Connect with us

    DAKSHINA KANNADA

    ಮಂಗಳೂರು: ಅಖಿಲ ಭಾರತ ಕಾರ್ಮಿಕರ ಮುಷ್ಕರ ಯಶಸ್ವಿ

    Published

    on

    ಮಂಗಳೂರು: ಕಾರ್ಮಿಕ ವರ್ಗದ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಅಖಿಲ ಭಾರತ ಮಹಾಮುಷ್ಕರದ ಅಂಗವಾಗಿ ಇಂದು ಮಂಗಳೂರಿನಲ್ಲಿ ಜರುಗಿದ ಕಾರ್ಮಿಕರ ಮೆರವಣಿಗೆ ಹಾಗೂ ಬೃಹತ್ ಪ್ರತಿಭಟನಾ ಪ್ರದರ್ಶನ ನಿರೀಕ್ಷೆಗೂ ಮೀರಿ ಕಾರ್ಮಿಕರು ಭಾಗವಹಿಸುವುದರೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು.


    ಸುಮಾರು ಮೂರು ಸಾವಿರಕ್ಕೂ ಮಿಕ್ಕಿದ ವಿವಿಧ ವಿಭಾಗದ ಕಾರ್ಮಿಕರು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಮೆರವಣಿಗೆಯಲ್ಲಿ ಹೊರಟು ಕೇಂದ್ರ ಸರಕಾರದ ರೈತ ಕಾರ್ಮಿಕ ಜನವಿರೋಧಿ ನೀತಿಗಳ ವಿರುದ್ಧ ಆಕ್ರೋಶಭರಿತರಾಗಿ ಘೋಷಣೆಗಳನ್ನು ಕೂಗುತ್ತಾ ಸಾಗಿದರು.


    ನಗರದ ಕ್ಲಾಕ್ ಟವರ್ ಬಳಿಯಲ್ಲಿ ಸೇರಿದ್ದ ಕಾರ್ಮಿಕರ ಬೃಹತ್ ಪ್ರತಿಭಟನಾ ಪ್ರದರ್ಶನವನ್ನು ಉದ್ದೇಶಿಸಿ ಮಾತನಾಡಿದ CITU ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ರವರು, ಸುಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೇರಿದ ಕೇಂದ್ರದ ನರೇಂದ್ರ ಮೋದಿ ಸರಕಾರವು ಕಾರ್ಪೋರೇಟ್ ಕಂಪೆನಿಗಳ ಹಿತ ಕಾಯುತ್ತಾ ದೇಶದ ಸಂಪತ್ತನ್ನೇ ಮಾರಲು ಹೊರಟಿದೆ.


    ಕಾರ್ಮಿಕರ ಸಂಘದ ಹೋರಾಟದ ಫಲವಾಗಿ ರೂಪುಗೊಂಡಿದ್ದ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ, ಕಾರ್ಪೋರೇಟ್ ಪರವಾದ 4 ಸಂಹಿತೆಗಳನ್ನು ಮಾಡುವ ಮೂಲಕ ಮತ್ತೆ ಕಾರ್ಮಿಕರನ್ನು ಜೀತದಾಳುಗಳನ್ನಾಗಿ ದುಡಿಸುವ ಹುನ್ನಾರ ಅಡಗಿದೆ.


    ಬೆಲೆಯೇರಿಕೆಯಿಂದ ಕಂಗೆಟ್ಟ ಕಾರ್ಮಿಕರು ಸಾಮಾಜಿಕ ಭದ್ರತೆಯಿಲ್ಲದೆ, ಕನಿಷ್ಟ ಕೂಲಿಯಿಲ್ಲದೆ ತೀರಾ ಶೋಚನೀಯ ಬದುಕು ಸಾಗಿಸುವಂತಾಗಿದೆ. ಅಂದು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ, ತ್ಯಾಗ ಬಲಿದಾನದ ಪರಂಪರೆ ಹೊಂದಿದ ಕಾರ್ಮಿಕ ವರ್ಗ ಇಂದು ಮತ್ತೆ ದೇಶದ ರಕ್ಷಣೆಗಾಗಿ ಸಂಘಟಿತ ಹೋರಾಟ ನಡೆಸುವ ಮೂಲಕ ಜನತೆಯ ಬದುಕನ್ನು ಉಳಿಸಬೇಕಾಗಿದೆ ಎಂದು ಹೇಳಿದರು.


    ಪ್ರಾಸ್ತಾವಿಕ ಮಾತುಗಳನ್ನಾಡಿದ ಕೇಂದ್ರ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಚ್.ವಿ.ರಾವ್ ಮಾತನಾಡಿ ‘ಕಾರ್ಮಿಕರ ಬೇಡಿಕೆಗಳ ಬಗ್ಗೆ ಬೆಳಕು ಚೆಲ್ಲುತ್ತಾ, ಕೇಂದ್ರ ಸರಕಾರದ ಜನವಿರೋಧಿ ತೆರಿಗೆ ನೀತಿ ಹಾಗೂ GSTಯಂತಹ ಕ್ರಮಗಳಿಂದಾಗಿ ಜೀವನಾವಶ್ಯಕ ವಸ್ತುಗಳ ಬೆಲೆಗಳು ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿದೆ.ಮತ್ತೊಂದು ಕಡೆ ದುಡಿಮೆಗೆ ತಕ್ಕ ಪ್ರತಿಫಲವಿಲ್ಲದೆ ಕಾರ್ಮಿಕರು ತೀರಾ ಸಂಕಷ್ಟದಲ್ಲಿದ್ದಾರೆ’ ಎಂದು ಹೇಳಿದರು.

    ಬ್ಯಾಂಕ್ ನೌಕರರ ಸಂಘಟನೆಯ ರಾಜ್ಯ ನಾಯಕರಾದ ವಿನ್ಸೆಂಟ್ ಡಿಸೋಜರವರು ಮಾತನಾಡಿ, ಬ್ಯಾಂಕ್ ವಿಲೀನೀಕರಣದ ಹೆಸರಿನಲ್ಲಿ ಲಾಭದಲ್ಲಿದ್ದ ಅನೇಕ ಬ್ಯಾಂಕುಗಳನ್ನು ಇಲ್ಲವಾಗಿಸಿ, ಇರುವ ಉದ್ಯೋಗಗಳನ್ನು ನಷ್ಟಗೊಳಿಸುವ ಮೂಲಕ ದೇಶದ ಆರ್ಥಿಕತೆಯನ್ನೇ ಸರ್ವನಾಶ ಮಾಡಿದ ಕೇಂದ್ರ ಸರಕಾರದ ವಿರುದ್ಧ ಬ್ಯಾಂಕ್ ನೌಕರರು ಮಾತ್ರವಲ್ಲದೆ ಇಡೀ ದೇಶದ ಜನತೆ ಒಂದಾಗಬೇಕಾಗಿದೆ ಎಂದು ಹೇಳಿದರು.


    AITUC ಜಿಲ್ಲಾ ನಾಯಕರಾದ ಸೀತಾರಾಮ ಬೇರಿಂಜರವರು ಮಾತನಾಡುತ್ತಾ, ಕೋಟ್ಯಾಂತರ ಸಂಖ್ಯೆಯಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯಿಲ್ಲ.

    ಪ್ರಸ್ತುತ ಸಂದರ್ಭದಲ್ಲಿ ದುಡಿಯುವ ಕಾರ್ಮಿಕರಿಗೆ ಮಾಸಿಕ ಕನಿಷ್ಠ ಕೂಲಿ ರೂ.24,000 ಸಿಗಬೇಕೆಂದು ಒತ್ತಾಯಿಸಿದರೆ ಕೇಂದ್ರ ಸರಕಾರವು ಕೇವಲ ದಿನಕ್ಕೆ ರೂ. 175/- ಕೂಲಿ ನಿಗದಿ ಪಡಿಸಿ ಕಾರ್ಮಿಕರನ್ನು ಅಪಹಾಸ್ಯ ಮಾಡಿದೆ ಎಂದು ಆಕ್ರೋಶ ಭರಿತರಾಗಿ ಹೇಳಿದರು.

    ಸಭೆಯನ್ನುದ್ದೇಶಿಸಿ, INTUC ನಾಯಕರಾದ ಬೊಂಡಾಲ ಚಿತ್ತರಂಜನ್ ಶೆಟ್ಟಿ, AICCTU ನಾಯಕರಾದ ಮೋಹನ್, ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ರಾಜ್ಯಾಧ್ಯಕ್ಷರಾದ ರಾಘವ ಕೆ,ವಿಮಾ ನೌಕರರ ಸಂಘಟನೆಯ ಮುಖಂಡರಾದ ಅಲ್ಬನ್ ಮಸ್ಕರೇನಸ್,CITU ಜಿಲ್ಲಾಧ್ಯಕ್ಷರಾದ ಜೆ.ಬಾಲಕೃಷ್ಣ ಶೆಟ್ಟಿ,ಬ್ಯಾಂಕ್ ನೌಕರರ ಸಂಘಟನೆಯ ನಾಯಕರಾದ ಪುರುಷೋತ್ತಮ ಪೂಜಾರಿಯವರು ಮಾತನಾಡಿ, ‘ಕೇಂದ್ರ ಸರಕಾರವು ಪ್ರತಿಯೊಂದು ಕ್ಷೇತ್ರದಲ್ಲಿ ಮಾಡಿದ ಅನಾಹುತಗಳನ್ನು ಗುರುತಿಸಿ,ಅದರ ವಿರುದ್ದ ಕಾರ್ಮಿಕ ವರ್ಗದ ಪ್ರಬಲ ಚಳುವಳಿ ಬೆಳೆಯಬೇಕೆಂದು ಕಾರ್ಮಿಕರಿಗೆ ಕರೆ ನೀಡಿದರು.

    ಪ್ರತಿಭಟನೆಯಲ್ಲಿ CITU ನಾಯಕರಾದ ಯೋಗೀಶ್ ಜಪ್ಪಿನಮೊಗರು,ವಸಂತ ಆಚಾರಿ,ಪದ್ಮಾವತಿ ಶೆಟ್ಟಿ, ರಮಣಿ ಮೂಡಬಿದ್ರೆ, ನೋಣಯ್ಯ ಗೌಡ,ಶಿವ ಕುಮಾರ್,ಜಯಂತ ನಾಯಕ್, ಬಿ.ಕೆ.ಇಮ್ತಿಯಾಜ್, ಮಹಮ್ಮದ್ ಮುಸ್ತಫಾ,ಹರೀಶ್ ಪೂಜಾರಿ,ವಿಲ್ಲಿ ವಿಲ್ಸನ್, ಸಂತೋಷ್ ಆರ್.ಎಸ್,,ಬಿಜು ಅಗಸ್ಟಿನ್,ರವಿಚಂದ್ರ ಕೊಂಚಾಡಿ, ದಿನೇಶ್ ಶೆಟ್ಟಿ, ಜಯಂತಿ ಶೆಟ್ಟಿ, ಭಾರತಿ ಬೋಳಾರ,ರಾಧಾ ಮೂಡಬಿದ್ರೆ,

    ಗಿರಿಜಾ ಮೂಡಬಿದ್ರೆ,ಶಂಕರ ವಾಲ್ಪಾಡಿ, ವಸಂತಿ ಕುಪ್ಪೆಪದವು,AITUC ನಾಯಕರಾದ ಕರುಣಾಕರ್, ಸುರೇಶ್ ಕುಮಾರ್, ವಿ.ಕುಕ್ಯಾನ್, ಪುಷ್ಪಾರಾಜ್, ಜಗತ್ಪಾಲ್,ಸುಲೋಚನಾ, INTUC ನಾಯಕರಾದ ಮನೋಹರ್ ಶೆಟ್ಟಿ,ಹುಸ್ಸೇನ್, ರಮಾನಾಥ್, AICCTU ನಾಯಕರಾದ ಸತೀಶ್, ಭರತ್,ಬ್ಯಾಂಕ್ ನೌಕರರ ಸಂಘಟನೆಯ ನಾಯಕರಾದ ಫಣೀಂದ್ರ,ಸುರೇಶ್ ಹೆಗ್ಡೆ, ಲೋಕೇಶ್,

    ವಿಮಾ ನೌಕರರ ಸಂಘಟನೆಯ ಮುಖಂಡರಾದ ಬಿ.ಎನ್.ದೇವಾಡಿಗ, ರಾಘವೇಂದ್ರ ರಾವ್,ವಸಂತ ಕುಮಾರ್,ರೈತ ನಾಯಕರಾದ ಕೆ.ಯಾದವ ಶೆಟ್ಟಿ, ಯುವಜನ ನಾಯಕರಾದ ಮುನೀರ್ ಕಾಟಿಪಳ್ಳ,ಸಂತೋಷ್ ಬಜಾಲ್,ನವೀನ್ ಕೊಂಚಾಡಿ, ರಫೀಕ್ ಹರೇಕಳ,ಮನೋಜ್ ವಾಮಂಜೂರು ಮುಂತಾದವರು ಉಪಸ್ಥಿತರಿದ್ದರು.

     

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending