Connect with us

DAKSHINA KANNADA

Mangaluru: ಅಕ್ರಮ ಮರ ಸಾಗಟ – ಪಿಡಿಒ ಅಮಾನತುಗೊಳಿಸಿ ತನಿಖೆ ನಡೆಸಲು ಒತ್ತಾಯ..!

Published

on

ಮುನ್ನೂರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಮಾಜಿ ಪಂಚಾಯತ್‌ ಸದಸ್ಯರಾದ ಗಿರೀಶ್ ಕೊಟ್ಟಾರಿ ಇವರು ಮರ ಕಡಿಯುವ ಕಾರ್ಮಿಕರಾದ ಹನೀಫ ಮತ್ತು ಸುಲೈಮಾಣ್‌ ಮೂಲಕ 2022ರ ಸೆ. 12ರಂದು ಉಳ್ಳಾಲದ ಮುನ್ನೂರು ಗ್ರಾಮದ ಸರ್ವೇ ನಂಬರ್‌ 55ರ ಸರಕಾರಿ ಜಾಗದಲ್ಲಿದ್ದ ಬೆಲೆಬಾಳುವ ಮರಗಳನ್ನು ಕಡಿದು ಅಕ್ರಮವಾಗಿ ಮಾರಾಟ ಮಾಡಿದ್ದಾರೆ. 

ಮಂಗಳೂರು: ಮುನ್ನೂರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ, ಮಾಜಿ ಪಂಚಾಯತ್‌ ಸದಸ್ಯರಾದ ಗಿರೀಶ್ ಕೊಟ್ಟಾರಿ ಇವರು ಮರ ಕಡಿಯುವ ಕಾರ್ಮಿಕರಾದ ಹನೀಫ ಮತ್ತು ಸುಲೈಮಾಣ್‌ ಮೂಲಕ 2022ರ ಸೆ. 12ರಂದು ಉಳ್ಳಾಲದ ಮುನ್ನೂರು ಗ್ರಾಮದ ಸರ್ವೇ ನಂಬರ್‌ 55ರ ಸರಕಾರಿ ಜಾಗದಲ್ಲಿದ್ದ ಬೆಲೆಬಾಳುವ ಮರಗಳನ್ನು ಕಡಿದು ಅಕ್ರಮವಾಗಿ ಮಾರಾಟ ಮಾಡಿದ್ದಾರೆ.

ಈ ಬಗ್ಗೆ ಮಂಗಳೂರು ಅರಣ್ಯ ವಲಯ ವಿಭಾಗದಲ್ಲಿ ಪ್ರಕರಣವೂ ದಾಖಲಾಗಿದೆ ಎಂದು ಉಳ್ಳಾಲ ತಾಲೂಕು ಸಮಿತಿಯ ಪರವಾಗಿ ಭಾರತೀಯ ಕಿಸಾನ್ ಸಂಘದ ಪದಾಧಿಕಾರಿಗಳು ಹೇಳಿದ್ದಾರೆ.

ಸುದ್ದಿಗೋಷ್ಠೀಯಲ್ಲಿ ಈ ಬಗ್ಗೆ ಮಾತನಾಡಿದ ಕಿನ್ಯಾ ಗ್ರಾಮದ ಭಾರತೀಯ ಕಿಸಾನ್ ಸಂಘದ ಸಮಿತಿಯ ಸಂಚಾಲಕ ಸಮೀರಾ ರಾವ್‌ ಅವರು, ಮುನ್ನೂರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ರವೀಂದ್ರ ರಾಜೀವ್ ನಾಯ್ಕ ತನ್ನ ಅದಿಕಾರವನ್ನು ದುರುಪಯೋಗ ಪಡಸಿಕೊಂಡು ಕಾನೂನು ಬಾಹಿರ ಕೃತ್ಯಗಳನ್ನು ಮಾಡಿದ್ದಾರೆ.

ಸರಕಾರಿ ಆಸ್ತಿಯಲ್ಲಿದ್ದ 57 ಮರಗಳನ್ನು ಕಡಿದು ಮಾರಾಟ ಮಾಡಿದ್ದಾರೆ.

ಅಲ್ಲದೆ ಸರಕಾರಿ ಸೊತ್ತುಗಳನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಿದ್ದಾರೆ.

ಒಬ್ಬ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಈ ರೀತಿ ಕೃತ್ಯ ಎಸಗಿರುವುದರ ವಿರುದ್ಧ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿಗೂ ದೂರು ನೀಡಲಾಗಿದೆ.

ಆದ್ದರಿಂದ ಪಿಡಿಒ ರವೀಂದ್ರರನ್ನು ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಇಲಾಖಾ ತನಿಖೆ ನಡೆಸಬೇಕು.

ಇಲ್ಲದೇ ಇದ್ದಲ್ಲಿ ಆ. 14ರಂದು ಪ್ರತಿಭಟನೆ ನಡೆಸಲಿದ್ದೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಲೋಕನಾಥ್‌ ಕುತ್ತಾರು, ರವಿ ಭಂಡಾರಿ, ರವಿರಾಜ್ ಮೊದಲಾದವರಿದ್ದರು.

DAKSHINA KANNADA

Mangaluru: ಶಿಬರೂರು ಕೊಡಮಣಿತ್ತಾಯ ದೇಗುಲದ ಶಿಲಾನ್ಯಾಸ ಕಾರ್ಯಕ್ರಮ

Published

on

ಮಂಗಳೂರು: ಕಟೀಲು ಮತ್ತು ಶಿಬರೂರು ಕ್ಷೇತ್ರಕ್ಕೆ ಅವಿನಾಭಾವ ಸಂಬಂಧವಿದೆ, ಇಂತಹ ಶಿಬರೂರು ಕ್ಷೇತ್ರದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವುದು ಅಭಿನಂದನೀಯ ಎಂದು ಕಟೀಲು ದೇವಳದ ಪ್ರಧಾನ ಅರ್ಚಕ ವೆಂಕಟರಮಣ ಆಸ್ರಣ್ಣ ಹೇಳಿದರು.

ಅವರು ಶ್ರೀ ಕೊಡಮಣಿತ್ತಾಯ ಕ್ಷೇತ್ರ ಶಿಬರೂರು ಇಲ್ಲಿನ ಮೇಲಿನ ಸಾನದ ಚಾವಡಿ, ಸುತ್ತುಪೌಳಿಯ ಪುನರ್ ನಿರ್ಮಾಣ ಹಾಗೂ ಅಭಿವೃದ್ದಿ ಕಾರ್ಯಕ್ರಮಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಆಶೀರ್ವಾಚನ ನೀಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಕೋಜಾಂಲ ಗುತ್ತು ಪ್ರಭಾಕರ ಶೆಟ್ಟಿ ಮಾತನಾಡಿ ಕಳೆದ 12 ವರ್ಷದ ಹಿಂದೆ ನಡೆದ ಬ್ರಹ್ಮಕಲಶೋತ್ಸವದಲ್ಲಿಯೂ ಭಕ್ತರು ಸಂಪೂರ್ಣ ಸಹಕಾರ ನೀಡಿದ್ದು, ಇದೀಗ ಜೀರ್ಣೋದ್ದಾರ ಕಾರ್ಯ ನಡೆಯುತ್ತಿದ್ದು, ಭಕ್ತರು ಸಂಪೂರ್ಣ ಸಹಕಾರ ನೀಡುತ್ತಾರೆ ಎಂದರು.

ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ವೇದವ್ಯಾಸ ತಂತ್ರಿಗಳ ನೇತ್ರತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭ ಕಟೀಲು ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ಆಸ್ರಣ್ಣ, ಶ್ರೀಕರ ಆಸ್ರಣ್ಣ, ಮಾಜಿ ಶಾಸಕ ಅಭಯಚಂದ್ರ ಜೈನ್, ಧರ್ಮಧರ್ಶಿ ಹರಿಕೃಷ್ಣ ಪುನರೂರು, ಕೊಡೆತ್ತೂರು ವೇದವ್ಯಾಸ ಉಡುಪ, ಗುತ್ತಿನಾರ್ ಲಕ್ಷೀನಾರಾಯಣ ರಾವ್ ಕೈಯೂರುಗುತ್ತು ಉದ್ಯಮಿ ರಘನಾಥ ಸೋಮಯಾಜಿ, ಸೂರಿಂಜೆ ಪಂಚಾಯತ್ ಅಧ್ಯಕ್ಷೆ ಗೀತಾ ಎಸ್ ಶೆಟ್ಟಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ಕೆ ಭುವನಾಭಿರಾಮ ಉಡುಪ, ಶಿಬರೂರುಗುತ್ತು ರಾಮಚಂದ್ರ ಶೆಟ್ಟಿ, ರಾಧಕೃಷ್ಣ ಶೆಟ್ಟಿ ಸೂರತ್, ಅಶೋಕ್ ಶೆಟ್ಟಿ ಬಜಾಲ್ ಬೀಡು, ಶಿಬರೂರುಗುತ್ತು ಕಿಶೋರ್ ಶೆಟ್ಟಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ,  ಪೊನ್ನಗಿರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಖೇಶ್ ಶೆಟ್ಟಿ , ಉಮೇಶ್ ಗುತ್ತಿನಾರ್ ಶಿಬರೂರು ಗುತ್ತು, ಸುಧಾಕರ ಶೇಣವ ದೇಂದೊಟ್ಟು ಗುತ್ತು, ಪಡುಮನೆ ಶಿವಾನಂದ ಶೆಟ್ಟಿ, ತುಕಾಮ ಶೆಟ್ಟಿ‌ಪರ್ಲಬೈಲ್, ಜಿತೇಂದ್ರ ಶೆಟ್ಟಿ ಕೊರ್ಯಾರಗುತ್ತು, ಸದಾಶಿವ ಶೆಟ್ಟಿ ಅಶ್ವತ್ತಡಿ ಉದ್ಯಮಿ ಕಿರಣ್ ಶೆಟ್ಟಿ, ಎಸ್ ಡಿ.ಸಿ.ಸಿ ಬ್ಯಾಂಕ್ ನಿರ್ದೆಶಕ ವಿನಯಕುಮಾರ್ ಸೂರಿಂಜೆ, ಶಿಬರೂರು ಲಕ್ಷೀಜನಾರ್ಥನ ಮಠದ ಅರ್ಚಕ ಲಕ್ಷೀನಾರಾಯಣ ಆಚಾರ್ಯ, ಕ್ಷೇತ್ರದ ಅರ್ಚಕ ಕುಟ್ಟಿ‌ಮೂಲ್ಯ, ಶಂಭು ಮುಕಾಲ್ದಿ ಅತ್ತೂರು, ಜಯರಾಮ‌ ಮುಕಾಲ್ದಿ ಕೊಡೆತ್ತೂರು, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೂರು, ದೊಡ್ಡಯ್ಯ ಮೂಲ್ಯ ಕಟೀಲು, ಯಾದವ ಕೋಟ್ಯಾನ್ ಪೆರ್ಮುದೆ, ಶ್ಯಾಮಲಾ ಪಿ ಶೆಟ್ಟಿ ಶಿಬರೂರುಗುತ್ತು, ಉಷಾ ಯು ಶೆಟ್ಟಿ ಶಿಬರೂರುಗುತ್ತು, ಉದ್ಯಮಿ ನಿತ್ಯಾನಂದ ಶೆಟ್ಟಿ, ವಕೀಲರಾದ ರವಿ ಕೋಟ್ಯಾನ್, ಸಿ.ಎ ಉದಯಕುಮಾರ್ , ಸುರೇಶ್ ಶೆಟ್ಟಿ ಅಡು, ದೇವದಾಸ್ ಅಳ್ವ ಬೆಳ್ಳಿಬೆಟ್ಟುಗುತ್ತು, ಮುರ ಸದಾಶಿವ ಶೆಟ್ಟಿ, ಕಾಂತಪ್ಪ ಸಾಲಿಯಾನ್, ದಾಮೋಧರ ಶೆಟ್ಟಿ ಶಿಬರೂರುಗುತ್ತು, ಚರಣ್ ಶೆಟ್ಟಿ ಅತ್ತೂರು, ಪ್ರಸನ್ನ ಶೆಟ್ಟಿ ಅತ್ತೂರುಗುತ್ತು, ಮಾಲಾಡಿ ಅಜಿತ್ ಕುಮಾರ್ ರೈ, ಯುವಕ ಮಂಡಲದ ಅಧ್ಯಕ್ಷ ಗಿರೀಶ್ ಶೆಟ್ಟಿ ತಿಬಾರ್, ಮಹಿಳಾ ಮಂಡಳಿಯ ಅಧ್ಯಕ್ಷೆ ಸುಪ್ರಜಾ ಸುಬ್ರಹ್ಮಣ್ಯಪ್ರಸಾದ್, ಪ್ರದ್ಯುಮ್ನ ರಾವ್ ಶಿಬರೂರು , ಸುಮನ್ ಶೆಟ್ಟಿ, ಸುಧಾಕರ ಶೆಟ್ಟಿ ಶಿಬರೂರುಗುತ್ತು, ಸುಧಾಕರ ಶಿಬರೂರು, ಸುರೇಶ್ ಶೆಟ್ಟಿ ಪುಚ್ಚಾಡಿ ಸುಬ್ರಮಣ್ಯ‌ಪ್ರಸಾದ್ ಪ್ರಸ್ತಾವನೆಗೈದರು.

ಮಧುಕರ ಅಮೀನ್ ಸ್ವಾಗತಿಸಿ, ಸುರೇಂದ್ರ ಶೆಟ್ಟಿ ಧನ್ಯವಾದ ಸಮರ್ಪಿಸಿದರು.

ಸಾಯಿನಾಥ ಶೆಟ್ಟಿ, ಅನಂತ ರಾಮ ಆಚಾರ್ಯ ಮೂಡುಮನೆ ನಿರೂಪಿಸಿದರು.

Continue Reading

DAKSHINA KANNADA

Ullala: ಬಾವಿಗೆ ಹಾರಿ ಟೆಂಪೋ ಚಾಲಕ ಜೀವಾಂತ್ಯ..!

Published

on

ಉಳ್ಳಾಲ: ಟೆಂಪೋ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ನರ ಚರ್ಚ್ ಬಳಿ ಸೆ.27ರಂದು  ನಡೆದಿದೆ.

ತೊಕ್ಕೊಟ್ಟು, ಕೃಷ್ಣ ನಗರ ಲಚ್ಚಿಲ್ ನಿವಾಸಿ 62 ವರ್ಷದ ನಾಗೇಶ್  (62) ಆತ್ಮ ಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾರೆ.

ನಾಗೇಶ್ ಅವರು ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು.

ಟೆಂಪೋವನ್ನು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ದಿನನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು.

ಇಂದು ಬೆಳಿಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು, ಸಂಪರ್ಕಕ್ಕೆ ಸಿಕ್ಕಿರಲಿಲ್ಲ.

ಟೆಂಪೋ ಸೀಟ್ ನಲ್ಲಿ ನಾಗೇಶ್ ಅವರ ಮೊಬೈಲ್, ನಗದು, ಫೋಟೊ, ಚಪ್ಪಲಿ ದೊರಕಿದ್ದು, ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ಅವರ ದೇಹವಿರುವುದು ಖಾತ್ರಿ ಪಡಿಸಿ ಮೃತ ದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿತ್ತು.

ಮರಣೋತ್ತರ ಪರೀಕ್ಷೆಯ ಬಳಿಕ ಅವರ ಕುಟುಂಬಸ್ಥರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಯಿತು.

ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಅವರು ತೊಕ್ಕೊಟ್ಟು ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Continue Reading

DAKSHINA KANNADA

ಮಂಗಳೂರಿನ ಬೆಡಗಿಗೆ ‘ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್ ನ್ಯಾಷನಲ್’ ಕಿರೀಟ

Published

on

ಮಂಗಳೂರು: ಮಂಗಳೂರಿನ ಬೆಡಗಿ ಯಶಸ್ಸಿನಿ ದೇವಾಡಿಗ ಅವರು ಥೈಲ್ಯಾಂಡ್ ನ ಬ್ಯಾಂಕಾಕ್ ನಲ್ಲಿ ನಡೆದ ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್ ನ್ಯಾಷನಲ್ 2023 ಅಂತಿಮ ಸುತ್ತಿನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಮಿಸ್ ಟೀನ್ ಸೂಪರ್ ಗ್ಲೋಬ್ ಇಂಟರ್‌ನ್ಯಾಶನಲ್ 2023 ಹದಿಹರೆಯದವರಿಗೆ ಅಂತರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯಾಗಿದೆ.

ವರ್ಷದ ಆರಂಭದಲ್ಲಿ ನಡೆದ ‘ಮಿಸ್ ಟೀನ್ ಇಂಡಿಯಾ ಗ್ಲೋಬ್ ಬ್ಯೂಟಿ ಕಾಂಟೆಸ್ಟ್ ನಲ್ಲಿ ಸ್ಪರ್ಧಿಸಿ ರನ್ನರ್ ಅಪ್ ಪ್ರಶಸ್ತಿ ಪಡೆದಿದ್ದರು.

ಥಾಯ್ಲೆಂಡ್ ನಲ್ಲಿ ನಡೆದ ಫೈನಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದ ಯಶಸ್ವಿನಿ ದೇವಾಡಿಗ ಮಿಸ್ ಟೀನ್ ಗ್ಲೋಬ್ ಇಂಟರ್ ನ್ಯಾಷನಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.

ಇವರು ದೇವದಾಸ್ ದೇವಾಡಿಗ ಕುಳಾಯಿ ಹಾಗೂ ಮೀನಾಕ್ಷಿ ದೇವಾಡಿಗ ಅವರ ಸುಪುತ್ರಿಯಾಗಿದ್ದು.

ಪ್ರಸ್ತುತ ಸುರತ್ಕಲ್ ನ ಗೋವಿಂದ ದಾಸ್ ಪಿಯು ಕಾಲೇಜಿನಲ್ಲಿ ದ್ವಿತೀಯಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.

Continue Reading

LATEST NEWS

Trending