Connect with us

DAKSHINA KANNADA

Mangaluru: ಕಬ್ಬಿಣ ಸೆಂಟ್ರಿಂಗ್‌ ಶೀಟ್‌, ಕಾಲಂ ಬಾಕ್ಸ್‌ ಕಳವು- ಓರ್ವ ಬಂಧನ..!

Published

on

ಕಬ್ಬಿಣದ ಸೆಂಟ್ರಿಂಗ್‌ ಶೀಟ್‌ ಮತ್ತು ಕಬ್ಬಿಣದ ಕಾಲಂ ಬಾಕ್ಸ್‌ ಗಳನ್ನು ಕದ್ದು ಸಾಗಿಸುತ್ತಿದ್ದ ಪ್ರಕರಣವನ್ನು ಉಳ್ಳಾಲ ಪೊಲೀಸರು ಭೇದಿಸಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿ ಒಟ್ಟು 9,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

ಮಂಗಳೂರು: ಕಬ್ಬಿಣದ ಸೆಂಟ್ರಿಂಗ್‌ ಶೀಟ್‌ ಮತ್ತು ಕಬ್ಬಿಣದ ಕಾಲಂ ಬಾಕ್ಸ್‌ ಗಳನ್ನು ಕದ್ದು ಸಾಗಿಸುತ್ತಿದ್ದ ಪ್ರಕರಣವನ್ನು ಉಳ್ಳಾಲ ಪೊಲೀಸರು ಭೇದಿಸಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿ ಒಟ್ಟು 9,75,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.

ಮೂಡುಬಿದಿರೆಯ ತೋಡಾರ್‌ ನಿವಾಸಿ ಇಲಿಯಾಸ್‌ ಯಾನೆ ಮೊಹಮ್ಮದ್‌ ಇಲಿಯಾಸ್‌ (23) ಬಂಧಿತ ಆರೋಪಿ.

ಉಳ್ಳಾಲ ಪೊಲೀಸ್‌ ಠಾಣೆಯ ಸಬ್‌ ಇನ್ಸ್ ಪೆಕ್ಟರ್‌ ಸಂತೋಷ್‌ ಕುಮಾರ್‌ ಡಿ. ಅವರು ಇಂದು ಬೆಳಗ್ಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದ ವೇಳೆ ಪಿಲಿಕೂರು ಭಾಗದಿಂದ ಕೆ.ಸಿ. ರೋಡ್‌ ಕಡೆಗೆ ಹೋಗುತ್ತಿದ್ದ ರಿಟ್ಸ್‌ ಕಾರು ಮತ್ತು ಪಿಕಪ್‌ ವಾಹನವನ್ನು ತಡೆದು ನಿಲ್ಲಿಸಿದಾಗ ಈ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಕಾರಿನಲ್ಲಿದ್ದ ಹಂಝ ಮತ್ತು ಮೊಹಮ್ಮದ್‌ ಶಾಹಿಲ್‌ ಓಡಿ ತಪ್ಪಿಸಿಕೊಂಡಿದ್ದಾರೆ.

ಪಿಕಪ್‌ ವಾಹನದಲ್ಲಿ ಕಬ್ಬಿಣದ 120 ಸೆಂಟ್ರಿಂಗ್‌ ಶೀಟ್‌ ಮತ್ತು 3 ಸೆಟ್‌ ಕಬ್ಬಿಣದ ಕಾಲಂ ಬಾಕ್ಸ್‌ ಪತ್ತೆಯಾಗಿವೆ.

ಸೆಂಟ್ರಿಂಗ್‌  ಶೀಟ್‌ ಗಳನ್ನು ಅಗಸ್ಟ್ 7 ರಂದು ರಾತ್ರಿ ಕೊಲ್ಯದ ನಿರ್ಮಾಣ ಹಂತದ ಕಟ್ಟಡದ ಎದುರಿನಿಂದ ಹಾಗೂ ಕಬ್ಬಿಣದ ಕಾಲಂ ಬಾಕ್ಸ್‌ ಗಳನ್ನು ಒಂದುವರೆ ತಿಂಗಳ ಹಿಂದೆ ಪಾನೀರು ಎಂಬಲ್ಲಿಂದ ಕಳವು ಮಾಡಲಾಗಿತ್ತು ಎಂದು ಪಿಕಪ್‌ ಚಾಲಕ ಇಲಿಯಾಸ್‌ ಯಾನೆ ಮೊಹಮ್ಮದ್‌ ಇಲಿಯಾಸ್‌ ಮಾಹಿತಿ ನೀಡಿದ್ದಾನೆ.

ಕದ್ದ ಮಾಲುಗಳನ್ನು ತತ್‌ಕ್ಷಣ ಮಾರಾಟ ಮಾಡಿದರೆ ಪೊಲೀಸರಿಗೆ ಸಿಕ್ಕಿ ಬೀಳ ಬಹುದೆಂಬ ಭಯದಿಂದ ಅವುಗಳನ್ನು ಪಿಲಿಕೂರಿನ ನಿರ್ಜನ ಪ್ರದೇಶದಲ್ಲಿ ಬಚ್ಚಿಡಲಾಗಿತ್ತು.

ಈಗ ಅದನ್ನು ಮಾರಾಟ ಮಾಡಲು ಕೊಂಡೊಯ್ಯುತ್ತಿರುವುದಾಗಿ ಆತ ತಿಳಿಸಿದ್ದಾನೆ.

ಒಟ್ಟು 2,50,000 ರೂಪಾಯಿ ಮೌಲ್ಯದ ಸೆಂಟ್ರಂಗ್‌ ಶೀಟ್‌, 1,25,000 ರೂ. ಮೌಲ್ಯದ ಕಬ್ಬಿಣದ ಕಾಲಂ ಬಾಕ್ಸ್‌, ತಲಾ 3 ಲಕ್ಷ ರೂ. ಮೌಲ್ಯದ ಪಿಕಪ್‌ ವಾಹನ ಮತ್ತು ರಿಟ್ಸ್‌ ಕಾರನ್ನು ಪೊಲೀಸರು ವಶ ಪಡಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!

Published

on

ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತರನ್ನು ಮಹೇಶ್ ಬಸ್ ಮಾಲೀಕ  ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.

ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ.  ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಮೇಯರ್‌ ಫೋನ್‌ ಇನ್‌ : ಮಂಗಳೂರು ನಗರದ 8 ಕಡೆ ಬಸ್ ಬೇ ನಿರ್ಮಾಣ- ಸುಧೀರ್ ಶೆಟ್ಟಿ

Published

on

ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್‌ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್‌ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.

ಮೇಯರ್ ಕಚೇರಿಯಲ್ಲಿ ಶನಿವಾರ ನಡೆದ ಮೇಯರ್ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

ಮೊದಲ ಹಂತದಲ್ಲಿ ನಾಗರಿಕರಿಂದ ಹೆಚ್ಚು ಬೇಡಿಕೆ ಇರುವ ಬಿಜೈ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಸಮೀಪ, ಲೇಡಿಹಿಲ್‌, ಕಂಕನಾಡಿ ಜಂಕ್ಷನ್‌, ಬಂಟ್ಸ್ ಹಾಸ್ಟೇಲ್ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಬಸ್ ಬೇ ನಿರ್ಮಿಸಲಾಗುವುದು.

ಬಳಿಕ ಹಂತ ಹಂತವಾಗಿ ಉಳಿದೆಡೆ ಬಸ್ ಬೇ ನಿರ್ಮಿಸಲಾಗುವುದು ಎಂದರು. ನಗರದಲ್ಲಿ 53 ಬಸ್ಸು ತಂಗುದಾಣಕ್ಕೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರೂ ಅಧಿಕಾರಿಗಳುಮಾತ್ರ ಕಡತದಲ್ಲೇ ಬಾಕಿ ಇರಿಸಿದ್ದು, ಮನಪಾ ಆಡಳಿತದ ಸಭೆಗೆ ಹಾಜರುಪಡಿಸದಿರುವುದು ಗಮನಕ್ಕೆ ಬಂತು.

ಕೂಡಲೇ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಪ್ರಸ್ತಾವನೆಯನ್ನು ಮುಂದಿನ ಸಭೆಗೆ ಹಾಜರುಪಡಿಸುವಂತೆ ಸೂಚನೆ ನೀಡಿದರು.

ಬೀದಿ ಬದಿ ವ್ಯಾಪಾರಸ್ಥರು ನಗರದ ಅನೇಕ ಕಡೆಗಳಲ್ಲಿ ರಸ್ತೆ ಹಾಗೂ ಫುಟ್ಪಾತ್‌ ಅತಿಕ್ರಮಣ ನಡೆಸಿದ್ದಾರೆ.

ಅಗಲಗೊಂಡರಸ್ತೆಯಲ್ಲಿ ವಾಹನಗಳನ್ನು ಪಾರ್ಕ್‌ ಮಾಡಲಾಗುತ್ತಿದೆ.

ಈ ಬಗ್ಗೆ ಪಾಲಿಕೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.

Continue Reading

bengaluru

ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ಡೇಟ್ ಫಿಕ್ಸ್-ಅಶೋಕ್ ಕುಮಾರ್ ರೈ

Published

on

ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು  ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಸೇರಿದಂತೆ ರಜನಿಕಾಂತ್, ಐಶ್ವರ್ಯ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ನಟ ನಟಿಯರು ಭಾಗವಹಿಸಲಿದ್ದಾರೆ.

ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಅದರ ಮಾಲಕರು ಭಾಗವಹಿಸಲಿದ್ದಾರೆ ಎಂದರು.

ಇದರ ಜೊತೆ 125 ಸ್ಟಾಲ್ ಗಳಲ್ಲಿ ಕರಾವಳಿಯ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ.

ಸುಮಾರು 7 ರಿಂದ 8 ಲಕ್ಷ ಜನರು ಇದನ್ನು ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿ ಪದಾಧಿಕಾರಿಗಳಾದ ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳಂಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.

Continue Reading

LATEST NEWS

Trending