Connect with us

DAKSHINA KANNADA

Mangaluru: ಎಂಡಿಎಂಎ ಮಾರಾಟ-ಇಬ್ಬರು ಆರೋಪಿಗಳು ಅರೆಸ್ಟ್..!

Published

on

ಮಂಗಳೂರು: ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಉಪ್ಪಿನಂಗಡಿಯ ಪಿ.ಎಸ್. ಅಬ್ದುಲ್ ಅಜೀಜ್ ಯಾನೆ ಅಜೀಜ್  (31) ಮತ್ತು ಸುರತ್ಕಲ್ ನ  ಅಕ್ಷಿತ್ ಕುಮಾರ್ (26) ಬಂಧಿತ  ಆರೋಪಿಗಳು.

ಬಂಧಿತರಿಂದ ಒಟ್ಟು 35 ಗ್ರಾಂ ತೂಕದ ರೂಪಾಯಿ 1,75,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು-2, ನಗದು ರೂಪಾಯಿ 600 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂಪಾಯಿ 1,96,000 ಆಗಬಹುದು ಎಂದು ಅಂದಾಜಿಸಲಾಗಿದೆ.

ಇನ್ನು ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಅಬ್ದುಲ್ ಅಜೀಜ್ ಎಂಬಾತನ ವಿರುದ್ಧ ಈ ಹಿಂದೆ ಉಪ್ಪಿನಂಗಡಿ, ವಿಟ್ಲ ಹಾಗೂ ಉರ್ವಾ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ಮೂರು ಪ್ರಕರಣ ದಾಖಲಾಗಿದ್ದು, ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡಿದ್ದ.

ಈತ ಮತ್ತೆ ಅದೇ ಮಾದಕ ವಸ್ತು ಮಾರಾಟ ದಂಧೆ ನಡೆಸುತ್ತಿದ್ದ ಎನ್ನಲಾಗಿದೆ.

ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯವನ್ನು ಮಂಗಳೂರು ನಗರದ ಪೊಲೀಸ್ ಆಯುಕ್ತರವರಾದ ಅನುಪಮ್ ಅಗರ್ ವಾಲ್ ರವರ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಯವರು ನಡೆಸಿದ್ದಾರೆ.

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending