DAKSHINA KANNADA
Mangaluru: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ವ್ಯಕ್ತಿಯ ಶವ ಪತ್ತೆ..!
ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲದ ಸೇತುವೆಯಿಂದ ಸೋಮವಾರ ಮಧ್ಯಾಹ್ನ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರು ಮೂಲದ ವ್ಯಾಪಾರಿಯ ಮೃತದೇಹ ಸಂಜೆಯ ವೇಳೆಗೆ ಪತ್ತೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಭೈರಪುರ ಕಾರ್ತಿಕೆರೆ ಗೋಕುಲ್ ಫಾರ್ಮ್ ಮುಗುಲವಳ್ಳಿ ನಿವಾಸಿ ಶಂಕರೇಗೌಡ ಅವರ ಪ್ರಸನ್ನ ಬಿ.ಎಸ್ (37) ಆತ್ಮಹತ್ಯೆ ಮಾಡಿಕೊಂಡಿದ್ದರು. ಇವರು ಬಂದಿದ್ದ ಕಾರಿನಲ್ಲಿ ಪತ್ತೆಯಾದ ಚಾಲನಾ ಪರವಾನಿಗೆಯ ಆಧಾರದಲ್ಲಿ ಗುರುತು ಪತ್ತೆ ಹಚ್ಚಲಾಗಿತ್ತು. ಅಲ್ಲದೆ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿತ್ತು. ಪ್ರಸನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪು ಮಾರುಕಟ್ಟೆಗೆ ಕೊತ್ತಂಬರಿ ಸೊಪ್ಪು ತರುತ್ತಿದ್ದರು ಎನ್ನಲಾಗಿದೆ. ಸೋಮವಾರ ಬೆಳಗ್ಗೆ ಕೊತ್ತಂಬರಿ ಸೊಪ್ಪು ತಂದು ಮಾರುಕಟ್ಟೆಗೆ ಹಾಕಿ ಬಳಿಕ ತನ್ನ ಕಾರಿನಲ್ಲಿ ಹೊರಟಿದ್ದಾರೆ. ಮಂಗಳೂರಿಗೆ ಸಾಗುವ ರಾಷ್ಟ್ರೀಯ ಹೆದ್ದಾರಿ 66ರ ನೇತ್ರಾವತಿ ಸೇತುವೆ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನೀರಿಗೆ ಹಾರಿದ ಬಳಿಕ ತೇಲುತ್ತಾ ಹೋಗುವ ದೃಶ್ಯವನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ಸಾರ್ವಜನಿಕರು ಚಿತ್ರೀಕರಣ ಮಾಡಿದ್ದು, ಬಳಿಕ ಸಾಮಾಜಿಕ ಜಾಲತಾಣದಲ್ಲಿ ಆ ದೃಶ್ಯ ವೈರಲ್ ಆಗಿದೆ. ಸಂಜೆಯ ವೇಳೆಗೆ ಪ್ರಸನ್ನ ಅವರ ಮೃತದೇಹ ಪತ್ತೆಯಾಗಿದೆ. ಪ್ರಸನ್ನ ಅವರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಹೆಣ್ಮಕ್ಕಳನ್ನು ಅಗಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಳಿಯ ಉದ್ಯಮಿ ಸಿದ್ಧಾರ್ಥ 2019ರಲ್ಲಿ ನೇತ್ರಾವತಿ ಸೇತುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸೇತುವೆಗೆ ತಡೆಬೇಲಿ ಅಳವಡಿಸಲು ಜನಪ್ರತಿನಿಧಿಗಳು ಮುಂದಾದರು. ಹಾಗೇ 2020ರಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆತ್ಮಹತ್ಯೆ ತಡೆಗಾಗಿ ತಡೆಬೇಲಿಯನ್ನು ಅಳವಡಿಸಲಾಗಿತ್ತು. ಆ ಬಳಿಕ ಆತ್ಮಹತ್ಯೆ ಪ್ರಕರಣಗಳಿಗೆ ತಡೆ ಬಿದ್ದಿತ್ತು. ಸೋಮವಾರ ಚಿಕ್ಕಮಗಳೂರಿನ ವ್ಯಾಪಾರಿ ತನ್ನ ಕಾರನ್ನು ಸೇತುವೆ ಬಳಿ ನಿಲ್ಲಿಸಿ ತಡೆಬೇಲಿ ಇಲ್ಲದ, ಸೇತುವೆಯ ಆರಂಭದ ಸ್ಥಳದಲ್ಲೇ ನದಿಗೆ ಹಾರಿದ್ದು, ನೇತ್ರಾವತಿ ಸೇತುವೆ ಮತ್ತೆ ಸುದ್ದಿಯಲ್ಲಿದೆ.
DAKSHINA KANNADA
Surathkal: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ- ವಿದ್ಯಾರ್ಥಿನಿಯರು ಗಂಭೀರ..!
ಸುರತ್ಕಲ್: ರಸ್ತೆ ದಾಟುತ್ತಿದ್ದ ವೇಳೆ ರಾಂಗ್ ಸೈಡ್ನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯಗೊಂಡ ಘಟನೆ ಸುರತ್ಕಲ್ ಜಂಕ್ಷನ್ ಬಳಿ ನಡೆದಿದೆ.
ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಗಾಯಗೊಂಡವರು ಎಂದು ತಿಳಿದು ಬಂದಿದೆ. ಇನ್ನೋರ್ವಳ ಸ್ಥಿತಿ ಚಿಂತಾಜನಕವಾಗಿದ್ದು. ಇನ್ನೊಬ್ಬಳಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಅಗಮಿಸಿದ ಸುರತ್ಕಲ್ ಪೊಲೀಸರು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್