DAKSHINA KANNADA
‘ಮೈತಿದಿ’ ನಾಟಕದ ಪ್ರತಿ ದೃಶ್ಯವೂ ಸಿನೆಮಾ ಶೈಲಿಯಲ್ಲಿ ಪ್ರದರ್ಶನ : ಕೊಡಿಯಾಲ್ಬೈಲ್
ತುಳು ರಂಗಭೂಮಿಗೆ ಹೊಸ ಆಯಾಮ ನೀಡುತ್ತಾ ಬಂದಿರುವ ವಿಜಯ ಕುಮಾರ್ ಕೊಡಿಯಾಲ್ಬೈಲ್ ಅವರು ಈ ಬಾರಿ ಮತ್ತೊಂದು ನಾಟಕವನ್ನು ತುಳು ರಂಗಕ್ಕೆ ತಂದಿದ್ದಾರೆ.
ಮಂಗಳೂರು: ತುಳು ರಂಗಭೂಮಿಗೆ ಹೊಸ ಆಯಾಮ ನೀಡುತ್ತಾ ಬಂದಿರುವ ವಿಜಯ ಕುಮಾರ್ ಕೊಡಿಯಾಲ್ಬೈಲ್ ಅವರು ಈ ಬಾರಿ ಮತ್ತೊಂದು ನಾಟಕವನ್ನು ತುಳು ರಂಗಕ್ಕೆ ತಂದಿದ್ದಾರೆ.
‘ಅಸಲ್’, ‘ಭೋಜೆ ಬುಡಿಯರೆಗೆ’, ‘ಸೀತಾ ಟೀಚರ್’, ‘ಮದಿಮೆ’, ‘ಕುಟುಂಬ’, ‘ಕೋಡೆ ಇನಿ ಎಲ್ಲೆ’ ಹೀಗೆ ಪ್ರತಿಯೊಂದು ನಾಟಕದಲ್ಲಿ ಹೊಸತನ ಮೂಡಿದೆ.
ಸಮಾಜಕ್ಕೆ ಒಂದು ಹೊಸತನವಾದ ಸಂದೇಶ ನೀಡುವ ಕೊಡಿಯಾಲ್ ಬೈಲ್ ಅವರ ‘ಮೈತಿದಿ’ ನಾಟಕ ಯಾವ ರೀತಿ ಇರಲಿದೆ ಎಂಬುದು ಅಭಿಮಾನಿಗಳಿಗೆ ಕಾತರ ಮೂಡಿಸಿದೆ.
ಶಿವದೂತೆ ಗುಳಿಗೆ ನಾಟಕವನ್ನು ವಿಭಿನ್ನ ಬೆಳಕಿನ ಸಂಯೋಜನೆಯೊಂದಿಗೆ ರಂಗಕ್ಕೆ ನೀಡಿ ಸುಪರ್ ಹಿಟ್ ಅನಿಸಿದ ಮೇಲೆ ಕೊಡಿಯಾಲ್ ಬೈಲ್ ಅವರಿಗೆ ಮತ್ತೊಂದು ಚಾಲೆಂಜ್ ಆಗಿದೆ.
ಅವರ ಪ್ರಕಾರ ಈ ಹೊಸ ನಾಟಕ ರಂಗ ಭೂಮಿಗೆ ಮತ್ತೊಂದು ಹೊಸತನ ಹಾಗೂ ವಿಶೇಷವಾದ ರಂಗ ವಿನ್ಯಾಸ ಅಂದರೆ ವೇದಿಕೆಯಲ್ಲೇ ಕಿಚನ್, ಬೆಡ್ ರೂಮ್ ಮತ್ತು ಕ್ರಿಕೆಟ್ ಮೈದಾನ ಇರಲಿದೆ ಎಂದರು.
ವಿಶೇಷವಾದ ಬೆಳಕಿನ ಸಂಯೋಜನೆಯಲ್ಲದೆ ಪ್ರತಿಯೊಂದು ದೃಶ್ಯವೂ ಸಿನಿಮಾ ಶೈಲಿಯಲ್ಲಿ ಹಿನ್ನೆಲೆ ಸಂಗೀತದಿಂದ ಕೂಡಿರಲಿದೆ.
ಒಂದು ಕೌಟುಂಬಿಕ ಕಥಾಹಂದರ ಹೊಂದಿದ ಈ ನಾಟಕ ಪ್ರೇಕ್ಷಕರಿಗೆ ಮನರಂಜನೆಗೆ ಕಮ್ಮಿ ಇಲ್ಲ ಅಂತಾರೆ ಕೊಡಿಯಾಲ್ ಬೈಲ್.
BANTWAL
ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!
ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.
ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.
ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ದ.ಕ ದಲ್ಲಿ ಭಾರಿ ಮಳೆ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿದ್ದ ಅಂಗಡಿಗಳಿಗೆ ಹಾನಿ..!!
ಧರ್ಮಸ್ಥಳ: ಧರ್ಮಸ್ಥಳದಲ್ಲಿ 3ನೇ ದಿನದ ಲಕ್ಷ ದೀಪೋತ್ಸವದ ವೈಭವ ಒಂದು ಕಡೆಯಾದರೆ, ಇನ್ನೊಂದೆಡೆ ಗುಡುಗು ಸಹಿತ ಬಾರಿ ಮಳೆ ಅವಾಂತರ ತಂದಿದೆ.
ಕೆಲವು ಅಂಗಡಿಗಳಿಗೆ ಬಹಳ ಹಾನಿ ಆಗಿದೆ. ಮಳೆ ಅಂಗಡಿ ಮಾಲೀಕರಿಗೆ ನಷ್ಟವನ್ನುಂಟು ಮಾಡಿದೆ. ಮಳೆಗೆ ಅಂಗಡಿಯೊಳಗಿದ್ದ ಕೆಲವು ವಸ್ತುಗಳು ಮಳೆಗೆ ಕೊಚ್ಚಿಕೊಂಡು ಹೋಗಿದೆ.
ಧರ್ಮಸ್ಥಳ ಶಾಲಾ ಮೈದಾನದಲ್ಲಿ ನಡೆಯುತ್ತಿದ್ದ ವಸ್ತು ಪ್ರದರ್ಶನಕ್ಕೆ ಬಹಳ ಸಮಸ್ಯೆ ಆಗಿದೆ. ಸಭಾಂಗಣದ ಬಳಿ ಹಾಕಿದ್ದ ಕುರ್ಚಿಗಳು ಒದ್ದೆಯಾಗಿದೆ.
DAKSHINA KANNADA
Putturu: ಮುಸ್ಲಿಂ ವಿದ್ಯಾರ್ಥಿ ಜೋಡಿಗಳ ಮೇಲೆ ಹಲ್ಲೆ..!!
ಪುತ್ತೂರು: ಮುಸ್ಲಿಂ ವಿದ್ಯಾರ್ಥಿಗಳ ಜೋಡಿಯನ್ನು ತಡೆ ಹಿಡಿದು ಹಲ್ಲೆಗೆ ಯತ್ನಿಸಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆಯು ಕೆಲವು ವಾರಗಳ ಹಿಂದೆ ನಡೆದಿದ್ದು, ಅದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದ ಮುಸ್ಲಿಂ ಸಮುದಾಯದವರೇ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವ ಆರೋಪಿಗಳು ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿನಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಕುರಿತು ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru7 days ago
Film: ಕಾಂತಾರ ಖ್ಯಾತಿಯ ಸಪ್ತಮಿ ಗೌಡ ಟಾಲಿವುಡ್ ಗೆ ಎಂಟ್ರಿ
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್