DAKSHINA KANNADA
ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಇಬ್ಬರಿಗೂ ಕೊರೊನಾ ಸೋಂಕು ಇರಲಿಲ್ಲ-ಡೆತ್ ನೋಟ್ನಲ್ಲಿ ಏನಿತ್ತು? ಫುಲ್ ಡಿಟೇಲ್ಸ್
ಮಂಗಳೂರು: ಇಂದು ಬೆಳಿಗ್ಗೆ ಬೈಕಂಪಾಡಿಯ ಚಿತ್ರಾಪುರ ಬಳಿ ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೊರೊನಾ ಸೋಂಕಿನ ಭಯಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಹೇಳಲಾಗುತ್ತಿದೆ.
ಈ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮಂಗಳೂರು ಡಿಸಿಪಿ ಹರಿರಾಂ ಶಂಕರ್, ಡೆತ್ ನೋಟಲ್ಲಿ ನಮಗೆ ಕೊರೊನಾ ಇದೆ, ಬ್ಲ್ಯಾಕ್ ಫಂಗಸ್ ಬಂದರೆ ಸಮಸ್ಯೆ ಅಂತೆಲ್ಲಾ ಬರೆದಿದ್ದಾರೆ. ಆದರೆ ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ ಪ್ರಕಾರ ಅವರಿಗೆ ಕೊರೊನಾ ಇರುವ ಬಗ್ಗೆ ಮಾಹಿತಿಯಿಲ್ಲ ಎಂದು ತಿಳಿಸಿದ್ದಾರೆ.
ಕೊರೊನಾ ಭಯದಿಂದ ನಾನು ಮತ್ತು ನನ್ನ ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ ಎಂದು ಬೆಳಗ್ಗೆ 6.40ರ ಹೊತ್ತಿಗೆ ಕಮಿಷನರ್ಗೆ ವಾಟ್ಸಾಪ್ ಮೆಸೇಜ್ ಮತ್ತು ಕಾಲ್ ಬಂದಿದೆ. ಈ ವೇಳೆ ತಕ್ಷಣ ಕಮಿಷನರ್ ಕಾಲ್ ಮಾಡಿದರೂ ಅವರು ಎತ್ತಲಿಲ್ಲ. ವಾಯ್ಸ್ ಮೆಸೇಜ್ ಮಾಡಿ ಧೈರ್ಯ ತುಂಬಿದರೂ ರಿಪ್ಲೈ ಮಾಡಿಲ್ಲ. ನಂತರ ಲೊಕೇಶನ್ ಟ್ರೇಸ್ ಮಾಡಿ, ಪೊಲೀಸ್ ಸಿಬ್ಬಂದಿ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಡಿಸಿಪಿ ಹರಿರಾಂ ಶಂಕರ್ ಮಾಹಿತಿ ನೀಡಿದರು.
ಅವರೇ ಸ್ವಂತ ನಿರ್ಧಾರಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ಸಲ ಮಗು ಪಡೆಯಲು ಯತ್ನಿಸಿ ವಿಫಲರಾಗಿದ್ದು, ಇದರ ಖಿನ್ನತೆ ಇರಬಹುದು. ಆದರೆ ಇವರು ಯಾರ ಜೊತೆಗೂ ಹೆಚ್ಚಾಗಿ ಬೆರೆತ ಬಗ್ಗೆ ಮಾಹಿತಿಯಿಲ್ಲ ಎಂದು ಡಿಸಿಪಿ ಹೇಳಿದ್ದಾರೆ.
ಇನ್ನು ಆತ್ಮಹತ್ಯೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೊರೊನಾಗೆ ಹೆದರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಬಹಳ ನೋವಿನ ಸಂಗತಿಯಾಗಿದೆ. ಕೊರೊನಾ ಸೋಂಕು ಬಂದ ಕೂಡಲೇ ಯಾರೂ ಸಾಯಲ್ಲ. ಮಾಹಿತಿ ಕೊರತೆಯಿಂದ ಈ ರೀತಿ ಮಾಡಿಕೊಂಡಿರಬಹುದು. ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಕೊರೊನಾ ಲಕ್ಷಣ ಕಂಡುಬಂದರೆ ತಪಾಸಣೆ ಮಾಡಿಸಿಕೊಳ್ಳಿ. ಆರೋಗ್ಯ ಇಲಾಖೆ, ವೈದ್ಯರು ನಿಮ್ಮ ಜೊತೆ ಇರುತ್ತಾರೆ. ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ ಎಂದು ಮನವಿ ಮಾಡಿದರು.
ಡೆತ್ ನೋಟ್ನಲ್ಲಿ ಏನಿತ್ತು?
ನಾನು ಗುಣ ಆರ್ ಸುವರ್ಣ,
ಈ ದಿನ ನಾನು ಮತ್ತು ನನ್ನ ಗಂಡ ಆತ್ಮಹತ್ಯೆಯ ನಿರ್ಧಾರವನ್ನು ನನ್ನ ಆರೋಗ್ಯದ ಈ ಸ್ಥಿತಿಯಲ್ಲಿ ಮಾಡಿರುತ್ತೇನೆ. ನನಗೆ 14ನೇ ವಯಸ್ಸಿನಲ್ಲಿ ಸರ್ಜರಿ ನಡೆದಿದೆ. 2000ನೇ ಇಸವಿಯಲ್ಲಿ ನಮಗೆ ಮದುವೆಯಾಗಿತ್ತು. 2001ರಲ್ಲಿ 1 ಪ್ರೆಗ್ನೆನ್ಸಿನಲ್ಲಿ 5ನೇ ತಿಂಗಳಿನಲ್ಲಿ ಸಕ್ಕರೆ ಖಾಯಿಲೆ ಕಂಡು ಬಂತು. ಆ ನಂತರ 2002 ಜನವರಿ 25ರಂದು ಸೋನಿಯಾ ಆಸ್ಪತ್ರೆ ಮಣಿಪಾಲದಲ್ಲಿ ಡೆಲಿವರಿ ಆಗಿ ಗಂಡು ಮಗು ಜನಿಸಿತ್ತು. ಮಗುವಿನ ಆರೋಗ್ಯ ಸಮಸ್ಯೆ ಕಂಡು ಬಂದು 12 ದಿನದಲ್ಲಿ ತೀರಿಕೊಂಡಿತ್ತು. ನಂತರ 2005ರಲ್ಲಿ ಮತ್ತೆ ಪ್ರಗ್ನೆಂಟ್ ಆದಾಗ ectopic pregencyಯಿಂದ surgery ಮಾಡಬೇಕಾದ ಸಂದರ್ಭ ಬಂದಿತ್ತು. ಮಂಗಳೂರಿನ ನರ್ಸಿಂಗ್ ಹೋಮ್ನ ವೈದ್ಯರು ಸರ್ಜರಿ ಮಾಡಿದ್ದರು. ಆಗ ನನಗೆ ಮೆಡಿಸಿನ್ ರಿಯಾಕ್ಟ್ ಆಗಿತ್ತು. ಆ ನಂತರ ನನಗೆ ಮೆಡಿಸಿನ್ ಅಷ್ಟಾಗಿ ನಡೆಯುತ್ತಿಲ್ಲ. ಶುಗರ್ ಕಂಟ್ರೋಲ್ ಸಿಗುತ್ತಿಲ್ಲ. 2020ರಿಂದ ಕೊರೋನಾ ಶುರು ಆದ ಮೇಲೆ ನಾನು ತುಂಬಾ ಜಾಗ್ರತೆ ಮಾಡಿಸುತ್ತಿದ್ದೇನೆ. ಆದರೆ ನನಗೆ 1 ವಾರದಿಂದ ಕೋವಿಡ್ನ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ. ಆರೋಗ್ಯ ಸ್ಥಿತಿ ತುಂಬಾ ಹದಗೆಡುತ್ತಿದೆ. ನನಗೆ ಯಾವುದೇ ಮೆಡಿಸಿನ್ ತೆಗೆದುಕೊಂಡಾಗ ರಿಯಾಕ್ಷನ್ ಆಗಿ ಹಾಸ್ಪಿಟಲ್ಗೆ ಅಡ್ಮಿಟ್ ಆಗಲು ತುಂಬಾ ಭಯವಿದೆ. ಮಾಧ್ಯಮದಲ್ಲಿ ಕೊರೋನಾ ಬಗ್ಗೆ ನ್ಯೂಸ್ ನೋಡುವಾಗ ಸಕ್ಕರೆ ಖಾಯಿಲೆ ಇರುವವರಿಗೆ ಬ್ಲಾಕ್ ಫಂಗಸ್ನಿಂದ ಕಣ್ಣು ಹಾಗೂ ಶರೀರದ ಅಂಗಾಂಗಗಳನ್ನು ಕಳೆದುಕೊಂಡಿದ್ದು ನೋಡಿದಾಗ, ನನ್ನ ಆರೋಗ್ಯದಲ್ಲಿ ಆದ ಬದಲಾವಣೆಯನ್ನು ನೋಡಿದಾಗ ನನಗೂ ಆ ಥರ ಆಗಬಹುದೆಂಬ ಭಯ ಕಾಡುತ್ತಿದೆ. ಇಂತಹ ಸಮಯದಲ್ಲಿ ನಮಗೆ ಜೀವನವೇ ಬೇಡ ಎನ್ನುವ ಮನಸ್ಥಿತಿಗೆ ಬಂದಿದ್ದೇವೆ. ಆದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ.
ನನ್ನ ತಂದೆ-ತಾಯಿ ಹಾಗೂ ತಮ್ಮನಿಗೂ ಕೋವಿಡ್ ಸೋಂಕು ತಗುಲಿ ಚೇತರಿಸಿಕೊಂಡಿದ್ದಾರೆ. ನನ್ನ ತಾಯಿ ಕೋವಿಡ್ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ತುಂಬಾ ಕಷ್ಟದಿಂದ ಚೇತರಿಸಿಕೊಂಡಿದ್ದಾರೆ. ಆದುದರಿಂದ ಅವರಿಗೆ ನಮ್ಮ ಅಂತ್ಯಕ್ರಿಯೆಯ ತೊಂದರೆ ಕೊಡಬಾರದಾಗಿ ವಿನಂತಿಸಿಕೊಳ್ಳುತ್ತಿದ್ದೇನೆ
ನನಗೆ 2 ಸಲ ಮಕ್ಕಳ ಸಮಸ್ಯೆ ಆದುದರಿಂದ ಎಲ್ಲಿ ಹೋದರೂ ಮಕ್ಕಳ ಬಗ್ಗೆಯೇ ಕೇಳುತ್ತಾರೆ. ಅದಕ್ಕಾಗಿ ನಾನು ಯಾರೊಂದಿಗೂ ಹೆಚ್ಚಾಗಿ ಬೆರೆಯಲು ಇಷ್ಟಪಡುವುದಿಲ್ಲ. ನಾನು ಮತ್ತು ನನ್ನ ಗಂಡ ನಿರ್ಧರಿಸಿದ ಪ್ರಕಾರ ಹಿಂದೂ ಸಂಘಟನೆಯ ಶರಣ್ ಪಂಪ್ವೆಲ್ ಹಾಗೂ ಸತ್ಯಜಿತ್ ಸುರತ್ಕಲ್ ಅವರಲ್ಲಿ ವಿನಂತಿಸುವುದೇನೆಂದರೆ ನಮ್ಮಿಬ್ಬರ ಅಂತ್ಯಕ್ರಿಯೆಯನ್ನು ಹಿಂದೂ ಧರ್ಮದ ಪ್ರಕಾರ ಮಾಡಬೇಕಾಗಿ ವಿನಂತಿಸುತ್ತಿದ್ದೇವೆ. ನಮ್ಮ ಅಂತ್ಯಕ್ರಿಯೆಯ ವೆಚ್ಚಕ್ಕಾಗಿ 1 ಲಕ್ಷ ರೂಪಾಯಿ ಇಟ್ಟಿದ್ದೇವೆ. ನಮ್ಮ ಅಂತ್ಯಕ್ರಿಯೆಗೆ ಮಂಗಳೂರಿನ ಕಮಿಷನರ್ ಆದ ಶಶಿಕುಮಾರ್ ಸರ್, ಶರಣ್ ಪಂಪ್ವೆಲ್ ಹಾಗೂ ಸತ್ಯಜಿತ್ ಸುರತ್ಕಲ್ ಅವರೊಂದಿಗೆ ಸಹಕರಿಸಬೇಕಾಗಿ ವಿನಂತಿಸುತ್ತಿದ್ದೇವೆ. ನನ್ನ ಹಾಗೂ ನನ್ನ ಗಂಡನ ಮನೆಯವರಿಗೆ ಈ ವಸ್ತುಗಳ ಅವಶ್ಯಕತೆ ಇರುವುದಿಲ್ಲ. ನಮ್ಮ ಮನೆಯ ಮಾಲೀಕರೇ ನಮ್ಮನ್ನು ಕ್ಷಮಿಸಿ.
ಇಂತೀ
ಗುಣ
BANTWAL
ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ
ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.
ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.
ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.
ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.
DAKSHINA KANNADA
ಕೇರಳದ ಹಕ್ಕಿ ಜ್ವರ…ದಕ್ಷಿಣ ಕನ್ನಡದ ಗಡಿಯಲ್ಲಿ ಕಟ್ಟೆಚ್ಚರ..!
ಮಂಗಳೂರು: ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಸೇಷ ನಿಗಾ ವಹಿಸಲಾಗಿದೆ.
ಇಂದಿನಿಂದ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕದಲ್ಲಿ ವಿಶೇಷ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು. ಈ ಚೆಕ್ ಪೋಸ್ಟ್ಗಳಲ್ಲಿ ಕೋಳಿ ಉತ್ಪನ್ನಗಳನ್ನು ಕೇರಳಕ್ಕೆ ತಲುಪಿಸಿದ ನಂತರ ದಕ್ಷಿಣ ಕನ್ನಡಕ್ಕೆ ಹಿಂದಿರುಗುವ ವಾಹನಗಳನ್ನು ಸ್ಯಾನಿಟೈಸ್ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಮಂಗಳೂರಿನಿಂದ ಸುಮಾರು 400 ಕಿಲೋಮೀಟರ್ ದೂರದಲ್ಲಿರುವ ಕೇರಳದ ಅಲಪ್ಪುಳ ಜಿಲ್ಲೆಯಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಆ ಜಿಲ್ಲೆಯಲ್ಲಿ ಇದು ಎರಡನೇ ಪ್ರಕರಣವಾಗಿದೆ. ಇದುವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲ. ನಾವು ಜಾಗರೂಕರಾಗಿರುತ್ತೇವೆ ಮತ್ತು ಮೂರು ಆಯಕಟ್ಟಿನ ಸ್ಥಳಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸುತ್ತೇವೆ ಎಂದು ಕರ್ನಾಟಕ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ ಇದು ಕೋವಿಡ್ಗಿಂತ ಭೀಕರ ಸೋಂಕು…ಜಗತ್ತಿಗೆ ಹರಡುವ ಆತಂಕದಲ್ಲಿ ತಜ್ಞರು..!
ಏನಿದು ಹಕ್ಕಿ ಜ್ವರ?
ಹೆಚ್5ಎನ್1 ವೈರಸ್ನಿಂದ ಹರಡುವ ಸೋಂಕನ್ನು ಹಕ್ಕಿ ಜ್ವರ ಎಂದು ಕರೆಯಲಾಗುತ್ತದೆ. ಈ ವೈರಸ್ ಹೆಚ್ಚಿನ ಮರಣ ಪ್ರಮಾಣದೊಂದಿಗೆ ತೀವ್ರವಾದ ಜ್ವರವನ್ನು ಉಂಟುಮಾಡಬಲ್ಲದ್ದಾಗಿದೆ. ಆದರೆ, ಮನುಷ್ಯರಲ್ಲಿ ಈ ರೋಗದ ಹರಡುವಿಕೆ ಬಹಳ ಅಪರೂಪ. ಇಲ್ಲಿಯವರೆಗೆ, ಈ ವೈರಸ್ ಮಾನವರಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಹರಡಿದ ಬಗ್ಗೆ ವರದಿಯಾಗಿಲ್ಲ. ಆದರೂ ಈ ಬಗ್ಗೆ ನಿರ್ಲಕ್ಷ್ಯ ತೋರುವಂತಿಲ್ಲ.
ಹಕ್ಕಿ ಜ್ವರ ವಿಶಿಷ್ಟವಾಗಿ ವಲಸೆ ಹಕ್ಕಿಗಳ ಮೇಲೆ ಪರಿಣಾಮ ಬೀರುತ್ತದೆ. ಆದರೆ ಪ್ರಸ್ತುತ ಬೇಸಿಗೆಯಲ್ಲಿ ಹಕ್ಕಿಗಳ ವಲಸೆ ಸಾಮಾನ್ಯವಾಗಿ ಕಡಿಮೆ ಇರುತ್ತದೆ. ವೈರಸ್ ಸೋಂಕಿತ ಕೋಳಿಗಳಿಂದ ಇತರ ಪಕ್ಷಿಗಳಿಗೆ ಮತ್ತು ಮನುಷ್ಯರಿಗೆ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು ಮತ್ತು ಮಾಂಸ ಸಂಸ್ಕರಣಾ ಘಟಕಗಳಲ್ಲಿ ಕೆಲಸ ಮಾಡುವವರಿಗೆ ಹರಡಬಹುದು. ಆದಾಗ್ಯೂ, ಇದು ವ್ಯಕ್ತಿಯಿಂದ ವ್ಯಕ್ತಿಗೆ ಹರಡುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.
DAKSHINA KANNADA
ಮತದಾರರ ಚೀಟಿಯಲ್ಲಿ ಕ್ಯೂಆರ್ ಕೋಡ್! ಮಂಗಳೂರು ದಕ್ಷಿಣ ಉತ್ತರದಲ್ಲಿ ಅನುಷ್ಠಾನ
ಮಂಗಳೂರು: ನಗರದಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಚುನಾವಣ ಆಯೋಗ ಕೊನೇ ಹಂತದ ಕಸರತ್ತು ಮುಂದುವರಿಸಿದೆ. ನಗರದ ಜನತೆಗೆ ಮತಗಟ್ಟೆಗಳ ಮಾಹಿತಿ ನೀಡಲು ಚುನಾವಣೆ ಸ್ಲಿಪ್ಗಳಲ್ಲಿ ಕ್ಯೂಆರ್ ಓಡ್ ನೀಡಲಾಗಿದ್ದು, ಆ ಮೂಲಕ ಮತದಾನ ಕೇಂದ್ರದ ಮಾಹಿತಿ ನೀಡಲು ಮುಂದಾಗಿದೆ.
ಕರ್ನಾಟಕದಲ್ಲಿ ಇದು ಮೊದಲ ಪ್ರಯೋಗವಾಗಿದ್ದು, ದ.ಕ. ಜಿಲ್ಲೆಯ ನಗರಕ್ಕೆ ಹೊಂದಿಕೊಂಡಿರುವ ಎರಡು ಕ್ಷೇತ್ರಗಳಲ್ಲಿ ಮಾತ್ರ ಜಾರಿಗೊಳಿಸಲಾಗಿದೆ. ಇದರಂತೆ ಮಂಗಳೂರು ದಕ್ಷಿಣ ಹಾಗೂ ಉತ್ತರ ಕ್ಷೇತ್ರದಲ್ಲಿ ಸ್ಲಿಪ್ ಮೂಲಕ ಮತದಾರರಿಗೆ ಮತಗಟ್ಟೆಯ ವಿವರ ಒದಗಿಸಲಾಗುತ್ತಿದ್ದು, ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತ ಚಲಾವಣೆಯಾಗುವ ನಿರೀಕ್ಷೆ ಹೊಂದಲಾಗಿದೆ.
ಮತದಾರರ ಸ್ಲಿಪ್ನಲ್ಲಿ ಮತಗಟ್ಟೆಯ ವಿವರ ನಗರದಲ್ಲಿನ ಅನೇಕರಿಗೆ ಮತಗಟ್ಟೆಯ ಬಗ್ಗೆ ಮಾಹಿತಿ ಇರುವುದಿಲ್ಲ. ಮತದಾನಕ್ಕಾಗಿ ಮತಗಟ್ಟೆಗಳನ್ನು ಅರಸಿಕೊಂಡು ಹೋಗಬೇಕಾಗುತ್ತದೆ. ಇದನ್ನು ನೀಗಿಸಲು ಕ್ಯೂಆರ್ ಕೋಡ್ ನೀಡಲಾಗಿದ್ದು, ಸ್ಕ್ಯಾನ್ ಮಾಡಿದ ವೇಳೆ ಮಯಗಟ್ಟೆಯ ಲೊಕೇಷನ್ ಪಡೆಯಬಹುದು. ಈ ಮೂಲಕ ಮತಗಟ್ಟೆ ಹುಡುಕಿ ತೆರಳುವುದನ್ನು ತಪ್ಪಿಸಲು ಸಾಧ್ಯವಾಗಲಿದೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- FILM3 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- FILM3 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು