DAKSHINA KANNADA
ಮಂಗಳೂರು ಮೂಲದ ದಂತವೈದ್ಯೆ ಪುಣೆಯ ರಸ್ತೆ ಅಪಘಾತದಲ್ಲಿ ನಿಧನ
ಮಂಗಳೂರು: ಮಂಗಳೂರು ಮೂಲದ ದಂತವೈದ್ಯೆ ಪುಣೆಯ ಪಿಂಪ್ರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೂಲತಃ ಮಂಗಳೂರಿನ ವೆಲೆನ್ಸಿಯ ನಿವಾಸಿ ದಂತ ವೈದ್ಯೆಯಾಗಿದ್ದ 27 ವರ್ಷದ ಜಿಶಾ ಜೋನ್ ಮೃತ ದುರ್ದೈವಿ.
ಇವರು ಸ್ಕೂಟರ್ನಲ್ಲಿ ಮನೆಗೆ ಹಿಂತಿರುಗುವ ವೇಳೆ ಟ್ರಕ್ ಬಂದು ಇವರ ಸ್ಕೂಟರ್ಗೆ ಢಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹಿನ್ನೆಲೆ ಇವರು ಕೊನೆಯುಸಿರೆಳೆದಿದ್ದಾರೆ.
ಜಿಶಾ ಅವರ ಪತಿ ಪುಣೆಯಲ್ಲಿ ಉದ್ಯಮಿಯಾಗಿದ್ದಾರೆ. ಮೃತ ಜಿಶಾ ಅವರು ಪತಿ, ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
DAKSHINA KANNADA
ಕಟಪಾಡಿಯಲ್ಲಿ ವಾಹನಗಳ ಸರಣಿ ಅಪಘಾತ; ವಾಹನಗಳು ಜಖಂ
ಕಟಪಾಡಿ: ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್ನಲ್ಲಿ ಅ.17 ರ ಗುರುವಾರ ಸರಣಿ ಅಪಘಾತ ಸಂಭವಿಸಿದೆ.
ತಾಂತ್ರಿಕ ತೊಂದರೆಯಿಂದ ಟ್ಯಾಂಕ್ವೊಂದು ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಪಘಾತದ ಪರಿಣಾಮ ಕಟಪಾಡಿ ಜಂಕ್ಷನ್ನ ಸಿಸಿ ಕ್ಯಾಮರಾ ಸಹಿತ ವಾಹನಗಳು ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಾಹನಗಳು ಉಡುಪಿಯತ್ತ ತೆರಳುತ್ತಿದ್ದವು ಎಂದು ತಿಳಿದು ಬಂದಿದೆ. ಪವಾಡ ಸದೃಶವಾಗಿ ಕಾರಿನಲ್ಲಿದ್ದರೂ, ದ್ವಿಚಕ್ರ ವಾಹನ ಸವಾರ ಅಪಾಯದಿಂದ ಪಾರಾಗಿದ್ದಾರೆ. ಕಾರು ಜಖಂಗೊಂಡಿದ್ದು, ಟ್ಯಾಂಕರ್ ಸುಮಾರು ದೂರ ಚಲಿಸಿ ಮತ್ತೆ ನಿಂತಿದೆ.
ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.
BELTHANGADY
ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್
ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್ ಆಗಿರುವ ಜುಮಾರ್ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.
ಬೈಕ್ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.
ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.
ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
ವಿಧಾನ ಪರಿಷತ್ ಉಪ ಚುನಾವಣೆ: ದ.ಕ. ಜಿಲ್ಲಾದ್ಯಂತ ಮದ್ಯ ನಿಷೇಧ
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ ಅ.24ರಂದು ಬೆಳಗ್ಗೆ 6ರಿಂದ ಸಂಜೆ 6 ರವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
- FILM6 days ago
ಮಾಲ್ಡೀವ್ಸ್ ದ್ವೀಪದಲ್ಲಿ ಹನಿಮೂನ್..! ಜಾಲಿ ಮೂಡ್ನಲ್ಲಿ ತರುಣ್ ಸುಧೀರ್ ದಂಪತಿ
- LATEST NEWS5 days ago
‘ಸೆಕ್ಸ್’ ಗೆ ಅಡ್ಡಿಯಾದ ಇಬ್ಬರು ಮಕ್ಕಳನ್ನೇ ಹತ್ಯೆ ಮಾಡಿದ ಪಾಪಿ ತಾಯಿ.!
- FILM7 days ago
ಮಗುವಿನ ಮುಖ ರಿವೀಲ್ ಮಾಡಿದ ಕವಿತಾ-ಚಂದನ್ ದಂಪತಿ
- BIG BOSS5 days ago
ಯಾರೂ ಊಹಿಸದ ವ್ಯಕ್ತಿಗೆ ಈ ವಾರ ಕಿಚ್ಚನ ಚಪ್ಪಾಳೆ, ಬಿಗ್ಬಾಸ್ ಮನೆಯಲ್ಲಿ ಇದೇ ಮೊದಲು