Connect with us

DAKSHINA KANNADA

ಮಂಗಳೂರು: 10 ಲಕ್ಷ ಕೈಗೆ ಬಂದ್ರೂ ಬಿಕಾರಿಯಾದ ಕುಡುಕ….!

Published

on

ಮಂಗಳೂರು: ಕುಡುಕನೋರ್ವನಿಗೆ ಅದೃಷ್ಟವೆಂಬಂತೆ ರಸ್ತೆ ಬದಿಯಲ್ಲಿ ಹತ್ತು ಲಕ್ಷ ರೂಪಾಯಿ ಸಿಕ್ಕಿದ್ದು ಆದರೆ ಈತನ ತಲೆಗೇರಿದ ಅಮಲಿನ ಪರಿಣಾಮ ಅಷ್ಟೂ ದುಡ್ಡು ಅರ್ಧ ಗಂಟೆಯಲ್ಲಿ ಪೊಲೀಸರ ಪಾಲಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.


ನ.27ರಂದು ನಗರದ ಪಂಪ್ವೆಲ್ ಬಳಿ ಕನ್ಯಾಕುಮಾರಿ ಮೂಲದ ಪಿ. ಶಿವರಾಜ್ (49) ಎಂಬುವವರಿಗೆ ಬಿದ್ದುಕೊಂಡಿದ್ದ ಹತ್ತು ಲಕ್ಷ ರೂಪಾಯಿಯ ನೋಟಿನ ಕಟ್ಟು ಸಿಕ್ಕಿದೆ. ಇವರು ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದು ಬೋಂದೇಲ್‌ನ ಕೃಷ್ಣನಗರದಲ್ಲಿ ವಾಸವಾಗಿದ್ದಾರೆ.

ಇವರ ಪತ್ನಿ ಅನಾರೋಗ್ಯದಿಂದ ಮೃತಪಟ್ಟಿದ್ದು ಮಗಳು ಪಿಯು ವಿದ್ಯಾರ್ಥಿನಿ. ಮದ್ಯವೇ ಜೀವನ ಎಂಬ ಬದುಕು ಇವರದ್ದು. ಮನೆಗೂ ಹೋಗದೆ ರಸ್ತೆ ಬದಿ, ಬಸ್ ನಿಲ್ದಾಣಗಳಲ್ಲಿ ಮಲಗುವ ಇವರು ಆಹಾರಕ್ಕಾಗಿ ಹೊಟೇಲ್‌ನ್ನೇ ಅವಲಂಬಿಸಿಕೊಂಡಿದ್ದಾರೆ.


ಇವರು ನ.27ರಂದು ಎಂದಿನಂತೆ ಕುಡಿಯುತ್ತಾ ಪಂಪ್‌ವೆಲ್ ಮೇಲ್ಸೇತುವೆ ಬಳಿ ಬೀಡಿ ಸೇದುತ್ತಾ ನಿಂತಿದ್ದರು. ಅಲ್ಲಿನ  ಪಾರ್ಕಿಂಗ್ ಸ್ಥಳದಲ್ಲಿ ಇಂದು ಚೀಲ ಬಿದ್ದಿತ್ತು. ಅಲ್ಲೇ ಇದ್ದ ಕೂಲಿ ಕಾರ್ಮಿಕ ಚೀಲ ಹಾಗೂ ಶಿವರಾಜ್‌ನನ್ನೇ ಬಹು ಸೂಕ್ಷ್ಮವಾಗಿ ಗಮನಿಸುತ್ತಿದ್ದ.

ಇನ್ನು ಮುಂದೆ ಅವಾಂತರಗಳಾಗುವುದು ಬೇಡ ಎಂದು ಶಿವರಾಜ್ ಆ ಚೀಲವನ್ನು ತೋರಿಸುತ್ತಾನೆ. ಇಬ್ಬರೂ ಚೀಲವನ್ನು ಓಪನ್ ಮಾಡಿದಾಗ 500 ರೂ. ನೋಟುಗಳಿರುವ ನೋಟಿನ ಕಂತೆ ನೋಡಿ ಶಾಕ್ ಆಗಿದ್ದಾರೆ.

ಬಯಸದೆ ಬಂದ ಭಾಗ್ಯಕ್ಕೆ ಅಚ್ಚರಿಯಾದ ಅವರು ಖುಷಿಯಲ್ಲಿ ಶಿವರಾಜ್ ಅದೇ ನೋಟಿನ ಕಟ್ಟಿನಲ್ಲಿ ಒಂದು ಸಾವಿರ ರೂ ನಲ್ಲಿ ಮತ್ತೆ ಕುಡಿದು ಟೈಟಾಗಿದ್ದಾರೆ.

ಚೀಲವನ್ನು ಹಿಡಿದುಕೊಂಡು ಕುಡಿದು ಟೈಟಾಗಿ ಉಳ್ಳಾಲ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕೂಲಿ ಕಾರ್ಮಿಕ ಇದ್ರಲ್ಲಿ ನನಗೇನು ಕೊಡೋದಿಲ್ಲವಾ…? ಎಂದು ಪ್ರಶ್ನೆ ಮಾಡುತ್ತಾನೆ.

ಮೊದಲೇ ನಶೆಯಲ್ಲಿದ್ದ ಶಿವರಾಜ್ ಅವನಿಗೂ ಒಂದು ಬಂಡಲ್ ನೋಟು ಆತನ ಕೈಗಿಡುತ್ತಾನೆ. ಅದ್ಯಾಕೋ ಅಮಲು ನಿಂತಿಲ್ಲ, ನಶೆ ಇಳಿದಿಲ್ಲ. ಮತ್ತೆ ಹೊಟೇಲಿಗೆ ಹೋಗಿ ಉದರವನ್ನೂ ತುಂಬಿಸಿಕೊಂಡ.

ಇಷ್ಟರಲ್ಲಿ ಯಾರೊ ಕೊಟ್ಟ ಮಾಹಿತಿಯಂತೆ ಪೊಲೀಸರು ಆತನಿದ್ದ ಜಾಗಕ್ಕೆ ಬಂದು ಠಾಣೆಗೆ ಅವನನ್ನು ಕರೆದುಕೊಂಡು ಹೋದರು. ಆದರೆ ಇದೆಲ್ಲಾ ನಡೆಯುವ ಮೊದಲೇ ಪಾಲಿಗೆ ಬಂದದ್ದೇ ಮೃಷ್ಟಾನ್ನ’ ಎಂಬಂತೆ ಕೂಲಿ ಕಾರ್ಮಿಕ ಕೈಗೆ ಬಂದ ಹಣವನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾನೆ.
ಇನ್ನು ಪೊಲೀಸರು ಶಿವರಾಜ್‌ನನ್ನು ಠಾಣೆಗೆ ಕರೆದೊಯ್ದು ವಿಚಾರಿಸಿದಾಗ ನಡೆದ ವಿಷಯವನ್ನು ವಿವರಿಸುತ್ತಾರೆ.

ಘಟನೆ ನಡೆದು ವಾರ ಕಳೆದರೂ ಹಣದ ಬಗ್ಗೆ ಪೊಲೀಸರು ‌ಪ್ರಕರಣ ದಾಖಲಿಸಿಲ್ಲ. ವಾರ ಕಳೆದರೂ ಹಣದ ವಾರೀಸುದಾರರ ಪತ್ತೆಯಿಲ್ಲ. ಈ ಬಗ್ಗೆ ಯಾರೂ ದೂರು ನೀಡಿಲ್ಲ.
ಇದೀಗ ಮೂರು ದಿನದ ಬಳಿಕ ಶಿವರಾಜ್‌ನನ್ನು ಪೊಲೀಸರು ಠಾಣೆಯಿಂದ ಹೊರಬಿಟ್ಟಿದ್ದಾರೆ.
ಹಣ ಕಂಕನಾಡಿ ಠಾಣೆಯಲ್ಲಿ ಭದ್ರವಾಗಿದೆ.

ಈ ಬಗ್ಗೆ ಸ್ವತಃ ಅಭಿಪ್ರಾಯ ಹಂಚಿಕೊಂಡಿರುವ ಶಿವರಾಜ್ ‘ನಾವು ದಿನಕ್ಕೆ 300 ರೂ. ದುಡಿಯುವವರು. 19 ವರ್ಷಕ್ಕೆ ನಾವು ದುಡಿಯಲು ಬಂದವರು. ನಮಗೆ ಯಾರದ್ದೋ ಹಣ, ಸಿಕ್ಕಿಬಿದ್ದ ಹಣ ಬೇಡವೇ ಬೇಡ. ಒಂದು ಬಂಡಲ್ ತೆಗೆದುಕೊಂಡು ಹೋದ ವ್ಯಕ್ತಿಯನ್ನು ಕರೆದುಕೊಂಡು ಬಂದರೆ ಹಣ ಕೊಡುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ. ಏನು ಮಾಡಬೇಕೆಂದು ಗೊತ್ತಾಗ್ತಿಲ್ಲ’ ಎಂದು ಹೇಳಿದ್ದಾರೆ.

 

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

DAKSHINA KANNADA

ಇಂದು ಕರ್ನಾಟಕ ಬಂದ್‌: ಕರಾವಳಿಗರಿಂದ ನೈತಿಕ ಬೆಂಬಲ-ಬಸ್‌, ಹೊಟೇಲ್‌, ಶಾಲೆಗಳು ಎಂದಿನಂತೆ

Published

on

ಮಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಹಲವು ಸಂಘಟನೆಗಳು ಕರೆ ನೀಡಿರುವ ಇಂದಿನ (ಶುಕ್ರವಾರ) ಕರ್ನಾಟಕ ಬಂದ್ ಗೆ ಕರಾವಳಿಯಲ್ಲಿ ನೈತಿಕ ಬೆಂಬಲ ವ್ಯಕ್ತವಾಗಿದೆ.

ಖಾಸಗಿ ಬಸ್ ಸಂಘಟನೆಯು ಕರ್ನಾಟಕ ಬಂದ್ ಗೆ ನೈತಿಕ ಬೆಂಬಲ ನೀಡಿದೆ. ಆದರೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಗಳು ಎಂದಿನಂತೆ ಓಡಾಟ ನಡೆಸಲಿದೆ.

ಕಾವೇರಿ ವಿಚಾರವಾಗಿ ನಮ್ಮ ಸಹಾನುಭೂತಿಯಿದೆ. ಆದರೆ ಬಸ್ ಸಂಚಾರ ಬಂದ್ ಮಾಡುವುದರಿಂದ ವಿದ್ಯಾರ್ಥಿಗಳು, ಉದ್ಯೋಗಿಗಳು ಸೇರಿ ಸಾರ್ವಜನಿಕ ಜೀವನಕ್ಕೆ ಕಷ್ಟವಾಗುವ ಕಾರಣ ನಾವು ನೈತಿಕ ಬೆಂಬಲ ಸೂಚಿಸುತ್ತೇವೆ. ಬಸ್ ಓಡಾಟ ಎಂದಿನಂತೆ ಇರಲಿದೆ ಎಂದು ಖಾಸಗಿ ಬಸ್ ಒಕ್ಕೂಟ ತಿಳಿಸಿದೆ.

ಜೊತೆಗೆ ಕರಾವಳಿ ಹೋಟೆಲ್ ಉದ್ಯಮವು ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ಮಾತ್ರ ನೀಡಿದೆ. ಹೀಗಾಗಿ ಉಡುಪಿ- ಮಂಗಳೂರಿನಲ್ಲಿ ಹೋಟೆಲ್ ಗಳು ತೆರೆದಿರಲಿವೆ.

ಇಂದು ಕರ್ನಾಟಕ ಬಂದ್ ಇದ್ದರೂ, ಕರಾವಳಿ ಜಿಲ್ಲೆಗಳಲ್ಲಿ ಜನ ಜೀವನ ಎಂದಿನಂತೆ ಇರಲಿದೆ. ಜೊತೆಗೆ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಲಿದೆ.

Continue Reading

DAKSHINA KANNADA

ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ‘ಸ್ಕಿಲ್ ಅಪ್’ ಕಾರ್ಯಕ್ರಮ

Published

on

ಮಂಗಳೂರು: ಮಂಗಳೂರಿನ ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ವತಿಯಿಂದ ‘ಸ್ಕಿಲ್ ಅಪ್’ ಎಂಬ ಕಾರ್ಯಕ್ರಮ ಸೆ. 23 ರಂದು ನಡೆಯಿತು.

ಆರೋಗ್ಯ ಕ್ಷೇತ್ರದ ಕಾರ್ಯನಿರ್ವಾಹಕರಿಗೆ ಅಗತ್ಯವಾದ, ಆಡಳಿತ ಮತ್ತು ನಿರ್ವಹಣಾ ಕೌಶಲ್ಯಗಳನ್ನು ಒದಗಿಸುವುದು ಇದರ ಉದ್ದೇಶವಾಗಿತ್ತು.

ಮಂಗಳೂರಿನ ಸುಶಾಂತ್ ಕನ್ಸಲ್ಟೆನ್ಸಿಯ ಎಚ್. ಪ್ರಶಾಂತ್ ಮಿರಾಂಡ, ಎಂಡಿಪಿ ನಿರ್ದೇಶಕ ಪ್ರೊ.ವೆಂಕಟೇಶ್ ಅಮೀನ್ ಮತ್ತು ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾನಿಲಯದ ಡೀನ್ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಕಾರ್ಯಕ್ರಮವನ್ನು ಎಚ್‌. ಪ್ರಶಾಂತ್ ಮಿರಾಂಡ, ಪ್ರೊ. ವೆಂಕಟೇಶ್ ಶೇಖರ್ ಅಮಿನ್, ಪ್ರೊ. ಡಾ. ಅಮುತಾ ಪಿ. ಮಾರ್ಲಾ, ಡಾ. ಶಾಶ್ವತ್ ಎಸ್., ಎ.ಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನಿರ್ವಹಣೆಗಾರ ಪ್ರೊ. ವಿಜಯ ಪಿ., ಎ.ಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮುಖ್ಯಾಧಿಕಾರಿ ಅವರು ಉದ್ಘಾಟಿಸಿದರು.

ಚೆನ್ನೈ ಅಪೋಲೊ ಪ್ರೋಟಾನ್ ಕ್ಯಾನ್ಸರ್ ಸೆಂಟರ್, ಆಥರ್ವ ಆರ್ಥೋ ಕೇರ್ ಮಂಗಳೂರು, ಕ್ರಿಶ್ಚಿಯನ್ ಮೆಡಿಕಲ್ ಕಾಲೇಜು(ಸಿಎಂಸಿ) ವೆಲ್ಲೂರು, ಡಾಕ್ಟರ್ ಟಿಎಂಎ ಪೈ ಆಸ್ಪತ್ರೆ, ಉಡುಪಿ, ಫಾದರ್ ಮುಲ್ಲರ್ ಹೋಮಿಯೋಪತಿ ಕಾಲೇಜು ಮತ್ತು ಆಸ್ಪತ್ರೆ ದೇರೆಳಕಟ್ಟೆ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಂಗಳೂರು, ಫಾದರ್ ಮುಲ್ಲರ್ ಆಸ್ಪತ್ರೆ ತುಂಬೆ, ಕಸ್ತೂರ್ಬಾ ಮೆಡಿಕಲ್ ಕಾಲೇಜು (ಕೆಎಂಸಿ) ಅತ್ತಾವರ, ಮಣಿಪಾಲ್ ಹೆಲ್ತ್ ಎಂಟರ್ಪ್ರೈಸ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು, ರಾಜಗಿರಿ ಆಸ್ಪತ್ರೆ ಬೆಂಗಳೂರು, ರಾಮಯ್ಯ ಮೆಮೋರಿಯಲ್ ಆಸ್ಪತ್ರೆ ಬೆಂಗಳೂರು, ರಾಮಯ್ಯ ಯೂನಿವರ್ಸಿಟಿ ಆಫ್ ಆಪ್ಲೈಡ್ ಸೈನ್ಸೆಸ್ ಬೆಂಗಳೂರು, ಶ್ರೀ ರೇಂಗ ಆಸ್ಪತ್ರೆ ತಮಿಳುನಾಡು, ಶ್ರೀನಿವಾಸ್ ಆಸ್ಪತ್ರೆ ಮುಕ್ಕ, ಸೈಂಟ್‌ ಜಾನ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆ ಬೆಂಗಳೂರು, ಯೂನಿಟಿ ಆಸ್ಪತ್ರೆ ಮಂಗಳೂರು, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ, ಮಂಗಳೂರು ಮತ್ತಿತರ ಸಂಸ್ಥೆಗಳಿಂದ ಆಧಿಕಅರಿ ಮತ್ತು ಸಿಬಂದಿ ಭಾಗವಹಿಸಿದ್ದರು. ಎ. ಜೆ. ಹ್ಯೂಮನ್ ರಿಸೋರ್ಸಸ್ ನ ಮ್ಯಾನೇಜರ್ ಶಶಧರ ಆಚಾರ್ಯ ಪ್ರಸ್ತಾವನೆಗೈದರು.

ಎ..ಜೆ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ನ ಸಹಾಯಕ ಪ್ರಾಧ್ಯಾಪಕಿ ಪ್ರೀಮ್ ರೋಸ್ ವಿಷ್ಣು ಸ್ವಾಗತಿಸಿದರು.

Continue Reading

LATEST NEWS

Trending