DAKSHINA KANNADA
Mangaluru: ನಕಲಿ ದಾಖಲೆ ಪತ್ರ ಸೃಷ್ಠಿಸುತ್ತಿದ್ದ ಭೂಪ ಅಂದರ್..!
ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಮಾರಾಟ ಮಾಡುವ ಮೂಲಕ ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂಪಾಯಿ ನಷ್ಟ ಉಂಟು ಮಾಡಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಬಿಕರ್ನಕಟ್ಟೆ ಬಜ್ಜೋಡಿಯ ಬರ್ನಾಡ್ ರೋಶನ್ ಮೆಸ್ಕರೆನಸ್ (41) ಬಂಧಿತ ಆರೋಪಿ. ಈಗ ಕಂಕನಾಡಿ- ಪಂಪ್ವೆಲ್ ಹಳೆ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ವೊಂದರ ನೆಲ ಅಂತಸ್ತಿನ ಕೊಠಡಿಯಲ್ಲಿ ‘ಹೆಲ್ಪ್ಲೈನ್ ಮಂಗಳೂರು’ ಎಂಬ ಹೆಸರಿನ ಕಚೇರಿಯನ್ನು ತೆರೆದು ಆಧಾರ್ ಕಾರ್ಡ್, ರೇಶನ್ ಕಾರ್ಡ್, ಅಂಕ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ ಇತ್ಯಾದಿಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಅವುಗಳನ್ನು ನೈಜ ದಾಖಲಾತಿಗಳೆಂದು ನಂಬಿಸಿ ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ವಂಚಿಸುತ್ತಿದ್ದನು ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದರು. ಆರೋಪಿಯ ಬಳಿಯಿಂದ ವಿವಿಧ ಹೆಸರಿನಲ್ಲಿ ತಯಾರಿಸಿದ ನಕಲಿ ಆಧಾರ್ ಕಾರ್ಡ್ಗಳು, ನಕಲಿ ರೇಷನ್ ಕಾರ್ಡ್, ನಕಲಿ ಉದ್ದಿಮೆ ಪರವಾನಿಗೆ ಪತ್ರ, ನಕಲಿ ಎಸೆಸೆಲ್ಸಿ ಅಂಕಪಟ್ಟಿ, ನಕಲಿ ಜನನ ಪ್ರಮಾಣ ಪತ್ರಗಳನ್ನು ಪೊಲೀಸರು ವಶಪಡಿಸಿದ್ದಾರೆ. ಕಳೆದ 3 ವರ್ಷಗಳಿಂದ ಈತನಿಂದ ನಕಲಿ ದಾಖಲಾತಿಗಳನ್ನು ಪಡೆದುಕೊಂಡವರು ಅವುಗಳನ್ನು ಬ್ಯಾಂಕ್ಗಳಲ್ಲಿ ಸಾಲ ಸೌಲಭ್ಯಗಳನ್ನು ಪಡೆಯಲು ಮತ್ತು ಸರಕಾರದ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆಯಲು ಬಳಸಿಸಿಕೊಂಡು ಸರಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಆರೋಪಿಯಿಂದ ನಕಲಿ ಪ್ರಮಾಣ ಪತ್ರಗಳನ್ನು ತಯಾರಿಸಲು ಉಪಯೋಗಿಸುತ್ತಿದ್ದ ಲ್ಯಾಪ್ಟಾಪ್, ಕಲರ್ ಪ್ರಿಂಟರ್, ಲ್ಯಾಮಿನೇಟರ್ ಮೆಶಿನ್, ಬಯೋ ಮೆಟ್ರಿಕ್ ಡಿವೈಸ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ನಕಲಿ ದಾಖಲೆ ಪತ್ರ ತಯಾರಿಸುವ ಜಾಲದಲ್ಲಿ ಇನ್ನೂ ಕೆಲವು ಮಂದಿ ಪಾಲ್ಗೊಂಡರುವ ಶಂಕೆ ಇದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
DAKSHINA KANNADA
ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಕಳವು ಪ್ರಕರಣ; ಕೋಡಿಕಲ್ ನ ಮನೆಯೊಂದರಲ್ಲಿ ಕಳ್ಳತನಕ್ಕೆ ವಿಫಲ ಯತ್ನ
ಮಂಗಳೂರು : ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿನ್ನೆ ಮಂಗಳೂರಿನ ಕೋಡಿಕಲ್ ನ ಮನೆಯೊಂದರಲ್ಲಿ ಕಳ್ಳರ ತಂಡವೊಂದು ಕಳ್ಳತನಕ್ಕೆ ಯತ್ನಿಸಿದೆ.
ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮನೆಯವರು ಮಲಗಿದ್ದ ಕೊಠಡಿಯ ಗ್ರಿಲ್ ಕಟ್ ಮಾಡಲಾಗಿದೆ. ಸುಮಾರು ಐದು ಜನರ ತಂಡ ಈ ಕೃತ್ಯ ನಡೆಸಿರುವುದು ಇಲ್ಲಿನ ಮನೆಯೊಂದರ ಸಿಸಿಟಿವಿಯಲ್ಲಿ ಅಸ್ಪಷ್ಟವಾಗಿ ಕಾಣಿಸಿದೆ.
ಕಳ್ಳರ ಮುಖಚಹರೆ ಗುರುತಿಸಲು ಅಸಾಧ್ಯವಾಗಿದ್ದು, ಕಳ್ಳರು ಅದೇ ಮನೆಯನ್ನು ಗುರಿಯಾಗಿಸಿ ಕಳ್ಳತನಕ್ಕೆ ಯತ್ನಿಸಿದ್ದಾರೆ ಎಂಬುವುದು ಗೊತ್ತಾಗುತ್ತದೆ. ಇದು ಈ ಪ್ರದೇಶದಲ್ಲಿ ಓಡಾಡಿ ಮನೆಯಲ್ಲಿ ಯಾರು ಇಲ್ಲ ಎಂದು ಖಚಿತಪಡಿಸಿಕೊಂಡು ನಡೆಸಿದ ಕೃತ್ಯವಾಗಿರುವ ಅನುಮಾನ ಕಾಡಿದೆ. ಆದ್ರೆ, ರಾತ್ರಿಯಲ್ಲಿ ಮನೆಯಲ್ಲಿ ಜನರು ಇರುವುದು ಗಮನಿಸಿ ಯಾವುದೇ ಕಳ್ಳತನ ಮಾಡದೆ ಕಳ್ಳರ ತಂಡ ವಾಪಾಸಾಗಿದೆ. ಈ ಘಟನೆಯ ಬೆನ್ನಲ್ಲೇ ಪೊಲೀಸರು ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಭೂಮಿಗೆ ಕಾದಿದೆ ಅಪಾಯ..! ವಿಜ್ಞಾನಿಗಳಿಂದ ಅಧ್ಯಯನ
ಪರಿಸರದಲ್ಲಿ ಯಾರಾದ್ರೂ ಅನುಮಾನಾಸ್ಪದವಾಗಿ ಓಡಾಡುವವರು ಕಂಡು ಬಂದ್ರೆ 112 ಗೆ ಕರೆ ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೆ ಮನೆ, ಅಂಗಡಿಗಳ ಮುಂದೆ ಸರಿಯಾದ ರೀತಿಯಲ್ಲಿ ರಸ್ತೆ ಹಾಗೂ ಪ್ರದೇಶ ಕಾಣುವ ರೀತಿಯಲ್ಲಿ ಹೈ ರೆಸೆಲ್ಯೂಷನ್ ಸಿಸಿ ಕ್ಯಾಮೆರಾ ಅಳವಡಿಸಲು ಸಲಹೆ ನೀಡಿದ್ದಾರೆ.
DAKSHINA KANNADA
ಏನಾಶ್ಚರ್ಯ!! ನಾಗರ ಹಾವು ಕಡಿದು ಮಹಿಳೆ ಸಾ*ವು; ಅಂತ್ಯಸಂಸ್ಕಾರದ ವಿಧಿಗೆ ಬಂದು ನೀರು ಕುಡಿದು ಹೋದ ನಾಗರಹಾವು
ಮಂಜೇಶ್ವರ : ಜಗತ್ತಿನಲ್ಲಿ ಆಶ್ಚರ್ಯಕರ ಘಟನೆಗಳು ಸಂಭವಿಸುತ್ತಲೇ ಇರುತ್ತವೆ. ಇದೀಗ ಮಂಜೇಶ್ವರದಲ್ಲಿ ವಿಚಿತ್ರ ಘಟನೆಯೊಂದು ಸಂಭವಿಸಿದೆ. ಮಂಜೇಶ್ವರ ತಾಲೂಕಿನ ಕುರುಡುಪದವಿನಲ್ಲಿ ನಾಗರ ಹಾವು ಕಡಿತಕ್ಕೊಳಗಾಗಿ ಮಹಿಳೆಯೋರ್ವರು ಮೃ*ತಪಟ್ಟಿದ್ದರು. ಚೋಮು ಎಂಬವರು ಮೃ*ತಪಟ್ಟ ಮಹಿಳೆ. ಆದ್ರೆ ಇಲ್ಲಿ ಅಚ್ಚರಿಯೊಂದು ನಡೆದಿದೆ.
ಹೌದು, ಅಂ*ತ್ಯಸಂಸ್ಕಾರದ ವಿಧಿಯ ಕೊನೆಯ ಭಾಗದಲ್ಲಿ ನೀರು ಇಡುವ ಸಂಪ್ರದಾಯ ನಡೆದಿತ್ತು. ವಿಸ್ಮಯವೆಂದರೆ, ಈ ಸಂಪ್ರದಾಯದ ಸಂದರ್ಭದಲ್ಲಿ ಆಗಮಿಸಿದ ನಾಗರ ಹಾವು ಚೊಂಬಿನಲ್ಲಿಟ್ಟಿದ್ದ ನೀರನ್ನು ಕುಡಿದು ತೆರಳಿದೆ. ಮಹಿಳೆಯ ಸಾವಿಗೆ ಕಾರಣವಾದ ನಾಗರ ಹಾವು ಆಕೆಯ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿದೆ ಎಂದು ಜನರು ಮಾತಾಡಿಕೊಳ್ಳುತ್ತಿದ್ದಾರೆ.
ಅಂತ್ಯಸಂಸ್ಕಾರದ ವಿಧಿ ಕಳೆದ ಮೇಲೆ ಮನೆ ಚಾವಡಿಯಲ್ಲಿ ನೀರು ಇಡುವ ಸಂಪ್ರದಾಯ ಇದೆ. ಅದರಂತೆ ಮನೆ ಚಾವಡಿಯಲ್ಲಿ ಬೂದಿ ಹರಡಿ ಅದರ ನಡುವಿನಲ್ಲಿ ಚೊಂಬುವೊಂದರಲ್ಲಿ ನೀರು ಇಡಲಾಗಿತ್ತು. ಮನೆ ಹಿಂಬದಿ ಬಾಗಿಲು ಭದ್ರ ಪಡಿಸಲಾಗಿತ್ತು. ಮುಂಬಾಗಿಲಿನಲ್ಲಿ ನಾಲ್ಕು ಮಂದಿ ಜನ ಮಲಗಿದ್ದರು. ಆದರೂ ನಾಗರ ಹಾವು ಬಂದು ಚೊಂಬಿನಲ್ಲಿದ್ದ ನೀರನ್ನು ಕುಡಿದು ತೆರಳಿದೆಯಂತೆ. ಹಾವು ಬಂದಿರುವುದಕ್ಕೆ ಸಾಕ್ಷಿ ಎಂಬಂತೆ ಬೂದಿ ಮೇಲೆ ಹರಡಿರುವ ಹಾವಿನ ಗುರುತನ್ನು ತೋರಿಸುತ್ತಾರೆ ಮನೆಯವರು.
ಇದನ್ನೂ ಓದಿ : ಭೂಮಿಗೆ ಕಾದಿದೆ ಅಪಾಯ..! ವಿಜ್ಞಾನಿಗಳಿಂದ ಅಧ್ಯಯನ
ಇದಕ್ಕೂ ಮಿಗಿಲಾದ ವಿಷಯವೇನೆಂದರೆ, ಚೋಮು ಅವರ ಸಾವಿಗೆ ಕಾರಣವಾದ ನಾಗರ ಹಾವನ್ನು ಹಾವು ಹಿಡಿಯುವವರು ಬಂದು ಹಿಡಿದುಕೊಂಡು ಕೊಂಡೊಯ್ದಿದ್ದರು. ಹಾಗಾದರೆ ನೀರು ಕುಡಿಯಲು ಬಂದ ಹಾವು ಯಾವುದು ಎನ್ನುವುದೇ ದೊಡ್ಡ ಪ್ರಶ್ನೆ. ಅದೇನಿದ್ದರೂ, ಸರಳ ಸಜ್ಜನಿಕೆಯ ಚೋಮು ಅವರ ಸಾವಿಗೆ ಜನರು ಮರುಕ ವ್ಯಕ್ತಪಡಿಸುತ್ತಿದ್ದಾರೆ.
DAKSHINA KANNADA
ನಿರಂತರ ಮಳೆ, ಬಟ್ಟೆ ಒಣಗುತ್ತಿಲ್ಲವೇ? ಹಾಗಿದ್ರೆ ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ
ಕಳೆದ ಎರಡು ವಾರಗಳಿಂದ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಆಗೊಮ್ಮೆ ಈಗೊಮ್ಮೆ ಅಪರೂಪಕ್ಕೆ ಎನ್ನುವಂತೆ ಸೂರ್ಯ ದರ್ಶನ ಕೊಟ್ಟರೂ ಸಹ ಕ್ಷಣಮಾತ್ರದಲ್ಲಿ ಮೋಡ ಸೂರ್ಯನನ್ನು ಆವರಿಸಿಕೊಂಡು ಬಿಡುತ್ತದೆ. ಹೀಗಾಗಿ ಬಟ್ಟೆ ಒಣಗಿಸಬೇಕು ಎನ್ನುವ ಮಹಿಳೆಯರಿಗೆ ಇದು ದೊಡ್ಡ ಸವಾಲಾಗಿ ಪರಿಣಮಿಸಿದೆ.
ಬಟ್ಟೆ ಅರ್ಧಬರ್ಧ ಒಣಗಿದರೆ ದೇಹಕ್ಕೆ ಕಡಿತ ಆರಂಭ ಆಗುತ್ತದೆ. ಹಾಗಂತ ಬಟ್ಟೆ ತೊಳೆಯದೇ ಬಿಡೋದಕ್ಕೂ ಆಗುವುದಿಲ್ಲ. ಮಳೆ ಬಂತೆಂದರೆ ಸಾಕು ಬಟ್ಟೆಗಳನ್ನು ಒಣಗಿಸಲು ಮಹಿಳೆಯರು ನಾನಾ ಸರ್ಕಸ್ ಮಾಡುತ್ತಲೇ ಇರುತ್ತಾರೆ.ಇಂತಹ ಮಹಿಳೆಯರಿಗೆ ಹೇಗೆ ಮಳೆಗಾಲದಲ್ಲಿಯೂ ಸೂರ್ಯ ಬರದೆ ಇದ್ರು ಬಟ್ಟೆಯನ್ನು ಒಣಗಿಸಬಹುದು ಎನ್ನುವ ಸಿಂಪಲ್ ಟಿಪ್ಸ್ ಇಲ್ಲಿವೆ..
1) ವಾಷಿಂಗ್ ಮಷೀನ್ ನಲ್ಲಿ ಸ್ಪಿನ್ ಮಾಡುವುದು
ಸೂರ್ಯನ ಕಿರಣಗಳು ತಾಗದಿದ್ದರಂತೂ ಬಟ್ಟೆಯ ವಾಸನೆ ಕಿರಿಕಿರಿ ಉಂಟು ಮಾಡುತ್ತದೆ. ಮಳೆಗಾಲದಲ್ಲಿ ಮನೆಯೊಳಗೆ ಬಟ್ಟೆ ಒಣಗಿಸುವುದರಿಂದ ಕೂಡ ಕೆಲ ಅಲರ್ಜಿ ಮತ್ತು ರೋಗಗಳು ಉಂಟಾಗುತ್ತದೆ.ಹೀಗಾಗಿ ಶೀಘ್ರ ಬಟ್ಟೆ ಒಣಗಿಸಲು ವಾಷಿಂಗ್ ಮಷೀನ್ ಬಳಕೆ ಮಾಡಬಹುದು.. ವಾಷಿಂಗ್ ಮಷೀನ್ ಗೆ ಬಟ್ಟೆಹಾಕಿ ವೇಗದ ಸ್ಪಿನ್ ಆಪ್ಷನ್ ಸೆಲೆಕ್ಟ್ ಮಾಡಿ, ಬಟ್ಟೆಯನ್ನು ವಾಶ್ ಮಾಡಲು ಹಾಕಬೇಕು..ಹೀಗೆ ಸ್ಪಿನ್ ಮಾಡಲು ಬಟ್ಟೆನ ಹಾಕುವುದರಿಂದ ಆದಷ್ಟು ಬೇಗ ಬಟ್ಟೆ ಒಣಗುವ ಸಾಧ್ಯತೆ ಇದೆ.
2) ಟಿಶ್ಯು ಪೇಪರ್ ಬಳಕೆ ಹಾಗೂ ಬಟ್ಟೆ ಹಿಂಡುವುದು
ಡ್ರೈಯರ್ ಇಲ್ಲದೆಯೇ ಬಟ್ಟೆಗಳನ್ನು ಒಣಗಿಸಲು ವೇಗವಾದ ಮಾರ್ಗವೆಂದರೆ ಟವೆಲ್ ಮತ್ತು ಕೆಲವು ಟಿಶ್ಯೂ ಪೇಪರ್. ನಾವು ಯಾವ ಬಟ್ಟೆಯನ್ನು ಬೇಗ ಒಣಗಿಸಬೇಕು ಎಂದು ಬಯಸುತ್ತೇವೋ ಆ ಬಟ್ಟೆಯನ್ನು ಮೊದಲು ಟವಲ್ ಮೇಲೆ ಹರಡಿ ಬಳಿಕ ಅದರ ಮೇಲೆ ಟಿಶ್ಯೂ ಪೇಪರ್ ಗಳನ್ನು ಬಳಸಿದ್ರೆ ಟಿಶ್ಯೂ ಪೇಪರ್ ನೀರನ್ನು ಹಿಂಡಿ ಕೊಳ್ಳುತ್ತೆ. ಬಳಿಕ ಬಟ್ಟೆಯನ್ನ ಸುಮಾರು ಐದು ನಿಮಿಷಗಳ ಕಾಲ ಹಿಂಡಿ ಅದನ್ನ ಒಣಗಳು ಹರಡಿದರೆ ಆದಷ್ಟು ಬೇಗ ನಮ್ಮ ಬಟ್ಟೆಗಳು ಒಣಗಲಿವೆ.
3) ಹ್ಯಾಂಗರ್ ಬಳಸುವುದು
ನಮ್ಮ ಬಟ್ಟೆಯನ್ನು ಒಣಗಿಸಲು ಇರುವ ಅತ್ಯಂತ ಸುಲಭವಾದ ಮಾರ್ಗ ಅಂದ್ರೆ ಹ್ಯಾಂಗರ್ ಗಳ ಬಳಕೆ. ಏರ್ಲರ್ನಲ್ಲಿ ಬಟ್ಟೆಗಳನ್ನ ನೇತು ಹಾಕುವಾಗ ಮೊದಲು ಕೆಳಭಾಗದಲ್ಲಿ ಸಣ್ಣ ಬಟ್ಟೆಗಳನ್ನು ಹಾಕಬೇಕು, ಮೇಲ್ಭಾಗದಲ್ಲಿ ದೊಡ್ಡ ಬಟ್ಟೆಗಳನ್ನು ಹಾಕಿದ್ರೆ ಗಾಳಿ ಹರಿವು ಹೆಚ್ಚಾಗಿ ಬಟ್ಟೆ ಬೇಗ ಒಣಗಲಿದೆ. ಇನ್ನು ಏರ್ನಲ್ಲಿ ಪೆಗ್ ಅಥವಾ ರಾಕ್ಗಳ ಬದಲಿಗೆ ಹ್ಯಾಂಗರ್ಗಳನ್ನು ಬಳಸುವುದರಿಂದ ಬಟ್ಟೆ ಒಣಗಿಸುವ ಪ್ರಕ್ರಿಯೆಯನ್ನು ವೇಗಗೊಳಿಸಬಹುದು.
4) ಬಟ್ಟೆ ಐರನ್ ಮಾಡುವುದು
ಬಟ್ಟೆಯನ್ನ ಸಾಮಾನ್ಯವಾಗಿ ನಾವು ಒಣಗಿದ ಮೇಲೆ ಐರನ್ ಮಾಡುತ್ತೇವೆ. ಆದ್ರೆ ಮಳೆಗಾಲದಲ್ಲಿ ಬಿಸಿಲಿಗೆ ಬಟ್ಟೆ ಒಣಗುವ ಯಾವುದೇ ಅವಕಾಶ ಇರುವುದಿಲ್ಲ. ಹಾಗಾಗಿ ನಮಗೆ ಬೇಗ ಬಟ್ಟೆ ಒಣಗಬೇಕು ಎಂದರೆ, ಬಟ್ಟೆ ಹಸಿಯಾಗಿದ್ದಾಗ ಐರನ್ ಮಾಡಿದ್ರೆ ಬಟ್ಟೆ ಬೇಗ ಒಣಗುತ್ತೆ.. ಜೊತೆಗೆ ಹಸಿವಾಸನೆ ಕೂಡ ಕಡಿಮೆಯಾಗಲಿದೆ.
- FILM4 days ago
‘ಪೆಂಡ್ರೈವ್’ನಲ್ಲಿ ಬಿಗ್ಬಾಸ್ ತನಿಷಾ ಕುಪ್ಪಂಡ..!
- DAKSHINA KANNADA5 days ago
ಉಳ್ಳಾಲ : ಟಿಪ್ಪರ್ – ಸ್ಕೂಟರ್ ಅಪಘಾ*ತ; ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾ*ವು
- DAKSHINA KANNADA6 days ago
ಮನೆಯೊಳಗೆ ಈ ಪ್ರಾಣಿ ಪಕ್ಷಿಗಳು ಬರಬಾರದಂತೆ, ಯಾವುದು? ಯಾಕೆ ಗೊತ್ತಾ?
- LATEST NEWS6 days ago
WATCH VIDEO : ಕಣ್ಣಿಗೆ ಬಿತ್ತು ಹಲಸಿನ ಮರ…ಗಜರಾಜ ಹಲಸಿನ ಹಣ್ಣನ್ನು ಹೇಗೆ ಕೊಯ್ದ ಗೊತ್ತಾ!?