Connect with us

LATEST NEWS

ಸೆಪ್ಟೆಂಬರ್ 2ನೇ ವಾರದಲ್ಲಿ ಆಫ್‌ಲೈನ್ ತರಗತಿ ಶುರುಮಾಡಲು ಮಣಿಪಾಲ‌ ವಿಶ್ವವಿದ್ಯಾಲಯ ನಿರ್ಧಾರ

Published

on

ಉಡುಪಿ :  ಸೆಪ್ಟೆಂಬರ್ ಎರಡನೇ ವಾರದಿಂದ ಆಫ್‌ಲೈನ್ ತರಗತಿ ಶುರುಮಾಡಲು ಮಣಿಪಾಲ‌ ವಿಶ್ವವಿದ್ಯಾಲಯ ಮಹತ್ವದ ‌ನಿರ್ಧಾರ ತೆಗೆದುಕೊಂಡಿದೆ.


ವಿದೇಶದಿಂದ ಬರಲಾಗದ ವಿದ್ಯಾರ್ಥಿಗಳಿಗೆ ಆಫ್ ಲೈನ್ ನಲ್ಲಿ ತರಗತಿ ‌ನಡೆಯಲಿದೆ. ಇನ್ನುಳಿದ ವಿದ್ಯಾರ್ಥಿಗಳಿಗೆ ಆಫ್ ಲೈನ್ ತರಗತಿ ಸೆಪ್ಟೆಂಬರ್ ಎರಡನೇ ವಾರದಲ್ಲಿ ಶುರುವಾಗಲಿದೆ.

ಈಗಾಗಲೇ ಕೋವಿಡ್ ಆತಂಕದಿಂದ ಹೊರಬಂದಿರುವ ಮಣಿಪಾಲ‌ ವಿಶ್ವವಿದ್ಯಾಲಯ ಇದೀಗ ಕೋವಿಡ್ ನಿಯಮದಡಿ ತರಗತಿ ಆರಂಭಿಸುತ್ತಿದೆ.‌

ಕೇರಳ ಮಹಾರಾಷ್ಟ್ರ ಸೇರಿದಂತೆ ಎಲ್ಲಾ ರಾಜ್ಯ ಹಾಗೂ ಅಂತರಾಜ್ಯ ವಿದ್ಯಾರ್ಥಿಗಳಿಗೆ 72 ಗಂಟೆಗಳ ಆರ್ ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ನೊಂದಿಗೆ ಕಾಲೇಜಿಗೆ ಆಗಮಿಸಬೇಕು. ವ್ಯಾಕ್ಸಿನ್ ಪಡೆಯದಿದ್ದಲ್ಲಿ ಕಾಲೇಜಿನಲ್ಲಿ ವ್ಯಾಕ್ಸಿನ್ ಪಡೆಯಬೇಕು.

ಒಂದು ವಾರ ಕ್ವಾರಂಟೈನ್ ಆದ ಬಳಿಕವೇ ತರಗತಿಗೆ ಎಂಟ್ರಿ. ಈ‌ ಕಡ್ಡಾಯ ನಿಯಮ ಜಾರಿ ಮಾಡಿದೆ ಎಂದು ಮಣಿಪಾಲ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ನಾರಾಯಣ ಸಭಾಹಿತ್ ಮಾಹಿತಿ ನೀಡಿದ್ದಾರೆ.‌

ಇನ್ನು ಸುಮಾರು 50ರಾಷ್ಟ್ರಗಳ 20ಸಾವಿರ ವಿದ್ಯಾರ್ಥಿಗಳಿರುವ ಮಣಿಪಾಲ‌‌ ವಿಶ್ವವಿದ್ಯಾಲಯದಲ್ಲಿ ಕೋವಿಡ್ ಎರಡನೆ‌ ಅಲೆ ಆರಂಭ ಅಂದ್ರೆ ಫೆಬ್ರವರಿ‌ ಮಾರ್ಚ್ ತಿಂಗಳಲ್ಲಿ ಸಾವಿರಕ್ಕೂ ಅಧಿಕ ಪ್ರಕರಣ ಬೆಳಕಿಗೆ ಬಂದಿತ್ತು. ಇದು ಎರಡನೇ ಅಲೆ ಆತಂಕ ಅಂತಲೂ‌ ಹೇಳಲಾಗಿತ್ತು.‌ ಎಂಐಟಿ ಕ್ಯಾಂಪಸ್ ನಲ್ಲಿ ಕಂಡುಬಂದಿರುವ ಪ್ರಕರಣ ಜಿಲ್ಲೆಯಲ್ಲೇ ಅತೀ ಹೆಚ್ಚಿನ ಪ್ರಕರಣವಾಗಿತ್ತು.

ಆ ಬಳಿಕ ಎಂಐಟಿ ‌ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ‌ಕೋವಿಡ್ ಟೆಸ್ಟ್ ಮಾಡಿಸಿ ಕ್ವಾರಂಟೈನ್ ಮಾಡಲಾಗಿತ್ತು ಅಷ್ಟೇ ಅಲ್ಲದೆ ಕ್ಯಾಂಪಸ್ ಹಾಗೂ 23ಹಾಸ್ಟೆಲ್ ಗಳನ್ನ ಕಂಟೈನ್ ಮೆಂಟ್ ಝೋನ್ ಅಡಿಯಲ್ಲಿ‌ ಸೀಲ್ ಡೌನ್ ಮಾಡಲಾಗಿತ್ತು ಈ ಮೂಲಕ ಎರಡನೇ ವಾರದಲ್ಲಿ ಸಾವಿರಕ್ಕೂ ಅಧಿಕ ಪ್ರಕರಣ ಝೀರೋ ತಲುಪಿತ್ತು.

ಇದೀಗ ಐದು ತಿಂಗಳ ಬಳಿಕ ಮತ್ತೆ ತರಗತಿಗಳು ಶುರುವಾಗುತ್ತಿವೆ.
ಪ್ರಮುಖವಾಗಿ ಖಾಸಗಿ ವಲಯದ ವಿಶ್ವವಿದ್ಯಾಲಯಗಳಲ್ಲಿ, ಎರಡನೇ ರಾಂಕ್ ಪಡೆದಿರುವ ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಕೋವಿಡ್ ಗೆ ತುತ್ತಾಗಿ ಆಘಾತ ಅನುಭವಿಸಿರುವ ವಿದ್ಯಾರ್ಥಿಗಳ, ಶಿಕ್ಷಣದ ಜವಾಬ್ದಾರಿ ಹೊತ್ತಿದೆ. ಮಾಹೆ ವಿವಿಯ ಈ ನಡೆ ದೇಶಕ್ಕೆ ಮಾದರಿ ಎನಿಸಿದೆ.
ಹೌದು, ಪ್ರಪಂಚದ 50ಕ್ಕೂ ಅಧಿಕ ರಾಷ್ಟ್ರಗಳ ವಿದ್ಯಾರ್ಥಿಗಳು ಕಲಿಯುತ್ತಿರುವ ಮಣಿಪಾಲದ ಮಾಹೆ ವಿಶ್ವವಿದ್ಯಾಲಯ ಕೋವಿಡ್ ವಿರುದ್ಧದ ಸಮರದಲ್ಲಿ ಕೈಜೋಡಿಸಿದೆ. ಜಿಲ್ಲೆಯಲ್ಲಿ ಕೋವಿಡ್ ಮಿತಿಮೀರಿದಾಗ, ತನ್ನ ಸ್ವಾಮ್ಯದ ಒಂದು ಸಂಪೂರ್ಣ ಆಸ್ಪತ್ರೆಯನ್ನು ಉಚಿತ ಚಿಕಿತ್ಸೆಗಾಗಿ ಬಿಟ್ಟುಕೊಟ್ಟು, ಮಾದರಿಯಾಗಿದ್ದ ಮಣಿಪಾಲ ಸಂಸ್ಥೆಯವರು ಈಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ.

ಖಾಸಗಿ ವಲಯದ ವಿಶ್ವವಿದ್ಯಾಲಯಗಳ ಪಟ್ಟಿಯಲ್ಲಿ ಮಾಹೆ ವಿಶ್ವವಿದ್ಯಾಲಯಕ್ಕೆ ಎರಡನೇ ರ್ಯಾಂಕ್ ಇದೆ. ಸಹಜವಾಗಿಯೇ ಈ ವಿಶ್ವವಿದ್ಯಾಲಯದ ಕಲಿಕೆಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಾಗುತ್ತದೆ. ದುಬಾರಿ ಶಿಕ್ಷಣ ವ್ಯವಸ್ಥೆಯಲ್ಲಿ, ಒಂದಿಷ್ಟು ಸುಧಾರಣೆ ಮಾಡಲು ಮುಂದಾಗಿರುವ ಮಾಹೆ ಯು, ಕೋವಿಡ್ ಸಂಕಷ್ಟದಲ್ಲಿ ತನ್ನ ವಿದ್ಯಾರ್ಥಿಗಳ ನೆರವಿಗೆ ಮುಂದಾಗಿದೆ.

ಕೊರೋನಾಗೆ ತುತ್ತಾಗಿ ಅನೇಕ ಸಾವು ನೋವು ಸಂಭವಿಸಿದೆ. ತಮ್ಮ ವಿವಿಯಲ್ಲಿ ಕರೆಯುತ್ತಿರುವ ವಿದ್ಯಾರ್ಥಿಗಳ ಪೋಷಕರು ಕರೋನಾ ದಿಂದ ಮೃತರಾಗಿದ್ದಾರೆ, ಅಂತಹಾ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುವುದಾಗಿ ಮಾಹೆಯ ಸಹಕುಲಾಧಿಪತಿ ಎಚ್ ಎಸ್ ಬಲ್ಲಾಳ್ ಘೋಷಿಸಿದ್ದಾರೆ.

ಇನ್ನು ಈ ನೆರವಿಗೆ ಮಣಿಪಾಲ, ಮಂಗಳೂರು, ಬೆಂಗಳೂರು ಮತ್ತು ಜಮ್ಶೆಡ್ಪುರ ದ ವಿದ್ಯಾರ್ಥಿಗಳನ್ನು ಪರಿಗಣಿಸಲಾಗುತ್ತಿದೆ. ಸುಮಾರು 40 ಮಂದಿ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಇದರಿಂದ ಅನುಕೂಲವಾಗಲಿದೆ.

ಮಾಹೆ ವಿಶ್ವವಿದ್ಯಾಲಯದ ಈ ನಡೆ, ಖಾಸಗಿ ಶೈಕ್ಷಣಿಕ ವಲಯಕ್ಕೆ ಮಾದರಿ ಎನಿಸಿದೆ. ಈ ನಡುವೆ ಸೆಪ್ಟಂಬರ್ 2ನೇ ವಾರದಲ್ಲಿ ವಿಶ್ವವಿದ್ಯಾಲಯದ ತರಗತಿಗಳು ಆರಂಭವಾಗಲಿದೆ. ಸುಮಾರು 20 ಸಾವಿರ ವಿದ್ಯಾರ್ಥಿಗಳು ಮಾಹೆ ವಿಶ್ವವಿದ್ಯಾಲಯದಲ್ಲಿ ಕಲಿಯುತ್ತಿದ್ದು, ವಿದ್ಯಾರ್ಥಿಗಳ ಉಚಿತ ವ್ಯಾಕ್ಸಿನೇಷನ್ ಗೂ ವ್ಯವಸ್ಥೆ ಮಾಡಲಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

‘ನಾಟು ನಾಟು’ ರೀತಿಯ ಸಾಂಗ್‌..! ಕುತೂಹಲ ಮೂಡಿಸಿದ ‘ವಾರ್ 2’

Published

on

2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್‌ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್‌ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್‌ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್‌ಟಿಆರ್ ಜೊತೆಯಾಗಿದ್ದಾರೆ.

ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್‌ ರಾಜ್ ಫಿಲಂಸ್‌ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್‌ಟಿಆರ್ ಅವರ ಆಸ್ಕರ್ ಅವಾರ್ಡ್‌ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್‌ಟಿಆರ್‌ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್‌ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.


ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್​ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್​ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.

Continue Reading

LATEST NEWS

ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

Published

on

ಉಡುಪಿ : ಪ್ರಧಾನಿ ಮೋದಿ ಚಿಕ್ಕಬಳ್ಳಾಪುರ ಬೆಂಗಳೂರು ಪ್ರವಾಸ ಮಾಡ್ತಿದ್ದಾರೆ. ಮೂರು ಬಾರಿ ಕಾರಣಾಂತರದಿಂದ ಉಡುಪಿಗೆ ಬರಲು ಸಾಧ್ಯವಾಗಿರಲಿಲ್ಲ. ಪ್ರಧಾನಮಂತ್ರಿ ಕಚೇರಿಯಿಂದ ಅನುಮತಿ ಪಡೆದು ಉಡುಪಿ ಬಂದಿದ್ದೇನೆ. ಕರಾವಳಿ ಜನರ ರಕ್ತದಲ್ಲಿ ಹಿಂದುತ್ವ ಇದೆ. ಮೋದಿಯ 10 ವರ್ಷದ ಆಡಳಿತವನ್ನು ಜಗತ್ತು ಕೊಂಡಾಡಿದೆ. ಎಲ್ಲಾ ಅಸಾಧ್ಯಗಳನ್ನು ಪ್ರಧಾನಿ ಮೋದಿ ಸಾಧ್ಯ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.


ಉಡುಪಿಯಲ್ಲಿ ನಡೆದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಡೀ ದೇಶದ ಜನರಲ್ಲಿ ವಿಶ್ವಾಸ -ಭರವಸೆ ಮೂಡಿಸಿದ್ದು ಮೋದಿ. ರಾಮಮಂದಿರ, ಆರ್ಟಿಕಲ್ 370 ರದ್ದು, ಅಭಿವೃದ್ಧಿ ಎಲ್ಲವೂ ಮೋದಿ ಕಾಲದಲ್ಲಿ ಆಗಿದೆ. ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತೆ. ನಾವು ರಕ್ಷಣೆ ಮಾಡ್ತೇವೆ ಎಂದು ಖರ್ಗೆ ಹೇಳ್ತಾರೆ. ಮೋದಿ ಮತ್ತೆ ಪ್ರಧಾನಿ ಆಗಬಾರದು ಅಂತ ಖರ್ಗೆ ಕರೆ ಕೊಡ್ತಾರೆ. ಕಾಂಗ್ರೆಸ್ಸಿಗರು ಅಂಬೇಡ್ಕರ್ ಅವರನ್ನು ಬದುಕಿದ್ದಾಗಲೇ ಕಗ್ಗೊ*ಲೆ ಮಾಡಿದ್ದಾರೆ. ಅಂಬೇಡ್ಕರ್ ರನ್ನು ಸೋಲಿಸಿದ್ದು ಕಾಂಗ್ರೆಸ್ ಪಕ್ಷ. ಬಾಬಾ ಸಾಹೇಬರ ಅಂತ್ಯ ಸಂಸ್ಕಾರಕ್ಕೂ ಅವಕಾಶ ಕೊಟ್ಟಿಲ್ಲ. ಅಂಬೇಡ್ಕರ್ ರ ಪಂಚ ತೀರ್ಥಕ್ಷೇತ್ರ ಅಭಿವೃದ್ಧಿ ಮಾಡಿದ್ದು ಮೋದಿ – ಬಿಜೆಪಿ ಸರಕಾರ ಎಂದರು.

ಇದನ್ನೂ ಓದಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Continue Reading

DAKSHINA KANNADA

ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!

Published

on

ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.

ಅಸ್ಥಿಪಂಜರ

ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.

Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್‌:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

LATEST NEWS

Trending