Sunday, March 26, 2023

ಉಡುಪಿ: PFIಗೆ ಸೇರಿದ ಹಲವು ಕಚೇರಿಗಳು ಸೀಝ್-SDPI ಕಚೇರಿಗೆ ಬೀಗ ಜಡಿದ ಪೊಲೀಸರು

ಉಡುಪಿ: ಪಿಎಫ್‌ಐ ಹಾಗೂ ಅದರ ಸಹ ಸಂಘಟನೆಗಳಿಗೆ ದೇಶದಾದ್ಯಂತ ಕೇಂದ್ರದ ಗೃಹ ಸಚಿವಾಲಯವು ನಿರ್ಬಂಧ ವಿಧಿಸಿದ ಬೆನ್ನಲ್ಲೇ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಇರುವ ಪಿಎಫ್ಐ ಸಂಘಟನೆಗೆ ಸೇರಿದ ಹಲವು ಕಚೇರಿಗಳನ್ನು ಸೀಝ್‌ ಮಾಡಲಾಗಿದೆ.


ಕಚೇರಿಯಲ್ಲಿದ್ದ ದಾಖಲೆ ಪತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ವಿಶೇಷ ಅಂದರೆ ಉಡುಪಿ ಜಿಲ್ಲೆಯಲ್ಲಿ ಪಿಎಫ್‌ಐ ಪ್ರತ್ಯೇಕ ಕಚೇರಿಗಳು ಇಲ್ಲ.

ಇದರ ಎಲ್ಲಾ ಕೆಲಸ ಕಾರ್ಯಗಳೂ ಎಸ್ ಡಿ ಪಿ ಐ ಕಚೇರಿಯಲ್ಲಿಯೇ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಎಸ್‌ಡಿಪಿಐ ಕಚೇರಿಗಳನ್ನೂ ಸೀಝ್‌ ಮಾಡಲಾಗಿದೆ.


ಉಡುಪಿಯ ಪಂದುಬೆಟ್ಟು ಮಸೀದಿ ಬಳಿಯ ಕಟ್ಟಡದಲ್ಲಿದ್ದ ಕಚೇರಿ, ಹೂಡೆ, ಗಂಗೊಳ್ಳಿಯ ಎಸ್ ಡಿ ಪಿ ಐ ಕಚೇರಿ ಸೀಜ್ ಮಾಡಲಾಗಿದೆ.

ಎಸ್ ಡಿ ಪಿ ಐ ನಾಯಕರಾದ ಬಶೀರ್ ಮತ್ತು ನಜೀರ್ ಮನೆಗೂ ದಾಳಿ ನಡೆಸಲಾಗಿದ್ದು, ಮನೆಗೆ ಬೇಗ ಹಾಕಿದ್ದ ಹಿನ್ನೆಲೆಯಲ್ಲಿ ಪೊಲೀಸರು ವಾಪಸ್ ಬಂದಿದ್ದಾರೆ.

ನಾಯರ್ ಕೆರೆ ಪರಿಸರದ ಮಸೀದಿ ಕಟ್ಟಡದಲ್ಲೂ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ವಶ

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ಹಣವನ್ನು ಪೊಲೀಸರು ನಿನ್ನೆ ವಶಪಡಿಸಿಕೊಂಡ ಘಟನೆ ಉಡುಪಿಯ ಮೂಡುತೋನ್ಸೆ ಗ್ರಾಮದ ನೇಜಾರು ಚೆಕ್ ಪೋಸ್ಟ್‌ನಲ್ಲಿ ನಡೆದಿದೆ.ಉಡುಪಿ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ...

ಉಡುಪಿ ಪಡುಬಿದ್ರೆಯಲ್ಲಿ ಬೈಕಿಗೆ ಟ್ಯಾಂಕರ್ ಢಿಕ್ಕಿ; ಸವಾರರಿಬ್ಬರು ಮೃತ್ಯು..!

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ಶನಿವಾರ ಸಂಜೆ ನಡೆದಿದೆ.ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30)...

ಉಳ್ಳಾಲ ಕುಂಪಲದಲ್ಲಿ ನೇಣಿಗೆ ಕೊರಳೊಡ್ಡಿದ ಯುವಕ :ಸರಣಿ ಸಾವು ನೋವು- ಆತ್ಮಹತ್ಯೆಗಳಿಂದ ಜನ ಕಂಗಾಲು..!  

ಮಂಗಳೂರು ಹೊರವಲಯದ ಉಳ್ಳಾಲ ಕುಂಪಲ ಆಶ್ರಯ ಕಾಲನಿಯ ರೂಪದರ್ಶಿ ಪ್ರೇಕ್ಷಳ ಸಾವಿನ ನಂತರ ಈ ಪ್ರದೇಶದಲ್ಲಿ ಸರಣಿ ಸಾವುಗಳು ಸಂಭವಿಸುತ್ತಿದ್ದು ಜನ ಕಂಗಲಾಗಿದ್ದಾರೆ.ಉಳ್ಳಾಲ: ಮೊಬೈಲ್ ಷೋರೂಂ ನಲ್ಲಿ ಕೆಲಸಕ್ಕಿದ್ದ ಕುಂಪಲ ಮೂರು ಕಟ್ಟೆ...