DAKSHINA KANNADA
Mangaluru: ಎಂಡಿಎಂಎ ಮಾರಾಟ-ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ..!
ಮಾದಕ ವಸ್ತು ಸಿಂಥೆಟಿಕ್ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಮಂಗಳೂರು: ಮಾದಕ ವಸ್ತು ಸಿಂಥೆಟಿಕ್ ಡ್ರಗ್ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಸುರತ್ಕಲ್ ಕಾಟಿಪಳ್ಳ 2ನೇ ಬ್ಲಾಕ್ನ ಶಾಕೀಬ್ ಯಾನೆ ಶಬ್ಬು (33) ಮತ್ತು ಚೊಕ್ಕಬೆಟ್ಟು 8ನೇ ಬ್ಲಾಕ್ನ ನಿಸಾರ್ ಹುಸೈನ್ ಯಾನೆ ನಿಚ್ಚು (34) ಬಂಧಿತ ಆರೋಪಿಗಳು.
ಸುರತ್ಕಲ್ ತಡಂಬೈಲ್ ಪರಿಸರದ ಬೀಚ್ ರಸ್ತೆಯಲ್ಲಿ ಕಾರಿನಲ್ಲಿ ಇಬ್ಬರು ಅಕ್ರಮವಾಗಿ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ. ಹೆಗಡೆ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದೆ.
ಆರೋಪಿ ಶಾಕೀಬ್ ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಮೂರು ಕಳವು ಪ್ರಕರಣಗಳು, ಕೊಲೆ ಯತ್ನ ಪ್ರಕರಣ, ಹಲ್ಲೆ ಪ್ರಕರಣ, ಬಜಪೆ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಬಂದರ್ ಠಾಣೆಯಲ್ಲಿ ದ್ವಿಚಕ್ರ ವಾಹನ ಕಳ್ಳತನ, ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ, ಮೂಡುಬಿದಿರೆ ಠಾಣೆಯಲ್ಲಿ ಸರ ಕಳ್ಳತನ ಪ್ರಕರಣ, ಕಾರ್ಕಳ ನಗರ ಠಾಣೆ, ಕಾರ್ಕಳ ಗ್ರಾಮಾಂತರ ಠಾಣೆ, ಶಿರ್ವಾ ಠಾಣೆಗಳಲ್ಲಿ ಸರಕಳ್ಳತನ ಪ್ರಕರಣ, ಮಣಿಪಾಲದಲ್ಲಿ ದರೋಡೆ ಪ್ರಕರಣ ಸಹಿತ ಒಟ್ಟು 13 ಪ್ರಕರಣಗಳು ದಾಖಲಾಗಿವೆ.
ನ್ಯಾಯಾಲಯದಿಂದ ಜಾಮೀನ ಮೇಲೆ ಬಿಡುಗಡೆಗೊಂಡ ಬಳಿಕ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.
ಹಾಗಾಗಿ ಈತನ ವಿರುದ್ಧ ನ್ಯಾಯಾಲಯವು ವಾರಂಟ್ ಹೊರಡಿಸಿತ್ತು.
ಆರೋಪಿ ನಿಸಾರ್ ಹುಸೈನ್ ಯಾನೆ ನಿಚ್ಚು ವಿರುದ್ಧ ಈ ಹಿಂದೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, ಕೊಲೆಯತ್ನ ಪ್ರಕರಣ, ಬರ್ಕೆ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ ಹಾಗೂ ಕೊಲೆಯತ್ನ ಪ್ರಕರಣ, ಮುಲ್ಕಿ ಠಾಣೆಯಲ್ಲಿ ಕಳವು ಪ್ರಕರಣ, ಕದ್ರಿ ಠಾಣೆ, ಉಪ್ಪಿನಂಗಡಿ, ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಗಟ್ಟಿ ದರೋಡೆ ನಡೆಸಿದ 3 ಪ್ರಕರಣಗಳು, ಪಾಂಡೇಶ್ವರ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ಹೀಗೆ 9 ಪ್ರಕರಣಗಳು ದಾಖಲಾಗಿವೆ.
ಈ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯದಿಂದ ಜಾಮೀನು ಪಡೆದುಕೊಂಡು ಬಿಡುಗಡೆಗೊಂಡ ಬಳಿಕ ಮತ್ತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ 7 ವಾರಂಟ್ ಜಾರಿಯಲ್ಲಿತ್ತು.
ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಕೂಡಾ ಈತ ಭಾಗಿಯಾಗಿದ್ದು, ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಗಳಿಂದ 52 ಗ್ರಾಂ ತೂಕದ 2,60,000 ರೂಪಾಯಿ ಮೌಲ್ಯದ ಎಂಡಿಎಂಎ, ಒಂದು ಕಾರು, 2 ಮೊಬೈಲ್ ಫೋನು, ನಗದು 1,800 ರೂಪಾಯಿ, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 7,83,300 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ.
ಇದೀಗ ಇಬ್ಬರು ಆರೋಪಿಗಳ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
Moodabidri: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಅರೆಸ್ಟ್..!
ಮೂಡುಬಿದಿರೆ: ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವ್ಯಕ್ತಿಗಳನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ತಂಡವು ಬುಧವಾರ ವಶಕ್ಕೆ ಪಡೆದಿದೆ.
ಬೆಳುವಾಯಿ ನಿವಾಸಿಗಳಾದ ಮಹಮ್ಮದ್ ಅಯಾನ್ (22), ಫರ್ಹಾನ್ ಖಾನ್ (18) ಹಾಗೂ ಶೇಖ್ ಮುಹಮ್ಮದ್ ಜುಬೈರ್ (19) ಬಂಧಿತ ಆರೋಪಿಗಳು.
ಮೂವರು ಆರೋಪಿಗಳು ಬೆಳುವಾಯಿ ಕಾಂತಾವಾರ ದ್ವಾರದ ಬಳಿ ಸ್ಕೂಟರ್ ನಲ್ಲಿ ನಿಷೇಧಿತ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದಾರೆಂದ ಖಚಿತ ಮಾಹಿತಿಯನ್ನು ಮೇರೆಗೆ ಸ್ಥಳಕ್ಕೆ ಧಾವಿಸಿದ್ದಾರೆ.
ಬಳಿಕ ಮೂವರು ವ್ಯಕ್ತಿಗಳ ಸಹಿತ 800 ಗ್ರಾಂ ಗಾಂಜಾ ಮತ್ತು ಸ್ಕೂಟರನ್ನು ಪೊಲೀಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಈ ಎಲ್ಲಾ ಸೊತ್ತುಗಳ ಒಟ್ಟು ಮೌಲ್ಯ 62,000 ಆಗಿರಬಹುದೆಂದು ಪೊಲೀಸರು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
DAKSHINA KANNADA
Mangaluru: ಸೋಮೇಶ್ವರ ಉಚ್ಚಿಲದಲ್ಲಿ ಬಲೆಗೆ ಬಿದ್ದ ದೈತ್ಯ ಪಿಲಿ ತೊರಕೆ..!
ಮಂಗಳೂರು: ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಉಚ್ಚಿಲದ ನಾಡದೋಣಿ ಮೀನುಗಾರರಿಗೆ ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಲಭಿಸಿದೆ.
ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ನಿನ್ನೆ ಸಂಜೆ ಸಮುದ್ರ ತೀರದಲ್ಲಿ ಮೀನಿಗಾಗಿ ಬಲೆ ಹಾಕಿದ್ದು, ಸುಮಾರು 75 ಕೆ.ಜಿ. ತೂಕದ ಮೀನು ಅವರ ಬಲೆಗೆ ಬಿದ್ದಿದೆ.
ಈ ವರ್ಷದ ತಮ್ಮ ಮೀನುಗಾರಿಕೆ ಅವಧಿಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.
ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ.
ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ.
ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ.
ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.
ಮಾರಾಟ ಮಾಡುವುದಾದರೆ ಈ ಮೀನಿಗೆ ಕೆ.ಜಿ.ಗೆ 200 ರೂಪಾಯಿ ಬೆಲೆ ಇದೆ.
ಆದರೆ ಸಿಕ್ಕ ಮೀನನ್ನು ವ್ಯಾಪಾರ ಮಾಡದೆ ಈದ್ ಹಬ್ಬ ಇರುವುದರಿಂದ ತಮ್ಮೊಳಗೆ ಹಂಚಿಕೊಂಡಿದ್ದಾರೆ.
DAKSHINA KANNADA
ದ.ಕ.ಜಿಲ್ಲೆಯ 9 ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ
ಮಂಗಳೂರು: ದ.ಕ.ಜಿಲ್ಲೆಯ 9 ತಾಲೂಕಿನ 9 ಗ್ರಾಮಗಳು 2022-23ನೆ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಯಾಗಿದೆ.
ಅಕ್ಟೋಬರ್ 2ರ ಗಾಂಧಿಜಯಂತಿ ದಿನದಂದು ರಾಜ್ಯ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.
ಮಂಗಳೂರು ತಾಲೂಕಿನ ಉಳಾಯಿಬೆಟ್ಟು, ಉಳ್ಳಾಲ ತಾಲೂಕಿನ ಬೆಳ್ಮ, ಮುಲ್ಕಿ ತಾಲೂಕಿನ ಕೆಮ್ರಾಲ್, ಮೂಡುಬಿದಿರೆ ತಾಲೂಕಿನ ಪುತ್ತಿಗೆ, ಬಂಟ್ವಾಳ ತಾಲೂಕಿನ ಅಮ್ಮುಂಜೆ, ಪುತ್ತೂರು ತಾಲೂಕಿನ ಉಪ್ಪಿನಂಗಡಿ, ಕಡಬ ತಾಲೂಕಿನ ಸವಣೂರು, ಬೆಳ್ತಂಗಡಿ ತಾಲೂಕಿನ ಬಳಂಜ, ಸುಳ್ಯ ತಾಲೂಕಿನ ಮರ್ಕಂಜ ಗ್ರಾಮಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿವೆ.
- DAKSHINA KANNADA7 days ago
Ullala: 25 ಕೋಟಿ ರೂ. ಲಾಟರಿ ಒಲಿದಿದೆ ಎಂಬ ಲಿಂಕ್ ಕಳುಹಿಸಿ ಮೋಜಿನಾಟ..!
- FILM6 days ago
ಕುರೂಪಿಯಾದ ಹಾಲಿವುಡ್ ನಟಿ ಆ್ಯಮಿ ಜಾಕ್ಸನ್..!
- DAKSHINA KANNADA6 days ago
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರಾಂಬೋ ಸರ್ಕಸ್- ಜನರನ್ನು ಬೆರಗುಗೊಳಿಸುವ ವಿಸ್ಮಯ ಪ್ರದರ್ಶನ..!
- FILM6 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!