Connect with us

LATEST NEWS

ಮಂಗಳೂರು: ಶಾಂತಿ-ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 11 ಗಂಟೆಗೆ ಎಲ್ಲಾ ಸಮುದಾಯದ ಮುಖಂಡರಿಗೆ ಮತ್ತು ಸಂಘಸಂಸ್ಥೆಗಳ ನಾಯಕರ ಜೊತೆ ಶಾಂತಿ ಸಭೆ ಆಯೋಜಿಸಿದ್ದು, ಸಭೆಯಲ್ಲಿ ಎಡಿಜಿಪಿ ಅಲೋಕ್‌ ಕುಮಾರ್‌, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವ, ಮಂಗಳೂರು ನಗರ ಪೊಲೀಸ್ ಕಮೀಷನರ್‌, ಜಿಲ್ಲಾ ಎಸ್ಪಿ, ಜಿ.ಪ.ಸಿಇಒ ಸೇರಿ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ.

Click to comment

Leave a Reply

Your email address will not be published. Required fields are marked *

Ancient Mangaluru

ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

Published

on

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್‌ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?

ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಎಸ್.ಎಂ.ಎಸ್ ಮೂಲಕ ಮಾಹಿತಿ :

ಎಲ್ಲಾ ಏರ್‌ಲೈನ್ ಚೆಕ್-ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್‌ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.

Continue Reading

FILM

ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!

Published

on

ಬೆಂಗಳೂರು : ಬಿಗ್ ಬಾಸ್ ಕನ್ನಡ ಕಿರುತೆರೆಯಲ್ಲಿ ಬಹಳ ಸದ್ದು ಮಾಡುವ ಅತಿದೊಡ್ಡ ರಿಯಾಲಿಟಿ ಶೋ. ಹಿರಿತೆರೆ, ಕಿರುತೆರೆ, ಸಾಮಾನ್ಯ ವ್ಯಕ್ತಿ, ಸಾಧಕ ಶೋನಲ್ಲಿ ಭಾಗಿಯಾಗ್ತಾನೆ. ಈ ಶೋ ಯಾವಾಗಲೂ ಸದ್ದು ಮಾಡುತ್ತಿರುತ್ತದೆ. ಸ್ಪರ್ಧಿಗಳೂ ಸದಾ ಸುದ್ದಿಯಲ್ಲಿರುತ್ತಾರೆ. ಇದೀಗ ಬಿಗ್ ಬಾಸ್ ಸೀಸನ್ 10 ರ ಸ್ಪರ್ಧಿ, ನಟಿ ನಮ್ರತಾ ಗೌಡ ಆಶ್ಚರ್ಯಕರ ಹೇಳಿಕೆ ನೀಡಿದ್ದಾರೆ.

ಪ್ಲ್ಯಾನ್ ಪ್ರಕಾರ ನಡೆಯುತ್ತಿಲ್ಲ:

ನಮ್ರತಾ ಗೌಡ ಯಾರಿಗೆ ತಾನೇ ಗೊತ್ತಿಲ್ಲ. ನಾಗಿಣಿ ಎಂದಾಕ್ಷಣ ತಟ್ಟನೆ ನೆನಪಾಗುವ ಹೆಸರು. ಕನ್ನಡ ಕಿರುತೆರೆಯಲ್ಲಿ ಖ್ಯಾತರಾದವರು. ನಾಗಿಣಿ ಮುಗಿಯುತ್ತಿದ್ದಂತೆ ಬಿಗ್ ಬಾಸ್ ನತ್ತ ಲಗ್ಗೆ ಇಟ್ಟರು. ಬಿಗ್ ಬಾಸ್​ ನಲ್ಲಿ ಇದ್ದಾಗ ವಿನಯ್ ಗೌಡ, ನಮ್ರತಾ, ರಕ್ಷಕ್ ಬುಲೆಟ್, ಈಶಾನಿ, ಮೈಕಲ್ ಅಜಯ್ ಜೊತೆಯಾಗಿ ಇರುತ್ತಿದ್ದರು.

ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಹೊರಗೆ ಪ್ರತಿ ವಾರ ಸಿಗೋಣ, ಪಾರ್ಟಿ ಮಾಡೋಣ ಎಂದೆಲ್ಲ ಪ್ಲ್ಯಾನ್ ಮಾಡಿದ್ದರು. ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಆರಂಭದಲ್ಲಿ ಕೆಲವು ಬಾರಿ ಇವರು ಭೇಟಿ ಆಗಿದ್ದು ಇದೆ. ಈಗ ಆ ರೀತಿಯ ಭೇಟಿಗಳು ನಿರಂತರವಾಗಿ ನಡೆಯುತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?

ದಿನವೂ ಸಿಗಬೇಕು ಇಲ್ಲವಾದರೆ ವಾರಕ್ಕೆ ಒಮ್ಮೆ ಆದರೂ ಸಿಗಬೇಕು ಎಂದು ಬಿಗ್ ಬಾಸ್​​ನಲ್ಲಿ ಪ್ಲ್ಯಾನ್ ಮಾಡಿದ್ದೀವಿ. ಆದರೆ, ಅದೆಲ್ಲ ನಡೆಯುತ್ತಿಲ್ಲ. ನನ್ನ ಸರ್ಕಲ್​ನಲ್ಲಿ ಇರುವವರನ್ನು ನನ್ನ ಬರ್ತ್ ಡೇ ಕರೆದಿದ್ದೆ. ನಾನು ರೆಗ್ಯುಲರ್ ಆಗಿ ಯಾರ ಜೊತೆಗೂ ಕಂಟ್ಯಾಕ್ಟ್ ಇಲ್ಲ. ವಿನಯ್, ಈಶಾನಿ ಜೊತೆ ಆಗಾಗ ಕಾಲ್​ನಲ್ಲಿ ಮಾತನಾಡುತ್ತೇನೆ. ರಕ್ಷಕ್, ಕಾರ್ತಿಕ್ ಹಾಗೂ ಇತರರು ಈವೆಂಟ್​ನಲ್ಲಿ ಮಾತಾಡ್ತೀನಿ ಎಂದಿದ್ದಾರೆ.

ಕಾರು ಖರೀದಿಸಿದ ನಟಿ : 

ಇತ್ತೀಚೆಗಷ್ಟೇ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ನಮ್ರತಾ ಗೌಡ, ಅಂದು ನಮ್ರತಾ ಗೌಡ ಅವರು ಹೊಸ ಕಾರೊಂದನ್ನು ಖರೀದಿಸಿದ್ದರು. ಎಂಜಿ ಕಾಮೆಟ್ ಎಲೆಕ್ಟ್ರಿಕ್ ಕಾರನ್ನು ನಮ್ರತಾ ಗೌಡ ಖರೀದಿಸಿದ್ದರು. ಈ ಕಾರಿನ ಬೆಲೆ 8 ರಿಂದ 9 ಲಕ್ಷ ರೂ. ಆಗಿದೆ. ಕಾರು ಕೊಂಡ ಸಂಭ್ರಮವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಅವರ ಅಭಿಮಾನಿಗಳು ಶುಭಹಾರೈಸಿದ್ದರು.

Continue Reading

LATEST NEWS

ಅತ್ತೆ – ಅಳಿಯ ಲವ್; ಹೆಂಡತಿಯನ್ನೇ ತ್ಯಾಗ ಮಾಡಿದ ಪತಿ! ಏನಿದು ಕಥೆ?

Published

on

ಮಂಗಳೂರು / ಬಿಹಾರ : ಯುವತಿ – ಯುವಕರು ಪ್ರೀತಿಯಲ್ಲಿ ಬೀಳುವುದು ಸಾಮಾನ್ಯ. ಅವರ ಪ್ರೀತಿಗೆ ಮನೆಯವರು ಒಪ್ಪಿ ಮದುವೆ ಮಾಡಿಸುವುದಿದೆ. ಕೆಲವೊಮ್ಮೆ ಒಪ್ಪಿಗೆ ಸಿಗದೇ ಹೋಗಬಹುದು. ಆದ್ರೆ, ಇಲ್ಲಿ ಎಲ್ಲವೂ ವಿಭಿನ್ನ. ಯಾಕೆಂದ್ರೆ ಇಲ್ಲಿ ಪ್ರೀತಿಗೆ ಬಿದ್ದಿದ್ದು ಬೇರೆ ಯಾರೂ ಅಲ್ಲ ಅತ್ತೆ ಹಾಗೂ ಅಳಿಯ. ಈ ಮದುವೆ ಮಾಡಿಸಿದ್ದು ಮಾವ! ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಹೆಂಡತಿಯನ್ನು ತ್ಯಾಗ ಮಾಡಿದ ಗಂಡ :

ಈ ಘಟನೆ ನಡೆದಿರುವುದು ಬಿಹಾರದ ಬಂಕಾದಲ್ಲಿ. ತನ್ನ ಹೆಂಡತಿಯ ತಾಯಿಯೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಅಳಿಯನನ್ನು ಮಾವ ಮತ್ತು ಗ್ರಾಮಸ್ಥರು ಸೇರಿ ಮದುವೆ ಮಾಡಿಸಿದ್ದಾರೆ. 55 ವರ್ಷದ ದಿಲೇಶ್ವರ್ ದರ್ವೆ ಅವರ ಪತ್ನಿ ಅವರ ಅಳಿಯ ಸಿಕಂದರ್ ಯಾದವ್​​ನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದರು.

ಇತ್ತೀಚಿಗಷ್ಟೇ ಇವರಿಬ್ಬರ ಏಕಾಂತದ ಸಮಯದಲ್ಲಿ ರೆಡ್​​ ಹ್ಯಾಂಡ್​​ ಆಗಿ ಸಿಕ್ಕಿ ಬಿದ್ದಿದ್ದಾರೆ. ಇವರಿಬ್ಬರ ಪ್ರೇಮ ಕಥೆ ಊರೆಲ್ಲಾ ಸುದ್ದಿಯಾಗುತ್ತಿದ್ದಂತೆ ಗ್ರಾಮಸ್ಥರು ಒಟ್ಟಾಗಿ ಸೇರಿ ಅಳಿಯನೊಂದಿಗೆ ಅತ್ತೆಗೆ ಮದುವೆ ಮಾಡಿಸಿದ್ದಾರೆ.

ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದ ಅತ್ತೆ – ಅಳಿಯ :

ಸಿಕಂದರ್ ಯಾದವ್ ಪತ್ನಿಯನ್ನು ಕಳೆದುಕೊಂಡಿದ್ದ.​​ ಕೆಲ ತಿಂಗಳುಗಳಿಂದ ಅತ್ತೆಯ ಮನೆಯಲ್ಲಿ ವಾಸಿಸಲು ಆರಂಭಿಸಿದ್ದ. ಈ ಅವಧಿಯಲ್ಲಿ ಅತ್ತೆ ಮತ್ತು ಅಳಿಯ ಪರಸ್ಪರ ಹತ್ತಿರವಾಗಿದ್ದಾರೆ. ಈ ವೇಳೆ ಅತ್ತೆಯ ಪತಿಗೆ ಅನುಮಾನ ಬಂದಿದೆ. ಈ ಬಗ್ಗೆ ಆತ ತನಿಖೆ ನಡೆಸಿದ್ದು, ಇವರಿಬ್ಬರ ಅಕ್ರಮ ಸಂಬಂಧ ಬಯಲಾಗಿದೆ. ಇಬ್ಬರೂ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಈ ಬಗ್ಗೆ ದಿಲೇಶ್ವರ್ ಪಂಚಾಯಿತಿಗೆ ಮಾಹಿತಿ ನೀಡಿದ್ದರು. ಇದಲ್ಲದೇ, ಸಿಕಂದರ್ ಯಾದವ್ ತನ್ನ ಅತ್ತೆಯ ಮೇಲಿನ ಪ್ರೀತಿಯನ್ನು ಪಂಚಾಯತ್ ಮತ್ತು ಗ್ರಾಮಸ್ಥರ ಮುಂದೆ ಬಹಿರಂಗವಾಗಿ ಹೇಳಿಕೊಂಡಿದ್ದಾನೆ.

ಇದನ್ನೂ ಓದಿ : 70 ರ ವೃದ್ಧನಿಗೆ ಸಂಗಾತಿ ಬೇಕಾಗಿದ್ದಾಳೆ; ಆತ ಜಾಹೀರಾತಿಗಾಗಿ ಮಾಡುತ್ತಿರೋ ಖರ್ಚೆಷ್ಟು ಗೊತ್ತಾ!?

ದಿಲೇಶ್ವರ್ ಮತ್ತು ಗ್ರಾಮಸ್ಥರ ಒಪ್ಪಿಗೆಯೊಂದಿಗೆ, ಸಿಕಂದರ್ ಮತ್ತು ಅತ್ತೆಯ ವಿವಾಹ ಮಾಡಿಸಲಾಗಿದೆ. ಸದ್ಯ ಇವರಿಬ್ಬರ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Continue Reading

LATEST NEWS

Trending