Connect with us

DAKSHINA KANNADA

Mangaluru: ದ.ಕ. ಜಿಲ್ಲಾ ಮಡಿವಾಳರ ಸಂಘದಿಂದ ಸ್ವಾತಂತ್ರ್ಯೋತ್ಸವ ಸಂಭ್ರಮ

Published

on

ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ(ರಿ) ಮಂಗಳೂರು, ರಜಕ ಯೂತ್‌(ರಿ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಮಹಿಳಾ ಘಟಕ ಮಂಗಳೂರು ಇವುಗಳ ಜಂಟಿ ಸಹಭಾಗಿತ್ವದಲ್ಲಿ ನಗರದ ಬಂಗ್ರ ಕೂಳೂರಿನ ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘದ ಪ್ರಧಾನ ಕಚೇರಿಯಲ್ಲಿ ನೂತನ ಧ್ವಜ ಸ್ತಂಭದ ಉದ್ಘಾಟನೆ ಹಾಗೂ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆ.15ರಂದು  ನಡೆಯಿತು.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘ(ರಿ) ಮಂಗಳೂರು, ರಜಕ ಯೂತ್‌(ರಿ) ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಮಹಿಳಾ ಘಟಕ ಮಂಗಳೂರು ಇವುಗಳ ಜಂಟಿ ಸಹಭಾಗಿತ್ವದಲ್ಲಿ ನಗರದ ಬಂಗ್ರ ಕೂಳೂರಿನ ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಸಂಘದ ಪ್ರಧಾನ ಕಚೇರಿಯಲ್ಲಿ ನೂತನ ಧ್ವಜ ಸ್ತಂಭದ ಉದ್ಘಾಟನೆ ಹಾಗೂ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಆ.15ರಂದು  ನಡೆಯಿತು.

ಮೂಡುಬಿದಿರೆ ಸಹಾಯಕ ಪೊಲೀಸ್‌ ಉಪನಿರೀಕ್ಷಕ ಹರೀಶ್‌ ಎಚ್‌ ಪಿ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಶುಭ ಸಂದೇಶ ನೀಡಿದರು.

ಹಲವು ವೀರ ಸೇನಾನಿಗಳು, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಮೂಲಕ ಪಡೆದ ಈ ಸ್ವಾತಂತ್ರ್ಯವನ್ನು ನಾವೆಲ್ಲರೂ ಅದರ ಮಹತ್ವವನ್ನು ಅರಿತು ಬಾಳಬೇಕು.

ಭಾರತದ ಏಕತೆ, ಐಕ್ಯತೆಯನ್ನು ಎಲ್ಲರೂ ಪ್ರದರ್ಶಿಸಬೇಕು. ಇಂತಹ ಸಂಘಟನೆಗಳು, ಸಮುದಾಯದ ವತಿಯಿಂದ ನಡೆಯುವ ಸ್ವಾತಂತ್ರ್ಯೋತ್ಸವವನ್ನು ಎಲ್ಲರೂ ಸಂಭ್ರಮದಿಂದ ಆಚರಿಸುವ ಮೂಲಕ ನಾವು ಒಂದೇ ತಾಯ ಮಕ್ಕಳಂತೆ ಬಾಳೋಣ ಎಂದು ಕರೆ ನೀಡಿದರು.

ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ರಾಮಚಂದ್ರ ಕುಡುಪು ಅಧ್ಯಕ್ಷತೆ ವಹಿಸಿದ್ದರು.

ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ್‌ ಪೊಳಲಿ, ಕೋಶಾಧಿಕಾರಿ ಶಶಿಧರ್ ಕೊಂಡಾಣ,ರಜಕ ಯೂತ್ ಸಂಘದ ಅಧ್ಯಕ್ಷ ಸಂಪತ್‌ ಕೊಂಡಾಣ, ದಕ್ಷಿಣ ಕನ್ನಡ ಜಿಲ್ಲಾ ಮಡಿವಾಳರ ಮಹಿಳಾ ಘಟಕದ ಘಟಕದ ಪ್ರಧಾನ ಕಾರ್ಯದರ್ಶಿ ಆಶಾ ಜಿನೇಂದ್ರ ಮಾಣಿವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪದಾಧಿಕಾರಿಗಳಾದ ಭಾಸ್ಕರ್‌ ಬೇಕಲ್‌, ಮೋಹನ್‌ ಅಳಪೆ, ಪ್ರೇಮಾ ಅಶೋಕ್ ಪೊಳಲಿ, ಆನಂದ ತೊಕ್ಕೊಟ್ಟು, ರಾಜ್ ಕುಂದರ್, ಕಿರಣ್ ಕುಮಾರ್, ಜಲಜ ಗುರುಪುರ, ಸುಜಾತಾ, ಶ್ವೇತಾ, ಸೌಜನ್ಯ, ಆಶಾ, ಆರತಿ, ಅರ್ಷಿತ, ನಿಖಿತಾ, ರಮ ಬೇಕಲ್, ಯಶೋಧ, ಸಂಧ್ಯಾ ಕಾಟಿಪಳ್ಳ, ಗ್ರೀಷ್ಮ, ಲತಾ ಪ್ರಕಾಶ್,  ಚಿರಂಜೀವಿ ಸೇರಿದಂತೆ ರಜಕ ಯೂತ್‌, ಮಡಿವಾಳರ ಮಹಿಳಾ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

DAKSHINA KANNADA

ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನ ಗಣಪತಿ ವಿಗ್ರಹದ ವಿಸರ್ಜನೆ

Published

on

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್ ನಲ್ಲಿ 3ದಿನಗಳ ಕಾಲ ನಡೆದ 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಗುರುವಾರ ರಾತ್ರಿ ಸಂಪನ್ನಗೊಂಡಿತು.

ಬಂಟರ ಯಾನೆ ನಾಡವರ ಮಾತೃ ಸಂಘದ ವತಿಯಿಂದ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಸಹಯೋಗದಲ್ಲಿ ದಕ್ಷಿಣ ಕನ್ನಡ, ಉಡುಪಿ ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ ಸಹಯೋಗದಲ್ಲಿ ನಡೆದ ಈ ಉತ್ಸವದ ಕೊನೆಗೆ ಶ್ರೀ ಸಿದ್ದಿವಿನಾಯಕ ದೇವರಿಗೆ ಮಹಾಪೂಜೆ ನೆರವೇರಿಸಲಾಯಿತು.

ಬಳಿಕ ಕಡೆಂಜ ಅಶೋಕ್ ಕುಮಾರ್ ಚೌಟ ಶೋಭಾಯಾತ್ರೆಯನ್ನು ಉದ್ಘಾಟಿಸಿದರು. ಚೆಂಡೆ ವಾದ್ಯ ಮೇಳ ಮತ್ತು ಭಜನಾ ಸೇವೆಗಳ ಜೊತೆಗೆ ಸಾಗಿ ಬಂದ ಶೋಭಾಯಾತ್ರೆಯು ಬಂಟ್ಸ್ ಹಾಸ್ಟೆಲ್ ನ ಹಿಂಭಾಗವಾಗಿ ಹೊರಟು ಪಿವಿಸ್ ಸರ್ಕಲ್, ನವಭಾರತ ಸರ್ಕಲ್, ಡೊಂಗರಕೇರಿ, ನ್ಯೂ ಚಿತ್ರ ಆಗಿ ಕಾರ್ ಸ್ಟ್ರೀಟ್ ಗೆ ಸಾಗಿ ಕುಡ್ತೇರಿ ಮಹಮ್ಮಾಯಿ ದೇವಸ್ಥಾನದ ಕೆರೆಗೆ ಬಂದು ಗಣಪತಿ ಮೂರ್ತಿಯ ವಿಗ್ರಹದ ವಿಸರ್ಜನೆ ಮಾಡಲಾಯಿತು.

3ಜಿಲ್ಲೆಗಳಿಂದ ಆಗಮಿಸಿದ ಬಂಟರ ಮತ್ತು ಊರ – ಪರವೂರ ಭಕ್ತರು ವೈಭವದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು .

Continue Reading

DAKSHINA KANNADA

ಹಿಂದೂ ನಾಯಕರ ಫೇಸ್ಬುಕ್‌ ಅಕೌಂಟ್‌ ಹ್ಯಾಕ್‌- ಶ್ರೀಕಾಂತ್‌ ಶೆಟ್ಟಿ ಆರೋಪ..!

Published

on

ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್‌ ಖಾತೆಗಳನ್ನು ನಿಷ್ಕ್ರೀಯಗೊಳಿಸಿದಕ್ಕೆ ಹಿಂದೂ ಜಾಗರಣ  ವೇದಿಕೆ ಮುಖಂಡ ಶ್ರೀಕಾಂತ್‌ ಶೆಟ್ಟಿ ಆರೋಪಿಸಿದ್ದಾರೆ. 

ಉಡುಪಿ: ಹಿಂದೂ ಜಾಗರಣ ವೇದಿಕೆಯ ಕರ್ನಾಟಕದ ಕೆಲವು ನಾಯಕರ ಫೇಸ್ಬುಕ್‌ ಖಾತೆಗಳನ್ನು ನಿಷ್ಕ್ರೀಯಗೊಳಿಸಲಾಗಿದೆ.

ಆದರೆ ಇದನ್ನು ಸ್ವತಃ ಫೇಸ್ಬುಕ್‌ ಸಂಸ್ಥೆಯೇ ನಿಷ್ಕ್ರೀಯಗೊಳಿಸಿದೆಯೋ ಅಥವಾ ಯಾರದ್ದೋ ದೂರಿನ ಆಧಾರದಲ್ಲಿ ನಿಷ್ಕ್ರೀಯಗೊಳಿಸಲಾಗಿದೆಯೋ ಎನ್ನುವುದು ತಿಳಿದು ಬಂದಿಲ್ಲ.

ಆದರೆ ಇದು ಹಿಂದೂ ವಿಚಾರಧಾರೆಯ ಪ್ರಚಾರ ಮತ್ತು ಹೋರಾಟ ನಡೆಸುತ್ತಿರುವವರ ಮೇಲೆ ನಡೆದ ವ್ಯವಸ್ಥಿತ ಸೈಬರ್  ದಾಳಿಯಾಗಿದೆ ಎಂದು ವೇದಿಕೆ ಮುಖಂಡ ಶ್ರೀಕಾಂತ್‌ ಶೆಟ್ಟಿ ಆರೋಪಿಸಿದ್ದಾರೆ.

ಸ್ವತಃ ಶ್ರೀಕಾಂತ್‌ ಶೆಟ್ಟಿ ಸಂಘಟನೆಯ ಇತರ ಪ್ರಚಾರಕರಾದ ಪ್ರವೀಣ್‌ ಯಕ್ಷಮಠ, ಕೆ ಟಿ ಉಲ್ಲಾಸ್‌, ಸುಕೃತ್‌ ಭಾರದ್ವಾಜ್‌, ಅರವಿಂದ ಕೋಟೇಶ್ವರ ಮೊದಲಾದ 20ಕ್ಕೂ ಹೆಚ್ಚು ಮಂದಿಯ ಫೇಸ್ಬುಕ್‌ ಪೇಜ್‌ಗಳನ್ನು ಡಿಲಿಟ್ ಮಾಡಲಾಗಿದೆ.

ನಾವು ಯಾರೂ ಸಾಮಾಜಿಕ ಸಾಮರಸ್ಯವನ್ನು ಕೆಡಿಸಿಲ್ಲ. ಗಲಭೆ ಸೃಷ್ಟಿಸಿಲ್ಲ. ಕೇವಲ ಹಿಂದೂಪರ ಹೋರಾಟ ಮಾಡುತ್ತಿರುವವರು.

ಆದ್ದರಿಂದ ಹಿಂದೂ ಚಳುವಳಿಯಲ್ಲಿ ಭಾಗವಹಿಸುತ್ತಿರುವವರನ್ನು ಹತ್ತಿಕ್ಕುವ ಹುನ್ನಾರ ಇದು ಎನ್ನುವುದು ಸಾಬೀತಾಗಿದೆ ಎಂದವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿರುವ ಕೆಲಸ ಇದು.

2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂವಾದಿ ಸಂಗಟನೆಳು ಮೋದಿ ಪರವಾಗಿ ಯಶಸ್ವಿ ಕೆಲಸ ಮಾಡಿದ್ದೆವು.

2024ರ ಚುನಾವಣೆಯಲ್ಲಿ ಮತ್ತೇ ಅದಾಗಬಾರದು ಎನ್ನುವ ಪೂರ್ವ ತಯಾರಿ ಇದಾಗಿದೆ ಎಂದವರು ಹೇಳಿದ್ದಾರೆ.

ಆದರೆ ಆರ್‌ಎಸ್‌ಎಸ್‌ನ ಭಾಗವಾಗಿರುವ ಹಿಂದು ಜಾಗರಣ ವೇದಿಕೆ ಸಾಮಾಜಿಕ ಜಾಲತಾಣಗಳನ್ನು ನಂಬಿಕೊಂಡಿರುವ ಫೇಸ್ಬುಕ್‌ ಉಳಿಯಲ್ಲ.

ಆನ್ ಗ್ರೌಂಡ್‌ ಜನರ ಮಧ್ಯೆ ಕೆಲಸ ಮಾಡವ ವೇದಿಕೆ.

ಈ ಫೇಸ್ಬುಕ್‌ ಖಾತೆಗಳ ನಿಷ್ಕ್ರೀಯ ಕೃತ್ಯವನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ.

Continue Reading

DAKSHINA KANNADA

Mangaluru: ಅಯ್ಯೋ… ಸಂಚಾರಿ ಪೊಲೀಸರ ಕಷ್ಟಕ್ಕೆ ಸ್ಪಂದಿಸುವವರು ಯಾರು..?

Published

on

 ಮಂಗಳೂರು ನಗರದಲ್ಲಿ ಹೊಂಡಗುಂಡಿಗಳನ್ನು ಸರಿಪಡಿಸುವ ಗತಿ ಇಲ್ಲದ ಕಾರಣ, ಇದೀಗ ಸಂಚಾರಿ ಪೊಲೀಸರೇ ಹಾರೆ ಕೈಯಲ್ಲಿ ಹಿಡಿದುಕೊಂಡು ಬಿರುಬಿಸಿಲಿಗೆ ಹೊಂಡಗುಂಡಿಗಳನ್ನು ತುಂಬಿಸುತ್ತಿದ್ದಾರೆ.

ಮಂಗಳೂರು: ಮಂಗಳೂರು ನಗರದಲ್ಲಿ ಹೊಂಡಗುಂಡಿಗಳನ್ನು ಸರಿಪಡಿಸುವ ಗತಿ ಇಲ್ಲದ ಕಾರಣ, ಇದೀಗ ಸಂಚಾರಿ ಪೊಲೀಸರೇ ಹಾರೆ ಕೈಯಲ್ಲಿ ಹಿಡಿದುಕೊಂಡು ಬಿರುಬಿಸಿಲಿಗೆ ಹೊಂಡಗುಂಡಿಗಳನ್ನು ತುಂಬಿಸುತ್ತಿದ್ದಾರೆ.

ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಠಾಣೆಯ ಸಭ್ ಇನ್ಸ್ ಪೆಕ್ಟರ್ ಈಶ್ವರ ಸ್ವಾಮಿ , ಎಎಸ್‌ಐ ವಿಶ್ವನಾಥ ರೈ ಅವರು  ಹಾರೆ, ಗುದ್ದಲಿ ಹಿಡಿದು ಈ ದುರಸ್ತಿ ಕಾರ್ಯವನ್ನು ಮಾಡಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲೂ ಈ ವಿಡಿಯೋ ವೈರಲ್‌ ಆಗುತ್ತಿದೆ.

ಮಂಗಳೂರಿನ ಬಹುತೇಕ ರಸ್ತೆಗಳಲ್ಲಿ ಈಗ ಹೊಂಡಗಳೇ ಇವೆ. ಅದರಲ್ಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದ್ದರೂ ಆಟಕ್ಕುಂಟು…ಲೆಕ್ಕಕ್ಕಿಲ್ಲ ಎಂಬಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡಗುಂಡಿಗಳೂ ಇವೆ. ಆದರೆ ಇದನ್ನು ಸರಿಪಡಿಸಬೇಕಾದ ಹೆದ್ದಾರಿ ಇಲಾಖೆ ಅದಕ್ಕೆ ಮುಂದಾಗುತ್ತಿಲ್ಲ.

ಅದಕ್ಕೆ ಹೆದ್ದಾರಿಯ ಗುಂಡಿಗಳನ್ನು ಕೂಡಾ ಸಂಚಾರಿ ಪೊಲೀಸರೇ ಹಾರೆ ಹಿಡಿದು ತುಂಬಿಸುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.

ಹೇಳಿ…ಕೇಳಿ ನಗರದ ನಂತೂರು ವೃತ್ತ ಸಾವಿನ ಸರಮಾಲೆಗೆ ಕಾರಣವಾಗಿರುವ ಜಂಕ್ಷನ್‌. ಇಲ್ಲಿ ಅಪಘಾತಗಳಿಗೆ ಕಡಿವಾಣ ಹಾಕಲು ಸಂಚಾರಿ ಪೊಲೀಸರು ಹಲವು ಮಾರ್ಪಾಟುಗಳನ್ನು ಮಾಡಿದ್ದಾರೆ.

ಸದ್ಯ ಇತ್ತೀಚೆಗೆ ಸಾವಿನ ಸಂಖ್ಯೆ ಇಳಿಮುಖವಾಗಿದೆ. ಇಲ್ಲಿನ ಹೆದ್ದಾರಿಗಳ ಹೊಂಡ ತುಂಬಿ, ಸಾವಿಗೆ ನ್ಯಾಯ ಕೊಡಿ ಎಂದು ಸಾಮಾಜಿಕ ಕಾರ್ಯಕರ್ತರು ಕೈಯಲ್ಲಿ ಪ್ಲೇಕಾರ್ಡ್‌ ಹಿಡಿದು ಪ್ರತಿಭಟನೆಯನ್ನೂ ನಡೆಸಿದ್ದರು.

ಇದೀಗ ನಂತೂರಿನ ಹೊಂಡಗುಂಡಿಗಳನ್ನು ಸಂಚಾರಿ ಪೊಲೀಸರೇ ತುಂಬಿಸುತ್ತಿರುವುದು ಪಾಪ ಅನ್ನಿಸಿದರೂ ಅವರ ಕಾರ್ಯಕ್ಕೆ ವಾಹನ ಸವಾರರು, ಜನತೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಬಿರುಬಿಸಿಲಿಗೂ ಅವರು ಸಿಮೆಂಟ್‌, ಜಲ್ಲಿಕಲ್ಲು ಮಿಕ್ಸರ್ ಹಾಕಿ ರಸ್ತೆ ಸರಿಪಡಿಸುತ್ತಿರುವುದು ನೋಡಿದರೆ ಅಯ್ಯೋ ಅನ್ನಿಸುತ್ತಿದೆ.

ಇನ್ನೊಂದೆಡೆ ರಸ್ತೆ ಬ್ಲಾಕ್‌ ಆಗಿ ಜನ ಹಿಡಿಶಾಪ ಹಾಕುತ್ತಿದ್ದಾರೆ.

 

Continue Reading

LATEST NEWS

Trending