Connect with us

    LATEST NEWS

    ಮಂಗಳೂರು ಬೂದಿ ಮುಚ್ಚಿದ ಕೆಂಡ-ಪೊಲೀಸರ ಎಚ್ಚರಿಕೆಯ ನಡೆ ಅಗತ್ಯ..!

    Published

    on

    ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡದಲ್ಲಿ ಪ್ರತಿನಿತ್ಯ ಅಪರಾಧ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಅಪರಾಧ ಪ್ರಕರಣಗಳು ಹಲ್ಲೆ, ಕಳ್ಳತನಕ್ಕೆ ಮಾತ್ರ ಸೀಮಿತವಾಗಿಲ್ಲ.

    ಈ ಅಪರಾಧಗಳು ಒಂದು ಧರ್ಮಲೇಪಿತ, ರಾಜಕಾರಣ ಹಿನ್ನೆಲೆ ಹೊಂದಿರುವ ಪ್ರಕರಣಗಳಾಗಿ ಮಾರ್ಪಾಡುತ್ತಿವೆ. ಇದರಿಂದ ಕೋಮುಸೂಕ್ಷ್ಮ ಪ್ರದೇಶವಾಗಿರುವ ದಕ್ಷಿಣ ಕನ್ನಡ ಇದೀಗ ಬೂದಿ ಮುಚ್ಚಿದ ಕೆಂಡದಂತಾಗಿದೆ.

    ಕಳೆದ ಕೆಲವು ದಿನಗಳಿಂದೀಚೆ ನಿರಂತರವಾಗಿ ಮಂಗಳೂರು ನಗರವನ್ನು ಕೇಂದ್ರೀಕರಿಸಿ ಜಿಲ್ಲೆಯಾದ್ಯಂತ ದೈವಸ್ಥಾನದ ಮೂರ್ತಿ ವಿರೂಪಗೊಳಿಸುವುದು. ನಾಗನ ಕಟ್ಟೆ, ಮೂರ್ತಿ ವಿರೂಪಗೊಳಿಸುವುದು ಸೇರಿದಂತೆ ಹಲವು ಅಪರಾಧ ಪ್ರಕರಣಗಳು ನಡೆಯುತ್ತಿವೆ.

    ಅದರ ಜತೆಗೆ ಇಂದು ಕೊಣಾಜೆ ಕುರ್ನಾಡು ಸುಬ್ಬಗೋಳಿ ಮಸೀದಿ ಬಳಿ ಮೂವರು ಯುವಕರು ಅಶಾಂತಿ ಸೃಷ್ಟಿಸಲು ಯತ್ನಿಸಿದ ಘಟನೆ ನಡೆದಿದೆ. ಇದರ ಜೊತೆ ಜೊತೆಗೆ ಕೇವಲ 2 ದಿನದ ಅಂತರದಲ್ಲಿ ಬಸ್‌ಗಳಿಗೆ ಕಲ್ಲು ತೂರಾಟ ಪ್ರಕರಣ ನಡೆದಿದೆ.
    ಇದು ಕೇವಲ ಅಪರಾಧ ಪ್ರಕರಣಗಳಲ್ಲ ಬದಲಾಗಿ ಒಂದು ಧರ್ಮಮತ್ತೊಂದು ಧರ್ಮವನ್ನು ಕೆಣಕುವ ಪ್ರಯತ್ನ ನಡೆಯುತ್ತಿದೆ.

    ಕರಾವಳಿಯಲ್ಲಿ ಕಳೆದ ದಶಕದಿಂದ ಕೋಮು ಸೂಕ್ಷ್ಮ ಹಣೆಪಟ್ಟಿ ಕಟ್ಟಿದ್ದ ಮಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮತ್ತೆ ಮತ್ತೆ ಇಂತಹ ಘಟನೆಗಳು ಮರುಕಳಿಸುತ್ತಿರುವುದು ಅಪಾಯಕಾರಿ ಬೆಳವಣಿಗೆಯಾಗಿದೆ.

    ಆರಂಭದಲ್ಲೇ ಇದನ್ನು ಹತ್ತಿಕ್ಕಬೇಕಾದ ಪೊಲೀಸ್‌ ಇಲಾಖೆ ಇದು ಹತ್ತರಲ್ಲಿ ಹನ್ನೊಂದನೇ ಘಟನೆ ಎಂಬಂತೆ ಭಾವಿಸಿ ಮೂಕಪ್ರೇಕ್ಷಕನಾಗಿರುವುದು ಅಪಾಯದ ಸಂಕೇತವಾಗಿದೆ.
    ಇದರಲ್ಲಿ ಮತ್ತೊಂದು ಪ್ರಮುಖ ಅಂಶ ಎಂದರೆ ಮಂಗಳೂರಿಗೆ ವರ್ಗವಾಗಿ ಬರುವ ಹಿರಿಯ ಪೊಲೀಸ್‌ ಅಧಿಕಾರಿಗಳು ಎಲ್ಲಾ ಜಿಲ್ಲೆಗಳಿಗೆ ವರ್ಗವಾಗಿ ಹೋಗುವಂತೆ ಹೋಗುವುದಲ್ಲ. ಬದಲಾಗಿ ಇಲ್ಲಿಗೆ ಬರುವ ಮುನ್ನ ಅಥವಾ ಬಂದ ಮೇಲೆ ಕರಾವಳಿಯ ಇತಿಹಾಸವನ್ನೊಮ್ಮೆ ತಿರುವಿ ಹಾಕಿ ನೋಡಬೇಕು.

    ಕರ್ನಾಟಕಕ್ಕೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆ ಅಥವಾ ಮಂಗಳೂರು ನಗರ ಇತರ ಜಿಲ್ಲೆ, ಅಥವಾ ನಗರಗಳಂತಲ್ಲ. ಇಲ್ಲಿನ ಜನ ಪೊಲೀಸ್‌ ಸ್ನೇಹಿಯಾಗಿದ್ದರೂ,

    ಧರ್ಮದದ ವಿಷಯದಲ್ಲಿ ಅತ್ಯಂತ ಸೂಕ್ಷ್ಮ. ಆದ್ದರಿಂದ ಇಲ್ಲಿಗೆ ಬರುವ ಅಧಿಕಾರಿಗಳು ಕೂಡ ಯಾವುದೇ ಕಡೆ ವಾಲದೇ ತಟಸ್ಥವಾಗಿ ನಿಂತು ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಜವಾಬ್ದಾರಿ ಇದೆ.

    ಈ ಹಿನ್ನೆಲೆಯಲ್ಲಿ ಇಲ್ಲಿಗೆ ವರ್ಗವಾಗಿ ಬರುವ ಪೊಲೀಸ್‌ ಅಧಿಕಾರಿಗಳು ಇಲ್ಲಿನ ಇತಿಹಾಸ ಅರಿಯುವುದು ಅತ್ಯಗತ್ಯ.

    ಈ ಹಿಂದೆ ಮಂಗಳೂರು ನಗರಕ್ಕೆ ಪೊಲೀಸ್‌ ಆಯುಕ್ತರಾಗಿ ಬಂದ ಹಲವು ಅಧಿಕಾರಿಗಳು ಉತ್ತಮ ಹೆಸರುಗಳಿಸಿದ್ದಾರೆ. ಜೊತೆಗೆ ಮಂಗಳೂರಿಗರ ಸ್ಮೃತಿಪಟಲದಲ್ಲಿ ಜನಾನುಮಾಸರಾಗಿದ್ದಾರೆ.

    ಅಂತಹ ಅಧಿಕಾರಿಗಳಲ್ಲಿ ಚಂದ್ರಶೇಖರ್‌, ಸೀಮಂತ್‌ ಕುಮಾರ್‌ ಸಿಂಗ್‌, ವಿಫುಲ್‌ ಕುಮಾರ್‌, ಸಂದೀಪ್‌ ಪಾಟೀಲ್‌, ಗೋಪಾಲ್‌ ಹೊಸೂರು ಪ್ರಮುಖರು.

    ಇಂತಹ ಸಮಯದಲ್ಲಿ ಅನುಭವವನ್ನು ಇಲ್ಲಿನ ಅಧಿಕಾರಿಗಳು ಸಲಹೆ ರೂಪದಲ್ಲಿ ಪಡೆಯುವುದು ಅತ್ಯಂತ ಸೂಕ್ತ.

    ಜೊತೆಗೆ ಮಂಗಳೂರಿನ ಸೂಕ್ಷ್ಮ ಪರಿಸ್ಥಿತಿಯನ್ನು ಕಳೆದ ದಶಕಗಳಿಂದ ಯಶಸ್ವಿಯಾಗಿ ನಿಭಾಯಿಸಿದ ಅನೇಕ ಪೊಲೀಸ್‌ ಸಿಬ್ಬಂದಿಳಿದ್ದಾರೆ.

    ಅವರನ್ನು ವಿಶ್ವಾಸಕ್ಕೆ ಪಡೆದು ಇಲ್ಲಿನ ಹಿರಿಯ ಅಧಿಕಾರಿಗಳು ಕಾರ್ಯೋನ್ಮುಕವಾಗಬೇಕಿದೆ. ಆಗ ಮಾತ್ರ ಮಂಗಳೂರಿನಲ್ಲಿ ಶಾಂತಿ ನೆಸಲು ಸಾಧ್ಯ.

    ಈ ನಿಟ್ಟಿನಲ್ಲಿ ಕೂಡಲೇ ಕಾರ್ಯತತ್ಪರವಾಗಬೇಕು. ಇಲ್ಲವಾದಲ್ಲಿ ಮಂಗಳೂರಿನಲ್ಲಿ ಮತ್ತೊಂದು ಕೋಮು ಗಲಭೆ ನಡೆಯುವುದಕ್ಕೆ ಹೆಚ್ಚು ದಿನವಿಲ್ಲ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending