LATEST NEWS
ವಾರದ ಹಿಂದೆ ಜೈಲಿನಿಂದ ಬಿಡುಗಡೆಗೊಂಡಿದ್ದ ಆರೋಪಿಯಿಂದ ಗಾಂಜಾ ಮಾರಾಟ: ಮತ್ತೆ ಕೈಕೋಳ ತೊಡಿಸಿದ ಸಿಸಿಬಿ
ಮಂಗಳೂರು: ನಗರದಾದ್ಯಂತ ಮಾದಕ ವಸ್ತು MDMA (Methylene dioxy methamphetamine) ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ಸೇರಿದಂತೆ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಇಮ್ರಾನ್ @ ಮೂಡುಶೆಡ್ಡೆ ಇಮ್ರಾನ್(36), ಅಮ್ಜತ್ ಖಾನ್(42), ಅಬ್ದುಲ್ ಬಶೀರ್ ಅಬ್ಬಾಸ್(39) ಎಂದು ಗುರುತಿಸಲಾಗಿದೆ.
ಘಟನೆ ವಿವರ
ಮಂಗಳೂರು ಮೂಡುಶೆಡ್ಡೆಯ ಮೊಹಮ್ಮದ್ ಇಮ್ರಾನ್ ಎಂಬಾತನು ಇನ್ನಿಬ್ಬರು ಆರೋಪಿಗಳೊಂದಿಗೆ ಸೇರಿ ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿ ಬೊಂದೆಲ್, ಪಡುಶೆಡ್ಡೆ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಪೊಲೀಸರು ದಾಳಿ ನಡೆಸಿ 170 ಗ್ರಾಂ ತೂಕದ ರೂ. 9,00,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಎಂಡಿಎಂಎ ಫಿಲ್ಸ್-5, ಮಾರುತಿ ರಿಡ್ಜ್ ಕಾರು-1, 6 ಮೊಬೈಲ್ ಫೋನುಗಳು ಹಾಗೂ ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 14,76,500/-ಆಗಬಹುದು. ಆರೋಪಿಗಳ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಶೋಧ ನಡೆಯುತ್ತಿದೆ.
ಆರೋಪಿಗಳ ಪೈಕಿ ಇಮ್ರಾನ್ @ ಮೂಡುಶೆಡ್ಡೆ ಇಮ್ರಾನ್ ಎಂಬಾತನ ವಿರುದ್ಧ 2016 ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಾಮಂಜೂರು ಚರಣ್ ಎಂಬಾತನ ಕೊಲೆ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2017 ರಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ದರೋಡೆ ಪ್ರಕರಣ, 2019 ರಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಗಾಂಜಾ ಸಾಗಾಟ ಮತ್ತು ಮಾರಾಟ ಪ್ರಕರಣ, 2020 ರಲ್ಲಿ ಬಜಪೆ ಪೊಲೀಸ್ ಠಾಣೆಯಲ್ಲಿ ಮನೆಗೆ ಅಕ್ರಮ ಪ್ರವೇಶ ಮಾಡಿ ಹಾನಿಗೊಳಿಸಿದ ಪ್ರಕರಣ, 2022 ರಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಯ 1 ಪ್ರಕರಣ,
ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ, ಉಡುಪಿ ಜಿಲ್ಲೆಯ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ, 2023 ರಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ MDMA ಸಾಗಾಟ ಮತ್ತು ಮಾರಾಟ ಪ್ರಕರಣ ಸೇರಿದಂತೆ ಒಟ್ಟು 9 ಪ್ರಕರಣಗಳು ದಾಖಲಾಗಿದೆ. ಈತನು ವಾರದ ಹಿಂದೆ ಜೈಲ್ ನಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದನು.
ಮತ್ತೋರ್ವ ಆರೋಪಿ ಅಬ್ದುಲ್ ಬಶೀರ್ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣವೊಂದು ದಾಖಲಾಗಿದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ನರೇಂದ್ರ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
DAKSHINA KANNADA
ಮಂಗಳೂರು : ‘ಮಹೇಶ್’ ಬಸ್ ಮಾಲೀಕ ಆತ್ಮಹತ್ಯೆ..!
ಮಂಗಳೂರು: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು ಕದ್ರಿ ಕಂಬಳ ಸಮೀಪ ಇರುವ ಅಪಾರ್ಟ್ ಮೆಂಟ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಹೇಶ್ ಹೆಸರಿನಲ್ಲಿ ಹಲವಾರು ಸಿಟಿ ಬಸ್ ಗಳು ದಿನನಿತ್ಯ ಸಂಚರಿಸುತ್ತಿದ್ದು, ಜನಮನ್ನಣೆ ಪಡೆದಿದೆ.
ಬಸ್ ಉದ್ಯಮದ ಬಗ್ಗೆ ಭಾರೀ ಪ್ರೀತಿ ಇಟ್ಟುಕೊಂಡಿದ್ದ ಪ್ರಕಾಶ್ ಯಾಕಾಗಿ ಸಾವಿಗೆ ಶರಣಾಗಿದ್ದಾರೆ ಎನ್ನುವುದು ಆಪ್ತ ಬಳಗಕ್ಕೆ ಶಾಕ್ ನೀಡಿದೆ. ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
- DAKSHINA KANNADA7 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS7 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA7 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA7 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!