LATEST NEWS
” ಮದುವೆ ಲೈಸೆನ್ಸ್ ಅಲ್ಲ; ಪತ್ನಿಯ ಇಚ್ಛೆಗೆ ವಿರುದ್ಧದ ಪತಿಯ ಲೈಂಗಿಕ ಕ್ರಿಯೆ ಅತ್ಯಾಚಾರ “
ಬೆಂಗಳೂರು: ಮದುವೆ ಎಂಬುದು ಲೈಸೆನ್ಸ್ ಅಲ್ಲ, ಪತ್ನಿಯ ಒಪ್ಪಿಗೆಗೆ ವಿರುದ್ಧವಾಗಿ ಪತಿ ನಡೆಸುವ ಲೈಂಗಿಕ ದೌರ್ಜನ್ಯವೂ ಅತ್ಯಾಚಾರಕ್ಕೆ ಸಮ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟ ಪಡಿಸಿದೆ.
ಹೈಕೋರ್ಟ್ನಲ್ಲಿ ದಾಖಲಾಗಿದ್ದ ಪ್ರಕರಣವೊಂದರ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ರೀತಿಯಾಗಿ ಅಭಿಪ್ರಾಯಪಟ್ಟಿದ್ದು, ಪತಿ ವಿರುದ್ಧ ಪತ್ನಿ ಮಾಡಿರುವ ಗಂಭೀರ ಆರೋಪವನ್ನು ಹೈಕೋರ್ಟ್ ಮಾನ್ಯ ಮಾಡಿದೆ.
ಹೃಷಿಕೇಶ್ ಸಾಹೂ ಎಂಬಾತ ಸಲ್ಲಿಸಿದ್ದ ಅರ್ಜಿ ಹಾಗೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಇತರೆ ಮೂರು ಅರ್ಜಿಗಳನ್ನು ಪೀಠ ವಜಾಮಾಡಿದೆ.
ಬೆಂಗಳೂರಿನಲ್ಲಿ ವಾಸವಾಗಿದ್ದ ಒಡಿಶಾ ಮೂಲದ ದಂಪತಿಗೆ ಸಂಬಂಧಿಸಿರುವ ಪ್ರಕರಣ ಇದಾಗಿದೆ. 43 ವರ್ಷದ ಪತಿ ತನ್ನ 27 ವರ್ಷದ ಪತ್ನಿ ಮೇಲೆ ಅಸ್ವಾಭಾವಿಕ ರೀತಿಯ ಲೈಂಗಿಕ ಕ್ರಿಯೆ ನಡೆಸಿ, ಆಕೆಯನ್ನು ಗುಲಾಮಳಂತೆ ನೋಡಿಕೊಳ್ಳುತ್ತಿದ್ದನಂತೆ.
ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣವೊಂದರಲ್ಲಿ ದೂರುದಾರಳಾಗಿರುವ ಮಹಿಳೆ ತನ್ನನ್ನು ಪತಿ ಕಾಮ ಕೃತ್ಯಗಳಿಗೆ ದಾಸಿಯಾಗುವಂತೆ ಒತ್ತಾಯಿಸಿರುವುದಾಗಿ ಹಾಗೂ ಮಗಳ ಎದುರೇ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಾನೆ ಎಂದು ಆರೋಪಿಸಿದ್ದಾರೆ.
ಈ ಕುರಿತ ಪ್ರಕರಣದ ವಿಸ್ತೃತ ತನಿಖೆ ನಡೆಸಿದ ಪೊಲೀಸರು ಹೈಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದರು. ಈ ವೇಳೆ ಪೊಲೀಸರು ‘ಇದೊಂದು ಬಲವಂತದ ಅತ್ಯಾಚಾರ’ ಎಂಬ ಮಹತ್ವದ ವಿಚಾರವನ್ನು ಉಲ್ಲೇಖ ಮಾಡಿದ್ದರು.
ಇದರ ಬೆನ್ನಲ್ಲೇ ಅತ್ಯಾಚಾರ ಆರೋಪ ಕೈಬಿಡುವಂತೆ ಪತಿಯೂ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದನು.ಪತಿ ಹೇಳಿದ್ದೇನು? ಪತ್ನಿ ತನ್ನ ಮೇಲಿನ ಸೇಡಿಗಾಗಿ ಅತ್ಯಾಚಾರ ಆರೋಪ ಹೊರಿಸಿದ್ದಾಳೆ.
ಇದನ್ನು ರದ್ದು ಮಾಡುವಂತೆ ಹೃಷಿಕೇಶ್ ಸಾಹೂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದನು. ಐಪಿಸಿ ಸೆಕ್ಷನ್ 376ರ ಅಡಿ ಪತಿಗೆ ಅತ್ಯಾಚಾರ ಪ್ರಕರಣದಲ್ಲಿ ವಿನಾಯಿತಿ ಇದೆ ಎಂದು ಆರೋಪಿ ಪತಿ ಪರ ವಕೀಲರು ವಾದ ಮಂಡಿಸಿದ್ದರು.
ಆದರೆ, ಈ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಅತ್ಯಾಚಾರ ಅತ್ಯಾಚಾರವೇ. ಇದು ಪತ್ನಿಯ ಮೇಲೆ ಮಾನಸಿಕ, ದೈಹಿಕವಾಗಿ ಪರಿಣಾಮ ಬೀರುತ್ತದೆ ಎಂದು ಸ್ಪಷ್ಟಪಡಿಸಿತು.
LATEST NEWS
27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಕೆಜಿಎಫ್ ಹೊಗಳಿದ್ದ ಯೂಟ್ಯೂಬರ್!
ಮುಂಬೈ : ಖ್ಯಾತ ಯೂಟ್ಯೂಬರ್ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಪ್ರಖ್ಯಾತರಾಗಿರುವ ಅಬ್ರದೀಪ್ ಸಹಾ ಇಹಲೋಕ ತ್ಯಜಿಸಿದ್ದಾರೆ. ಅಂಗ್ರಿ ರ್ಯಾಂಟ್ಮ್ಯಾನ್ ಎಂದೇ ಖ್ಯಾತರಾಗಿರುವ ಅಬ್ರದೀಪ್ ಸಹಾ ತಮ್ಮ 27 ನೇ ವಯಸ್ಸಿಗೆ ಅಸುನೀಗಿದ್ದಾರೆ. ಅವರು ಏಪ್ರಿಲ್ 16 ರಂದು ವಿ*ಧಿವಶರಾಗಿದ್ದಾರೆ. ಅವರ ನಿ*ಧನದ ಸುದ್ದಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.
ಅಂಗ್ರಿ ರಾಂಟ್ ಮ್ಯಾನ್ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಕಳೆದ ತಿಂಗಳು ಅಪರೇಷನ್ ಗೆ ಒಳಗಾಗಿದ್ದರು. ಅವರ ಸ್ಥಿತಿ ಗಂಭೀರವಾಗಿದೆ. ಐಸಿಯುವಿನಲ್ಲಿದ್ದಾರೆ ಎಂದು ಹೇಳಲಾಗಿತ್ತು. ಕಳೆದೊಂದು ತಿಂಗಳಿಂದ ಅಬ್ರದೀಪ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರಲಿಲ್ಲ. ಹಾಗಾಗಿ, ಈ ಸುದ್ದಿ ಖಚಿತ ಎಂದೇ ಹೇಳಲಾಗಿತ್ತು. 11 ದಿನಗಳ ಹಿಂದೆ ಅವರ ತಂದೆ ಅಭಿಮಾನಿಗಳಿಗೆ, ಐಸಿಯುನಲ್ಲಿ ರ್ಯಾಂಟ್ಮ್ಯಾನ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದರು.
ಇದನ್ನೂ ಓದಿ : ಬೆಂಗಳೂರಿನ ಖ್ಯಾತ ಯೂಟ್ಯೂಬರ್ ಬಂಧನ; ಮುಳುವಾಯ್ತು ಆ ಒಂದು ವೀಡಿಯೋ!
ಖ್ಯಾತಿ ಕೊಟ್ಟ ಕೆಜಿಎಫ್ :
ಕೋಲ್ಕತ್ತಾದವರಾದ ಆ್ಯಂಗ್ರಿ ರ್ಯಾಂಟ್ಮ್ಯಾನ್ ಫೆಬ್ರವರಿ 19, 1996 ರಂದು ಜನಿಸಿದರು. ‘ಆಂಗ್ರಿ ರಾಂಟ್ಮ್ಯಾನ್’ ಎಂಬ ಅವರ ಯೂಟ್ಯೂಬ್ ಚಾನೆಲ್ 481k ಚಂದಾದಾರರನ್ನು ಮತ್ತು Instagram ನಲ್ಲಿ 119k ಫಾಲೋವರ್ಸ್ ಹೊಂದಿದ್ದರು. 2018ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಕೆಜಿಎಫ್ ಸಿನಿಮಾ ವಿಮರ್ಶೆ ಮಾಡುವ ಮೂಲಕ ಅಬ್ರದೀಪ್ ಸಹಾ ಖ್ಯಾತಿ ಗಳಿಸಿದರು.
ಕೆಜಿಎಫ್ ಸಿನಿಮಾವನ್ನು ಹೊಗಳಿದ್ದ ಅವರು, ಬಾಲಿವುಡ್ ಸಿನಿಮಾರಂಗವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾ ಹೇಗೆ ಮಾಡಬೇಕು ಎಂದು ದಕ್ಷಿಣ ಭಾರತೀಯ ಚಿತ್ರರಂಗ ನೋಡಿ ಕಲಿಯಿರಿ ಎಂದು ಹೇಳಿದ್ದರು. ಈ ವಿಚಾರ ಸಿಕ್ಕಾಪಟ್ಟೆ ವೈರಲ್ ಆಗಿತ್ತು.
DAKSHINA KANNADA
ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ
ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.
ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.
ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್ ಕುಂಪಲ ಎಲ್ಲಿದ್ದರು…?
ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.
ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!
ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ
ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.
ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ
ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.
LATEST NEWS
ಬಿಡುವಿಲ್ಲದ ವೇಳೆಯೂ ಬಾಲರಾಮನ ‘ಸೂರ್ಯ ತಿಲಕ’ವನ್ನು ವೀಕ್ಷಿಸಿದ ಪ್ರಧಾನಿ…
ಅಯೋಧ್ಯೆ: 500 ವರ್ಷಗಳ ಬಳಿಕ ಅಯೋಧ್ಯೆ ಶ್ರೀರಾಮನ ಜನ್ಮಸ್ಥಳದಲ್ಲಿ ನಡೆದ ಐತಿಹಾಸಿಕ ಕ್ಷಣವನ್ನು ಪ್ರಧಾನಿ ನರೇಂದ್ರ ಮೋದಿಯವರು ಕಣ್ತುಂಬಿಕೊಂಡಿದ್ದಾರೆ. ಹೌದು, ಇಂದು ಶ್ರೀರಾಮನವಮಿ ದಿನದಂದು ಬಾಲರಾಮನ ಹಣೆಗೆ ಸೂರ್ಯರಶ್ಮಿಯ ಕಿರಣ ಸ್ಪರ್ಶಗೊಂಡಿದೆ. ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವ ಪ್ರಧಾನಿ ತನ್ನ ಬಿಡುವಿಲ್ಲದ ಸಮಯದಲ್ಲೂ ಈ ಐತಿಹಾಸಿಕ ಸುಂದರ ಕ್ಷಣವನ್ನು ಕಣ್ತುಂಬಿಕೊಂಡಿದ್ದಾರೆ. ನರೇಂದ್ರ ಮೋದಿಯವರು ಅಯೋಧ್ಯೆಗೆ ಭೇಟಿ ನೀಡದೆ ಇದ್ದರೂ ದೃಶ್ಯವನ್ನು ಟ್ಯಾಬ್ ಮೂಲಕ ಕಣ್ತುಂಬಿಕೊಂಡಿದ್ದಾರೆ. ಇವರು ಅಸ್ಸಾಂ ನಲ್ಲಿನ ಬಿಜೆಪಿ ಸಮಾವೇಶದಲ್ಲಿ ಈ ವೇಳೆ ಭಾಗವಹಿಸಿದ್ದರು.
ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ನಾನು ನಲ್ಬರಿಯಲ್ಲಿ ನಡೆದ ಚುನಾವಣಾ ರ್ಯಾಲಿಯ ನಂತರ ರಾಮ್ ಲಲ್ಲಾನನ್ನು ಸೂರ್ಯ ತಿಲಕ ಸ್ಪರ್ಶಿಸುವ ಕ್ಷಣವನ್ನು ವೀಕ್ಷಿಸಿದ್ದೇನೆ. ಕೋಟಿಗಟ್ಟಲೆ ಭಾರತೀಯರಂತೆ ನನಗೂ ಇದು ಅತ್ಯಂತ ಭಾವನಾತ್ಮಕ ಕ್ಷಣ. ಅಯೋಧ್ಯೆಯ ರಾಮನವಮಿಯು ಐತಿಹಾಸಿಕವಾಗಿದೆ. ಈ ಸೂರ್ಯ ತಿಲಕ ನಮ್ಮ ಜೀವನಕ್ಕೆ ಶಕ್ತಿಯನ್ನು ತರಲಿ ಮತ್ತು ನಮ್ಮ ರಾಷ್ಟ್ರವು ವೈಭವದ ಹೊಸ ಎತ್ತರವನ್ನು ಏರಲು ಪ್ರೇರೇಪಿಸಲಿ ಎಂದು ಹೇಳಿದ್ದಾರೆ.
READ MORE..; ಬಿಜೆಪಿಗೆ ಸವಾಲಾದ ಬಿರುವೆರ್..! ವರ್ಕೌಟ್ ಆಗಿಲ್ಲ ನಮೋ ಪ್ಲ್ಯಾನ್…!
- LATEST NEWS7 days ago
‘ಬಿಗ್ ಬಾಸ್’ ಮತ್ತೆ ಆರಂಭ.. ಇಲ್ಲಿದೆ ಸ್ಪರ್ಧಿಗಳ ಲಿಸ್ಟ್..!
- DAKSHINA KANNADA7 days ago
ಬತ್ತೇರಿ ಹೆಸರು ‘ಗಣಪತಿ ವೆಟ್ಟಂ’… ಟೀಕೆಗೆ ಗುರಿಯಾದ ಸುರೇಂದ್ರನ್ ಹೇಳಿಕೆ.
- LATEST NEWS7 days ago
ಮತ್ತೆ ಕಿರುತೆರೆಗೆ ಕಂಬ್ಯಾಕ್ ಮಾಡಿದ ಸೂಪರ್ ಹಿಟ್ ಧಾರಾವಾಹಿ ‘ಕೃಷ್ಣ ರುಕ್ಮಿಣಿ’ ನಟಿ
- chikkamagaluru6 days ago
ರಾಜ್ಯದ ಹಲವೆಡೆ ಮಳೆಯ ಸಿಂಚನ.. ಸಿಡಿಲಿನ ಅಬ್ಬರಕ್ಕೆ ಇಬ್ಬರ ಬ*ಲಿ..!!