಸರಿಸಿ ಕೆಲಸದಲ್ಲಿ ಪ್ರಗತಿ ಹೊಂದಬಹುದು. ಈ ವಾಸ್ತುಗಳನ್ನು ಅನುಸರಿಸಿದರೆ ನಿಮಗೆ ಬಡ್ತಿ ದೊರೆಯುವುದಲ್ಲದೆ, ಸಂಬಳ ಕೂಡ ಹೆಚ್ಚಾಗುತ್ತದೆ.
ಸ್ಫಟಿಕ ಲೋಹ
ವಾಸ್ತು ಪ್ರಕಾರ ನಿಮ್ಮ ಆಫೀಸ್ ಡೆಸ್ಕ್ ಮೇಲೆ ಸ್ಫಟಿಕ ಲೋಹವನ್ನು ಇಟ್ಟರೆ ಅದು ನಿಮ್ಮ ಕೆಲಸವನ್ನು ಸುಲಭಗೊಳಿಸುತ್ತದೆ.
ಬಿದಿರಿನ ಗಿಡ
ವಾಸ್ತು ಪ್ರಕಾರ ಬಿದಿರಿನ ಗಿಡವನ್ನು ನೀವು ಡೆಸ್ಕ್ ಮೇಲೆ ಇಡುವುದು ಬಹಳ ಮಂಗಳಕರ. ಇದು ನಿಮಗೆ ಚೈತನ್ಯ ತುಂಬುತ್ತದೆ.
ಬುದ್ಧನ ಪ್ರತಿಮೆ
ಬುದ್ಧನ ಪ್ರತಿಮೆಯನ್ನು ಡೆಸ್ಕ್ ಮೇಲಿಟ್ಟರೆ ಅದು ನಿಮ್ಮನ್ನು ಶಾಂತಿಯುತವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ.
ಹಡಗು ಚಿತ್ರವಿರುವ ನಾಣ್ಯ
ನಿಮಗೆ ಉದ್ಯೋಗದಲ್ಲಿ ಬಡ್ತಿ ಬೇಕಾದರೆ ವಾಸ್ತುಪ್ರಕಾರ ನಿಮ್ಮ ಟೇಬಲ್ ಮೇಲೆ ಹಡಗು ಚಿತ್ರವಿರುವ ನಾಣ್ಯ ಇಟ್ಟುಕೊಳ್ಳಬೇಕು.
ಗಣೇಶ ಮೂರ್ತಿ
ಇವಿಷ್ಟೇ ಅಲ್ಲದೆ ನೀವು ಮೇಜಿನ ಮೇಲೆ ಗಣೇಶ ಮೂರ್ತಿಯನ್ನು ಇಟ್ಟುಕೊಂಡರೆ ನಿಮಗೆ ಎಂದಿಗೂ ಯಾವ ವಿಘ್ನಗಳೂ ಬರುವುದಿಲ್ಲ.
- FILM7 days ago
“ನಿವೇದಿತಾಜೈನ್”ಗೆ ಸಾ*ವಿನ ಸುಳಿವು ಮೊದಲೇ ಇತ್ತಾ.!? ಈಬಗ್ಗೆ ನಿವೇದಿತಾ ತಾಯಿ ಹೇಳಿದ್ದೇನು ಗೊತ್ತಾ?
- DAKSHINA KANNADA7 days ago
ಮಂಗಳೂರಿನಲ್ಲಿ ಬೆಳಕಿಗೆ ಬಂತು ಬಹುದೊಡ್ಡ ಆನ್ಲೈನ್ ವಂಚನೆ ಪ್ರಕರಣ; ಕೋಟಿಗಟ್ಟಲೆ ಕಳೆದುಕೊಂಡ ನಿವೃತ್ತ ಇಂಜಿನಿಯರ್
- LATEST NEWS6 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- DAKSHINA KANNADA7 days ago
ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!