DAKSHINA KANNADA
Mangaluru: ದಸರಾ ಸಮಾಪನಗೊಂಡರೂ ಮಾರ್ದನಿಸುತ್ತಿದೆ ಪಿಲಿ ಅಜನೆ ಅಬ್ಬರ..!
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನವರಾತ್ರಿ ಸಮಾಪನಗೊಂಡು ವೈಭವದ ಮಂಗಳೂರು ದಸರಾಕ್ಕೆ ತೆರೆ ಬಿದ್ದರೂ ಇನ್ನೂ ಕೂಡಾ ಪಿಲಿಗಳ ಅಬ್ಬರ ಕಣ್ಣಮುಂದೆ ಬರುತ್ತಿದೆ.
ಇದಕ್ಕೆ ನಿದರ್ಶನವೆಂಬಂತೆ ಮಂಗಳೂರು ದಸರಾ ಸಂಭ್ರಮದ ಪ್ರಯುಕ್ತ ಪ್ರಮೋದ್ ಕರ್ಕೇರ ನೇತೃತ್ವದಲ್ಲಿ ತುಳುನಾಡ ಸಾಂಪ್ರದಾಯಿಕ ಕಲೆಯ ಗತ್ತಿನ ಪ್ರದರ್ಶನ, ಬಿರ್ದುದ ಪಿಲಿತ್ತ ಗತ್ತುದ ಅಜನೆ “ಪಿಲಿ ಅಜನೆ” ಕಾರ್ಯಕ್ರಮವು ಮಂಗಳೂರಿನ ಎಂ ಜಿ ರೋಡ್, ದೀಪ ಕಂಫರ್ಟ್ಸ್ ಆವರಣದಲ್ಲಿ ನಡೆದಿದ್ದು, ಇಂದಿಗೂ ಅಬ್ಬರದ ಹುಲಿ ನೃತ್ಯವೇ ಕಣ್ಣಮುಂದೆ ಬರುತ್ತಿದೆ.
ಪೂಜಾ ವಿಧಿವಿಧಾನಗಳೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶ್ಯಾಮ ರಾವ್ ಫೌಂಡೇಶನ್ ಮತ್ತು ಶ್ರೀನಿವಾಸ್ ಗ್ರೂಫ್ ಆಫ್ ಕಾಲೇಜ್ ಇದರ ಕಾರ್ಯದರ್ಶಿ ಮಿತ್ರಾ ಎಸ್. ರಾವ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಯುವ ಸಮೂಹ ತುಳುನಾಡ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿರುವುದು ಬಹಳ ಸಂತಸ ತಂದಿದೆ. ಪಿಲಿ ಅಜನೆ’ಯು ನಾಡಿನೆಲ್ಲೆಡೆ ವಿಜ್ರಂಭಿಸಲಿ ಎಂದು ಶುಭ ಹಾರೈಸಿದರು.
ಶಕ್ತಿನಗರದ ಶಕ್ತಿ ಎಜುಕೇಶನ್ ಟ್ರಸ್ಟ್ ನ ಮುಖ್ಯ ಸಲಹೆಗಾರ ರಮೇಶ್ ಕೆ. ಅವರು ಪ್ರಮೋದ್ ಅವರು ನಾಯಕತ್ವ ವಹಿಸಿ ಹಲವಾರು ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಿದ್ದಾರೆ. ಈಗ ಪಿಲಿ ಅಜನೆಯು ಕೂಡಾ ಯಶಸ್ವಿ ಕಾರ್ಯಕ್ರಮವಾಗಿ ಮೂಡಿಬಂದಿದೆ ಎಂದರು.
ಬಿಜೆಪಿ ಮುಖಂಡ, ಯುವ ನಾಯಕ ಬ್ರಿಜೇಶ್ ಚೌಟ ಮಾತನಾಡಿ, ಪಿಲಿ ಅಜನೆ ಮಂಗಳೂರು ದಸರಾ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ. ತುಳುನಾಡ ಸಂಸ್ಕೃತಿಯ ಉಳಿಸುವ ನಿಟ್ಟಿನಲ್ಲಿ ಈ ರೀತಿಯ ಕಾರ್ಯಕ್ರಮಗಳ ಮುಖೇನ ಯುವ ಸಮುದಾಯ ಮುಂದಡಿಯಿಡಬೇಕು ಎಂದರು.
ವೇದಿಕೆಯಲ್ಲಿ ವೀಣಾ ರಾಬರ್ಟ್ ರೇಗೊ, ಪ್ರೇಮ್ ಸಾಲ್ಯಾನ್ ಬಿಜೈ, ಕಾರ್ತಿಕ್ ಅಮೀನ್ ಉಪಸ್ಥಿತರಿದ್ದರು. ಅತಿಥಿಗಳಿಗೆ ಭಗವದ್ಗೀತೆ ಪುಸ್ತಕ ನೀಡಿ ಗೌರವಿಸಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಶ್ರೀ ಭ್ರಾಮರಿ ಚೆಂಡೆ ಹಾಗೂ ಆಧ್ಯಾ ವಿಜಯನ್ ಅವರಿಂದ ವಾಯಲಿನ್ ವಾದನ ಗಮನ ಸೆಳೆಯಿತು. ಶಿವ ಫ್ರೆಂಡ್ಸ್ ಬರ್ಕೆ ತಂಡದ ಸಾಹಸಮಯ ಹುಲಿ ಕುಣಿತ ಪ್ರೇಕ್ಷಕರನ್ನು ನಿಬ್ಬೆರಗಾಗಿಸಿತು. ಕಾರ್ಯಕ್ರಮದ ರೂವಾರಿ ಪ್ರಮೋದ್ ಕರ್ಕೇರ, ಕಾರ್ತಿಕ್ ಹಾಗು ಪಿಲಿ ಅಜನೆಯ ತಂಡದ ಸರ್ವ ಸದಸ್ಯರು ಉಪಸ್ಥಿತರಿದ್ದರು. ದೀಪಕ್ ಅಡ್ಯಾರ್, ಸುರೇಶ್ ಶೆಟ್ಟಿ ಬರ್ಕೆ ಕಾರ್ಯಕ್ರಮ ನಿರೂಪಿಸಿದರು.
DAKSHINA KANNADA
Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!
ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.
ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ
DAKSHINA KANNADA
Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು
ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್ ಕುಮಾರ್ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.
ನವೀನ್ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.
DAKSHINA KANNADA
ಕಟೀಲು ಕ್ಷೇತ್ರಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ
ಕಿನ್ನಿಗೋಳಿ: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಮಾಜಿ ಸಚಿವ, ಶಾಸಕ ಶ್ರೀರಾಮುಲು ಭೇಟಿ ನೀಡಿದರು.
ದೇವಳದ ವತಿಯಿಂದ ಶ್ರೀ ರಾಮುಲು ಅವರನ್ನು ಗೌರವಿಸಲಾಯಿತು.
ಈ ಸಂದರ್ಭ ವೆಂಕಟರಮಣ ಆಸ್ರಣ್ಣ, ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು ಉಪಸ್ಥಿತರಿದ್ದರು.
ಕ್ಷೇತ್ರದಲ್ಲಿ ಅವರು ಅನ್ನಪ್ರಸಾದವನ್ನು ಸ್ವೀಕರಿಸಿ ಸರಳತೆ ಮೆರೆದರು. ಬಳಿಕ ಕ್ಷೇತ್ರದ ಕುರಿತಂತೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.
- bangalore4 days ago
ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ನಲ್ಲಿ ಎಂಟ್ರಿಯಾದ ಈ ಸ್ಪರ್ಧಿಗಳು ಯಾರು..?
- FILM3 days ago
ಆಲಿಯಾ ಭಟ್ ಡೀಫ್ ಫೇಕ್ ವಿಡಿಯೋ ವೈರಲ್ – ವಿಡಿಯೋ ನೋಡಿದ್ರಾ..?
- bangalore6 days ago
ಬೆಂಗಳೂರು ಕಂಬಳಕ್ಕೆ ಚಾಲನೆ ನೀಡಿದ ಅಶ್ವಿನಿ ಪುನಿತ್ ರಾಜ್ ಕುಮಾರ್
- DAKSHINA KANNADA6 days ago
Puttur: ಮಹಿಳೆಗೆ ಅಮಲು ಬರಿಸುವ ಪಾನೀಯ ಕುಡಿಸಿ ಅತ್ಯಾಚಾರ..!