Connect with us

LATEST NEWS

ಮಾಸ್ಕ್ ದಂಡ ಏರಿದ ಬೆನ್ನಲ್ಲೇ ಮತ್ತೆ ಇಳಿಕೆ

Published

on

ಬೆಂಗಳೂರು: ಕೊರೊನಾ ಸೊಂಕು ಏರಿಕೆ ಹಿನ್ನಲೆ ಮತ್ತೆ ಕಠಿಣ ನಿಯಮ ಜಾರಿಗೆ ತರಲು ಮುಂದಾಗಿದ್ದ ರಾಜ್ಯ ಸರಕಾರ ಈಗ ಮತ್ತೆ ಯೂಟರ್ನ್ ತೆಗೆದುಕೊಂಡಿದೆ.


ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಾಸ್ಕ್ ಧರಿಸದವರ ಮೇಲೆ ಹಾಕಲಾಗುತ್ತಿದ್ದ ದಂಡ ಶುಲ್ಕವನ್ನು ಇಳಿಕೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.


ಈ ಮುಂಚೆ ಮಾಸ್ಕ್ ಧರಿಸದವರ ವಿರುದ್ಧ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 500ರೂ ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.  ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ದಂಡ ಪ್ರಮಾಣ ಇಳಿಕೆ ಮಾಡಿ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡ ವಿಧಿಸಲು ಆದೇಶಿಸಿದೆ.

‘ಜೀವ ಮತ್ತು ಜೀವನ’ ಎರಡನ್ನೂ ಸರಿದೂಗಿಸಿಕೊಂಡ ಹೋಗಲು ‌ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ. ಜನರು ಸ್ವಯಂ ಪ್ರೇರಿತರಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕರ ವಿರೋಧ ಹಾಗೂ ತಜ್ಞರ ಸಲಹೆಯಂತೆ ಈ ದಂಡದ ದರ ಇಳಿಸಲಾಗಿದೆ ಈ ಮೂಲಕ ಸರ್ಕಾರದೊಂದಿಗೆ ಕೈಜೋಡಿಸುವಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

FILM

ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ಕರೀನಾ ಕಪೂರ್; ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ನಟಿ, ಏನಂದ್ರು?

Published

on

ಮಂಗಳೂರು / ಬೆಂಗಳೂರು : ಬಾಲಿವುಡ್‌ ನಟಿ ಕರೀನಾ ಕಪೂರ್ ಖಾನ್ ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ (Unicef India’s National Ambassador) ನೇಮಕಗೊಂಡಿದ್ದಾರೆ. ಈ ಬಗ್ಗೆ ಕರೀನಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ಭಾವನಾತ್ಮಕ ಪೋಸ್ಟ್ :

ಕರೀನಾ ತಮ್ಮ ಸೋಶಿಯಲ್ ಮೀಡಿಯಾ ಪೋಸ್ಟ್ ನಲ್ಲಿ, ನನಗೆ ಇದು ಭಾವನಾತ್ಮಕ ದಿನ. ನಾನು ಯುನಿಸೆಫ್ ಇಂಡಿಯಾ ರಾಯಭಾರಿಯಾಗಿ ನೇಮಕಗೊಂಡಿರುವುದಕ್ಕೆ ಗೌರವವಿದೆ. ಕಳೆದ 10 ವರ್ಷಗಳಲ್ಲಿ ಯುನಿಸೆಫ್ ಇಂಡಿಯಾ ಜತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ನಾನು ಆ ಕೆಲಸದ ಬಗ್ಗೆ ಹೆಮ್ಮೆಪಡುತ್ತೇನೆ. ಮಕ್ಕಳ ಹಕ್ಕುಗಳನ್ನು ಉತ್ತೇಜಿಸಲು ಮತ್ತು ರಕ್ಷಿಸಲು ಮತ್ತು ಎಲ್ಲಾ ಮಕ್ಕಳಿಗೆ ಸಮಾನ ಭವಿಷ್ಯಕ್ಕಾಗಿ ಧ್ವನಿಯಾಗಲು ಹೆಮ್ಮೆಯಾಗುತ್ತಿದೆ. ದೇಶದಾದ್ಯಂತ ಮಹಿಳೆಯರು ಮತ್ತು ಮಕ್ಕಳ ಹಕ್ಕುಗಳಿಗಾಗಿ ದಣಿವರಿಯಿಲ್ಲದೆ ಶ್ರಮಿಸುತ್ತಿರುವ ಇಡೀ ತಂಡಕ್ಕೆ ವಿಶೇಷ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.

ಟಾಕ್ಸಿಕ್ ನಿಂದ ಔಟ್ :

ಕರೀನಾ ಕಪೂರ್ ಇತ್ತೀಚೆಗೆ ‘ಕ್ರೂ’ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಮಹಿಳಾ ಪ್ರಧಾನ ಚಿತ್ರವಾದ ಈ ಚಿತ್ರ ಭಾರೀ ಯಶಸ್ಸನ್ನು ಬಾಚಿಕೊಂಡಿತ್ತು. ಸದ್ಯ ರೋಹಿತ್ ಶೆಟ್ಟಿ ಅವರ ‘ಸಿಂಗಮ್ ಅಗೇನ್’ ಚಿತ್ರದಲ್ಲಿ ಅವರು ಬಿಝಿಯಾಗಿದ್ದಾರೆ. ಇನ್ನು ಸ್ಯಾಂಡಲ್ ವುಡ್ ನಲ್ಲಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿತ್ತಾದರೂ, ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಜೊತೆಯಾಗಿ ಕಾಣಿಸಿಕೊಂಡ ಸೂಪರ್ ಸ್ಟಾರ್ – ಬಿಗ್ ಬಿ; ಸ್ಟೈಲಿಶ್ ಫೋಟೋ ವೈರಲ್ 

ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಡೇಟ್‌ ಹೊಂದಾಣಿಕೆ ಸಮಸ್ಯೆ ಬಂದ ಕಾರಣ ಕರೀನಾ ಅವರು ಈ ಸಿನಿಮಾದಿಂದ ಹೊರ ಬಂದಿದ್ದಾರೆ ಎಂದು ವರದಿಯಾಗಿದೆ.

Continue Reading

DAKSHINA KANNADA

‘ಅಡ್ಡಣ ಪೆಟ್ಟು’ ದೈವಾರಾಧನೆಯ ವಿಶೇಷ ಆಚರಣೆ…! ಇದು ಸೌಹಾರ್ದತೆ ಬಯಸೋ ದೈವ..!

Published

on

ಮಂಗಳೂರು : ತುಳುನಾಡಿನ ದೈವಾರಾಧನೆಯಲ್ಲಿ ಒಂದಕ್ಕಿಂತ ಒಂದು ವಿಶೇಷವಾದ ಆಚರಣೆ ಹಾಗೂ ನಂಬಿಕೆಗಳು ಇದೆ. ಅದು ಪ್ರದೇಶದಿಂದ ಪ್ರದೇಶಕ್ಕೆ ಒಂದಷ್ಟು ಬದಲಾವಣೆಯೊಂದಿಗೆ ನಡೆಯುತ್ತದೆ ಕೂಡಾ. ಕೇರಳದ ಗಡಿಗೆ ಹೊಂದಿಕೊಂಡಿರುವ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದಲ್ಲಿ ನಡೆಯೋ ದೈವಾರಾಧನೆ ಕೂಡಾ ಅದೇ ರೀತಿಯಾದ ವಿಶೇಷ ಆಚರಣೆಯೊಂದಕ್ಕೆ ಹೆಸರಾಗಿದೆ. ಇಲ್ಲಿನ ಶ್ರೀ ಮಹಾವಿಷ್ಣುಮೂರ್ತಿ ದೇವರ ಜಾತ್ರೆಯ ಬಳಿಕ ನಡೆಯುವ ದೈವದ ನೇಮದಲ್ಲಿ ‘ಅಡ್ಡಣ ಪೆಟ್ಟು’ ಅನ್ನೋ ಸಂಪ್ರದಾಯವಿದೆ. ಗ್ರಾಮದ ಜಾತ್ರೆಯ ಪ್ರಮುಖ ಆಕರ್ಷಣೆ ಕೂಡಾ ಇದೇ ಆಗಿದ್ದು, ಇದನ್ನು ನೋಡಲೆಂದೆ ಸಾವಿರಾರು ಜನ ಬರ್ತಾರೆ.


ನಾಲ್ಕು ಮನೆತನಗಳ ನಡುವೆ ಹೊಡೆದಾಟ…!

‘ಅಡ್ಡಣ ಪೆಟ್ಟು’ ಇದು ಮಂಡೆಕೋಲು ಗ್ರಾಮದ ಜಾತ್ರೆ ಮುಗಿದ ಬಳಿಕ ನಡೆಯುವ ಉಳ್ಳಾಕುಲು ಹಾಗೂ ಪರಿವಾರ ದೈವದ ನೇಮದಲ್ಲಿ ಕಾಣುವ ದೃಶ್ಯ. ನಾಲ್ಕು ಗೌಡ ಮನೆತನದವರು ಬೆತ್ತದ ಗುರಾಣಿ ಹಿಡಿದು ಕೋಲಿನಿಂದ ಹೊಡೆದಾಡುವುದೇ ಈ ‘ಅಡ್ಡಣ ಪೆಟ್ಟು’ ಅನ್ನೋ ವಿಶಿಷ್ಠ ಆಚರಣೆ. ದೇವಸ್ಥಾನಕ್ಕೆ ಸಂಬಂಧಪಟ್ಟ ಕೇನಾಜೆ- ಮಾವಜಿ, ಮುರೂರು- ಬೊಳುಗಲ್ಲು ಎಂಬ ನಾಲ್ಕು ಗೌಡ ಮನೆತನಗಳು ಈ ರೀತಿ ಹೊಡೆದಾಟ ನಡೆಸ್ತಾರೆ. ಈ ವೇಳೆ ಉಳ್ಳಾಕುಲು ದೈವ ಮದ್ಯಪ್ರವೇಶ ಮಾಡಿ ಜಗಳ ಬಿಡಿಸುತ್ತದೆ. ಇದು ನೋಡಲು ಕೂಡಾ ಸಾಕಷ್ಟು ಕುತೂಹಲವಾಗಿದ್ದು, ಇದರ ಜೊತೆ ದೈವದ ಸಂದೇಶ ಕೂಡಾ ಇದೆ.


‘ಅಡ್ಡಣ ಪೆಟ್ಟು’ವಿನ ಹಿಂದೆ ಇದೆ ದೈವದ ಸಂದೇಶ..!

ಮಂಡೆಕೋಲು ನೇಮದಲ್ಲಿ ಅಡ್ಡಣ ಪೆಟ್ಟು ಸಂಪ್ರದಾಯಕ್ಕೆ ಬೇರೆ ಬೇರೆ ಐಹಿತ್ಯವಿದೆ. ಅಡ್ಡಣಪೆಟ್ಟು ನಡೆದರೆ ಊರಲ್ಲಿ ಮುಂದೆ ಗಲಾಟೆ, ಹೊಡೆದಾಟಗಳು ಸಂಭವಿಸುವುದಿಲ್ಲ ಎಂಬ ನಂಬಿಕೆಯೂ ಊರಿನ ಭಕ್ತ ಜನರಲ್ಲಿದೆ. ನಾಲ್ಕೂರಿನ ಜಗಳವನ್ನು ದೈವ ಬಿಡಿಸುವುದು, ಗಲಾಟೆ ಮಾಡದೆ ಸೌಹಾರ್ದದಿಂದ ಬಾಳಿ ಎನ್ನುವ ಸಂದೇಶವೂ ಈ ಆಚರಣೆಯಲ್ಲಿದೆ. ಪುರಾತನ ಕಾಲದಲ್ಲಿ ಯಾವುದೋ ಗಲಾಟೆ ನಡೆದ ಸಂದರ್ಭ ಉಳ್ಳಾಕುಲು ದೈವ ಬಂದು ಗಲಾಟೆ ಬಿಡಿಸಿ ಪರಸ್ಪರ ಸಂದಾನ ನಡೆಸಿತ್ತು ಎಂಬ ಪ್ರತೀತಿಯೂ ಇದೆ. ಇದೇ ಕಾರಣದಿಂದ ಪ್ರತಿ ವರ್ಷ ಉಳ್ಳಾಕುಲು ನೇಮದ ಸಂದರ್ಭ “ಅಡ್ಡಣ ಪೆಟ್ಟು” ಒಂದು ಸಂಪ್ರದಾಯವಾಗಿ ನಡೆದು ಬರುತ್ತಿದೆ.

‘ಅಡ್ಡಣ ಪೆಟ್ಟು’ವಿನ ಆಚರಣೆ ಹೇಗೆ ?

ನೇಮೋತ್ಸವ ದಿನದಂದು ಉಳ್ಳಾಕುಲು ದೈವದ ಭಂಡಾರ ತೆಗೆದ ಬಳಿಕ ದೈವ ಸಹಿತ ನಾಲ್ಕೂರಿನ ಪ್ರತಿನಿಧಿಗಳು, ದೈವರ ಪರಿಚಾರಕರು ದೇವಸ್ಥಾನದ ಸಮೀಪದ ಗದ್ದೆಯಲ್ಲಿರುವ ಕಟ್ಟೆಗೆ ತೆರಳುತ್ತಾರೆ. ಕೇನಾಜೆ- ಮಾವಜಿ, ಮುರೂರು-ಬೊಳುಗಲ್ಲು ಮನೆತನಕ್ಕೆ ಸೇರಿದ ನಾಲ್ವರು ಪ್ರತಿನಿಧಿಗಳು ಸಮವಸ್ತ್ರ ಧರಿಸಿ ದಂಡ ಮತ್ತು ಗುರಾಣಿ (ಅಡ್ಡಣ) ಹಿಡಿದು ದೈವದ ಜತೆಯಲ್ಲಿ ತೆರಳುತ್ತಾರೆ. ಕಟ್ಟೆಯ ಬಳಿ ತೆರಳಿದ ಬಳಿಕ ಕೆಲವೊಂದು ಸಂಪ್ರದಾಯ ಆಚರಣೆಗಳು ನಡೆದು ಅಡ್ಡಣ ಹಿಡಿದ ಯುವಕರು ಅಡ್ಡಣವನ್ನು ನೆಲದಲ್ಲಿ ಎದುರು ಬದುರಾಗಿ ಇಡುತ್ತಾರೆ. ಲಾಠಿ ಮಾದರಿಯ ಹೊಡೆಯುವ ದಂಡವನ್ನು ಕೈಯಲ್ಲಿ ಹಿಡಿದಿರುತ್ತಾರೆ. ಇತ್ತ ಅಡ್ಡಣ ಹೊಡೆತದಲ್ಲಿ ಭಾಗವಹಿಸುವ ನಾಲ್ವರು ಯುವಕರಿಗೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವಕ್ಕೆ ಅಣಿಯನ್ನು ಕೂರಿಸಲಾಗುತ್ತದೆ. ಅಣಿ ಇಟ್ಟ ಬಳಿಕ ತುಳು ನುಡಿಗಟ್ಟೊಂದನ್ನು ಹೇಳಲಾಗುತ್ತದೆ. ಈ ನುಡಿಗಟ್ಟು ಮುಗಿಯುತ್ತಿದ್ದಂತೆ ದೈವದ ಪರಿಚಾರಕರೊಬ್ಬರು ಅಡ್ಡಣ ಹೊಡೆತಕ್ಕೆ ಅಣಿಯಾಗಿ ನಿಂತಿರುವ ಯುವಕರತ್ತ ಕಲಶದ ನೀರಿನಿಂದ ಪ್ರೋಕ್ಷಣೆ ಮಾಡುತ್ತಾರೆ. ಕಲಶ ಪ್ರೋಕ್ಷಣೆ ಆಗುತ್ತಿದ್ದಂತೆ ಎದುರು ಬದುರಾಗಿ ನಿಂತಿರುವ ಯುವಕರು ನೆಲದಲ್ಲಿಟ್ಟ ಅಡ್ಡಣವನ್ನು ಕೈಗೆ ಎತ್ತಿಕೊಂಡು ಅದನ್ನು ಗುರಾಣಿಯಂತೆ ಹಿಡಿದು ಎದುರುಬದುರಾಗಿ ಹೊಡೆದಾಟ ಆರಂಭಿಸುತ್ತಾರೆ. ಪ್ರತಿಯೊಬ್ಬರೂ ಎದುರು ಪ್ರತಿನಿಧಿಯ ಕೈಯಲ್ಲಿ ಹಿಡಿದಿರುವ ಅಡ್ಡಣಕ್ಕೆ ಹೊಡೆಯಬೇಕೆಂಬ ನಿಯಮವೂ ಇದೆ. ಹೊಡೆದಾಟ ಜೋರಾಗುತ್ತಿದ್ದಂತೆ ಬೆನ್ನು ಹಾಕಿ ನಿಂತಿರುವ ಉಳ್ಳಾಕುಲು ದೈವ ಬಂದು ಹೊಡೆದಾಟವನ್ನು ಬಿಡಿಸುತ್ತದೆ.

Continue Reading

FILM

ಜೊತೆಯಾಗಿ ಕಾಣಿಸಿಕೊಂಡ ಸೂಪರ್ ಸ್ಟಾರ್ – ಬಿಗ್ ಬಿ; ಸ್ಟೈಲಿಶ್ ಫೋಟೋ ವೈರಲ್

Published

on

ಬೆಂಗಳೂರು : ಸೂಪರ್ ಸ್ಟಾರ್ ರಜನಿಕಾಂತ್ 170 ನೇ ಸಿನಿಮಾ ‘ವೆಟ್ಟೈಯಾನ್‘ ಈಗಾಗಲೇ ನಿರೀಕ್ಷೆ ಹೆಚ್ಚಿಸಿದೆ. ಈಗಾಗಲೇ ಟೀಸರ್ ಬಹಳ ಸದ್ದು ಮಾಡಿದೆ. ಅಲ್ಲದೇ ಈ ಚಿತ್ರದಲ್ಲಿ ಸೂಪರ್ ಸ್ಟಾರ್ – ಬಿಗ್ ಬಿ ಜೊತೆಯಾಗ್ತಿರೋದು ವಿಶೇಷ. ಅದೂ 33 ವರ್ಷಗಳ ಬಳಿಕ. ಹಾಗಾಗಿ ಸಹಜವಾಗಿಯೇ ಚಿತ್ರದ ಕುರಿತು ನಿರೀಕ್ಷೆ ಹೆಚ್ಚಿದೆ.

ವೈರಲ್ ಆಯ್ತು ಫೋಟೋ :


ಇಬ್ಬರು ಸಿನಿ ದಿಗ್ಗಜರು ಜೊತೆಯಾಗೋದು ಅಂದ್ರೆ ಕೇಳ್ಬೇಕಾ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗುತ್ತದೆ. ಈ ಚಿತ್ರದ ಅಪ್ಡೇಟ್ಸ್ ಗಾಗಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಅಭಿಮಾನಿಗಳು ಕಾಯುತ್ತಿರೋದು ಸುಳ್ಳಲ್ಲ. ಇದೀಗಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರೋ ಫೋಟೋಗಳನ್ನು ಪೋಸ್ಟ್ ಮಾಡಿದೆ.


‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ ಎಂದು ಲೈಕಾ ಪ್ರೊಡಕ್ಷನ್ಸ್ ಟ್ವೀಟ್ ಮಾಡಿದೆ.

ಇದನ್ನೂ ಓದಿ : ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!

ಈ ಫೋಟೋಗಳಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ನೆಟ್ಟಿಗರು ಈ ಫೋಟೋಗಳನ್ನು ನೆಚ್ಚಿಕೊಂಡಿದ್ದು, ಕಮೆಂಟ್ಸ್ ಹರಿದು ಬರುತ್ತಿದೆ.

Continue Reading

LATEST NEWS

Trending