DAKSHINA KANNADA
ಮಂಗಳೂರು: ಅಖಿಲ ಭಾರತ ಕಾರ್ಮಿಕರ ಮುಷ್ಕರ ಯಶಸ್ವಿ
ಮಂಗಳೂರು: ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಇಂದು ಮಂಗಳೂರಿನಲ್ಲಿ ಜರುಗಿದ ಕಾರ್ಮಿಕರ ಮೆರವಣಿಗೆ ಹಾಗೂ ಬೃಹತ್ ಪ್ರತಿಭಟನಾ ಪ್ರದರ್ಶನ ನಿರೀಕ್ಷೆಗೂ ಮೀರಿ ಕಾರ್ಮಿಕರು ಭಾಗವಹಿಸುವುದರೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು.
ಸುಮಾರು ಮೂರು ಸಾವಿರಕ್ಕೂ ಮಿಕ್ಕಿದ ವಿವಿಧ ವಿಭಾಗದ ಕಾರ್ಮಿಕರು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಹೊರಟು ಕೇಂದ್ರ ಸರಕಾರದ ರೈತ ಕಾರ್ಮಿಕ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.
ನಗರದ ಕ್ಲಾಕ್ ಟವರ್ ಬಳಿಯಲ್ಲಿ ಸೇರಿದ್ದ ಕಾರ್ಮಿಕರ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ರವರು, ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೇರಿದ ಕೇಂದ್ರದ ನರೇಂದ್ರ ಮೋದಿ ಸರಕಾರವು ಕಾರ್ಪೋರೇಟ್ ಕಂಪೆನಿಗಳ ಹಿತ ಕಾಯುತ್ತಾ ದೇಶದ ಸಂಪತ್ತನ್ನೇ ಮಾರಲು ಹೊರಟಿದೆ.
ಕಾರ್ಮಿಕರ ಸಂಘದ ಹೋರಾಟದ ಫಲವಾಗಿ ರೂಪುಗೊಂಡಿದ್ದ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ಕಾರ್ಪೋರೇಟ್ ಪರವಾದ 4 ಸಂಹಿತೆಗಳನ್ನು ಮಾಡುವ ಮೂಲಕ ಮತ್ತೆ ಕಾರ್ಮಿಕರನ್ನು ಜೀತದಾಳುಗಳನ್ನಾಗಿ ದುಡಿಸುವ ಹುನ್ನಾರ ಅಡಗಿದೆ.
ಬೆಲೆಯೇರಿಕೆಯಿಂದ ಕಂಗೆಟ್ಟ ಕಾರ್ಮಿಕರು ಸಾಮಾಜಿಕ ಭದ್ರತೆಯಿಲ್ಲದೆ, ಕನಿಷ್ಟ ಕೂಲಿಯಿಲ್ಲದೆ ತೀರಾ ಶೋಚನೀಯ ಬದುಕು ಸಾಗಿಸುವಂತಾಗಿದೆ. ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ತ್ಯಾಗ ಬಲಿದಾನದ ಪರಂಪರೆ ಹೊಂದಿದ ಕಾರ್ಮಿಕ ವರ್ಗ ಇಂದು ಮತ್ತೆ ದೇಶದ ರಕ್ಷಣೆಗಾಗಿ ಸಂಘಟಿತ ಹೋರಾಟ ನಡೆಸುವ ಮೂಲಕ ಜನತೆಯ ಬದುಕನ್ನು ಉಳಿಸಬೇಕಾಗಿದೆ ಎಂದು ಹೇಳಿದರು.
ಪ್ರಾಸ್ತಾವಿಕ ಮಾತುಗಳನ್ನಾಡಿದ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಚ್.ವಿ.ರಾವ್ ಮಾತನಾಡಿ ‘ಕಾರ್ಮಿಕರ ಬೇಡಿಕೆಗಳ ಬಗ್ಗೆ ಬೆಳಕು ಚೆಲ್ಲುತ್ತಾ, ಕೇಂದ್ರ ಸರಕಾರದ ಜನವಿರೋಧಿ ತೆರಿಗೆ ನೀತಿ ಹಾಗೂ GSTಯಂತಹ ಕ್ರಮಗಳಿಂದಾಗಿ ಜೀವನಾವಶ್ಯಕ ವಸ್ತುಗಳ ಬೆಲೆಗಳು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿದೆ.ಮತ್ತೊಂದು ಕಡೆ ದುಡಿಮೆಗೆ ತಕ್ಕ ಪ್ರತಿಫಲವಿಲ್ಲದೆ ಕಾರ್ಮಿಕರು ತೀರಾ ಸಂಕಷ್ಟದಲ್ಲಿದ್ದಾರೆ’ ಎಂದು ಹೇಳಿದರು.
ಬ್ಯಾಂಕ್ ನೌಕರರ ಸಂಘಟನೆಯ ರಾಜ್ಯ ನಾಯಕರಾದ ವಿನ್ಸೆಂಟ್ ಡಿಸೋಜರವರು ಮಾತನಾಡಿ, ಬ್ಯಾಂಕ್ ವಿಲೀನೀಕರಣದ ಹೆಸರಿನಲ್ಲಿ ಲಾಭದಲ್ಲಿದ್ದ ಅನೇಕ ಬ್ಯಾಂಕುಗಳನ್ನು ಇಲ್ಲವಾಗಿಸಿ, ಇರುವ ಉದ್ಯೋಗಗಳನ್ನು ನಷ್ಟಗೊಳಿಸುವ ಮೂಲಕ ದೇಶದ ಆರ್ಥಿಕತೆಯನ್ನೇ ಸರ್ವನಾಶ ಮಾಡಿದ ಕೇಂದ್ರ ಸರಕಾರದ ವಿರುದ್ಧ ಬ್ಯಾಂಕ್ ನೌಕರರು ಮಾತ್ರವಲ್ಲದೆ ಇಡೀ ದೇಶದ ಜನತೆ ಒಂದಾಗಬೇಕಾಗಿದೆ ಎಂದು ಹೇಳಿದರು.
AITUC ಜಿಲ್ಲಾ ನಾಯಕರಾದ ಸೀತಾರಾಮ ಬೇರಿಂಜರವರು ಮಾತನಾಡುತ್ತಾ, ಕೋಟ್ಯಾಂತರ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯಿಲ್ಲ.
ಪ್ರಸ್ತುತ ಸಂದರ್ಭದಲ್ಲಿ ದುಡಿಯುವ ಕಾರ್ಮಿಕರಿಗೆ ಮಾಸಿಕ ಕನಿಷ್ಠ ಕೂಲಿ ರೂ.24,000 ಸಿಗಬೇಕೆಂದು ಒತ್ತಾಯಿಸಿದರೆ ಕೇಂದ್ರ ಸರಕಾರವು ಕೇವಲ ದಿನಕ್ಕೆ ರೂ. 175/- ಕೂಲಿ ನಿಗದಿ ಪಡಿಸಿ ಕಾರ್ಮಿಕರನ್ನು ಅಪಹಾಸ್ಯ ಮಾಡಿದೆ ಎಂದು ಆಕ್ರೋಶ ಭರಿತರಾಗಿ ಹೇಳಿದರು.
ಸಭೆಯನ್ನುದ್ದೇಶಿಸಿ, INTUC ನಾಯಕರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ, AICCTU ನಾಯಕರಾದ ಮೋಹನ್, ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ರಾಜ್ಯಾಧ್ಯಕ್ಷರಾದ ರಾಘವ ಕೆ,ವಿಮಾ ನೌಕರರ ಸಂಘಟನೆಯ ಮುಖಂಡರಾದ ಅಲ್ಬನ್ ಮಸ್ಕರೇನಸ್,CITU ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ,ಬ್ಯಾಂಕ್ ನೌಕರರ ಸಂಘಟನೆಯ ನಾಯಕರಾದ ಪುರುಷೋತ್ತಮ ಪೂಜಾರಿಯವರು ಮಾತನಾಡಿ, ‘ಕೇಂದ್ರ ಸರಕಾರವು ಪ್ರತಿಯೊಂದು ಕ್ಷೇತ್ರದಲ್ಲಿ ಮಾಡಿದ ಅನಾಹುತಗಳನ್ನು ಗುರುತಿಸಿ,ಅದರ ವಿರುದ್ದ ಕಾರ್ಮಿಕ ವರ್ಗದ ಪ್ರಬಲ ಚಳುವಳಿ ಬೆಳೆಯಬೇಕೆಂದು ಕಾರ್ಮಿಕರಿಗೆ ಕರೆ ನೀಡಿದರು.
ಪ್ರತಿಭಟನೆಯಲ್ಲಿ CITU ನಾಯಕರಾದ ಯೋಗೀಶ್ ಜಪ್ಪಿನಮೊಗರು,ವಸಂತ ಆಚಾರಿ,ಪದ್ಮಾವತಿ ಶೆಟ್ಟಿ, ರಮಣಿ ಮೂಡಬಿದ್ರೆ, ನೋಣಯ್ಯ ಗೌಡ,ಶಿವ ಕುಮಾರ್,ಜಯಂತ ನಾಯಕ್, ಬಿ.ಕೆ.ಇಮ್ತಿಯಾಜ್, ಮಹಮ್ಮದ್ ಮುಸ್ತಫಾ,ಹರೀಶ್ ಪೂಜಾರಿ,ವಿಲ್ಲಿ ವಿಲ್ಸನ್, ಸಂತೋಷ್ ಆರ್.ಎಸ್,,ಬಿಜು ಅಗಸ್ಟಿನ್,ರವಿಚಂದ್ರ ಕೊಂಚಾಡಿ, ದಿನೇಶ್ ಶೆಟ್ಟಿ, ಜಯಂತಿ ಶೆಟ್ಟಿ, ಭಾರತಿ ಬೋಳಾರ,ರಾಧಾ ಮೂಡಬಿದ್ರೆ,
ಗಿರಿಜಾ ಮೂಡಬಿದ್ರೆ,ಶಂಕರ ವಾಲ್ಪಾಡಿ, ವಸಂತಿ ಕುಪ್ಪೆಪದವು,AITUC ನಾಯಕರಾದ ಕರುಣಾಕರ್, ಸುರೇಶ್ ಕುಮಾರ್, ವಿ.ಕುಕ್ಯಾನ್, ಪುಷ್ಪಾರಾಜ್, ಜಗತ್ಪಾಲ್,ಸುಲೋಚನಾ, INTUC ನಾಯಕರಾದ ಮನೋಹರ್ ಶೆಟ್ಟಿ,ಹುಸ್ಸೇನ್, ರಮಾನಾಥ್, AICCTU ನಾಯಕರಾದ ಸತೀಶ್, ಭರತ್,ಬ್ಯಾಂಕ್ ನೌಕರರ ಸಂಘಟನೆಯ ನಾಯಕರಾದ ಫಣೀಂದ್ರ,ಸುರೇಶ್ ಹೆಗ್ಡೆ, ಲೋಕೇಶ್,
ವಿಮಾ ನೌಕರರ ಸಂಘಟನೆಯ ಮುಖಂಡರಾದ ಬಿ.ಎನ್.ದೇವಾಡಿಗ, ರಾಘವೇಂದ್ರ ರಾವ್,ವಸಂತ ಕುಮಾರ್,ರೈತ ನಾಯಕರಾದ ಕೆ.ಯಾದವ ಶೆಟ್ಟಿ, ಯುವಜನ ನಾಯಕರಾದ ಮುನೀರ್ ಕಾಟಿಪಳ್ಳ,ಸಂತೋಷ್ ಬಜಾಲ್,ನವೀನ್ ಕೊಂಚಾಡಿ, ರಫೀಕ್ ಹರೇಕಳ,ಮನೋಜ್ ವಾಮಂಜೂರು ಮುಂತಾದವರು ಉಪಸ್ಥಿತರಿದ್ದರು.
DAKSHINA KANNADA
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
DAKSHINA KANNADA
ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!
ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.
ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.
ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್ಕ್ರೀಮ್ ತಯಾರಿಸುವ ಘಟಕ, ಕಾರ್ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.
ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್ನಲ್ಲಿ ಪಲ್ಟಿಂಗ್ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.
DAKSHINA KANNADA
ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?
ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.
ಕಲ್ಲಂಗಡಿ ಚಿಕನ್ ಬಿರಿಯಾನಿ
ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್ನ villagefoodchannel_official ಪೇಜ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.
ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ
ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.
ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.
ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.
ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ