Connect with us

    DAKSHINA KANNADA

    ಮಂಗಳೂರು, ಮುಂಬೈ, ಗೋವಾ ಸೇರಿ 12 ನಗರಗಳು 2100 ವೇಳೆಗೆ ಸಂಪೂರ್ಣ ಮುಳುಗಡೆ : ಇದು ಜ್ಯೋತಿಷ್ಯ ಭವಿಷ್ಯವಲ್ಲ ಇದು ನಾಸಾ ವರದಿ..!

    Published

    on

    ನಾಸಾ: ಭಾರತ ಸೇರಿದಂತೆ ಜಗತ್ತಿನ ಆನೇಕ ರಾಷ್ಟ್ರಗಳಲ್ಲಿ ನಿತ್ಯ ಪ್ರಳಯ. ಒಂದಲ್ಲ ಒಂದು ರಾಷ್ಟ್ರದ ಮೇಲೆ ಸಮುದ್ರದ ಆಪತ್ತು ದಿನಾ ತಪ್ಪಿದ್ದಲ್ಲ.

    ಆದರೆ ಇವುಗಳ ಮಧ್ಯೆ ನಾಸಾ ಒಂದು ಬೆಚ್ಚಿ ಬೀಳಿಸುವ ಸಂಶೋಧನಾ ವರದಿಯನ್ನು ಮುಂದಿಟ್ಟಿದೆ. ಇದರಲ್ಲಿ ಭಾರತದ 12 ನಗರಗಳು 2100ಕ್ಕೆ ಜಲಸಮಾಧಿಯಾಗಲಿವೆ.

    ಕರ್ನಾಟಕದ ಮಂಗಳೂರು, ವಾಣಿಜ್ಯ ನಗರಿ ಮುಂಬೈ, ಪ್ರವಾಸಿಗರ ನೆಚ್ಚಿನ ಗೋವಾ ನಗರಗಳು ಸಮುದ್ರದಲ್ಲಿ ಮುಳುಗಡೆಯಾಗಲಿವೆ.

    ಮುಂಬೈ: ವಾಣಿಜ್ಯ ನಗರಿ ಮುಂಬೈಗೂ ಜಲಪ್ರಳಯದ ಕಂಟಕ ತಪ್ಪಿದ್ದಲ್ಲ. ಜಾಗತಿಕ ತಾಪಮಾನದ ಶಾಪಗಳನ್ನೆಲ್ಲಾ ಸಮುದ್ರತೀರದ ನಗರಗಳೇ ಮೊದಲು ಅನುಭವಿಸಬೇಕಾದ ಸ್ಥಿತಿ ಇದೆ.

    ವರದಿಗಳ ಪ್ರಕಾರ ಶೇಕಡಾ 65ರಷ್ಟು ಮುಂಬೈ 2100ರ ವೇಳೆಗೆ ಸಮುದ್ರದಲ್ಲಿ ಮುಳುಗಿರುತ್ತದೆ ಎನ್ನಲಾಗಿದೆ. ಕೊಲಾಬಾ, ಬಾಂದ್ರಾ ಮುಂತಾದ ಅನೇಕ ಪ್ರಮುಖ ಪ್ರದೇಶಗಳು ಇದರಲ್ಲಿ ಇರಲಿವೆ ಎನ್ನಲಾಗಿದೆ.

    ಕರ್ನಾಟಕದ ಕರಾವಳಿಯ ಹೆಗ್ಗುರುತಾಗಿರುವ ಅರಬ್ಬಿ ಸಮುದ್ರದ ದಂಡೆಯ ಮೇಲಿರುವ ಮಂಗಳೂರು ನಗರ,ಕರ್ನಾಟಕ, ಮಹಾರಾಷ್ಟ್ರ ಮಾತ್ರವಲ್ಲ ಇಡೀ ಭಾರತದ ಜನರಿಗೆ ಹಾಲಿಡೇ ಸ್ಪಾಟ್ ಆಗಿರುವ ಗೋವಾ, ಕೇರಳದ ಕೊಚ್ಚಿನ್, ತೂತ್ತುಕುಡಿ ಹೀಗೇ ಭಾರತದ 12 ಪ್ರಮುಖ ನಗರಗಳು ಸಮುದ್ರದೊಳಗೆ ವಿಲೀನವಾಗಲಿದೆ ಎಂದು ನಾಸಾ ಹೇಳಿದೆ.

    ಇನ್ನು 10 ವರ್ಷಗಳಲ್ಲಿ ಮಂಗಳೂರಿನ ಸಮುದ್ರ ದಂಡೆ ಆಗಲೇ 2.75 ಇಂಚುಗಳಷ್ಟು ಮೇಲೇರುತ್ತದೆ. 2100ರ ವೇಳೆಗೆ ಮಂಗಳೂರು 1.87 ಅಡಿ ಸಮುದ್ರದೊಳಗೆ ಇರುತ್ತದೆ ಎಂದಿದೆ ನಾಸಾ.

    2050ರ ವೇಳೆಗೆ ಆಗಲೇ ದಕ್ಷಿಣ ಗೋವಾ ಮುಳುಗಡೆ ಬಹಳ ಸ್ಪಷ್ಟವಾಗಿ ಗೋಚರಿಸಲಿದೆ.ತಮಿಳುನಾಡಿನ ಚಿದಂಬರಂ, ಮಹಾಬಲಿಪುರಂ, ಕಲ್ಪಕ್ಕಂ, ಚೂನಂಪೇಟ್ ಮುಂತಾದ ಸಮುದ್ರ ತೀರದ ನಗರಗಳೆಲ್ಲಾ ಅಪಾಯದಲ್ಲಿ ಇದ್ರೂ ಚೆನ್ನೈ ಮೇಲೆ ಜಲಪ್ರಳಯದ ಪ್ರಭಾವ ತುಸು ಹೆಚ್ಚೇ ಇರಲಿದೆ ಎನ್ನುತ್ತಿವೆ ಮೂಲಗಳು. ಶೇಕಡಾ 45ರಷ್ಟು ಚೆನ್ನೈ 2100ರ ವೇಳೆಗೆ ಸಮುದ್ರದ ಪಾಲಾಗಲಿದೆ.

    ಹೀಗಾಗಲು ಕಾರಣ ಏನು..? 

    ಇದಕ್ಕೆಲ್ಲಾ ಕಾರಣ ಜಾಗತಿಕ ಉಷ್ಣಾಂಷ ಏರಿಕೆಯೇ. ತಾಪಮಾನ ಹೆಚ್ಚಾದಂತೆ ಉತ್ತರ ಮತ್ತು ದಕ್ಷಿಣ ಧೃವಗಳಲ್ಲಿನ ಮಂಜು ಕರಗಿ ಸಮುದ್ರ ಸೇರುತ್ತದೆ.  ಆಗ ಸಹಜವಾಗಿಯೇ ಸಮುದ್ರಮಟ್ಟ ಏರುತ್ತದೆ.

    ಮುಂದಿನ ಎರಡು ದಶಕಗಳಲ್ಲಿ ಇಡೀ ಭೂಮಿಯ ತಾಪಮಾನದಲ್ಲಿ ವಿಪರೀತ ಏರಿಕೆ ಉಂಟಾಗುತ್ತದೆ ಎಂದಿದೆ ನಾಸಾ. ಪ್ರತೀ ಐದರಿಂದ ಏಳು ವರ್ಷಗಳಲ್ಲಿ ಒಮ್ಮೆ ಜಾಗತಿಕ ತಾಪಮಾನ, ಸಮುದ್ರ ಮಟ್ಟಗಳ ಬಗ್ಗೆ ಕೂಲಂಕುಷವಾಗಿ ಅಧ್ಯಯನ ಮಾಡಲಾಗುತ್ತದೆ. ಆಗೆಲ್ಲಾ ಹೀಗೆ ಭಯ ಹುಟ್ಟಿಸುವ ಆದ್ರೆ ಸತ್ಯ ವಿಚಾರಗಳು ಹೊರಬರುತ್ತವೆ.

     

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending