ಸುಳ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಹಿಂಬದಿಯಲ್ಲಿ ಮಧ್ಯವಯಸ್ಕ ವ್ಯಕ್ತಿಯೊಬ್ಬರು ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಸ್ಥಿತಿಯಲ್ಲಿ ರಕ್ತ ಹರಿದು ಸಾವಿಗೀಡಾಗಿರುವ ಘಟನೆ ನಡೆದಿದೆ.ರಾತ್ರಿ ಸುಮಾರು 9.15 ರ ವೇಳೆಗೆ ವ್ಯಕ್ತಿಯೊಬ್ಬರು ಬಸ್ ನಿಲ್ದಾಣದ ಟಾಯ್ಲೆಟ್ ಹಿಂಬದಿಯಲ್ಲಿ ಬಿದ್ದುಕೊಂಡಿರುವ ಬಗ್ಗೆ ಬಸ್ ನಿಲ್ದಾಣದ ಟಿ.ಸಿ.ಯವರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೋಲೀಸರು ಬಂದು ನೋಡಿದಾಗ ಆ ವ್ಯಕ್ತಿ ಸಾವಿಗೀಡಾಗಿರುವುದು ತಿಳಿದು ಬಂದಿದೆ.ಮೃತದೇಹದ ಬಳಿ ಇದ್ದ ಬ್ಯಾಗ್ ನಲ್ಲಿ ಇದ್ದ ಆಧಾರ್ ಕಾರ್ಡ್ ನ ಆಧಾರದಲ್ಲಿ ಈ ವ್ಯಕ್ತಿ ಮಂಗಳೂರಿನ ಅಚ್ಚುತ ಎಂಬವರೆಂದು ತಿಳಿದು ಬಂದಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸುಳ್ಯದ ಕೆ.ವಿ.ಜಿ.ಆಸ್ಪತ್ರೆಗೆ ಕೊಂಡೊಯ್ದು ಶವಾಗಾರದಲ್ಲಿರಿಸಲಾಗಿದೆ. ವ್ಯಕ್ತಿಯ ಸಾವು ಹೇಗೆ ಸಂಭವಿಸಿರಬಹುದು ಎಂಬ ಖಚಿತ ಮಾಹಿತಿ ಲಭ್ಯವಾಗಿಲ್ಲ.
ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಶಂಕೆಯಿದ್ದು ಪೊಲೀಸರು ಕೂಲಂಕುಷ ತನಿಖೆ ನಡೆಸಲಿದ್ದಾರೆ.