Connect with us

MANGALORE

ಮಾಣಿ ಸತೀಶ್ ಆಚಾರ್ಯ ರಿಗೆ ವಾಗೀಶ್ವರೀ ಸಂಮಾನ..

Published

on

ಮಂಗಳೂರು : ಖ್ಯಾತ ಯಕ್ಷಗಾನ ಕಲಾವಿದ,ತಾಳಮದ್ದಳೆ ಅರ್ಥಧಾರಿ, ಕಲಾಗುರು,ಸಂಘಟಕ, ಸತೀಶ್ ಆಚಾರ್ಯ ಮಾಣಿ ಅವರಿಗೆ ವಾಗೀಶ್ವರೀ ಶತಮಾನೋತ್ಸವ ಸಂಮಾನ ಮಂಗಳೂರಿನ ಕುಡ್ತೇರಿ ಮಹಾಮಾಯಾ ದೇವಸ್ಥಾನದಲ್ಲಿ ನಡೆಯಿತು.

” ವಾಗೀಶ್ವರಿ ಕಾಲವರ್ಧಕ ಸಂಘ ಶತಮಾನೋತ್ಸವ ಆಚರಿಸುತ್ತಿದೆ ಅಂದರೆ ನಿಜವಾಗಿಯೂ ಅಪೂರ್ವ ಸಾಧನೆ. ಧನ ಸಂಗ್ರಹ ಮಾಡಬಹುದು, ಜನ ಸಂಗ್ರಹ ಕಷ್ಟ. ಆದರೆ ಶ್ರೀ ವಾಗೀಶ್ವರೀ
ಯಕ್ಷಗಾನ ಸಂಘದಲ್ಲಿ ನಿರಂತರ ವಾಗಿ 100 ವರ್ಷ ಗಳ ಅದೆಷ್ಟೋ ಕಲಾವಿದರು ಸೇವೆ ಸಲ್ಲಿಸಿ ಈ ಸಂಘವನ್ನು ಬೆಳೆಸಿದ್ದಕ್ಕೆ ಅವರೆಲ್ಲರೂ ವಂದನೀಯರು” ಎಂದು ತಮ್ಮ ಹೇಮಾ ಡಿಸ್ಟ್ರಿಬ್ಯೂಟರ್ಸ್ ನ ಮಾಲಕ ಅಶೋಕ್ ಕುಮಾರ್ ಹೆಗ್ಡೆ ಅವರು ಅಧ್ಯಕ್ಷೀಯ ಭಾಷಣದಲ್ಲಿ ಹೇಳಿದರು.

ಮುಂಡಪ್ಪ ಕೊಮ್ಮುಂಜೆ ಸಂಸ್ಮರಣೆ

ಕೀರ್ತಿಶೇಷ ಕೆ. ಮುಂಡಪ್ಪ ನವರ ಸಂಸ್ಮರಣೆಯನ್ನು ಸಂಘದ ಸದಸ್ಯರು, ಭಾಗವತರಾದ ಅಶೋಕ್ ಬೋಳೂರ್ ರವರು ಮಾಡಿದರು.
ಯಕ್ಷಗಾನದಲ್ಲಿ ಹಾಸ್ಯ ವೇಷಧಾರಿಯಾಗಿ, ಬಣ್ಣದ ವೇಷಧಾರಿಯಾಗಿ ಪ್ರಸಿದ್ಧಿ ಪಡೆದಿದ್ದವರು.
ಮುಂದೆ ಯಕ್ಷಗಾನದ ಪರಿಕರಗಳಾದ ಚೆಂಡೆ, ಮದ್ದಳೆ ತಯಾರಿಯ ಕಾರ್ಯಕ್ಕೆ ತೊಡಗಿಸಿಕೊಂಡರು.ಮಂಗಳೂರು ನಗರದ ಪರಿಸರದಲ್ಲಿ ಪರಿಕರಗಳ ತಯಾರಿಯಲ್ಲಿ ಹಲವು ಶಿಷ್ಯರನ್ನು ನೀಡಿದ ಕೀರ್ತಿ ಮುಂಡಪ್ಪಣ್ಣನವರಿಗೆ ಸಲ್ಲುತ್ತದೆ.
ನಮ್ಮ ಸಂಘದ ಜತೆ ನಿಕಟ ಸಂಬಂಧ ಹೊಂದಿದ್ದ ಮುಂಡಪ್ಪಣ್ಣ ನವರ ಆತ್ಮಕ್ಕೆ ಶಾಂತಿಯನ್ನು ಕೋರಿದರು.

ಮಾಣಿ ಸತೀಶ್ ಆಚಾರ್ಯ ರ ಅಭಿನಂದನೆಯನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷ ಸಿ. ಎಸ್. ಭಂಡಾರಿ ಯವರು ನಿರ್ವಹಿಸಿದರು. ” ಬಂಗಾರದ ಕುಸುರಿ ಕೆಲಸಕ್ಕೆ ಮಂಗಳೂರಿಗೆ ಬಂದು ಎಳವೆಯಲ್ಲಿಯೇ ಶೇಣಿ, ತೆಕ್ಕಟ್ಟೆ, ಪ್ರಭಾಕರ ಜೋಶಿ ಯವರ ಅರಥಗಾರಕೆಯನ್ನು ನೋಡಿ ಪ್ರೇರೇಪಣೆ ಗೊಂಡು, ಕೀರ್ತಿಶೇಷ ಎನ್.ಮಾಧವ ಆಚಾರ್ಯ ರ ಶಿಷ್ಯರಾಗಿ ಈಗ ಸಮರ್ಥ ತಾಳಮದ್ದಳೆ ಅರ್ಥಧಾರಿ ಯಾಗಿ, ದೇರಣ್ಣ ಅಮೀನ್ ಅವರಿಂದ ನಾಟ್ಯ ಕಲಿತು ವೇಷಧಾರಿಯಾಗಿ, ನಾಟ್ಯ- ಅರ್ಥಗಾರಿಕೆ ಯನ್ನು ಅದೆಷ್ಟೋ ಮಕ್ಕಳಿಗೆ ಕಲಿಸಿ ಯಕ್ಷಗುರು ಎಂದೆನಿಸಿ, ಹಲವಾರು ಸಂಘಗಳಿಂದ ಹಲವಾರು ಬಿರುದು ಸನ್ಮಾನ ಗಳನ್ನು ಪಡೆದು ಸಮರ್ಥ ಕಲಾವಿದ ಎಂದೆನಿಸಿ, ಮುಂದಿನ ಯಕ್ಷಗಾನ ಪೀಳಿಗೆಗೂ ಕೊಡುಗೆ ಯನ್ನು ನೀಡಿದವರು ಸತೀಶ್ ಆಚಾರ್ಯ ಮಾಣಿ ” ಎಂದರು.ಪುರಂದರ ರವರು ಸಂಮಾನ ಪತ್ರ ವಾಚಿಸಿದರು.

ಶ್ರೀ ವಾಗೀಶ್ವರೀ ಕಲಾವರ್ಧಕ ಸಂಘದ 12 ನೆಯ ಸರಣಿಯ ಸನ್ಮಾನಕ್ಕೆ ಉತ್ತರಿಸಿದ ಶ್ರೀ ಸತೀಶ್ ಆಚಾರ್ಯರು “ಇಂದು ನಾನು ಈ ಮಟ್ಟದ ಕಲಾವಿದ ನಾಗಿ ಬೆಳೆಯಲು ವಾಗೀಶ್ವರಿ ಸಂಘವೇ ಕಾರಣ ಮತ್ತು ಈ ಸಂಘದಲ್ಲಿ ನನ್ನ ಗುರು ಮಾಧವ ಆಚಾರ್ಯ ರ ಮಾರ್ಗದರ್ಶನ, ಬಿ. ಟಿ. ಕುಲಾಲ್, ಕದ್ರಿ ನವನೀತ ಶೆಟ್ಟಿ, ಪಿ.ವಿ.ಪರಮೇಶ್ ಮೊದಲಾದ ಹವ್ಯಾಸಿ ಕಲಾವಿದರೊಂದಿಗಿನ ತನ್ನ ಸಾಹಚರ್ಯವನ್ನು ನೆನಪಿಸಿಕೊಂಡರು. ಸುದೀರ್ಘ ಕಾಲ ತಾಳಮದ್ದಳೆ ಮತ್ತು ಯಕ್ಷಗಾನದಲ್ಲಿ ತಾನು ಸೇವೆಯನ್ನು ಸಲ್ಲಿಸಿದ್ದೇನೆ.
ಇಂದಿನ ಸಮ್ಮಾನ ಅವಿಸ್ಮರಣೀಯ ಎಂದರು.

ಮುಖ್ಯ ಅತಿಥಿ ಜಗನ್ನಾಥ ಭಂಡಾರಿ ಯವರು ಶುಭ ಹಾರೈಸಿದರು. ಪ್ರಭಾಕರ್ ಕಾಮತರು ಭಾಗವಹಿಸಿದ್ದರು. ಶ್ರೀ ಪ್ರಭಾಕರ ಕಾಮತರು ಈ ಯಕ್ಷಗಾನಕ ಸಂಘದ ಶತ ಮಾನೋತ್ಸವ ಆಚರಿಸಲು ಈವರೆಗೆ ಪ್ರತಿ ವಾರ ಭಾಗವಹಿಸಿದ ಕಲಾವಿದರ ಮತ್ತು ಪ್ರೇಕ್ಷಕರ ಕೊಡುಗೆ ಅಪಾರ ಎಂದರು .ನಾಗೇಶ ಪ್ರಭು, ಶಿವಪ್ರಸಾದ್ ಪ್ರಭು ,ಸಂಘದ ಅಧ್ಯಕ್ಷ ಶ್ರೀನಾಥ್ ಪ್ರಭು ,ಪ್ರಭಾಕರ ಕಾಮತ್ ಉಪಸ್ಥಿತರಿದ್ದರು.
ಸಿ .ಎಸ್. ಭಂಡಾರಿ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಸಂಘದ ಕಲಾವಿದರಿಂದ “ಸೀತಾನ್ವೇಷಣೆ” ತಾಳಮದ್ದಳೆ ಜರಗಿತು.

DAKSHINA KANNADA

ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!

Published

on

ಬಂಟ್ವಾಳ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳದ ನಾವೂರು ಎಂಬಲ್ಲಿ ಭಾನುವಾರ(ಎ.5) ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಮತ್ತು ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 )ಮೃತಪಟ್ಟ ಬಾಲಕಿಯರು.

nethravathi river

ಮುಂದೆ ಓದಿ..; ಬರ್ಬರ ಹತ್ಯೆಯಾದ ಬ್ಯೂಟಿ ಕ್ವೀನ್.!! ಮುಳುವಾಯಿತಾ ಇನ್ಸ್ಟಾಗ್ರಾಮ್ ಪೋಸ್ಟ್‌..! ಸಿಸಿಟಿವಿಯಲ್ಲಿ ಸೆರೆಯಾದ ಭಯಾನಕ ದೃಶ್ಯ

ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿಸಿದ್ದರು. ನಿನ್ನೆ  ನಾವೂರು ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದರು. ಸಂಜೆ ವೇಳೆ ಮನೆಯವರ ಜತೆಗೆ ನಾವೂರಿನ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮನೆ ಮಂದಿ ಇರುವಾಗಲೇ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ಏಕಾ ಏಕಿ ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

LATEST NEWS

Trending