Connect with us

DAKSHINA KANNADA

Mangaluru: ಪುತ್ತೂರಿನ ಗೌರಿ ಕೊಲೆ ಕೃತ್ಯ ಸತ್ಯ ಬಿಚ್ಚಿಟ್ಟ ಎಸ್ಪಿ ರಿಷ್ಯಂತ್‌..!

Published

on

ಪುತ್ತೂರಿನಲ್ಲಿ ನಿನ್ನೆ ಕೊಲೆಯಾದ ಯುವತಿ ಗೌರಿ ಮತ್ತು ಕೊಲೆಗಾರ ಪದ್ಮರಾಜ್‌ ಅವರು ಕಳೆದ 6 ವರ್ಷಗಳಿಂದ ಪರಿಚಿತರಾಗಿದ್ದು, ಇದೀಗ ಯುವತಿಯ ಕೊಲೆಯೊಂದಿಗೆ ಅವರೊಳಗಿನ ಪರಿಚಯ ಮತ್ತು ಪ್ರೀತಿ ಸಹಿತ ಎಲ್ಲವೂ ಅವಸಾನಗೊಂಡಿದೆ.

ಮಂಗಳೂರು: ಪುತ್ತೂರಿನಲ್ಲಿ ನಿನ್ನೆ ಕೊಲೆಯಾದ ಯುವತಿ ಗೌರಿ ಮತ್ತು ಕೊಲೆಗಾರ ಪದ್ಮರಾಜ್‌ ಅವರು ಕಳೆದ 6 ವರ್ಷಗಳಿಂದ ಪರಿಚಿತರಾಗಿದ್ದು, ಇದೀಗ ಯುವತಿಯ ಕೊಲೆಯೊಂದಿಗೆ ಅವರೊಳಗಿನ ಪರಿಚಯ ಮತ್ತು ಪ್ರೀತಿ ಸಹಿತ ಎಲ್ಲವೂ ಅವಸಾನಗೊಂಡಿದೆ.

ಮೃತ ಯುವತಿ ಗೌರಿಯ ಮೃತ ದೇಹದ ಮರಣೋತ್ತರ ಪರೀಕ್ಷೆಯನ್ನು ಇಂದು ಮಂಗಳೂರಿನ ವೆನ್ಲಾಕ್‌ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಿ ಬಳಿಕ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ವೆನ್ಲಾಕ್‌ ಆಸ್ಪತ್ರೆಯ ಆವರಣದಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಸೇರಿದ್ದರು.

ಪ್ರಕರಣದ ಕುರಿತಂತೆ ಜಿಲ್ಲಾ ಎಸ್.ಪಿ. ರಿಷ್ಯಂತ್‌ ಸಿ. ಬಿ. ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿ ಗೌರಿ ವಿಟ್ಲದ ಶಾಲೆಯಲ್ಲಿ 9 ನೇ ತರಗತಿಯಲ್ಲಿ ಕಲಿಯುತ್ತಿದ್ದ ಸಂದರ್ಭದಲ್ಲಿಯೇ ಪದ್ಮರಾಜನ ಪರಿಚಯವಾಗಿತ್ತು.

ಪರಿಚಯ ಕ್ರಮೇಣ ಪ್ರೀತಿಗೆ ತಿರುಗಿತ್ತು. ಈ 6 ವರ್ಷಗಳ ಅವಧಿಯಲ್ಲಿ ಮಧ್ಯದಲ್ಲೊಮ್ಮೆ ಅವರೊಳಗೆ ಭಿನ್ನಾಭಿಪ್ರಾಯ ಹುಟ್ಟಿಕೊಂಡಿತ್ತು.

2020 ರಲ್ಲಿ ಗೌರಿ ಆತನ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು.

ಈ ಸಂದರ್ಭದಲ್ಲಿ ಪೊಲೀಸರು ಇಬ್ಭರನ್ನೂ ಠಾಣೆಗೆ ಕರೆಸಿ ಇನ್ನುಮುಂದೆ ಪರಸ್ಪರ ಮಾತುಕತೆ ಇಲ್ಲ ಎಂಬುದಾಗಿ ಮುಚ್ಚಳಿಕೆಯನ್ನು ಬರೆಸಿ ಕಳುಹಿಸಿದ್ದರು.

ಆದರೆ ಆ ಬಳಿಕವೂ ಇಬ್ಬರ ನಡುವೆ ಮಾತುಕತೆ ಮುಂದುವರಿದಿತ್ತು.

ಪದ್ಮರಾಜ್‌ ಆಕೆಗೆ ಮೊಬೈಲ್‌ ಪೋನ್‌ ಕೊಡಿಸಿದ್ದನು.

ಆದರೆ ಮತ್ತೆ ಇತ್ತೀಚೆಗೆ ಅವರೊಳಗೆ ಭಿನ್ನಾಭಿಪ್ರಾಯ ಬಂದಿದ್ದು, ಆಕೆ ಆತನ ಪ್ರೀತಿಯನ್ನು ನಿರಾಕರಿಸಿದ್ದಳು.

ಈ ಹಿನ್ನೆಲೆಯಲ್ಲಿ ನಿನ್ನೆ ಆತ ಬೈಕಿನಲ್ಲಿ ಗೌರಿ ಕೆಲಸ ಮಾಡುತ್ತಿದ್ದ ಪುತ್ತೂರಿನ ಫ್ಯಾನ್ಸಿ ಅಂಗಡಿಗೆ ತೆರಳಿ ಈ ಹಿಂದೆ ಗಿಫ್ಟ್‌ ಕೊಟ್ಟಿದ್ದ ಮೊಬೈಲನ್ನು ಆಕೆಯ ಬ್ಯಾಗಿನಿಂದ ಕಿತ್ತುಕೊಂಡು ಹೋಗಿದ್ದನು.

ಬಳಿಕ ಆಕೆ ಇನ್ನೊಂದು ಪೋನ್‌ ನಲ್ಲಿ ಕರೆ ಮಾಡಿ ಮೊಬೈಲ್‌ ಫೋನ್‌ ಹಿಂತಿರುಗಿಸುವಂತೆ ಒತ್ತಾಯಿಸಿದ್ದಳು.

ಆತ ವಾಪಸ್‌ ಬರಲು ಒಪ್ಪಿದ್ದರಿಂದ ಗೌರಿ ಮಹಿಳಾ ಪೊಲೀಸ್‌ ಠಾಣೆ ಬಳಿ ತೆರಳಿ ಕಾಯುತ್ತಿದ್ದಳು.

ಪದ್ಮರಾಜ್‌ ಅಲ್ಲಿಗೆ ತಲುಪಿದಾಗ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ ಹಾಗೂ ಆತ ಚೂರಿಯಿಂದ ಆಕೆಯ ಕುತ್ತಿಗೆಗೆ ಇರಿದು ಪರಾರಿಯಾಗಿದ್ದಾನೆ ಎಂದು ವಿವರಿಸಿದರು.

ಕೊಲೆಗೆ ಮೊದಲು ಫ್ಯಾನ್ಸಿ ಅಂಗಡಿಯಲ್ಲಿ ಆತ ಆಕೆಯ ಜತೆ ಜಗಳ ಮಾಡಿರುವ ಕುರಿತಂತೆ ಸಿಸಿ ಕ್ಯಾಮರಾ ದೃಶ್ಯಾವಳಿ ಇದೀಗ ಪತ್ತೆಯಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ನಿವೃತ್ತ ಶಿಕ್ಷಕ ರಸ್ತೆ ದುರಂತದಲ್ಲಿ ಸಾ*ವು

Published

on

ಪುತ್ತೂರು : ನಿವೃತ್ತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ ಕಾರಂತ (80) ಅವರು ರಸ್ತೆ ಅಪಘಾತಕ್ಕೆ ಬ*ಲಿಯಾಗಿದ್ದಾರೆ. ಪುತ್ತೂರಿನ ಸಂಪ್ಯ ಎಂಬಲ್ಲಿ ಗುರುವಾರ ರಸ್ತೆ ದಾಟುತ್ತಿದ್ದ ವೇಳೆ ಸೂರ್ಯನಾರಾಯಣ ಕಾರಂತ ಅವರಿಗೆ ಆಟೋ ರಿಕ್ಷಾವೊಂದು ಢಿಕ್ಕಿ ಹೊಡೆದಿತ್ತು.

ಡಿಕ್ಕಿಯ ರಭಸಕ್ಕೆ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯವಾಗಿತ್ತು. ಕೂಡಲೇ ಮತ್ತೊಂದು ರಿಕ್ಷಾದಲ್ಲಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.

ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ. ಸೂರ್ಯನಾರಾಯಣ ಕಾರಂತ ಅವರು ಗಣಿತ ಶಿಕ್ಷಕರಾಗಿ ಪ್ರಸಿದ್ಧರಾಗಿದ್ದರು.

ಇದನ್ನೂ ಓದಿ : ಕಣಗಿಲೆ ಹೂ ತಿಂದು ಇಹಲೋಕ ತ್ಯಜಿಸಿದ ಯುವತಿ!

Continue Reading

DAKSHINA KANNADA

ಅಯ್ಯೋ… ಟೀ ಕುಡಿದರೆ ಕಪ್ಪಗಾಗ್ತಾರಾ?

Published

on

ಮಂಗಳೂರು: ಸಾಮಾನ್ಯವಾಗಿ ಭಾರತ ದೇಶದಲ್ಲಿ ಜಾಸ್ತಿಯಾಗಿ ಟೀ ಕುಡಿಯುತ್ತಾರೆ. ಅದರಲ್ಲೂ ಕೆಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಟೀ ಕುಡಿದರೆ ಇನ್ನು ಕೆಲವರು ತಿಂಡಿ ತಿನ್ನುವಾಗ ಟೀ ಕುಡಿಯುತ್ತಾರೆ. ಕೆಲವರಿಗೆ ಟೀ ಕುಡಿಯದೇ ಇದ್ದರೆ ತಲೆನೋವು ಶುರುವಾಗಿ ಬಿಡುತ್ತದೆ. ಆದರೆ ಈಗ ಟೀ ಅಲ್ಲೂ ಗ್ರೀನ್ ಟೀ, ಬ್ಲೂ ಟೀ, ಲೆಮನ್ ಟೀ ಹೀಗೆ ವೆರೈಟಿ ವೆರೈಟಿ ಟೀಗಳಿದೆ.
ಆದರೆ ಅನೇಕ ಕಡೆ ವಿಚಿತ್ರ ನಂಬಿಕೆ ಇದೆ. ಟೀ ಕುಡಿದ್ರೆ ಕಪ್ಪಾಗುತ್ತಾರೆ ಎನ್ನುವ ಒಂದು ಸಂಗತಿ. ಹೌದು, ಟೀ ಕುಡಿದರೆ ಕಪ್ಪಾಗುತ್ತೇವೆ ಎಂದು ಅನೇಕರು ಹೇಳುವುದನ್ನು ಕೇಳಿರುತ್ತೇವೆ. ಅಲ್ಲದೇ ಇದೇ ಕಾರಣಕ್ಕೆ ಅದೆಷ್ಟೋ ಜನರು ಟೀ ಅನ್ನು ಕುಡಿಯುವುದಿಲ್ಲ ಎಂದು ಹೇಳಬಹುದು. ಆದರೆ ನಿಜವಾಗಿಯೂ ಟೀ ಕುಡಿದರೆ ಕಪ್ಪಾಗುತ್ತಾರಾ? ಇದು ಸತ್ಯವೇ? ಇದೇ ಪ್ರಶ್ನೆಗೆ ಇಲ್ಲಿದೆ ನೋಡಿ ಸರಿಯಾದ ಉತ್ತರ.

ಕೆಲ ಆಹಾರ ಚರ್ಮದ ಮೇಲೆ ಪರಿಣಾಮ ಬೀರುತ್ತದೆ:

ಆನುವಂಶಿಕ ಅಂಶಗಳ ಹೊರತಾಗಿ, ಚರ್ಮದ ಬಣ್ಣವು ನೀವು ಸೂರ್ಯನಲ್ಲಿ ಎಷ್ಟು ಹೊತ್ತು ಇರುತ್ತೀರಿ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ನಾವು ತಿನ್ನುವುದು ನಮ್ಮ ದೇಹದ ಮೇಲೆ ಪರಿಣಾಮ ಬೀರುತ್ತದೆ. ಕೆಲ ಆಹಾರವು ಚರ್ಮದ ಮೇಲೆಯೂ ಸಹ ಪರಿಣಾಮ ಬೀರುತ್ತದೆ. ಆದರೆ ನ್ಯಾಯೋಚಿತ ಬಣ್ಣವು ಅಂದರೆ ದೇಹದ ಹುಟ್ಟಿನ ಬಣ್ಣವು ಆಹಾರ ಸೇವನೆಯಿಂದ ಕಪ್ಪು ಬಣ್ಣಕ್ಕೆ ತಿರುಗುವುದಿಲ್ಲ ಎನ್ನಲಾಗುತ್ತದೆ. ಹಾಲಿನ ಟೀ ಕುಡಿಯುವುದರಿಂದ ಹೃದಯದ ಮೇಲೆ ಪರಿಣಾಮ ಬೀರುತ್ತದೆ.
ಕಡಿಮೆ ಸಕ್ಕರೆಯೊಂದಿಗೆ ಕಪ್ಪು ಚಹಾವನ್ನು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗಿದೆ. ಟೀ ಕುಡಿಯುವುದರಿಂದ ಚರ್ಮ ಕಪ್ಪಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇದಕ್ಕೆ ಯಾವುದೇ ಪುರಾವೆಗಳಿಲ್ಲ. ಇದಕ್ಕೆ ವಿರುದ್ಧವಾಗಿ, ಚಹಾವು ಚರ್ಮಕ್ಕೆ ಪ್ರಯೋಜನಕಾರಿ ಎಂದು ಸಂಶೋಧನೆ ತೋರಿಸಿದೆ.

ಅತಿಯಾದರೆ ಅಮೃತವೂ ವಿಷ :

ಅತಿಯಾದರೆ ಅಮೃತವೂ ವಿಷ ಎಂಬ ಮಾತಿದೆ. ಅದರಂತೆ ಟೀ ಅಥವಾ ಚಹಾ ಸೇವನೆ ಸಹ ಅತಿಯಾದರೆ ಅದೂ ದೇಹದ ಆರೋಗ್ಯದ ಮೇಲೆ ನೇರ ಪರಿಣಾಮಬೀರುತ್ತದೆ. ಬಿಸಿ ಮಾಡಿದ್ದ ಟೀ ತಣ್ಣಗಾದ ಬಳಿಕ ಅದನ್ನು ಕುಡಿಯುವುದರಿಂದ ದೇಹಕ್ಕೆ ಹಾನಿಯುಂಟಾಗುತ್ತದೆ. ಮೂರ್ನಾಲ್ಕು ಗಂಟೆಗಳಿಗೂ ಮುನ್ನ ಬಿಸಿ ಮಾಡಿದ ಚಹಾವನ್ನು ಕುಡಿದರೆ, ನಿಮಗೆ ಗೊತ್ತಿಲ್ಲದ ರೀತಿ ಇದು ನಿಮ್ಮ ದೇಹದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಚಹಾವನ್ನು ಪದೇ ಪದೇ ಬಿಸಿ ಮಾಡಬಾರದು:

ಚಹಾವನ್ನು ಪದೇ-ಪದೇ ಬಿಸಿ ಮಾಡುವುದರಿಂದ ಅದರಲ್ಲಿರುವ ಎಲ್ಲಾ ಪೋಷಕಾಂಶಗಳು ಹೋಗುತ್ತವೆ. ಕೋಲ್ಡ್ ಟೀ ಬ್ಯಾಕ್ಟೀರಿಯಾವನ್ನು ಸೃಷ್ಟಿಸುತ್ತದೆ. ನೀವು ಚಹಾವನ್ನು ಎಷ್ಟು ಸಮಯ ಬೆಚ್ಚಗಾಗಿಸುತ್ತೀರೋ ಅಷ್ಟು ಹೆಚ್ಚು ಬ್ಯಾಕ್ಟೀರಿಯಾಗಳು ಬೆಳೆಯುತ್ತವೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದೆ.

Continue Reading

Ancient Mangaluru

ಮೇ.10 ರಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನೆ

Published

on

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ರಾಷ್ಟ್ರೀಯ ಪುರಸ್ಕಾರ ಪಡೆದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಪಕ್ಷಿಕೆರೆ ಶಾಖೆಯ ಉದ್ಘಾಟನಾ ಸಮಾರಂಭ ಮೇ 10 ರಂದು ಮಧ್ಯಾಹ್ನ 12 ಗಂಟೆಗೆ ಮುಲ್ಕಿಯ ಲಘುವಿ ಕಾಂಪ್ಲೆಕ್ಸ್ ಮುಖ್ಯರಸ್ತೆ ಪಕ್ಷಿಕೆರೆಯಲ್ಲಿ ನಡೆಯಲಿದೆ.

ಮುಲ್ಕಿ ಮೂಡುಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಶಾಖೆಯನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಪಕ್ಷಿಕೆರೆ ಸಂತ ಜುದರ ಪುಣ್ಯಕ್ಷೇತ್ರ ಧರ್ಮಗುರು ಅತಿ ವಂದನೀಯ ಗುರುಗಳು ಮೆಲ್ವಿನ್ ನೊರೊಹ್ನಾ ದ್ವೀಪ ಪ್ರಜ್ವಲಿಸಲಿದ್ದಾರೆ. ಪಕ್ಷಿಕೆರೆ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರ ಶ್ರೀ ಕೆ.ಸೀತಾರಾಮ್ ಶೆಟ್ಟಿ, ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಗಣಕೀಕೃತ ಬ್ಯಾಂಕಿಂಗ್ ಗೆ ಚಾಲನೆ ನೀಡಲಿದ್ದಾರೆ. ಪಕ್ಷಿಕೆರೆ, ಎಸ್ ಕೋಡಿ, ಬಿಲ್ಲವ ಸಂಘದ ಅಧ್ಯಕ್ಷ ನವೀನ್ ಹರಿಪಾದೆ ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ.

ಇದನ್ನೂ ಓದಿ : ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ, ದ.ಕ ಎರಡನೇ ಸ್ಥಾನ

ಸಮಾಜಸೇವಕ ಧನಂಜಯ ಶೆಟ್ಟಿಗಾರ್ ಇ-ಮುದ್ರಾಂಕ ಸೇವೆಗೆ, ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರ ಸಂಘದ ಅಧ್ಯಕ್ಷ ಎಚ್.ವಸಂತ್ ಬೆರ್ನಾಡ್ ಆವರ್ತನ ಠೇವಣಿಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಉಳಿತಾಯ ಖಾತೆಗೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಕಟ್ಟಡದ ಮಾಲಕ ಶ್ರೀನಿವಾಸ ಕೋಟ್ಯಾನ್ ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಸರ್ವರಿಗೂ ಆದರದ ಸ್ವಾಗತ ಕೋರಲಾಗಿದೆ.

Continue Reading

LATEST NEWS

Trending