DAKSHINA KANNADA
ಮಂಗಳೂರು ವಿವಿಯಲ್ಲಿ ಯಾವುದೇ ಹಗರಣ ನಡೆದಿಲ್ಲ: ಕುಲಪತಿ ಪ್ರೊ.ಯಡಪಡಿತ್ತಾಯ ಸ್ಪಷ್ಟನೆ
ಮಂಗಳೂರು: ಮುಂದಿನ ವರ್ಷದಿಂದ ಡಿಜಿಟಲ್ ವೌಲ್ಯಮಾಪನದ ಅನಿವಾರ್ಯತೆ ಇದೆ. ಈ ಬಗ್ಗೆ ಇ ಟೆಂಡರ್ ಪ್ರಕ್ರಿಯೆ ನಡೆದಿದೆ. ಸಿಂಡಿಕೇಟ್ ಅನುಮತಿ ಪಡೆದು ಶೀಘ್ರವೇ ಕ್ರಮ ವಹಿಸಲಾಗುವುದು.
ಈ ಬಾರಿ ಕೋವಿಡ್ ಲಾಕ್ಡೌನ್ ಒತ್ತಡದ ನಡುವೆಯೂ ಪರೀಕ್ಷೆ ನಡೆಸಲಾದ ಕಾರಣ ಕೆಲವೊಂದು ಕಾಲೇಜುಗಳಲ್ಲಿ ಇಂಟರ್ನಲ್ ಪೇಪರ್ ಕೋಡ್ ಲಿಂಕ್ ಮಾಡುವಾಗ ಆಗಿರುವ ಸಮಸ್ಯೆಯಿಂದ ತೊಂದರೆ ಹಾಗೂ ವಿಳಂಬ ಆಗಿರುವುದು ನಿಜ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಸುಬ್ರಹ್ಮಣ್ಯ ಯಡಪಡಿತ್ತಾಯ ಹೇಳಿದರು.
ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು ಈ ಕುರಿತಂತೆ ಸಮಸ್ಯೆ ಆಗಿರುವ 38 ಕಾಲೇಜುಗಳ ಪ್ರಾಂಶುಪಾಲರಿಂದ ದಾಖಲೆಗಳನ್ನು ಪಡೆದುಕೊಂಡು ಸಮಸ್ಯೆ ಬಗೆಹರಿಸಲು ಪ್ರಯತ್ನಿಸಲಾಗಿದೆ ಎಂದರು.
ಪರೀಕ್ಷಾಂಗ ವಿಭಾಗಕ್ಕೆ ಪ್ರತ್ಯೇಕ ವೆಬ್ಸೈಟ್ ಮಂಗಳೂರು ವಿವಿ ವ್ಯಾಪ್ತಿಯ ಕಾಲೇಜುಗಳ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ವೆಬ್ಸೈಟ್ ಮಾಡಲು ಸಿಂಡಿಕೇಟ್ ನಿಂದ ಅನುಮತಿ ದೊರಕಿದೆ.
ಮುಂದಿನ ದಿನಗಳಲ್ಲಿ ಈಗಿರುವ ಸಮಸ್ಯೆಗಳು ಬಗೆಹರಿಯಲಿವೆ ಎಂದು ಹೇಳಿದರು.
ಕರಾವಳಿ ಜಿಲ್ಲೆಯ ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸ್ಕಾರ್ಫ್ ಹಾಗೂ ಕೇಸರಿ ಶಾಲು ವಿವಾದವನ್ನು ಸಂಬಂಧಪಟ್ಟ ವಿಚಾರಕ್ಕೆ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಇವರು ಇಂತಹ ಭಾವನಾತ್ಮಕ ವಿಚಾರಗಳಿಂದ ಕಾಲೇಜುಗಳಲ್ಲಿ ಕಲಿಕಾ ವಾತಾವರಣ ಕೆಡದಂತೆ ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಸಮಿತಿಯೊಂದನ್ನು ರಚಿಸಲಾಗುವುದು.
ಕಾಲೇಜು ಆಡಳಿತ ಮಂಡಳಿಯೇ ಇತ್ಯರ್ಥ ಪಡಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಯಡಪಡಿತ್ತಾಯ ತಿಳಿಸಿದ್ದಾರೆ.
ಸಿಂಡಿಕೇಟ್ ಸದಸ್ಯರು, ನಗರದ ಕೆಲ ಪ್ರತಿಷ್ಠಿತ ಕಾಲೇಜುಗಳ ಪ್ರಾಂಶುಪಾಲರನ್ನು ಒಳಗೊಂಡ ಸಮಿತಿಯ ಸಲಹೆ ಸೂಚನೆಗಳನ್ನು ಆದರಿಸಿ ಕೆಲವೊಂದು ಮಾರ್ಗಸೂಚಿಗಳನ್ನು ರಚಿಸಿ ಅದನ್ನು ಸಿಂಡಿಕೇಟ್ ಸಭೆಯ ಒಪ್ಪಿಗೆ ಪಡೆದು ಎಲ್ಲಾ ಕಾಲೇಜುಗಳಿಗೆ ಕಳುಹಿಸಲಾಗುವುದು ಎಂದರು.
ಈ ಕುರಿತಂತೆ ಈ ಸಂದರ್ಭ ಕುಲಸಚಿವರುಗಳಾದ ಪಿ.ಎಲ್. ಧರ್ಮ, ನಾರಾಯಣ, ಪ್ರೊ. ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
DAKSHINA KANNADA
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?
ಅಶ್ವಿನಿ ದೇವತೆಗಳು ಯಾರು.?
ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.
ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?
ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.
ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.
ಅಶ್ವಿನಿ ದೇವತೆಗಳ ಮಹತ್ವ:
ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.
ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.
DAKSHINA KANNADA
ವೋಟ್ ಮಾಡಿ, ಊಟ ಮಾಡಿ: ಹೋಟೆಲ್ಗಳಲ್ಲಿ ಸಿಗಲಿದೆ ಫ್ರೀ ದೋಸೆ, ಸಿಹಿ ತಿಂಡಿ!
ಬೆಂಗಳೂರು: ಮತದಾನದ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಬೆಂಗಳೂರಿನ ಕೆಲವು ಹೋಟೆಲ್ಗಳು ವಿಶಿಷ್ಟ ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತಿವೆ. ಕಳೆದ ವರ್ಷ ವಿಧಾನ ಚುನಾವಣೆಯಲ್ಲಿ ಮಾಡಿದಂತೆಯೇ ಈ ಬಾರಿಯೂ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬಂದವರಿಗೆ ಉಚಿತ ಆಹಾರ, ರಿಯಾಯಿತಿ ದರದಲ್ಲಿ ತಿಂಡಿ ನೀಡುವ ಬಗ್ಗೆ ಘೋಷಣೆ ಮಾಡಿವೆ.
ವೋಟ್ ಮಾಡಿ, ಊಟ ಮಾಡಿ:
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ ವೋಟ್ ಮಾಡಿ, ಊಟ ಮಾಡಿ’ ಅಭಿಯಾನದಡಿ ಮತದಾನದ ದಿನದಂದು ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡುವುದಾಗಿ ಘೋಷಿಸಿದೆ. 2018 ರ ವಿಧಾನಸಭಾ ಚುನಾವಣೆ ವೇಳೆಯೂ ಹೋಟೆಲ್ ಇಂತಹ ಕೊಡುಗೆ ನೀಡಿತ್ತು.
ಪ್ರಜಾಪ್ರಭುತ್ವದಲ್ಲಿ ಮತದಾನ ಮಾಡುವುದು ನಮ್ಮ ಹಕ್ಕು. ಈ ಕುರಿತು ಜಾಗೃತಿ ಮೂಡಿಸುವ ನಮ್ಮ ನಿರಂತರ ಪ್ರಯತ್ನದ ಭಾಗವಾಗಿ ಕೆಲವು ಹೋಟೆಲ್ಗಳು ಕೆಲವು ತಿನಿಸುಗಳನ್ನು ರಿಯಾಯಿತಿ ದರದಲ್ಲಿ ಅಥವಾ ಉಚಿತವಾಗಿ ಮತದಾನದ ದಿನದಂದು ನೀಡುತ್ತವೆ. ಸಿಹಿತಿಂಡಿಗಳು ಮತ್ತು ಕೇಕ್ಗಳಂತಹ ಕೆಲವು ಆಹಾರ ಪದಾರ್ಥಗಳನ್ನು ಉಚಿತವಾಗಿ ನೀಡುತ್ತಿವೆ.
SawaariZimmedariKi ಅಭಿಯಾನದಡಿ ಶುಕ್ರವಾರ ಹಿರಿಯ ನಾಗರಿಕರು ಮತ್ತು ವಿಕಲಚೇತನ ಮತದಾರರಿಗೆ ಉಚಿತ ಆಟೋರಿಕ್ಷಾ ಮತ್ತು ಕ್ಯಾಬ್ ಸೇವೆ ದೊರೆಯಲಿದೆ.
ಈ ವಿಶೇಷ ಸೇವೆಯನ್ನು ಪಡೆಯಲು ಮತದಾರರು ‘VOTENOW’ ಕೋಡ್ ಅನ್ನು ಬಳಸಬಹುದು ಎಂದು Rapido ತಿಳಿಸಿದೆ.
ಬಿಡದಿ ಬಳಿಯ ಜನಪ್ರಿಯ ಅಮ್ಯೂಸ್ಮೆಂಟ್ ಪಾರ್ಕ್ ವಂಡರ್ಲಾ, ಮತದಾನದ ಗುರುತು ಪ್ರದರ್ಶಿಸುವವರಿಗೆ ಏಪ್ರಿಲ್ 26, 27 ಮತ್ತು 28 ರಂದು ಟಿಕೆಟ್ ಮೇಲೆ ಶೇಕಡಾ 15 ರಷ್ಟು ರಿಯಾಯಿತಿಯನ್ನು ಘೋಷಿಸಿದೆ.
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- FILM3 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು