LATEST NEWS
ಪರಾರಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯದ ಪಿನ್ ಟು ಪಿನ್ ಡಿಟೇಲ್ಸ್….!
ಮಂಗಳೂರು: ನಗರ ಹೊರವಲಯದ ತಿರುವೈಲ್ ಗ್ರಾಮದ ರಾಜ್ ಟೈಲ್ಸ್ ಕಾರ್ಖಾನೆಯಲ್ಲಿ ನಡೆದ ಅಪ್ರಾಪ್ತ ಬಾಲಕಿಯ ಗ್ಯಾಂಗ್ರೇಪ್-ಕೊಲೆ ಪ್ರಕರಣದ 4 ಆರೋಪಿಗಳನ್ನು ಮಂಗಳೂರು ನಗರದ ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಜಯಬಾನ್ ಯಾನೆ ಜೈ ಸಿಂಗ್(21), ಮುಖೇಶ್ ಸಿಂಗ್(20), ಮನೀಶ್ ಟಿರ್ಕಿ(33), ಮುನೀಮ್ ಸಿಂಗ್ (20) ಬಂಧಿತ ಆರೋಪಿಗಳು.
ಘಟನೆ ಹಿನ್ನೆಲೆ
4 ಮಕ್ಕಳಿರುವ ಜಾರ್ಖಾಂಡ್ ಮೂಲದ ಸಿಂಡೆಗಾ ಜಿಲ್ಲೆಯ ದಂಪತಿ ಮಂಗಳೂರು ನಗರದ ವಾಮಂಜೂರಿನ ತಿರುವೈಲ್ ಗ್ರಾಮದಲ್ಲಿರುವ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು.
ಈ ಪ್ರಕರಣ ಒಟ್ಟಾರೆಯಾಗಿ ಗಮನಿಸಿದರೆ ಆರೋಪಿಗಳ ಪೂರ್ವಯೋಜಿತ ಕೃತ್ಯ ಎಂಬುದು ಕಂಡುಬಂದಿದೆ.
ನ.21ರಂದು ಸಹೋದರ ಸಹೋದರಿಯರೊಂದಿಗೆ ಆಟವಾಡಲು ಹೋದ 8 ವರ್ಷದ ಬಾಲಕಿಯನ್ನು ಜಯಬಾನ್ ಯಾನೆ ಜೇ ಸಿಂಗ್ ಏಕಾಏಕಿ ತನ್ನ ರೂಮಿನೊಳಗೆ ಎತ್ತಿಕೊಂಡು ಹೋಗಿದ್ದಾನೆ. ಈ ವೇಳೆ ಉಳಿದ ಆರೋಪಿಗಳು ರೂಮಿನೊಳಗೆ ಇದ್ದರು.
ಬಾಲಕಿಯನ್ನು ರೂಮಿಗೆ ತಂದ ಕೂಡಲೇ ಮುಖೇಶ್ ಸಿಂಗ್ ಹಾಗೂ ಇತರ ಮೂವರು ಸಹ ಕಾರ್ಮಿಕರು ಬಾಲಕಿ ಮೇಲರಗಿ ಪೈಶಾಚಿಕ ಕೃತ್ಯ ನಡೆಸಿದ್ದಾರೆ.
ಓರ್ವ ಕಾರ್ಮಿಕ ಕೃತ್ಯದಲ್ಲಿ ತೊಡಗಿದ್ದ ವೇಳೆ ಹೊರಗಡೆಯಿಂದ ಯಾರಾದರೂ ಬರುತ್ತಾರೆಯೇ ಎಂದು ರೂಮಿನ ಬಾಗಿಲ ಬಳಿ ಉಳಿದವರು ಕಾವಲು ಕಾಯುತ್ತಿದ್ದರು.
ಒಬ್ಬರ ಮೇಲೊಬ್ಬರು ನಿರಂತರ ನಡೆಸಿದ ಪೈಶಾಚಿಕ ಕೃತ್ಯದಿಂದ ಬಾಲಕಿ ರಕ್ತಸ್ರಾವ ಮತ್ತು ನೋವಿನಿಂದ ಚೀರಾಡುತ್ತಿದ್ದಳು. ಇದರಿಂದ ಹೆದರಿದ ಜಯಬಾನ್ ಯಾನೆ ಜೇ ಸಿಂಗ್ ಆಕೆಯ ಕತ್ತು ಹಿಸುಕಿ ಸಾಯಿಸುತ್ತಾನೆ.
ಕೃತ್ಯ ಎಷ್ಟು ಘೋರ ಮತ್ತು ಭೀಕರವಾಗಿತ್ತೆಂದರೆ
ನಾಲ್ಕನೇಯ ಆರೋಪಿ ಮುನೀಮ್ ಸಿಂಗ್ ಬಾಲಕಿ ಮೇಲೆರಗಲು ಮುಂದಾದಾಗ ಅದಾಗಲೇ ಪ್ರಾಣ ಬಿಟ್ಟಿದ್ದಳು.
ನಂತರ ಈ ಕಿರಾತಕರು ಸಾವನ್ನಪ್ಪಿದ ಬಾಲಕಿಯ ಹೆಣವನ್ನು ಹತ್ತಿರದಲ್ಲಿಯೇ ಇರುವ ತೋಡಿನೊಳಗೆ (ಡ್ರೈನೇಜ್) ಬಿಸಾಡುತ್ತಾರೆ.
ಇದಾದ ನಂತರ ಜಯಬಾನ್ ಯಾನೆ ಜೇ ಸಿಂಗ್ ಹಾಗೂ ಮನೀಶ್ ಟಿರ್ಕಿ ಯಾರಿಗೂ ಸಂಶಯ ಬಾರದಂತೆ ಫ್ಯಾಕ್ಟರಿಯಲ್ಲೇ ಉಳಿದಿರುತ್ತಾರೆ.
ಉಳಿದ ಇಬ್ಬರು ಆರೋಪಿಗಳು ಪುತ್ತೂರಿಗೆ ಪಲಾಯನ ಮಾಡುತ್ತಾರೆ. ಘಟನೆ ಬಳಿಕ ಬಾಲಕಿ ನಾಪತ್ತೆ ಪ್ರಕರಣ ಬೆಳಕಿಗೆ ಬಂದು ಬಾಲಕಿಯ ಹೆತ್ತವರು ಸೇರಿ ಇತರ ಕಾರ್ಮಿಕರು ಶೋಧ ಕಾರ್ಯದಲ್ಲಿ ತೊಡಗಿದಾಗ ಈ ಇಬ್ಬರು ದುರುಳರು ಆಕೆಯನ್ನು ಹುಡುಕುವ ನಾಟಕವಾಡಿದ್ದರು.
ಈ ಹಿಂದೆ ಬಾಲಕಿಯ ಮೇಲೆ ನಡೆದಿತ್ತು ದೌರ್ಜನ್ಯ..!
ಜಯಬಾನ್ ಯಾನೆ ಜೇ ಸಿಂಗ್ ಹಾಗೂ ಮನೀಶ್ ಟಿರ್ಕಿ ಫ್ಯಾಕ್ಟರಿಯ ಒಂದೇ ರೂಮಿನಲ್ಲಿ ವಾಸಿಸುತ್ತಿದ್ದರು.
ಈ ವೇಳೆ ಬಾಲಕಿಯನ್ನು ಆಗಾಗ ರೂಮಿಗೆ ಕರೆದೊಯ್ದು ಆಕೆಗೆ ಚಾಕಲೇಟ್, ಚಿಕ್ಕಿ ಮುಂತಾದ ಸಿಹಿ ತಿನಿಸು ನೀಡುತ್ತಿದ್ದರು.
ಜೊತೆಗೆ ಬಾಲಕಿಯ ಮೈಕೈ ಮುಟ್ಟುವ ಮೂಲಕ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು. ಆದರೆ ಆಕೆ ಪುಟ್ಟ ಬಾಲಕಿಯಾದುದರಿಂದ ಆಕೆಗೆ ಈ ಪರಿವೆ ಇರಲಿಲ್ಲ ಎಂಬುವುದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ನಾಲ್ಕೈದು ದಿನದ ಹಿಂದೆ ನಡೆದಿತ್ತು ಪ್ರೀ ಪ್ಲ್ಯಾನ್…..!
ಘಟನೆ ನಡೆಯುವ ನಾಲ್ಕೈದು ದಿನದ ಹಿಂದೆ ಫ್ಯಾಕ್ಟರಿಯ ರೂಮಿನಲ್ಲಿ ಮದ್ಯಪಾನ ಮಾಡುತ್ತಿದ್ದರು ಈ ಆರೋಪಿಗಳು.
ಈ ಸಂದರ್ಭ ಭಯಾನಕ ಪೈಶಾಚಿಕ ಕೃತ್ಯದ ಬಗ್ಗೆ ಮಾಸ್ಟರ್ ಪ್ಲ್ಯಾನ್ ತಯಾರಿಸಿದ್ದರು. ಈ ದುರುಳರು.
‘ರವಿವಾರ ಫ್ಯಾಕ್ಟರಿಯಲ್ಲಿ ಯಾರೂ ಸಿಬ್ಬಂದಿ ಇರುವುದಿಲ್ಲ. ಜೊತೆಗೆ ಬಾಲಕಿಯ ತಂದೆ-ತಾಯಿ ಮದ್ಯಪಾನದ ನಶೆಯಲ್ಲಿರುವುದರಿಂದ ಈ ಕೃತ್ಯ ನಡೆಸಲು ಸರಿಯಾ ಸಮಯ ಎಂದು ನಿರ್ಧರಿಸಲಾಗಿತ್ತು.
ಕೃತ್ಯ ನಡೆಸಲೆಂದೇ ಪುತ್ತೂರಿನಿಂದ ಬಂದಿದ್ದ ದುರುಳ..
ಪ್ರಕರಣದ ನಾಲ್ಕನೇ ಆರೋಪಿ ಮುನೀಮ್ ಸಿಂಗ್ ಪುತ್ತೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದನು. ಕೃತ್ಯ ನಡೆಯುವ 3-4 ದಿನದ ಮುಂಚೆ ಈ ವಿಷಯದ ಬಗ್ಗೆ ಚರ್ಚೆ ನಡೆಸಲು ಟೈಲ್ ಫ್ಯಾಕ್ಟರಿಗೆ ಬಂದಿದ್ದ.
ಉಳಿದಂತೆ ಮೂವರು ಆರೋಪಿಗಳು ರಾಜ್ ಟೈಲ್ಸ್ನಲ್ಲಿ ಕಾರ್ಮಿಕರಾಗಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
ಸದ್ಯ ಆರೋಪಿಗಳು ಪೊಲೀಸ್ ಬಂಧನಕ್ಕೊಳಗಾಗಿದ್ದಾರೆ. ಇವರ ಮೇಲೆ ಕೊಲೆ ಮತ್ತು ಪೋಕ್ಸೋ ಪ್ರಕರಣ ದಾಖಲಾಗಿದೆ. ತಿಂಗಳೊಳಗೆ ಮಂಗಳೂರು ನಗರದಲ್ಲಿ ಬಾಲಕಿ ಮೇಲಿನ ಪೈಶಾಚಿಕ ಕೃತ್ಯದ ಎರಡನೇ ಪ್ರಕರಣ.
ಪೊಲೀಸರಿಗೆ ನಗದು ಬಹುಮಾನ
ಪೊಲೀಸರು ಅಲ್ಲಿನ ಎಲ್ಲಾ ಕಾರ್ಮಿಕರನ್ನು ಬಂಧಿಸಿ ತನಿಖೆ ನಡೆಸಿದ್ದರು. ತನಿಖೆಯ ವೇಳೆ ಈ ನಾಲ್ವರ ಮೇಲೆ ಅನುಮಾನ ಬಲವಾಗಿ ಹೆಚ್ಚಿನ ತನಿಖೆ ನಡೆಸಿದಾಗ ಆರೋಪಿಗಳು ಕೃತ್ಯ ಎಸಗಿರುವುದನ್ನು ಬಾಯಿ ಬಿಟ್ಟಿದ್ದಾರೆ.
ಈ ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದ ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಸಿಬ್ಬಂದಿಗೆ ನಗದು ಬಹುಮಾನ ನೀಡಿದ್ದಾರೆ.
ನಾಲ್ವರು ಆರೋಪಿಗಳ ಮೇಲೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ.
ಪೊಲೀಸ್-ಕಾರ್ಮಿಕ ಇಲಾಖೆ ಮೇಲಿದೆ ಹೆಚ್ಚಿನ ಜವಾಬ್ದಾರಿ
ಮಂಗಳೂರು ನಗರದಲ್ಲಿ ಹೊರ ಜಿಲ್ಲೆ ಸೇರಿ ಹೊರ ರಾಜ್ಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಇಂತಹ ಪ್ರಕರಣ ಅಥವಾ ಯಾವುದೇ ಪ್ರಕರಣ ನಡೆದಾಗ ಅವರನ್ನು ಪತ್ತೆ ಹಚ್ಚುವುದು ಕಷ್ಟ ಸಾಧ್ಯದ ಕೆಲಸ.
ಆದ್ದರಿಂದ ಪೊಲೀಸ್ ಮತ್ತು ಕಾರ್ಮಿಕ ಇಲಾಖೆ ಇಂತಹ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರ ಮೇಲೆ ಜೊತೆಗೆ ಇವರನ್ನು ಕರೆತರುವ ಮುಖಂಡನ ಮೇಲೆ ನಿಗಾ ವಹಿಸಬೇಕು.
ಕೆಲವರು ಹಣದ ಆಸೆಗೆ ಇಲ್ಲಿ ಕೆಲಸಕ್ಕೆ ಬಂದು ಕಳವು, ಅತ್ಯಾಚಾರ, ಕೊಲೆ ಕೃತ್ಯದಲ್ಲಿ ಭಾಗವಹಿಸಿದರೆ ಅವರನ್ನು ಟ್ರೇಸ್ ಮಾಡುವುದು ಕಷ್ಟದ ಕೆಲಸ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ