UDUPI
MLC ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಪ್ರಚಾರ ಸಭೆ
ಉಡುಪಿ: ಮುಂಬರುವ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು-ಉಡುಪಿಯ ವಿಧಾನಪರಿಷತ್ನ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಂಜುನಾಥ ಭಂಡಾರಿ ಹಿರಿಯಡ್ಕದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು.
ಈ ವೇಳೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಕೆಪಿಸಿಸಿ ವಕ್ತಾರು ಸೇರಿದಂತೆ ಹಲವು ಮುಖಂಡರು ಭಾಗಿಯಾಗಿದ್ದರು.
ಡಿ.10 ರಂದು ಮತದಾನ ನಡೆಯಲಿದೆ. ಡಿ.14ರಂದು ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 25 ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದೆ.
DAKSHINA KANNADA
ಮೇ 17 ರಂದು ‘ನಮ್ಮ ಕಂಬಳ ಪ್ರಶಸ್ತಿ 2024’ ಪ್ರದಾನ ಸಮಾರಂಭ
ಮಂಗಳೂರು : ತುಳುನಾಡಿನ ಜಾನಪದ ಕ್ರೀಡೆಯಾಗಿರುವ ಕಂಬಳದಲ್ಲಿ ಅನೇಕ ಸಾಧಕರು ವಿಶೇಷ ಸಾಧನೆಗಳನ್ನು ಮಾಡಿದ್ದಾರೆ. ಆದ್ರೆ, ವರ್ಷವಿಡಿ ನಡೆಯುವ ಕಂಬಳದಲ್ಲಿ ಈ ಸಾಧನೆಗಳು ಆಗೊಮ್ಮೆ ಈಗೊಮ್ಮೆ ಮಾತ್ರ ಚರ್ಚೆಯಾಗಿ ಮರೆತು ಹೋಗುತ್ತದೆ. ಹೀಗಾಗಿ ಅವಿಭಜಿತ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಲ್ಲಿ ಒಟ್ಟು ಸಾಧನೆ ಮಾಡಿದ ಕೋಣಗಳು, ಓಟಗಾರರು, ಕೋಣಗಳ ಯಜಮಾನರು ಹೀಗೆ ಹಲವು ವಿಭಾಗದಲ್ಲಿ ಸಹಕರಿಸಿದ ಎಲ್ಲರನ್ನೂ ಗೌರವಿಸಿ ಪ್ರಶಸ್ತಿ ನೀಡುವ ವಿನೂತನ ಕಾರ್ಯಕ್ರಮ ಮೇ 17 ರಂದು ನಡೆಯಲಿದೆ.
ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ನಮ್ಮ ಕುಡ್ಲ ವಾಹಿನಿಯ ನಮ್ಮ ಕುಡ್ಲ ನಿರ್ದೇಶಕ ಲೀಲಾಕ್ಷ ಕರ್ಕೇರ ಅವರು, ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಕಂಬಳದ ನೇರ ಪ್ರಸಾರದ ಮೂಲಕ ನಮ್ಮ ಕುಡ್ಲ ವಾಹಿನಿ ಜನಮೆಚ್ಚುಗೆ ಪಡೆದುಕೊಂಡಿದೆ. ಈ ಸುಸಂದರ್ಭದಲ್ಲಿ ಕಂಬಳ ಕ್ರೀಡೆಯನ್ನು ಪ್ರೋತ್ಸಾಹಿಸಲು ನಾವೂ ಕೂಡಾ ವಿನೂತನವಾಗಿ ಏನಾದ್ರೂ ಮಾಡಬೇಕು ಎಂದು ಈ ಪ್ರಶಸ್ತಿ ಸಮಾರಂಭ ಆಯೋಜಿಸಿದ್ದೇವೆ. ನಮ್ಮ ಕಂಬಳ ಟೀಮ್ ದುಬೈ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ಸಹಯೋಗದೊಂದಿಗೆ ಈ ಪ್ರಶಸ್ತಿ ಸಮಾರಂಭವನ್ನು ಹಮ್ಮಿಕೊಂಡಿದ್ದೇವೆ.
ಕಾರ್ಯಕ್ರಮ ಸಂತ ಅಲೋಶಿಯಸ್ ವಿವಿಯ ಎಲ್.ಎಫ್ ರಸ್ಕಿನ್ ಹಾಲ್ನಲ್ಲಿ ಈ ಪ್ರಶಸ್ತಿ ಸಮಾರಂಭ ನಡೆಯಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಹರೇಕಳದಲ್ಲಿ ಪದವಿಪೂರ್ವ ಶಿಕ್ಷಣ ಆರಂಭ: ಹಾಜಬ್ಬರ ಕನಸು ನನಸು
ಇದೇ ಸಂದರ್ಭದಲ್ಲಿ ನಮ್ಮ ಕಂಬುಲ ನನ ದುಂಬುಲ ಎನ್ನುವ ಮಾಹಿತಿ ಕೈಪಿಡಿ ಬಿಡುಗಡೆ ಕಾರ್ಯಕ್ರಮ ಕೂಡಾ ನಡೆಯಲಿದೆ ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ನಮ್ಮ ಕುಡ್ಲ ವಾಹಿನಿಯ ನಿರ್ದೇಶಕರುಗಳಾದ ಹರೀಶ್ ಬಿ ಕರ್ಕೇರ, ಸುರೇಶ್ ಬಿ ಕರ್ಕೇರ , ನಮ್ಮಕುಡ್ಲ ವಾಹಿನಿ ಸಿಒಒ ಕದ್ರಿ ನವನೀತ ಶೆಟ್ಟಿ, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಸುದರ್ಶನ್ ಉಪಸ್ಥಿತರಿದ್ದರು.
LATEST NEWS
ಉಡುಪಿ : ಮೊಬೈಲ್ ಕದಿಯಲು ಬಂದ ಕಳ್ಳಿಗೆ ಸಾರ್ವಜನಿಕರಿಂದ ಧರ್ಮದೇಟು
ಉಡುಪಿ : ಸರ ಕಳವು, ಮೊಬೈಲ್ ಕಳವು ಮಾಡುವ ರೀತಿಯಲ್ಲಿ ಜನರನ್ನು ಲೂಟಿ ಮಾಡುವ ದೊಡ್ಡ ತಂಡ ರಾಜ್ಯದಲ್ಲಿ ಕಾರ್ಯಾಚರಣೆ ಮಾಡ್ತಾ ಇದೆ. ಹೀಗಾಗಿ ದಿನಕ್ಕೆ ಇಂತಹ ಹತ್ತಾರು ಪ್ರಕರಣಗಳು ಪೊಲೀಸ್ ಠಾಣೆಯ ಮೆಟ್ಟಿಲೇರುತ್ತಿದೆ. ಇದೀಗ ಉಡುಪಿಯಲ್ಲೂ ಇಂತಹದೇ ಒಂದು ಖತರ್ನಾಕ್ ಕಳ್ಳಿಯರ ತಂಡ ಕಾರ್ಯಾಚರಣೆಗೆ ಇಳಿದಿದೆ. ಆದ್ರೆ ಅದೃಷ್ಟ ಕೈಕೊಟ್ಟ ಕಾರಣ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದು ಧರ್ಮದೇಟು ತಿಂದು ಪೊಲೀಸರ ಅತಿಥಿಯಾಗಿದ್ದಾಳೆ.
ಉಡುಪಿ ನಗರ ಸಿಟಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕಳ್ಳಿಯರ ತಂಡವೊಂದು ಮೊಬೈಲ್ ಕಳ್ಳತನಕ್ಕೆ ಯತ್ನಿಸಿತ್ತು. ಇದನ್ನು ಗಮನಿಸಿ ಬಸ್ ಸಿಬ್ಬಂದಿ ಕಳ್ಳಿಯರ ತಂಡದ ಓರ್ವಳನ್ನು ರೆಡ್ಹ್ಯಾಂಡ್ ಆಗಿ ಹಿಡಿದಿದ್ದಾರೆ. ಅಷ್ಟರಲ್ಲಿ ಆಕೆಯ ಜೊತೆಗೆ ಇದ್ದವರು ತಪ್ಪಿಸಿಕೊಂಡಿದ್ರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿದ ಮಹಿಳೆಯ ಬ್ಯಾಗ್ ತಪಾಸಣೆಗೆ ಮುಂದಾಗಿದ್ದಾರೆ.
ಇದನ್ನೂ ಓದಿ : OYO ರೂಮ್ ಬಂದ್ ಮಾಡಿಸಿದಕ್ಕೆ ಸಿಟ್ಟಿಗೆದ್ದ ಜೋಡಿ.. ಶಾಸಕರ ಕಛೇರಿ ಮುಂದೆಯೇ ಪ್ರೇಮಿಗಳ ರೊಮ್ಯಾನ್ಸ್..!
ಈ ವೇಳೆ ಡ್ರಾಮ ಮಾಡಲು ಇಳಿದ ಮಹಿಳೆಗೆ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬಳಿಕ ಪೊಲೀಸರನ್ನು ಕರೆಸಿ ಆಕೆಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬಸ್ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ಇಂತಹ ಕಳ್ಳತನ ನಡೆಯುತ್ತಿದ್ದು, ಪ್ರಯಾಣಿಕರು ಜಾಗೃತೆ ವಹಿಸುವ ಅಗತ್ಯ ಇದೆ.
LATEST NEWS
ಜೈಲಿನಲ್ಲಿದ್ದ ವಿಚಾರಣಾಧೀನ ಖೈದಿ ಹೃದಯಾ*ಘಾತದಿಂದ ಸಾ*ವು.!
ಉಡುಪಿ: ಜಿಲ್ಲೆಯ ಹಿರಿಯಡ್ಕ ಸಬ್ ಜೈಲಿನಲ್ಲಿ ವಿಚಾರಣಾಧೀನ ಖೈದಿಗೆ ಹೃದಯಾ*ಘಾತ ಉಂಟಾಗಿ ಸಾ*ವನ್ನಪ್ಪಿರುವ ಘಟನೆ ಮೇ.11ರಂದು ಸಂಜೆ ನಡೆದಿದೆ. ಅನುಪ್ ಶೆಟ್ಟಿ(38 ವ) ಹೃದಯಾಘಾತದಿಂದ ಮೃತಪಟ್ಟವರು.
ಕುಂದಾಪುರ ದ ಫೈನಾನ್ಶಿಯರ್ ಅಜೇಂದ್ರ ಶೆಟ್ಟಿ ಕೊಲೆ ಆರೋಪಿಯಾಗಿರುವ ಅನೂಪ್ ಶೆಟ್ಟಿ ಎರಡೂವರೆ ವರ್ಷ ಗಳಿಂದ ವಿಚಾರಣಾಧೀನ ಖೈದಿಯಾಗಿದ್ದರು.
ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ
ಆರೋಪಿಗೆ ಸಂಜೆ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ತಕ್ಷಣ ಸಿಬಂದಿಗಳು ಕೂಡಲೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಅನೂಪ್ ಸಾವನ್ನಪ್ಪಿದ್ದಾರೆ ಎಂದು ಉಡುಪಿ ಎಸ್ಪಿ ಡಾ. ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.
- LATEST NEWS6 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- LATEST NEWS6 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!
- DAKSHINA KANNADA6 days ago
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!
- LATEST NEWS7 days ago
Watch : ಇಬ್ಬರು ಪುರುಷರೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಪತ್ನಿ; ಹಿಗ್ಗಾಮುಗ್ಗ ಥಳಿಸಿದ ಪತಿ