Connect with us

DAKSHINA KANNADA

Mangaluru: ಚಿನ್ನಾಭರಣ ಕಳವುಗೈದ ಪತಿ- ಪತ್ನಿಯಿಂದ ದೂರು..!

Published

on

ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಪತಿ ವಿರುದ್ಧ ಪತ್ನಿಯು ಕದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪತಿ ಹಾಗೂ ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

ಮಂಗಳೂರು: ಮನೆಯಲ್ಲಿದ್ದ ಚಿನ್ನಾಭರಣ ಕಳವು ಮಾಡಿದ ಪತಿ ವಿರುದ್ಧ ಪತ್ನಿಯು ಕದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪತಿ ಹಾಗೂ ಆತನಿಗೆ ಸಹಕರಿಸಿದ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.

ಇಲಿಯಾಸ್‌ ಮತ್ತು ಪ್ರಭಾಕರ್‌ ಪ್ರಕರಣದ ಆರೋಪಿಗಳು ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ:

ಮಹಿಳೆಯ ಜೊತೆ ಒಟ್ಟು 75 ಪವನ್ ಚಿನ್ನವಿತ್ತು.

ಆ ಚಿನ್ನವನ್ನು ಅವರು ವಾಸಿಸುತ್ತಿದ್ದ ಕೆ.ಪಿ.ಟಿ. ವ್ಯಾಸ ನಗರದ ಶಾಂತಲಾ ಆಶಿಯಾನ ಫ್ಲಾಟ್‌ನ ಕಪಾಟಿನಲ್ಲಿ ಭದ್ರವಾಗಿರಿಸಿದ್ದರು.

ಈ ವಿಷಯ ಫಿರ್ಯಾದುದಾರರು ಮತ್ತು ಅವರ ಗಂಡನಾದ ಇಲಿಯಾಸ್‌ನಿಗೆ ಮಾತ್ರ ತಿಳಿದಿತ್ತು ಎಂದು ಮಹಿಳೆಯು ದೂರಿನಲ್ಲಿ ತಿಳಿಸಿದ್ದಾರೆ.

2023 ರ ಏಪ್ರಿಲ್‌ ತಿಂಗಳಿನಲ್ಲಿ ಪಿರ್ಯಾದಿದಾರರು ಮತ್ತು ಅವರ ಗಂಡನಿಗೆ ಜಗಳವಾಗಿ ಮಹಿಳೆ ಮನೆಯಿಂದ ಹೊರ ಬಂದು ತಾಯಿ ಮನೆಯಲ್ಲಿ ವಾಸವಿರುತ್ತಿದ್ದರು.

ಬಳಿಕ ಮಹಿಳೆಯು ವಾರಕ್ಕೊಮ್ಮೆ ಫ್ಲಾಟ್‌ಗೆ ಹೋಗಿ ಬರುತ್ತಿದ್ದರು.

ಸುಮಾರು ಒಂದು ತಿಂಗಳ ನಂತರ ಫ್ಲ್ಯಾಟ್‌ಗೆ ಹೋಗಿ ವಾಚ್‌ಮ್ಯಾನ್‌ ಬಳಿ ವಿಚಾರಿಸಿದಾಗ ಅವರ ಗಂಡ ಒಂದು ವಾರದಿಂದ ಫ್ಲ್ಯಾಟ್‌ಗೆ ಬಂದಿಲ್ಲ ಎಂದು ತಿಳಿಸಿದರು.

ಈ ಸಂದರ್ಭ ದೂರುದಾರ ಮಹಿಳೆ ಅನುಮಾನಗೊಂಡು ಮನೆಯ ಬಂಗಾರವಿಟ್ಟ ಲಾಕರ್‌ ಕಪಾಟಿನಲ್ಲಿ ನೋಡಿದಾಗ ಲಾಕರ್‌ ಸಮೇತ ಚಿನ್ನವಿರಲಿಲ್ಲ.

ಈ ಸಂದರ್ಭ ಗಂಡನಿಗೆ ಕರೆ ಮಾಡಿದಾಗ ‘ನಾನು ಲಾಕರ್‌ ಸಮೇತ ಚಿನ್ನವನ್ನು ಕದ್ದುಕೊಂಡು ಹೋಗಿರುತ್ತೇನೆ.

ನಿನಗೆ ಏನು ಮಾಡಲಾಗುತ್ತದೆ’ ಎಂದು ಹೇಳಿದ್ದಾರೆ.

ಅಲ್ಲದೆ ಚಿನ್ನವನ್ನು ಬ್ಯಾಂಕಿನಲ್ಲಿ ಸುಮಾರು 28.5 ಲಕ್ಷಕ್ಕೆ ಅಡವಿಟ್ಟು ಹಣ ಪಡೆದುಕೊಂಡಿರುವುದಾಗಿ ಹಾಗೂ ಅದಕ್ಕೆ ಬಡ್ಡಿ ಕಟ್ಟಲು ಆಗದೇ ಪ್ರಭಾಕರ್‌ ಎಂಬವರಿಗೆ 3 ತಿಂಗಳ ಮಟ್ಟಿಗೆ ಬಡ್ಡಿಯನ್ನು ಕಟ್ಟಲು ಅನುಮತಿ ನೀಡಿರುವುದಾಗಿ ತಿಳಿಸಿದ್ದಾನೆ.

ಅಡವಿಟ್ಟ ಚಿನ್ನದಲ್ಲಿ ಪ್ರಭಾಕರನು ಮೂರು ತಿಂಗಳಾಗುವ ಮೊದಲು ಸುಮಾರು 12 ಲಕ್ಷದಷ್ಟು ಚಿನ್ನವನ್ನು ಬಿಡಿಸಿ ಕರಗಿಸಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾನೆ.

ಈ ಬಗ್ಗೆ ದೂರುದಾರ ಮಹಿಳೆ ಅವರು ಕದ್ರಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.
ಇದೀಗ ಈ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!

Published

on

ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.

ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.

ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.

ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

Continue Reading

DAKSHINA KANNADA

Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!

Published

on

ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.

ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.

ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.

ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.

ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.

ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.

Continue Reading

DAKSHINA KANNADA

ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Published

on

ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.

ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.

Continue Reading

LATEST NEWS

Trending