Connect with us

    DAKSHINA KANNADA

    ಮಂಗಳೂರು: ಜೀನ್ಸ್, ಒಳಉಡುಪಿನಲ್ಲಿ 44 ಲಕ್ಷ ಮೌಲ್ಯದ ಚಿನ್ನ ಸಾಗಾಟ

    Published

    on

    ಮಂಗಳೂರು: ಸೆಪ್ಟೆಂಬರ್ 6 ರಿಂದ 10 ರವರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 44 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.


    ಮಂಗಳೂರು ಮತ್ತು ಕಾಸರಗೋಡಿನ ಮಹಿಳೆ ಸೇರಿದಂತೆ 5 ಪ್ರಯಾಣಿಕರಿಂದ 24 ಕ್ಯಾರೆಟ್ ಶುದ್ಧತೆಯ 869 ಗ್ರಾಂ ತೂಕದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

    ಇವರೆಲ್ಲರೂ ದುಬೈನಿಂದ ಬಂದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಜೀನ್ಸ್ ಪ್ಯಾಂಟ್, ಒಳಉಡುಪು, ವೆಸ್ಟ್ (ಬನಿಯನ್), ಬೂಟುಗಳು ಮತ್ತು ಗುದನಾಳದಲ್ಲಿ ಇರಿಸಲಾಗಿರುವ ಪೇಸ್ಟ್ ಮತ್ತು ಪೌಡರ್ ರೂಪದಲ್ಲಿ ಮರೆಮಾಚಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

     

    DAKSHINA KANNADA

    ದೀಪಾವಳಿಗೆ ಬಂಪರ್ ಆಫರ್; ಮಂಗಳೂರು – ಬೆಂಗಳೂರು ವಿಶೇಷ ರೈಲು

    Published

    on

    ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ ಭಾರ ಕಡಿಮೆ ಮಾಡುವ ನಿಟ್ಟಿನಲ್ಲಿ ಯಶವಂತಪುರ – ಮಂಗಳೂರು ಜಂಕ್ಷನ್‌- ಯಶವಂತಪುರ ನಡುವೆ ವಿಶೇಷ ರೈಲು ಓಡಿಸಲು ನೈಋತ್ಯ ರೈಲ್ವೇ ನಿರ್ಧರಿಸಿದ್ದು, ಅ.30 ಮತ್ತು 31ರಂದು ಈ ರೈಲುಗಳು ಸಂಚರಿಸಲಿವೆ.


    ನಂ.06565 ಯಶವಂತಪುರ-ಮಂಗಳೂರು ಜಂಕ್ಷನ್‌ ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಡಲಿದ್ದು, ಅ.31ರಂದು ಮಧ್ಯಾಹ್ನ 11.45ಕ್ಕೆ ಮಂಗಳೂರು ಜಂಕ್ಷನ್‌ ತಲುಪಲಿದೆ. ನಂ.06566 ಮಂಗಳೂರು ಜಂಕ್ಷನ್‌ – ಯಶವಂತಪುರ ವಿಶೇಷ ರೈಲು ಅ.31ರಂದು ಮಧ್ಯಾಹ್ನ 1 ಗಂಟೆಗೆ ಮಂಗ ಳೂರು ಜಂಕ್ಷನ್‌ನಿಂದ ಹೊರಡಲಿದ್ದು, ರಾತ್ರಿ 9.45ಕ್ಕೆ ಬೆಂಗಳೂರು ತಲುಪಲಿದೆ.
    ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ ನಿಲ್ದಾಣದಲ್ಲಿ ನಿಲುಗಡೆಯಾಗಲಿದೆ. ರೈಲು ಒಟ್ಟು 21 ಬೋಗಿ ಸಂಯೋಜನೆಯನ್ನು ಒಳಗೊಂಡಿದೆ.

    ಪ್ರಯಾಣಿಕರ ಬೇಡಿಕೆ :
    ಕಳೆದ ವರ್ಷ ದಸರಾ, ದೀಪಾವಳಿ ಸಂದರ್ಭದಲ್ಲಿ ಮಂಗಳೂರು – ಬೆಂಗಳೂರು – ಮೈಸೂರು ನಡುವೆ ವಿಶೇಷ ರೈಲು ಓಡಾಟ ನಡೆಸಿತ್ತು. ಈ ಬಾರಿ ದಸರಾದಲ್ಲಿ ನಂ.06569 ಯಶವಂತಪುರ – ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ಮತ್ತು ನಂ. 06570 ಕಾರವಾರ – ಮೈಸೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ವಯಾ ಪಡೀಲ್‌ ಮೂಲಕ ಸಂಚರಿಸಿದೆ. ಇದರಿಂದ ಮಂಗಳೂರಿಗೆ ಬರುವವರಿಗೆ ಹೆಚ್ಚಿನ ಲಾಭವಾಗಿಲ್ಲ. ದೀಪಾವಳಿಗಾದರೂ ಮಂಗಳೂರು – ಬೆಂಗಳೂರು ನಡುವೆ ಹೆಚ್ಚುವರಿ ರೈಲು ಓಡಲಿ ಎನ್ನುವುದು ರೈಲ್ವೇ ಹೋರಾಟಗಾರರ ಆಗ್ರಹವಾಗಿತ್ತು.

    ಸಂಸದರಿಂದ ಮನವಿ ಪತ್ರ:
    ವಿಶೇಷ ರೈಲಿಗೆ ಬೇಡಿಕೆ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ನೈಋತ್ಯ ರೈಲ್ವೇ ಮಹಾ ಪ್ರಬಂಧಕರಿಗೆ ಪತ್ರ ಬರೆದು, ದೀಪಾವಳಿ ಹಬ್ಬಕ್ಕೆ ಬೆಂಗಳೂರು – ಮಂಗಳೂರು ನಡುವೆ ವಿಶೇಷ ರೈಲು ಓಡಿಸುವಂತೆ ಮನವಿ ಮಾಡಿದ್ದರು. ಬೆಂಗಳೂರಿನಿಂದ ಊರಿಗೆ ಬರುವ ಸಾವಿರಾರು ಪ್ರಯಾಣಿಕರಿಗೆ ಈ ರೈಲಿನಿಂದ ಅನುಕೂಲವಾಗಲಿದೆ. ಆದ್ದರಿಂದ ಆದ್ಯತೆ ಮೇರೆಗೆ ರೈಲನ್ನು ಓಡಿಸಲು ಕ್ರಮ ಕೈಗೊಳ್ಳಬೇಕು. ಇದರಿಂದ ರೈಲ್ವೇ ಇಲಾಖೆಗೂ ಹೆಚ್ಚಿನ ಲಾಭವಾಗಲಿದೆ ಎಂದು ಸಂಸದರು ಪತ್ರದಲ್ಲಿ ವಿವರಿಸಿದ್ದರು. ಪ್ರಯಾಣಿಕರು, ಹೋರಾಟಗಾರರು ಹಾಗೂ ಜನ ಪ್ರತಿನಿಧಿಗಳ ಬೇಡಿಕೆ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೇ ವಿಶೇಷ ರೈಲು ಓಡಾಟಕ್ಕೆ ಮುಂದಾಗಿದೆ.

    Continue Reading

    DAKSHINA KANNADA

    ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ

    Published

    on

    ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.


    ತಾಂತ್ರಿಕ ತೊಂದರೆಯಿಂದ ಟ್ಯಾಂಕ್‌ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್‌ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.


    ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

    Continue Reading

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending