Connect with us

    LATEST NEWS

    ಪರಾರಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯದ ಪಿನ್‌ ಟು ಪಿನ್‌ ಡಿಟೇಲ್ಸ್….!

    Published

    on

    ಮಂಗಳೂರು: ನಗರ ಹೊರವಲಯದ ತಿರುವೈಲ್‌ ಗ್ರಾಮದ ರಾಜ್‌ ಟೈಲ್ಸ್‌ ಕಾರ್ಖಾನೆಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್‌ರೇಪ್‌-ಕೊಲೆ ಪ್ರಕರಣದ 4 ಆರೋಪಿಗಳನ್ನು ಮಂಗಳೂರು ನಗರದ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

    ಜಯಬಾನ್‌ ಯಾನೆ ಜೈ ಸಿಂಗ್‌(21), ಮುಖೇಶ್‌ ಸಿಂಗ್‌(20), ಮನೀಶ್‌ ಟಿರ್ಕಿ(33), ಮುನೀಮ್‌ ಸಿಂಗ್‌ (20) ಬಂಧಿತ ಆರೋಪಿಗಳು.
    ಘಟನೆ ಹಿನ್ನೆಲೆ
    4 ಮಕ್ಕಳಿರುವ ಜಾರ್ಖಾಂಡ್‌ ಮೂಲದ ಸಿಂಡೆಗಾ ಜಿಲ್ಲೆಯ ದಂಪತಿ ಮಂಗಳೂರು ನಗರದ ವಾಮಂಜೂರಿನ ತಿರುವೈಲ್‌ ಗ್ರಾಮದಲ್ಲಿರುವ ರಾಜ್‌ ಟೈಲ್ಸ್‌ ಫ್ಯಾಕ್ಟರಿಯಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.

    ಈ ಪ್ರಕರಣ ಒಟ್ಟಾರೆಯಾಗಿ ಗಮನಿಸಿದರೆ ಆರೋಪಿಗಳ ಪೂರ್ವಯೋಜಿತ ಕೃತ್ಯ ಎಂಬುದು ಕಂಡುಬಂದಿದೆ.
    ನ.21ರಂದು ಸಹೋದರ ಸಹೋದರಿಯರೊಂದಿಗೆ ಆಟವಾಡಲು ಹೋದ 8 ವರ್ಷದ ಬಾಲಕಿಯನ್ನು ಜಯಬಾನ್‌ ಯಾನೆ ಜೇ ಸಿಂಗ್‌ ಏಕಾಏಕಿ ತನ್ನ ರೂಮಿನೊಳಗೆ ಎತ್ತಿಕೊಂಡು ಹೋಗಿದ್ದಾನೆ. ಈ ವೇಳೆ ಉಳಿದ ಆರೋಪಿಗಳು ರೂಮಿನೊಳಗೆ ಇದ್ದರು.

    ಬಾಲಕಿಯನ್ನು ರೂಮಿಗೆ ತಂದ ಕೂಡಲೇ ಮುಖೇಶ್‌ ಸಿಂಗ್‌ ಹಾಗೂ ಇತರ ಮೂವರು ಸಹ ಕಾರ್ಮಿಕರು ಬಾಲಕಿ ಮೇಲರಗಿ ಪೈಶಾಚಿಕ ಕೃತ್ಯ ನಡೆಸಿದ್ದಾರೆ.

    ಓರ್ವ ಕಾರ್ಮಿಕ ಕೃತ್ಯದಲ್ಲಿ ತೊಡಗಿದ್ದ ವೇಳೆ ಹೊರಗಡೆಯಿಂದ ಯಾರಾದರೂ ಬರುತ್ತಾರೆಯೇ ಎಂದು ರೂಮಿನ ಬಾಗಿಲ ಬಳಿ ಉಳಿದವರು ಕಾವಲು ಕಾಯುತ್ತಿದ್ದರು.

    ಒಬ್ಬರ ಮೇಲೊಬ್ಬರು ನಿರಂತರ ನಡೆಸಿದ ಪೈಶಾಚಿಕ ಕೃತ್ಯದಿಂದ ಬಾಲಕಿ ರಕ್ತಸ್ರಾವ ಮತ್ತು ನೋವಿನಿಂದ ಚೀರಾಡುತ್ತಿದ್ದಳು. ಇದರಿಂದ ಹೆದರಿದ ಜಯಬಾನ್‌ ಯಾನೆ ಜೇ ಸಿಂಗ್‌ ಆಕೆಯ ಕತ್ತು ಹಿಸುಕಿ ಸಾಯಿಸುತ್ತಾನೆ.

    ಕೃತ್ಯ ಎಷ್ಟು ಘೋರ ಮತ್ತು ಭೀಕರವಾಗಿತ್ತೆಂದರೆ
    ನಾಲ್ಕನೇಯ ಆರೋಪಿ ಮುನೀಮ್‌ ಸಿಂಗ್‌ ಬಾಲಕಿ ಮೇಲೆರಗಲು ಮುಂದಾದಾಗ ಅದಾಗಲೇ ಪ್ರಾಣ ಬಿಟ್ಟಿದ್ದಳು.

    ನಂತರ ಈ ಕಿರಾತಕರು ಸಾವನ್ನಪ್ಪಿದ ಬಾಲಕಿಯ ಹೆಣವನ್ನು ಹತ್ತಿರದಲ್ಲಿಯೇ ಇರುವ ತೋಡಿನೊಳಗೆ (ಡ್ರೈನೇಜ್‌) ಬಿಸಾಡುತ್ತಾರೆ.

    ಇದಾದ ನಂತರ ಜಯಬಾನ್‌ ಯಾನೆ ಜೇ ಸಿಂಗ್‌ ಹಾಗೂ ಮನೀಶ್‌ ಟಿರ್ಕಿ ಯಾರಿಗೂ ಸಂಶಯ ಬಾರದಂತೆ ಫ್ಯಾಕ್ಟರಿಯಲ್ಲೇ ಉಳಿದಿರುತ್ತಾರೆ.

    ಉಳಿದ ಇಬ್ಬರು ಆರೋಪಿಗಳು ಪುತ್ತೂರಿಗೆ ಪಲಾಯನ ಮಾಡುತ್ತಾರೆ. ಘಟನೆ ಬಳಿಕ ಬಾಲಕಿ ನಾಪತ್ತೆ ಪ್ರಕರಣ ಬೆಳಕಿಗೆ ಬಂದು ಬಾಲಕಿಯ ಹೆತ್ತವರು ಸೇರಿ ಇತರ ಕಾರ್ಮಿಕರು ಶೋಧ ಕಾರ್ಯದಲ್ಲಿ ತೊಡಗಿದಾಗ ಈ ಇಬ್ಬರು ದುರುಳರು ಆಕೆಯನ್ನು ಹುಡುಕುವ ನಾಟಕವಾಡಿದ್ದರು.

    ಈ ಹಿಂದೆ ಬಾಲಕಿಯ ಮೇಲೆ ನಡೆದಿತ್ತು ದೌರ್ಜನ್ಯ..!
    ಜಯಬಾನ್‌ ಯಾನೆ ಜೇ ಸಿಂಗ್‌ ಹಾಗೂ ಮನೀಶ್‌ ಟಿರ್ಕಿ ಫ್ಯಾಕ್ಟರಿಯ ಒಂದೇ ರೂಮಿನಲ್ಲಿ ವಾಸಿಸುತ್ತಿದ್ದರು.

    ಈ ವೇಳೆ ಬಾಲಕಿಯನ್ನು ಆಗಾಗ ರೂಮಿಗೆ ಕರೆದೊಯ್ದು ಆಕೆಗೆ ಚಾಕಲೇಟ್‌, ಚಿಕ್ಕಿ ಮುಂತಾದ ಸಿಹಿ ತಿನಿಸು ನೀಡುತ್ತಿದ್ದರು.

    ಜೊತೆಗೆ ಬಾಲಕಿಯ ಮೈಕೈ ಮುಟ್ಟುವ ಮೂಲಕ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಆದರೆ ಆಕೆ ಪುಟ್ಟ ಬಾಲಕಿಯಾದುದರಿಂದ ಆಕೆಗೆ ಈ ಪರಿವೆ ಇರಲಿಲ್ಲ ಎಂಬುವುದು ಪೊಲೀಸ್‌ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
    ನಾಲ್ಕೈದು ದಿನದ ಹಿಂದೆ ನಡೆದಿತ್ತು ಪ್ರೀ ಪ್ಲ್ಯಾನ್‌…..!
    ಘಟನೆ ನಡೆಯುವ ನಾಲ್ಕೈದು ದಿನದ ಹಿಂದೆ ಫ್ಯಾಕ್ಟರಿಯ ರೂಮಿನಲ್ಲಿ ಮದ್ಯಪಾನ ಮಾಡುತ್ತಿದ್ದರು ಈ ಆರೋಪಿಗಳು.

    ಈ ಸಂದರ್ಭ ಭಯಾನಕ ಪೈಶಾಚಿಕ ಕೃತ್ಯದ ಬಗ್ಗೆ ಮಾಸ್ಟರ್‌ ಪ್ಲ್ಯಾನ್‌ ತಯಾರಿಸಿದ್ದರು. ಈ ದುರುಳರು.

    ‘ರವಿವಾರ ಫ್ಯಾಕ್ಟರಿಯಲ್ಲಿ ಯಾರೂ ಸಿಬ್ಬಂದಿ ಇರುವುದಿಲ್ಲ. ಜೊತೆಗೆ ಬಾಲಕಿಯ ತಂದೆ-ತಾಯಿ ಮದ್ಯಪಾನದ ನಶೆಯಲ್ಲಿರುವುದರಿಂದ ಈ ಕೃತ್ಯ ನಡೆಸಲು ಸರಿಯಾ ಸಮಯ ಎಂದು ನಿರ್ಧರಿಸಲಾಗಿತ್ತು.

    ಕೃತ್ಯ ನಡೆಸಲೆಂದೇ ಪುತ್ತೂರಿನಿಂದ ಬಂದಿದ್ದ ದುರುಳ..
    ಪ್ರಕರಣದ ನಾಲ್ಕನೇ ಆರೋಪಿ ಮುನೀಮ್‌ ಸಿಂಗ್‌ ಪುತ್ತೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದನು. ಕೃತ್ಯ ನಡೆಯುವ 3-4 ದಿನದ ಮುಂಚೆ ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಟೈಲ್‌ ಫ್ಯಾಕ್ಟರಿಗೆ ಬಂದಿದ್ದ.

    ಉಳಿದಂತೆ ಮೂವರು ಆರೋಪಿಗಳು ರಾಜ್‌ ಟೈಲ್ಸ್‌ನಲ್ಲಿ ಕಾರ್ಮಿಕರಾಗಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
    ಸದ್ಯ ಆರೋಪಿಗಳು ಪೊಲೀಸ್‌ ಬಂಧನಕ್ಕೊಳಗಾಗಿದ್ದಾರೆ. ಇವರ ಮೇಲೆ ಕೊಲೆ ಮತ್ತು ಪೋಕ್ಸೋ ಪ್ರಕರಣ ದಾಖಲಾಗಿದೆ. ತಿಂಗಳೊಳಗೆ ಮಂಗಳೂರು ನಗರದಲ್ಲಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯದ ಎರಡನೇ ಪ್ರಕರಣ.

    ಪೊಲೀಸರಿಗೆ ನಗದು ಬಹುಮಾನ

    ಪೊಲೀಸರು ಅಲ್ಲಿನ ಎಲ್ಲಾ ಕಾರ್ಮಿಕರನ್ನು ಬಂಧಿಸಿ ತನಿಖೆ ನಡೆಸಿದ್ದರು. ತನಿಖೆಯ ವೇಳೆ ಈ ನಾಲ್ವರ ಮೇಲೆ ಅನುಮಾನ ಬಲವಾಗಿ ಹೆಚ್ಚಿನ ತನಿಖೆ ನಡೆಸಿದಾಗ ಆರೋಪಿಗಳು ಕೃತ್ಯ ಎಸಗಿರುವುದನ್ನು ಬಾಯಿ ಬಿಟ್ಟಿದ್ದಾರೆ.

    ಈ ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದ ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಸಿಬ್ಬಂದಿಗೆ ನಗದು ಬಹುಮಾನ ನೀಡಿದ್ದಾರೆ.

    ನಾಲ್ವರು ಆರೋಪಿಗಳ ಮೇಲೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ.

    ಪೊಲೀಸ್‌-ಕಾರ್ಮಿಕ ಇಲಾಖೆ ಮೇಲಿದೆ ಹೆಚ್ಚಿನ ಜವಾಬ್ದಾರಿ
    ಮಂಗಳೂರು ನಗರದಲ್ಲಿ ಹೊರ ಜಿಲ್ಲೆ ಸೇರಿ ಹೊರ ರಾಜ್ಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

    ಇಂತಹ ಪ್ರಕರಣ ಅಥವಾ ಯಾವುದೇ ಪ್ರಕರಣ ನಡೆದಾಗ ಅವರನ್ನು ಪತ್ತೆ ಹಚ್ಚುವುದು ಕಷ್ಟ ಸಾಧ್ಯದ ಕೆಲಸ.

    ಆದ್ದರಿಂದ ಪೊಲೀಸ್‌ ಮತ್ತು ಕಾರ್ಮಿಕ ಇಲಾಖೆ ಇಂತಹ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ಜೊತೆಗೆ ಇವರನ್ನು ಕರೆತರುವ ಮುಖಂಡನ ಮೇಲೆ ನಿಗಾ ವಹಿಸಬೇಕು.

    ಕೆಲವರು ಹಣದ ಆಸೆಗೆ ಇಲ್ಲಿ ಕೆಲಸಕ್ಕೆ ಬಂದು ಕಳವು, ಅತ್ಯಾಚಾರ, ಕೊಲೆ ಕೃತ್ಯದಲ್ಲಿ ಭಾಗವಹಿಸಿದರೆ ಅವರನ್ನು ಟ್ರೇಸ್‌ ಮಾಡುವುದು ಕಷ್ಟದ ಕೆಲಸ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಬಂಟ್ವಾಳ :ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾ*ತ; ಪತ್ನಿ ಸಾ*ವು; ಪತಿ ಗಂಭೀ*ರ

    Published

    on

    ಬಂಟ್ವಾಳ : ನವದಂಪತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿ ಪತ್ನಿ ಸಾ*ವನ್ನಪ್ಪಿದ್ದು, ಪತಿ ಗಂ*ಭೀರವಾಗಿ ಗಾ*ಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಂಗಳೂರು-ಬೆಂಗಳೂರು ರಸ್ತೆಯ ಬಂಟ್ವಾಳದ ತಲಪಾಡಿ ಎಂಬಲ್ಲಿ ನಡೆದಿದೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಸಾ*ವನ್ನಪ್ಪಿದ ನವವಿವಾಹಿತೆ. ಘಟನೆಯಿಂದ ಅನಿಶ್ ಕೃಷ್ಣ ಗಂಭೀ*ರವಾಗಿ ಗಾ*ಯಗೊಂಡಿದ್ದಾರೆ.

    ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ನವದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿದೆ. ಬಳಿಕ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿ*ಕ್ಕಿ ಹೊಡೆದಿದೆ.

    ಡಿ*ಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

    ಎರಡು ದಿನದ ಹಿಂದಷ್ಟೇ ಮದುವೆ : 

    ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮಾನಸ ಹಾಗೂ ಅನಿಶ್ ಕೃಷ್ಣ  ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಇಂದು ಅಲ್ಲಿನ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸ್ ಮಾವನ ಮನೆಗೆ ಹೋಗುವ ವೇಳೆ ಈ ‌ಘ‌ಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು,  ಪ್ರಕರಣ ದಾಖಲಿಸಿಕೊಂಡಿದ್ದಾರೆ

    Continue Reading

    LATEST NEWS

    ಲಿಫ್ಟ್ ಕೊಡುವ ಮುನ್ನ ಎಚ್ಚರ: ಡ್ರಾಪ್ ಕೇಳಿ ಚಾಕು ಇರಿದ ದು*ಷ್ಕರ್ಮಿ

    Published

    on

    ಮಂಗಳೂರು/ಬೆಂಗಳೂರು : ಇತ್ತೀಚಿಗೆ ಕ್ರೈಂ ಪ್ರಕರಣಗಳು ಹೆಚ್ಚುತ್ತಿವೆ. ಅದರಲ್ಲೂ ಕೊ*ಲೆ ಮಾಡೋದಕ್ಕಂತೂ ಕಾರಣವೇ ಬೇಡ. ಕ್ಷುಲ್ಲಕ ಕಾರಣಕ್ಕಾಗಿ ಒಬ್ಬ ವ್ಯಕ್ತಿಯನ್ನು ಹ*ತ್ಯೆ ಮಾಡಲು ಹೇಸುವುದಿಲ್ಲ. ಅಂತಹುದೇ ಕೃ*ತ್ಯ ಬೆಂಗಳೂರಿನಲ್ಲಿ ನಡೆದಿದೆ. ಬೈಕ್ ನಲ್ಲಿ ಲಿಫ್ಟ್ ಕೊಟ್ಟಾತನಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿದ್ದಾನೆ.

    ಖಾಸಗಿ ಬ್ಯಾಂಕ್ ಉದ್ಯೋಗಿ ಪಿ.ಈಶ್ವರಗೌಡ(38) ಚೂ*ರಿ ಇರಿತಕ್ಕೊಳಗಾದವರು. ರೋಹಿತ್ ಗೌಡ (24) ಚೂ*ರಿ ಇರಿದಾತ. ಈಶ್ವರಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ರೋಹಿತ್ ಗೌಡನನ್ನು ಬಂಧಿಸಲಾಗಿದೆ.

    ಅವಮಾನಕ್ಕೆ ಪ್ರತೀಕಾರ :

    ಸಾಲ ವಸೂಲಾತಿ ಏಜೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪಿ.ಈಶ್ವರಗೌಡ ಕ್ರಿಕೆಟ್ ಟೂರ್ನಮೆಂಟ್ ವೇಳೆ ರೋಹಿತ್ ಗೌಡನನ್ನು ಸಾರ್ವಜನಿಕವಾಗಿ ಅವಮಾನಿಸಿದ್ದ ಎನ್ನಲಾಗಿದೆ. ಇದಕ್ಕೆ ಪ್ರತೀಕಾರವಾಗಿ ಆರೋಪಿ ಆತನನ್ನು ಕೊ*ಲ್ಲಲು ಸಂಚು ರೂಪಿಸಿದ್ದ ಎಂಬುದು ತನಿಖೆಯಿಂದ ತಿಳಿದುಬಂದಿದೆ.

    ಈಶ್ವರಗೌಡ ತನ್ನ ಸ್ನೇಹಿತನೊಂದಿಗೆ ಢಾಬಾವೊಂದಕ್ಕೆ ಊಟಕ್ಕೆ ಹೋಗಿದ್ದರು. ಅವರು ಢಾಬಾದಿಂದ ಹೊರಬಂದ ನಂತರ, ಗೇಟ್‌ನಲ್ಲಿದ್ದ ಆರೋಪಿ ಡ್ರಾಪ್ ನೀಡುವಂತೆ ವಿನಂತಿಸಿದ್ದ. ಈಶ್ವರ್ ಕೂಡ ಅದೇ ದಾರಿಯಲ್ಲಿ ಹೋಗುತ್ತಿದ್ದರಿಂದ ಅವನು ಡ್ರಾಪ್ ನೀಡಲು ಒಪ್ಪಿದರು. ಸ್ವಲ್ಪ ಹೊತ್ತು ಬೈಕ್ ಹಿಂದೆ ಕುಳಿತು ಸವಾರಿ ಮಾಡಿದ ರೋಹಿತ್, ಸ್ಮಶಾನದ ಬಳಿ ನಿರ್ಜನ ಪ್ರದೇಶದಲ್ಲಿ ತಾನು ತಂದಿದ್ದ ಚಾಕುವಿನಿಂದ ಈಶ್ವರ್ ಗೆ ಇ*ರಿದಿದ್ದಾನೆ.

    ಈ ವೇಳೆ ಬೈಕ್ ಚಲಾಯಿಸುತ್ತಿದ್ದ ಈಶ್ವರ್ ರ ನಿಯಂತ್ರಣ ತಪ್ಪಿದ್ದು,  ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಚಾಕು ಇ*ರಿತದಿಂದ ಈಶ್ವರ್ ಗೆ ಗಾ*ಯವಾಗಿದೆ. ಆದರೂ ರೋಹಿತ್‌ನಿಂದ ಹರಸಾಹಸ ಮಾಡಿ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಆದರೂ ಬಿಡದ ರೋಹಿತ್ ಬೆನ್ನತ್ತಿ ಇ*ರಿದಿದ್ದಾನೆ.

    ಇದನ್ನೂ ಓದಿ : ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿ, ಇಬ್ಬರು ಸಾ*ವು

    ಈ ವೇಳೆ ಈಶ್ವರ್ ತಪ್ಪಿಸಿಕೊಂಡು ಮುಖ್ಯರಸ್ತೆಗೆ ಬಂದು ಸಹಾಯಕ್ಕಾಗಿ ತನ್ನ ಸಹೋದರನನ್ನು ಕರೆದಿದ್ದು, ಆತನ ಸಹೋದರ ಆತನನ್ನು ಆಟೋರಿಕ್ಷಾದಲ್ಲಿ ಆಸ್ಪತ್ರೆಗೆ ಸೇರಿಸಿದರು. ಅಷ್ಟು ಹೊತ್ತಿಗಾಗಲೇ ಆರೋಪಿ ರೋಹಿತ್ ಬೈಕ್ ನಲ್ಲಿ ಪರಾರಿಯಾಗಿದ್ದ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    ಉಡುಪಿ : ಲಲಿತಾ ಕಲ್ಕೂರ ವಿಧಿವಶ

    Published

    on

    ಉಡುಪಿ : ದಿವಂಗತ ಪ್ರೊ. ಮಂಜುನಾಥ ಕಲ್ಕೂರ ಅವರ ಪತ್ನಿ ಲಲಿತಾ ಕಲ್ಕೂರ (83) ವಿ*ಧಿವಶರಾಗಿದ್ದಾರೆ.  ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ(ಸೆ.7) ಉಡುಪಿಯ ಸ್ವಗೃಹದಲ್ಲಿ ನಿಧ*ನ ಹೊಂದಿದರು.

    ಮೃತರು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಎಸ್.ಪ್ರದೀಪ ಕುಮಾರ ಕಲ್ಕೂರ ಸಹಿತ 3ಮಂದಿ ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

    Continue Reading

    LATEST NEWS

    Trending