DAKSHINA KANNADA
Mangaluru: ಕಾಲೇಜು ವಿದ್ಯಾರ್ಥಿಗಳ ಅಪಹರಿಸಿ ಹಲ್ಲೆ- 7 ಮಂದಿ ಆರೋಪಿಗಳ ಬಂಧನ..!
ಮಂಗಳೂರು ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆಗೈದ ಆರೋಪದ ಮೇರೆಗೆ 7 ಮಂದಿ ಆರೋಪಿಗಳನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಮಂಗಳೂರು ನಗರದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಕಾರಿನಲ್ಲಿ ಅಪಹರಿಸಿ ಹಲ್ಲೆಗೈದ ಆರೋಪದ ಮೇರೆಗೆ 7 ಮಂದಿ ಆರೋಪಿಗಳನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪಾಣೆಮಂಗಳೂರು ಸಮೀಪದ ಆಲಡ್ಕದ ಇಬ್ರಾಹೀಂ ತಾಬೀಶ್ (19), ಗೂಡಿನ ಬಳಿಯ ಅಬ್ದುಲ್ಲಾ ಹನ್ನಾನ್ (19), ಸಜಿಪ ಮುನ್ನೂರು ಗ್ರಾಮದ ಶಕೀಫ್ (19), ಬಂಟ್ವಾಳ ಮೂಡ ಗ್ರಾಮದ ಶಾಹೀಕ್ (19), ಬಜಾಲ್ ನಂತೂರಿನ ಯುಪಿ ತನ್ವೀರ್ (20), ಬಜಾಲ್ ಫೈಸಲ್ ನಗರದ ಅಬ್ದುಲ್ ರಶೀದ್ (19), ಗೂಡಿನ ಬಳಿಯ ಮನ್ಸೂರ್ (37) ಎಂದು ಗುರುತಿಸಲಾಗಿದೆ.
ನಗರದ ಸಂತ ಅಲೋಶಿಯಸ್ ಕಾಲೇಜು ಬಳಿ ವಿದ್ಯಾರ್ಥಿಗಳಾದ ಶಾಮೀರ್ ಮತ್ತು ಇಬ್ರಾಹೀಂ ಫಾಹೀಮ್ ಎಂಬವರನ್ನು ಆ.23ರಂದು ಈ ಆರೋಪಿಗಳು ಕಾರಿನಲ್ಲಿ ಹಲ್ಲೆ ನಡೆಸಿದ್ದರು ಎನ್ನಲಾಗಿದೆ.
ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಇಬ್ರಾಹೀಂ ಫಾಹೀಮ್ ನೀಡಿದ ದೂರಿನಂತೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
DAKSHINA KANNADA
ಕಡಲ ಮಧ್ಯೆ ಸಿಲುಕಿದ ಮೀನುಗಾರಿಕಾ ಬೋಟ್- ಮೀನುಗಾರರನ್ನು ರಕ್ಷಿಸಿದ ಕೋಸ್ಟ್ಗಾರ್ಡ್
ಮಂಗಳೂರು: ಮಂಗಳೂರು ನಗರದ ಹಳೆ ಬಂದರು ಧಕ್ಕೆಯಿಂದ ಮೀನುಗಾರಿಕೆಗೆ ಹೋಗಿದ್ದ ಬೋಟೊಂದು 39 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ತಾಂತ್ರಿಕ ಸಮಸ್ಯೆಗೆ ಸಿಲುಕಿದಾಗ ಅದರಲ್ಲಿದ್ದ ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ನೌಕೆ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ.
ತಿರುಚೆಂದೂರ್ ಮುರುಗನ್ ಹೆಸರಿನ ಬೋಟ್ ಸಮುದ್ರ ಮಧ್ಯೆ ತಾಂತ್ರಿಕ ಅಡಚಣೆಗೆ ಸಿಲುಕಿತ್ತು.
ಈ ಬಗ್ಗೆ ಬೋಟ್ನಿಂದ ಮುಂಬೈನ ತಟ ರಕ್ಷಣಾ ಕೇಂದ್ರಕ್ಕೆ ತುರ್ತು ಸಂದೇಶ ರವಾನಿಸಲಾಗಿತ್ತು.
ಈ ಸಂದೇಶ ಸ್ವೀಕರಿಸಿದ ಮುಂಬೈನ ಎಂಆರ್ಸಿಸಿ ಕೇಂದ್ರದ ಅಧಿಕಾರಿಗಳು ತಕ್ಷಣ ಕೋಸ್ಟ್ಗಾರ್ಡ್ಗೆ ಮಾಹಿತಿ ನೀಡಿದ್ದರು.
ಅದರಂತೆ ಕೋಸ್ಟ್ಗಾರ್ಡ್, ಮೀನುಗಾರಿಕಾ ಇಲಾಖೆ ಹಾಗೂ ಬೋಟ್ ಮಾಲಕರ ಸಹಕಾರದಲ್ಲಿ ಕಾರ್ಯಾಚರಣೆ ನಡೆಸಿದ ಕೋಸ್ಟ್ ಗಾರ್ಡ್ನ ಎರಡು ಇಂಟರ್ಸೆಪ್ಟರ್ ಬೋಟ್ಗಳು ತಾಂತ್ರಿಕ ತೊಂದರೆಗೆ ಸಿಲುಕಿದ ಬೋಟ್ನ್ನು ನವಮಂಗಳೂರು ಬಂದರು ತೀರಕ್ಕೆ ಎಳೆದು ತಂದು ರಕ್ಷಿಸಿವೆ ಎಂದು ಕೋಸ್ಟ್ಗಾರ್ಡ್ ತಿಳಿಸಿದೆ.
BELTHANGADY
ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಕಳ್ಳ ಅರೆಸ್ಟ್..!
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ನಿವಾಸಿ ಉಮೇಶ್ ಬಳೇಗಾರ್(47) ಬಂಧಿತ ಆರೋಪಿ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ ನಿವಾಸಿ ಫೆಲಿಕ್ಸ್ ರೋಡ್ರಿಗಸ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯ ಬಾಗಿಲು ಮುರಿದು ನುಗ್ಗಿ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಆಗಿದೆ.
ಈ ಕೂಡಲೇ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ಆರೋಪಿ ವಿರುದ್ಧ ತಮಿಳುನಾಡು, ಕೇರಳದ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಿಸಲಾಗಿದೆ.
ಅಲ್ಲದೆ ಕರ್ನಾಟಕದ ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದ್ರೆ ಠಾಣೆಯಲ್ಲಿಯೂ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ.
ಈತನಿಗಾಗಿ ಮೂರೂ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿರುವಾಗಲೇ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈತನಿಂದ ಕಳ್ಳತನ ಮಾಡಲಾದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
DAKSHINA KANNADA
ಜಾನುವಾರು ಸಾಗಾಟಗಾರರ ಕೊಲೆಗೆ ಸಂಚು ರೂಪಿಸುತ್ತಿದ್ದ ಇಬ್ಬರ ಬಂಧನ..!
ಮಂಗಳೂರು: ಜಾನುವಾರು ಅಕ್ರಮ ಸಾಗಾಟದ ತಂಡವೊಂದರ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದೆ.
ಫರಂಗಿಪೇಟೆ ಸಮೀಪದ ಅಮೆಮಾರ್ನ ನಿವಾಸಿಗಳು ತಸ್ಲೀಮ್ ಯಾನೆ ಗರುಡ ತಸ್ಲೀಮ್ (34) ಮತ್ತು ಹೈದರಾಲಿ ಯಾನೆ ಹೈದು (26) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಗುರುವಾರದಂದು ತಸ್ಲೀಮ್ ಮತ್ತು ಆತನ ಗುಂಪಿನ ಸದಸ್ಯರು ಇನ್ನೊಂದು ತಂಡದ ಕೊಲೆಗೆ ಸಂಚು ರೂಪಿಸಿ ತಲವಾರಿನೊಂದಿಗೆ ಹೊಂಚು ಹಾಕುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಕೊಲೆ ಸಂಚನ್ನು ವಿಫಲಗೊಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.
ಈ ಕೃತ್ಯದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಪೈಕಿ ತಸ್ಲೀಮ್ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣ ಗಳು, ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.
ಈತನು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ.
ಇನ್ನೋರ್ವ ಆರೋಪಿ ಹೈದರಾಲಿಯು ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.