DAKSHINA KANNADA
ರಾಜ್ಯದಲ್ಲಿ ಕೊರೊನಾ ಢಿಢೀರ್ ಕೊರೊನಾ ಹೆಚ್ಚಳ – ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ; ಹೊಸ ಮಾರ್ಗಸೂಚಿ ಬಿಡುಗಡೆ..!
ರಾಜ್ಯದಲ್ಲಿ ಡೀಡೀರ್ ಕೊರೊನಾ ಹೆಚ್ಚಳ ಕಂಡಿದೆ. ಕಳೆದ 10 ದಿನಗಳಿಂದ ನಿರಂತರ ಕೊರೊನಾ ಸೋಂಕು ಏರಿಕೆ ಹಿನ್ನಲೆಯಲ್ಲಿ ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.
ಬೆಂಗಳೂರು: ರಾಜ್ಯದಲ್ಲಿ ಡೀಡೀರ್ ಕೊರೊನಾ ಹೆಚ್ಚಳ ಕಂಡಿದೆ. ಕಳೆದ 10 ದಿನಗಳಿಂದ ನಿರಂತರ ಕೊರೊನಾ ಸೋಂಕು ಏರಿಕೆ ಹಿನ್ನಲೆಯಲ್ಲಿ ಸರಕಾರ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಸ್ವಂತ ಅಥವಾ ಯಾವುದೇ ವಾಹನದಲ್ಲಿದ್ದರೂ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಮುಂಜಾಗ್ರತಾ ಕ್ರಮವಾಗಿ ಕೊವಿಡ್ ಲಸಿಕೆ ಪಡೆಯಬೇಕು.
ನಿಯಮಗಳ ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಕ್ರಮಕೈಗೊಳ್ಳಬೇಕು. ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಪಿಂಗ್ ಮಾಲ್, ಪಬ್, ರೆಸ್ಟೋರೆಂಟ್, ಕಚೇರಿಗಳು, ಹೋಟೆಲ್, ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ.
ಮಾಸ್ಕ್ ಧರಿಸದೇ ಬರುವ ಸಿಬ್ಬಂದಿಗೆ ಪ್ರವೇಶ ನೀಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಕೊವಿಡ್ ನಿಯಮ ಪಾಲಿಸಲೇಬೇಕು. ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೊವಿಡ್ ವರದಿ ಕೈ ಸೇರುವವರಗೂ ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಬೇಕು.
ತಾಂತ್ರಿಕ ಸಲಹಾ ಸಮಿತಿ ತಜ್ಞರ ಸಲಹೆ ಮೇರೆಗೆ ಮಾರ್ಗಸೂಚಿ ಹೊರಡಿಸಲಾಗಿದೆ.ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿದ ತಾಂತ್ರಿಕ ಸಲಹಾ ಸಮಿತಿ ಮಾಸ್ಕ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಕ್ರಮವಹಿಸಲು ಮಾರ್ಷಲ್ ಹಾಗೂ ಪೊಲೀಸ್ ರ ನಿಗಾವಹಿಸಬೇಕು.
ಮಾರ್ಷಲ್ ಗಳು ಮಾಸ್ಕ್ ಕಡ್ಡಾಯ ಪಾಲಿಸುವ ಕುರಿತು ಪರಿಶೀಲಿಸುತ್ತಿರಬೇಕು.ಸಾರ್ವಜನಿಕ ಸಾರಿಗೆ – ಸ್ವಂತ ವಾಹನಗಳ ಪ್ರಯಾಣದಲ್ಲಿಯೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ILI & SARI ಲಕ್ಷಣ ಹೊಂದಿದವರು , ಹೈರಿಸ್ಕ್ ಹಾಗೂ ಆರೋಗ್ಯ ಸಮಸ್ಯೆ ಇದ್ದವರು ಆದ್ಯತೆ ಮೇರೆಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಅರ್ಹ ಜನರು ಬೂಸ್ಟರ್ ಕೊವಿಡ್ ಲಸಿಕೆ ಪಡೆಯಬೇಕು ಸುತ್ತೋಲೆ ಹೊರಡಿಸಿದ್ದಾರೆ.
DAKSHINA KANNADA
“ಗಬ್ಬರ್ ಸಿಂಗ್” ಮೇ 3 ರಂದು ತೆರೆಗೆ ; ಇಂದು ವಿಡಿಯೋ ಸಾಂಗ್ ರಿಲೀಸ್..!
ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ‘ಗಬ್ಬರ್ ಸಿಂಗ್’ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ. ಇದೀಗ ಈ ಸಿನೆಮಾದ ವಿಡಿಯೋ ಸಾಂಗ್ ರಿಲೀಸ್ ಆಗಿದ್ದು, ಜಸ್ಟ್ ರೋಲ್ ಫಿಲಂಸ್ನ ಯೂಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಸೂಜಿ ಕಣ್ದ ಮೋನಾಲಿಸಾ ಎಂಬ ಉತ್ತಮ ಸಾಹಿತ್ಯವನ್ನು ಹೊಂದಿರುವ ಹಾಡನ್ನು ರಿಲೀಸ್ ಮಾಡಲಾಗಿದೆ. ಹಾಡಿಗೆ ಉಮೇಶ್ ಮಿಜಾರ್ ಸಾಹಿತ್ಯ ಬರೆದಿದ್ದರೆ, ಬೋಜರಾಜ ವಾಮಂಜೂರು, ವಿಸ್ಮಯ ವಿನಾಯಕ ಹಾಗೂ ಸ್ವತಹ ಉಮೇಶ್ ಮಿಜಾರ್ ಹಾಡುಗಳನ್ನು ಹಾಡಿದ್ದಾರೆ.
‘ಗಬ್ಬರ್ ಸಿಂಗ್’ ತುಳು ಸಿನಿಮಾ ವಿಭಿನ್ನ ಕತೆಯನ್ನೊಳಗೊಂಡಿದ್ದು, ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಪ್ರೇಕ್ಷಕರಿಗೆ ಇಷ್ಟವಾಗುವ ರೀತಿಯಲ್ಲಿ ಕತೆಯನ್ನು ಹೆಣೆಯಲಾಗಿದೆ. ಉತ್ತಮ ಕತೆ, ನವಿರಾದ ಹಾಸ್ಯದೊಂದಿಗೆ ಸಿನಿಮಾ ಚೆನ್ನಾಗಿ ಮೂಡಿ ಬಂದಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಸಿನಿಮಾಕ್ಕೆ ಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಯಾದಾಗ ಮತ್ತೆ ಶಾಂತಿ ನೆಲೆಸುವಂತೆ ಮಾಡುವ ಖಡಕ್ ಅಧಿಕಾರಿ ಪಾತ್ರದಲ್ಲಿ ಶರಣ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.
‘ಗಬ್ಬರ್ ಸಿಂಗ್’ ಸಿನಿಮಾ ಮೇ 3 ರಂದು ಕರಾವಳಿ ಜಿ,ಲ್ಲೆಯಾದ್ಯಂತ ತೆರೆ ಕಾಣಲಿದೆ. ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದ್ದು, ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ. ಸಿನಿಮಾ ಮೇ 3 ರಂದು ತೆರೆ ಕಾಣಲಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್.
DAKSHINA KANNADA
ಪುತ್ತೂರಿನಲ್ಲಿ ಭೀ*ಕರ ಅಪಘಾ*ತ; ರಿಕ್ಷಾ ಚಾಲಕ ಸಾ*ವು
ಪುತ್ತೂರು : ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃ*ತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ನಸುಕಿನ ಜಾವ 2 ಗಂಟೆ ಸುಮಾರಿಗೆ ನಡೆದಿದೆ.
ಆಟೋ ರಿಕ್ಷಾ ಚಾಲಕ 30 ವರ್ಷದ ಜೈಸನ್ ಮೃ*ತಪಟ್ಟವರು. ಪುತ್ತೂರಿಗೆ ಬರುತ್ತಿದ್ದ ಬಸ್ ಮತ್ತು ವಿರುದ್ಧ ದಿಕ್ಕಿನಿಂದ ಚಲಿಸುತ್ತಿದ್ದ ರಿಕ್ಷಾ ನಡುವೆ ಡಿ*ಕ್ಕಿ ಸಂಭವಿಸಿದೆ.
ಇದನ್ನೂ ಓದಿ : ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ
ಅಪಘಾತದ ತೀವ್ರತೆಗೆ ರಿಕ್ಷಾ ನಜ್ಜುಗುಜ್ಜಾಗಿದೆ. ಚಾಲಕ ಜೈಸನ್ ರಿಕ್ಷಾದ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಪುತ್ತೂರು ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಜೈಸನ್ ಅವರನ್ನು ಹೊರತೆಗೆದಿದ್ದಾರೆ. ಆದರೆ, ಜೈಸನ್ ಆಗಲೇ ಇಹಲೋಕ ತ್ಯಜಿಸಿದ್ದರು.
DAKSHINA KANNADA
ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ
ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ಕಡೆ ಕ್ಷಣದಲ್ಲಿ ಅದೆಷ್ಟೋ ಮದುವೆಗಳು ಮುರಿದು ಬಿದ್ದ ಘಟನೆ ನಡೆದಿದೆ. ಹಾಗೆಯೇ ಇಲ್ಲೊಂದು ಮದುವೆ ಮಂಟಪದಲ್ಲಿ ಕೊನೆಯ ಕ್ಷಣ ವರನಿಂದ ತಾಳಿ ಕಟ್ಟಲು ವಧು ನಿರಾಕರಸಿದ ಕಾರಣ ಮದುಮೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಕೊಣಾಲು ಗ್ರಾಮದ ಕೋಲ್ಪೆ ದಿ। ಬಾಬು ಗೌಡ ಅವರ ಪುತ್ರ ಉಮೇಶ ಅವರ ಮದುವೆಯು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ। ಕೊರಗಪ್ಪ ಗೌಡ ಅವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಎ.26 ರಂದು ಬೆಳಗ್ಗೆ 11.35ರ ಮೂಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಮದುವೆ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ಮದುವೆಯ ದಿಬ್ಬಣದಲ್ಲಿ ಬಂದಿದ್ದರು. ವಧು ದಾರೆ ಸೀರೆ ಹಾಕಿ ಪರಸ್ಪರ ಹೂಮಾಲೆ ಕೂಡ ಹಾಕಿದ್ದರು. ಆದರೆ ತಾಳಿ ಕಟ್ಟಲು ಮುಂದಾದಗ ನನಗೆ ಈ ಮದುವೆ ಇಷ್ಟ ವಿಲ್ಲ ಎಂದು ವಧು ಹೇಳಿದ್ದಾಳೆ.
ಇದರಿಂದ ಎರಡೂ ಕಡೆಯವರು ಕಂಗಾಲಾಗಿ ವಧುವಿನ ಮನವೊಲಿಕೆಗೆ ಮುಂದಾದರು. ಆದರೆ ವಧು ಒಪ್ಪಲಿಲ್ಲ. ಬಳಿಕ ಎರಡೂ ಕಡೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.
ಔತಣ ಕೂಟಕ್ಕೆ ಸಿದ್ಧತೆ:
ವರನ ಮನೆಯಲ್ಲಿ ಮಧ್ಯಾಹ್ನದ ಔತಣ ಕೂಟಕ್ಕೆ ಸುಮಾರು 500 ಜನರಿಗೆ ಮಾಂಸಾಹಾರಿ ಊಟ ತಯಾರಾಗಿತ್ತು. 1 ಸಾವಿರದಷ್ಟು ಐಸ್ಕ್ರೀಮ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಮದುವೆ ಮುರಿದು ಬಿದ್ದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಮತ್ತೆ ಮದುವೆಯಾಗಲು ಒಪ್ಪಿದ ವಧು:
ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಮತ್ತೆ ಮದುವೆ ಆಗಲು ಒಪ್ಪಿದ್ದರು. ಆದರೆ ಆಗ ವರ ಉಮೇಶ್ ಅವರು ಮದುವೆ ಆಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!