Tuesday, March 28, 2023

ಮೇಣದ ಬತ್ತಿ ಹಚ್ಚುವಾಗ ಲಂಗಕ್ಕೆ ಬೆಂಕಿ ತಗುಲಿ ವೈದ್ಯಕೀಯ ವಿದ್ಯಾರ್ಥಿನಿ ಸಾವು

ಕೊಲ್ಲಂ: ಮೇಣದ ಬತ್ತಿ ಹಚ್ಚುವಾಗ ಲಂಗಕ್ಕೆ ಬೆಂಕಿ ತಗುಲಿ ವಿದ್ಯಾರ್ಥಿನಿಯೊಬ್ಬಳು ಸುಟ್ಟಗಾಯಗಳಿಂದ ಮೃತಪಟ್ಟ ಘಟನೆ ಕೇರಳದ ಕೊಲ್ಲಂನಲ್ಲಿ ನಡೆದಿದೆ.

ಮೃತರನ್ನು ಕುನ್ನತ್ತೂರ್ ಪಶ್ಚಿಮದ ಥಾನಲ್ ಹೌಸ್ ನ ದಿವಂಗತ ಅನಿಲ್ ಮತ್ತು ಲೀನಾ ಅವರ ಏಕೈಕ ಪುತ್ರಿ ಮಿಯಾ (17) ಎಂದು ಗುರುತಿಸಲಾಗಿದೆ.


ತಿರುವನಂತಪುರಂ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಅವರು ಕೊನೆಯುಸಿರೆಳೆದರು.
ಎಪ್ರಿಲ್ 14 ರಂದು ಕರೆಂಟ್ ಆರಿ ಹೋದ ನಂತರ ಮೇಣದ ಬತ್ತಿಯನ್ನು ಹೊತ್ತಿಸುವ ಸಂದರ್ಭ ಅಕಸ್ಮಾತ್ ಆಗಿ ಸ್ಕರ್ಟ್ ಗೆ ಬೆಂಕಿ ತಗುಲಿತು. ಆ ಸಂದರ್ಭದಲ್ಲಿ ಮನೆಯಲ್ಲಿ ಮಿಯಾ ಒಬ್ಬಳೇ ಇದ್ದಳು.

ಟಿನ್ನರ್‌ನ್ನು ಒರೆಸಿದ ಉಡುಪನ್ನು ಹುಡುಗಿ ಧರಿಸಿದ್ದಳು ಹಾಗಾಗಿ ದೇಹದಲ್ಲಿ ಹಠಾತ್ ಬೆಂಕಿಗೆ ಕಾರಣವಾಯಿತು ಎಂದು ಹೇಳಲಾಗುತ್ತದೆ.

ಮಿಯಾಳ ಅಳುವನ್ನು ಕೇಳಿದ ಸ್ಥಳೀಯರು ಅವಳನ್ನು ಸಾಸ್ತಂಕೋಟಾದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು.
ನಂತರ ಅವರನ್ನು ತಿರುವನಂತಪುರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಕೊನೆಯುಸಿರೆಳೆದಿದ್ದಾಳೆ.

LEAVE A REPLY

Please enter your comment!
Please enter your name here

Hot Topics

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ-20 ಉಮ್ರಾ ಯಾತ್ರಾರ್ಥಿಗಳ ದಾರುಣ ಮೃತ್ಯು..!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ.ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ...

ಕಾರ್ಕಳ : ಅನಾರೋಗ್ಯದಿಂದ ಸಾವನ್ನಪ್ಪಿದ ಮನೆ ಮಗನ ಆಘಾತದಿಂದ ತಾಯಿ ಜೀವಾಂತ್ಯ..!

ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ.ಕಾರ್ಕಳ : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು...

ಮಂಗಳೂರು : ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ನಾಶ..!

ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿದೆ.ಮಂಗಳೂರು : ಮಂಗಳೂರು ಹೊರವಲಯದ ಅಡ್ಯಾರ್ ಬಳಿ ಐಸ್ ಕ್ರೀಮ್ ದಾಸ್ತಾನು ಮಳಿಗೆಗೆ ಬೆಂಕಿ...