HomeLATEST NEWSಪ್ರಯಾಣಿಕರಲ್ಲಿ ಗೊಂದಲ ಸೃಷ್ಟಿಸಿದ ಮಂಗಳೂರು-ಕುವೈಟ್‌ ವಿಮಾನಯಾನ ವೇಳಾಪಟ್ಟಿ

ಪ್ರಯಾಣಿಕರಲ್ಲಿ ಗೊಂದಲ ಸೃಷ್ಟಿಸಿದ ಮಂಗಳೂರು-ಕುವೈಟ್‌ ವಿಮಾನಯಾನ ವೇಳಾಪಟ್ಟಿ

ಮಂಗಳೂರು: ಮಂಗಳೂರಿನಿಂದ ಕುವೈಟ್‌ಗೆ ತೆರಳುವ ಏರ್‌ ಇಂಡಿಯಾ ವಿಮಾನಗಳ ವೇಳಾಪಟ್ಟಿಯನ್ನು ನವೆಂಬರ್‌ನಿಂದ ಪರಿಷ್ಕರಿಸಲಾಗಿದ್ದು, ಈ ವೇಳಾಪಟ್ಟಿಯಿಂದ ಅನಿವಾಸಿ ಭಾರತೀಯರಿಗೆ ಅನಾನುಕೂಲವಾಗಿದೆ ಎಂಬ ಆರೋಪ ಕೇಳಿಬಂದಿದೆ.


ಕೋವಿಡ್‌ ಮುಂಚೆ ಸಮರ್ಪಕವಾಗಿದ್ದ ಮಂಗಳೂರು-ಕುವೈತ್‌ ವಿಮಾನದ ವೇಳಾಪಟ್ಟಿ, ಇದೀಗ ದಿಢೀರನೆ ಬದಲಾಗಿದೆ. ಗುರುವಾರ ಕುವೈತ್‌ನಿಂದ ಹೊರಟು ಮಂಗಳೂರಿಗೆ ಬರುವವರಿಗೆ ಮೊದಲಿನ ವೇಳಾಪಟ್ಟಿ ಅನುಕೂಲವಾಗಿತ್ತು.

ಕುವೈತ್‌ ನಲ್ಲಿ ಶುಕ್ರವಾರ ಮತ್ತು ಶನಿವಾರ ವಾರಾಂತ್ಯ ರಜೆ ಇರುವುದರಿಂದ, ಕರಾವಳಿ ಜನರು ಊರಿಗೆ ಬಂದು ಹೋಗಲು ಪ್ರಯೋಜನವಾಗುತ್ತಿತ್ತು. ರಜೆ ಇಲ್ಲದೆ ಭಾನುವಾರ ಮತ್ತೆ ಕೆಲಸಕ್ಕೆ ಹಾಜರಾಗಲು ಅವಕಾಶ ಸಿಗುತ್ತಿತ್ತು.
ನಂತರ ಈ ವೇಳಾಪಟ್ಟಿಯನ್ನು ಹಠಾತ್ತಾಗಿ ಬದಲಾಯಿಸಲಾಗಿದ್ದು, ವಿಮಾನ ಸಂಚಾರವನ್ನು ರಾತ್ರಿಯ ಬದಲು ಹಗಲಿಗೆ ನಿಗದಿಪಡಿಸಲಾಗಿತ್ತು. ಇದರಿಂದಾಗಿ ಕುವೈತ್‌ನಿಂದ ಮಂಗಳೂರಿಗೆ ಬರುವ ಜನರು ವಾರದ ಕರ್ತವ್ಯದ ಅವಧಿಯಲ್ಲಿ ರಜೆ ಹಾಕಿ ಬರಬೇಕಾಗುತ್ತಿತ್ತು.

ಈ ಸಮಯವನ್ನು ಹಿಂದಿನಂತೆ ಮರು ನಿಗದಿಪಡಿಸುವಂತೆ ಕುವೈತ್‌ನ ಕರಾವಳಿಗರ ಸಂಘಟನೆಗಳು ಸಂಸದರಿಗೆ ಮನವಿ ಸಲ್ಲಿಸಿದ್ದವು.
ವಾರದ ಮಧ್ಯೆ ವಿಮಾನ: ಹೊಸ ವೇಳಾಪಟ್ಟಿ ಪ್ರಕಾರ ಮಂಗಳೂರಿನಿಂದ ಪ್ರತಿ ಮಂಗಳವಾರ ಬೆಳಿಗ್ಗೆ 6 ಗಂಟೆಗೆ ಕುವೈತ್‌ಗೆ ವಿಮಾನ ಹೊರಡಲಿದೆ. ಪ್ರತಿ ಬುಧವಾರ ಬೆಳಿಗ್ಗೆ 8.45ಕ್ಕೆ ಕುವೈತ್‌ನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಲಿದೆ.

ಇದು ಕುವೈತ್‌ನಲ್ಲಿರುವ ಕರಾವಳಿ ಉದ್ಯೋಗಿಗಳಿಗೆ ಅನುಕೂಲ ಆಗುವುದಿಲ್ಲ. ವಾರದ ಮಧ್ಯೆ ವಿಮಾನ ಸಂಚಾರ ನಿಗದಿ ಆಗಿದ್ದರಿಂದ ಊರಿಗೆ ಬಂದು ಹೋಗಬೇಕಾದರೆ ರಜೆ ಹಾಕಬೇಕಾಗುತ್ತದೆ. ಹಾಗಾಗಿ ಈ ವೇಳಾಪಟ್ಟಿಯನ್ನು ಹಿಂದಿನಂತೆ ರಾತ್ರಿಗೆ ಬದಲಾಯಿಸುವುದೇ ಸೂಕ್ತ ಎಂದು ಒತ್ತಾಯಿಸಿದ್ದಾರೆ.

‘ನ.30ರ ವರೆಗೆ ವಂದೇ ಭಾರತ್‌ ಮಿಷನ್‌ನಡಿ ಈ ರೀತಿ ವಿಮಾನ ಸಂಚರಿಸುತ್ತದೆ. ಕೋವಿಡ್‌–19 ವೇಳೆಯ ಸಂಚಾರ ಇದಾಗಿದ್ದು, ಇದು ತಾತ್ಕಾಲಿಕ ವೇಳಾಪಟ್ಟಿ. ಹಾಗಾಗಿ ಮತ್ತೆ ವೇಳಾಪಟ್ಟಿ ಪರಿಷ್ಕರಣೆಯಾಗುವ ಸಂಭವ ಇದೆ’ ಎಂದು ಏರ್‌ ಇಂಡಿಯಾ ಮಂಗಳೂರಿನ ಅಧಿಕಾರಿಗಳು ಹೇಳುತ್ತಾರೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...