DAKSHINA KANNADA
ಮಂಗಳೂರು: 4 ಜೀವಗಳ ಹಂತಕ ವಾಮಂಜೂರು ಪ್ರವೀಣ್ ಬಿಡುಗಡೆಗೆ ಕುಟುಂಬಸ್ಥರ ಆಕ್ಷೇಪ
ಮಂಗಳೂರು: 90 ರ ದಶಕದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಂಗಳೂರಿನ ವಾಮಂಜೂರಿನಲ್ಲಿ ನಡೆದ ನಾಲ್ಕು ಮಂದಿಯ ಬರ್ಬರ ಕೊಲೆ ಪ್ರಕರಣದ ಅರೋಪಿ ವಾಮಜೂರು ಪ್ರವೀಣ್ ಕುಮಾರ್ (62)ನನ್ನು ಈ ವರ್ಷ ಭಾರತದ ಸ್ವಾತಂತ್ಯ್ರೋತ್ಸವದ ಅಮೃತೋತ್ಸವದ ಸಂದರ್ಭದಲ್ಲಿ ಜೈಲಿನಿಂದ ಬಿಡುಗಡೆ ಮಾಡಲು ಆದೇಶವಾಗಿದೆ.
ಇದಕ್ಕೆ ಆತನಿಂದ ಕೊಲೆಯಾದವರ ಕುಟುಂಬದವರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಆತನನ್ನು ಬಿಡುಗಡೆ ಮಾಡ ಬಾರದೆಂದು ಹತ್ಯೆಯಾದವರ ಕುಟುಂಬಸ್ಥರ ಪರವಾಗಿ ಸೀತಾರಾಮ ಮತ್ತು ಇತರರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಂಗಳೂರು ಪೊಲೀಸ್ ಕಮಿಷನರರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ವಾಮಜೂರು ಪ್ರವೀಣ್ ಕಳೆದ 28 ವರ್ಷಗಳಿಂದ ಜೈಲಿನಲ್ಲಿದ್ದು, ಪ್ರಸ್ತುತ ಬಳ್ಳಾರಿ ಜೈಲಿನಲ್ಲಿದ್ದಾನೆ.
ಆರೋಪಿ ಪ್ರವೀಣ್ 1994 ಫೆಬ್ರವರಿ 23 ರಂದು ರಾತ್ರಿ ವಾಮಂಜೂರಿನ ನಿವಾಸಿಗಳು ಹಾಗೂ ಆತನ ಸಂಬಂಧಿಕರೇ ಆಗಿದ್ದ ಅಪ್ಪಿ ಶೇರಿಗಾರ್ತಿ (75) ಆಕೆಯ ಪುತ್ರಿ ಶಕುಂತಲಾ (36), ಮೊಮ್ಮಗಳು ದೀಪಿಕಾ(9) ಮತ್ತು ಅಪ್ಪಿ ಅವರ ಪುತ್ರ ಗೋವಿಂದ (30) ಅವರನ್ನು ಕೊಲೆ ಮಾಡಿ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದನು.
ಪ್ರವೀಣ್ ಮೂಲತಃ ಉಪ್ಪಿನಂಗಡಿ ಸಮೀಪದ ಹೆರಿಯಡ್ಕ ನಿವಾಸಿಯಾಗಿದ್ದು, ಮಂಗಳೂರಿನ ಚಿಲಿಂಬಿಯಲ್ಲಿ ಟೈಲರಿಂಗ್ ಕೆಲಸ ಮಾಡುತ್ತಿದ್ದನು. ಸಿಂಗಲ್ ನಂಬರ್ ಲಾಟರಿ ಟಿಕೆಟ್ ಖರೀದಿಯ ಚಟಕ್ಕೆ ಅಂಟಿಕೊಂಡಿದ್ದ ಆತ ಹಣಕಾಸಿನ ಬಿಕ್ಕಟ್ಟಿನಲ್ಲಿದ್ದ.
ಇದಕ್ಕಾಗಿ ಪತ್ನಿ ಮತ್ತು ಕುಟುಂಬದ ಸದಸ್ಯರ ಚಿನ್ನಾಭರಣಗಳನ್ನು ಅಡವು ಇರಿಸಿದ್ದನು ಮಾತ್ರವಲ್ಲದೆ ವಿವಿಧ ಮೂಲಗಳಿಂದ ಸಾಲವನ್ನೂ ಎತ್ತಿದ್ದನು. ಇಷ್ಟಾದರೂ ಕೈಯಲ್ಲಿ ಹಣವಿಲ್ಲದೆ ಅರ್ಥಿಕವಾಗಿ ಸಂಕಷ್ಟದಲ್ಲಿದ್ದನು.
1994 ಫೆಬ್ರವರಿ 23 ರಂದು ಸಂಜೆ ವಾಮಂಜೂರಿನಲ್ಲಿರುವ ಸಂಬಂಧಿಕರ ಮನೆಗೆ ಹೋಗಿದ್ದ ಆತ ರಾತ್ರಿ ಅಲ್ಲಿಯೇ ಮಲಗಿದ್ದ. ಮಧ್ಯ ರಾತ್ರಿ ಎದ್ದು ಮನೆಯಲ್ಲಿ ಮಲಗಿದ್ದ 9 ವರ್ಷದ ಬಾಲಕನ ಸಹಿತ 4 ಮಂದಿಯನ್ನು ಹಾರೆಯ ಹಿಡಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿ ಮನೆ ಮಂದಿಯ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದನು. ಕೆಲವೇ ದಿನಗಳಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದರು.
ಕೊಲೆ ಕೃತ್ಯ ಎಸಗಿದ್ದ ಬಗ್ಗೆ ಆತ ತಪ್ಪೊಪ್ಪಿಕೊಡಿದ್ದು, ಕಳವು ಮಾಡಿದ್ದ ಚಿನ್ನಾಭರಣಗಳನ್ನು ಆತ ಬಚ್ಚಿಟ್ಟಲ್ಲಿಂದ ವಶಪಡಿಸಿಕೊಳ್ಳಲಾಗಿತ್ತು.
ನ್ಯಾಯಾಂಗ ಬಂಧನದಲ್ಲಿದ್ದ ಆತನನ್ನು ವಿಚಾರಣೆಗಾಗಿ ಬೆಳಗಾವಿಯ ಹಿಂಡಲಗ ಜೈಲಿನಿಂದ ಮಂಗಳೂರು ಜೈಲಿಗೆ ಕರೆತರುತ್ತಿದ್ದಾಗ ಹುಬ್ಬಳ್ಳಿಯ ಕುಂದಗೋಳದಲ್ಲಿ ಹೊಟೇಲ್ ಒಂದರಲ್ಲಿ ಊಟ ಮಾಡುತ್ತಿದ್ದ ವೇಳೆ ಬೆಂಗಾವಲು ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದನು.
ಈ ಸಂದರ್ಭದಲ್ಲಿ ಆತ ಎಲ್ಲಿದ್ದಾನೆಂದು ಸುಳಿವು ನೀಡುವವರಿಗೆ 1 ಲಕ್ಷ ರೂ. ನಗದು ಬಹುಮಾನವನ್ನು ಸಂತ್ರಸ್ತರ ಕುಟುಂಬದವರು ಘೋಷಿಸಿದ್ದರು. ತಪ್ಪಿಸಿಕೊಂಡಿದ್ದ ಪ್ರವೀಣ್ ಗೋವಾಕ್ಕೆ ತೆರಳಿ ಅಲ್ಲಿ ಬೇರೆ ಹೆಸರಿನಲ್ಲಿ ಅಡಗಿಕೊಂಡಿದ್ದು, ಯುವತಿಯೋರ್ವಳನ್ನು ಪುಸಲಾಯಿಸಿ ಮದುವೆಯಾಗಿದ್ದಲ್ಲದೆ ಅಕೆಗೆ ಮಗುವೊಂದನ್ನು ಕರುಣಿಸಿದ್ದನು.
1999 ರಲ್ಲಿ ಮಂಗಳೂರಿನ ಇನ್ಸ್ಪೆಕ್ಟರ್ ಜಯಂತ್ ಶೆಟ್ಟಿ ನೇತೃತ್ವದ ರೌಡಿ ನಿಗ್ರಹ ದಳ ಆತನನ್ನು ಪತ್ತೆ ಹಚ್ಚಿ ಬಂಧಿಸಿ ಪುನಃ ಜೈಲಿಗಟ್ಟಿತ್ತು.
ನ್ಯಾಯಾಂಗ ಬಂಧನದಲ್ಲಿದ್ದ ಆತನಿಗೆ ಮಂಗಳೂರಿನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ಕೆಳಗಿನ ಕೋರ್ಟು ನೀಡಿದ ಈ ಶಿಕ್ಷೆಯನ್ನು ಬಳಿಕ ಹೈಕೋರ್ಟು ಮತ್ತು 2003 ರಲ್ಲಿ ಸುಪ್ರೀಂ ಕೋರ್ಟು ಕೂಡಾ ಎತ್ತಿ ಹಿಡಿದಿತ್ತು. ಮರಣ ದಂಡನೆಯ ಶಿಕ್ಷೆಯ ಬಳಿಕ ಆತ ರಾಷ್ಟ್ರಪತಿಗೆ ಕ್ಷಮಾಪಣೆಯ ಅರ್ಜಿಯನ್ನು ಸಲ್ಲಿಸಿದ್ದ.
ಈ ಅರ್ಜಿಯನ್ನು 2013 ಎಪ್ರಿಲ್ 4 ರಂದು ರಾಷ್ಟ್ರಪತಿಯವರು ತಿರಸ್ಕರಿಸಿದ್ದರು. ಆದರೆ 2014 ಜನವರಿ 22 ರಂದು ಸುಪ್ರೀಂ ಕೋರ್ಟು ಆತನ ಗಲ್ಲು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು. ಇದೀಗ ಸ್ವಾತಂತ್ಯ್ರೋತ್ಸವದ ಅಮೃತೋತ್ಸವದ ಸಂದರ್ಭದಲ್ಲಿ ಸರಕಾರವು ಕೆಲವು ಜನ ಕೈದಿಗಳಿಗೆ ಜೈಲಿನಿಂದ ಬಿಡುಗಡೆಯ ಭಾಗ್ಯವನ್ನು ಕಲ್ಪಿಸಿದ್ದು, ಹೀಗೆ ಬಿಡುಗಡೆಯಾಗುವವರ ಪಟ್ಟಿಯಲ್ಲಿ ವಾಮಂಜೂರು ಪ್ರವೀಣನೂ ಒಬ್ಭನಾಗಿದ್ದಾನೆ.
ಕಳೆದ 28 ವರ್ಷಗಳಿಂದ ಜೈಲಿನಲ್ಲಿ ಇರುವ ಆತನನ್ನು ಬಿಡುಗಡೆ ಮಾಡುವ ಬಗ್ಗೆ ಸಂತ್ರಸ್ತ ಕುಟುಂಬದವರ ಪರವಾಗಿ ಗುರುಪುರದ ಸೀತಾರಾಮ ಅವರು ಆತಂಕ ಹಾಗೂ ಅಕ್ಷೇಪ ವ್ಯಕ್ತಪಡಿಸಿದ್ದಾರೆ.
ಕೇವಲ 80,000 ರೂಪಾಯಿ ಹಣದ ಆಶೆಗಾಗಿ ನನ್ನ 75 ವರ್ಷ ಪ್ರಾಯದ ವೃದ್ಧ ತಾಯಿ, 36 ವರ್ಷ ಪ್ರಾಯದ ತಂಗಿ, 30 ವರ್ಷ ಪ್ರಾಯದ ಮಾನಸಿಕ ಅಸ್ವಸ್ಥ ಸಹೋದರ, ಹಾಗೂ 9 ವರ್ಷದ ಮುಗ್ದ ಬಾಲಕಿಯನ್ನು ಅಮಾನುಷವಾಗಿ ಕೊಲೆಗೈದ ಆತ ಜೈಲಿನಿಂದ ಹೊರಗೆ ಬಂದರೆ ಸಮಾಜಕ್ಕೆ ಅಪಾಯವಿದೆ ಎಂಬ ಭೀತಿ ನಮಗಿದೆ. ಸ್ವತಃ ಪ್ರವೀಣನ ಕುಟುಂಬದವರಿಗೂ ಆತ ಜೈಲಿನಿಂದ ಹೊರಗೆ ಬರುವುದರ ಬಗ್ಗೆ ಆತಂಕವಿದೆ.
ಆತನನ್ನು ಬಿಡುಗಡೆ ಮಾಡ ಬಾರದು. ಇಂತಹ ವ್ಯಕ್ತಿಯನ್ನು ಬಿಡುಗಡೆ ಮಾಡುವುದು ಸ್ವಾತಂತ್ಯ್ರೋತ್ಸವದ ಅಮೃತೋತ್ಸವಕ್ಕೆ ಅವಮಾನ ಎಂದವರು ತಿಳಿಸಿದ್ದಾರೆ.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
- DAKSHINA KANNADA6 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA6 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- LATEST NEWS5 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- DAKSHINA KANNADA6 days ago
ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!
santhosh Kamath
04/08/2022 at 9:27 PM
ಕೊಲೆಗಾರನ ಬಿಡುಗಡೆ ಖಂಡನೀಯ