LATEST NEWS
ಆಂಧ್ರಪ್ರದೇಶದಲ್ಲೊಂದು ಅಮಾನವೀಯ ಕೃತ್ಯ: ಮೂಢನಂಬಿಕೆಯ ಹೆಸರಲ್ಲಿ ಹೆತ್ತ ಮಕ್ಕಳನ್ನೇ ಬಲಿಕೊಟ್ಟ ದಂಪತಿ..!
ಆಂಧ್ರಪ್ರದೇಶದಲ್ಲೊಂದು ಅಮಾನವೀಯ ಕೃತ್ಯ: ಮೂಢನಂಬಿಕೆಯ ಹೆಸರಲ್ಲಿ ಹೆತ್ತ ಮಕ್ಕಳನ್ನೇ ಬಲಿಕೊಟ್ಟ ದಂಪತಿ..!
ಮದನಪಲ್ಲಿ(ಆಂಧ್ರ ಪ್ರದೇಶ) : ಮೂಢನಂಬಿಕೆ, ಮಾಟ, ಮಂತ್ರ ಇತ್ಯಾದಿಗಳನ್ನು ನಂಬಿ ಎಷ್ಟೋ ಮಂದಿ ಸಿಕ್ಕಸಿಕ್ಕದವರ ಮಕ್ಕಳನ್ನು ಕೊಲೆ ಮಾಡಿ ನರಬಲಿ ನೀಡುವ ಘಟನೆಗಳು ಒಂದೆಡೆ ನಡೆಯುತ್ತಿದ್ದರೆ, ತಾವೇ ಹೆತ್ತ ಮಕ್ಕಳನ್ನು ಕೊಲೆ ಮಾಡುವ ಘಟನೆಗಳೂ ವರದಿಯಾಗುತ್ತಿವೆ.
ಅಂಥದ್ದೇ ಒಂದು ಭಯಾನಕ ಘಟನೆ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ನಡೆದಿದೆ. ತಂತ್ರವಾದಿಯ ಮಾತನ್ನು ಕೇಳಿದ ತಾಯಿಯೊಬ್ಬಳು ವಯಸ್ಸಿಗೆ ಬಂದ ತನ್ನ ಹೆಣ್ಣುಮಕ್ಕಳನ್ನು ಕೊಲೆ ಮಾಡಿರುವ ಘಟನೆ ಇದಾಗಿದೆ.
ಆಂಧ್ರ ಪ್ರದೇಶದ ಮದನಪಲ್ಲಿ ನಗರದ ಹೊರವಲಯದಲ್ಲಿರುವ ಶಿವ ನಗರದ ಶ್ರೀ ಶಿರಡಿ ಸಾಯಿಬಾಬಾ ಅಪಾರ್ಟ್ ಮೆಂಟ್ ನಿವಾಸಿಗಳಾದ ಪದ್ಮಜಾ ಮತ್ತು ಪುರುಷೋತ್ತಮ್ ನಾಯ್ಡು ಎಂಬ ದಂಪತಿಗಳು ಈ ಕೃತ್ಯ ಎಸಗಿದ್ದು ಈ ಇಬ್ಬರೂ ಉನ್ನತ ಶಿಕ್ಷಣ ಪಡೆದವರಾಗಿದ್ದಾರೆ.
ಪದ್ಮಜಾ ಖಾಸಗಿ ಶಾಲೆಯಲ್ಲಿ ಉಪಪ್ರಾಂಶುಪಾಲೆಯಾಗಿದ್ದರೆ ಪುರುಷೋತ್ತಮ್ ಸರ್ಕಾರಿ ಶಾಲೆಯೊಂದರಲ್ಲಿ ಉಪ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸುತ್ತಿದ್ದನು.
ಕೋವಿಡ್ -19 ಕಂಡುಬಂದ ನಂತರದಲ್ಲಿ ಹೆಚ್ಚಿನ ಸಮಯವನ್ನು ತಮ್ಮ ಮನೆಯಲ್ಲೇ ಕಳೆಯುತ್ತಿದ್ದ ಪದ್ಮಜಾ-ಪುರುಷೋತ್ತಮ್ ದಂಪತಿಗಳು ಕೆಲವೊಮ್ಮೆ ವಿಚಿತ್ರವಾಗಿ ವರ್ತಿಸುತ್ತಿದ್ದರು.
ನಿನ್ನೆ (ಜನವರಿ 24) ಮನೆಯಿಂದ ವಿಚಿತ್ರವಾದ ಮತ್ತು ದೊಡ್ಡ ಶಬ್ದಗಳನ್ನು ಕೇಳಿದ ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದರು.
ಆರಂಭದಲ್ಲಿ ದಂಪತಿಗಳು ಪೊಲೀಸರನ್ನು ಮನೆಗೆ ಪ್ರವೇಶಿಸದಂತೆ ತಡೆದರು. ಪೊಲೀಸರು ಮನೆಯೊಳಗೆ ಪ್ರವೇಶಿದ ವೇಳೆ ಒಬ್ಬ ಯುವತಿ ಪೂಜಾಕೋಣೆಯಲ್ಲಿ ಶವವಾಗಿದ್ದರೆ ಇನ್ನೊಬ್ಬಳು ಇನ್ನೊಂದು ಕೋಣೆಯಲ್ಲಿ ಹೆಣವಾಗಿ ಕಂಡುಬಂದಿದ್ದಾಳೆ.
ಎರಡೂ ಶವಗಳ ದೇಹಕ್ಕೆ ಕೆಂಪು ಬಣ್ಣದ ಬಟ್ಟೆ ಸುತ್ತಲಾಗಿದ್ದು ಅವುಗಳ ಸುತ್ತ ಕೆಲವು ಪೂಜಾ ಸಾಮಗ್ರಿಗಳನ್ನು ಇರಿಸಲಾಗಿತ್ತು.
“ಪ್ರಾಥಮಿಕತನಿಖೆಯ ಸಮಯದಲ್ಲಿ, ದಂಪತಿಗಳು ತಮ್ಮ ಹೆಣ್ಣುಮಕ್ಕಳು ಮತ್ತೆ ಜೀವ ಪಡೆಯುತ್ತಾರೆಎಂದು ಹೇಳುವ ಮೂಲಕ ಶವಗಳನ್ನು ಒಂದು ದಿನ ಮನೆಯಲ್ಲಿಇರಿಸಲು ಒತ್ತಾಯಿಸಿದ್ದರು.” ಮದನಪಲ್ಲಿ ಡಿಎಸ್ಪಿ ರವಿ ಮನೋಹರ ಚಾರಿ ಹೇಳಿದ್ದಾರೆ.

“ಕಲಿಯುಗವು ಇಂದು ರಾತ್ರಿ ಕೊನೆಗೊಳ್ಳಲಿದ್ದು, ಸತ್ಯಯುಗದ ಆರಂಭ ನಾಳೆ ಆಗಲಿದೆ. ಆ ಸಮಯಕ್ಕೆ ಸರಿಯಾಗಿ ಈ ಇಬ್ಬರೂ ಹೆಣ್ಣುಮಕ್ಕಳು ಪುನರ್ಜನ್ಮ ಪಡೆಯಲಿದ್ದಾರೆ ಹಾಗಾಗಿ ಇವರನ್ನು ಬಲಿ ನೀಡುವಂತೆ ದೈವ ಸಂದೇಶ ನೀಡಿದೆ” ಎಂದು ದಂಪತಿಗಳು ಪೊಲೀಸರಿಗೆ ತಿಳಿಸಿದ್ದಾರೆ.
ಇದೀಗ ಸಾಕಷ್ಟು ಮನವೊಲಿಕೆಯ ನಂತರ ಎರಡೂ ಶವಗಲನ್ನು ಮರಣೋತ್ತರ ಪರೀಕ್ಷೆಗೆ ವರ್ಗಾಯಿಸಲಾಗಿದ್ದು ವಿಚಾರಣೆಗಾಗಿ ದಂಪತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪ್ರಕರಣ ದಾಖಲಾಗಿದೆ.
ಮೂಢನಂಬಿಕೆ, ಮಾಟ, ಮಂತ್ರ ಇತ್ಯಾದಿಗಳನ್ನು ನಂಬಿ ಎಷ್ಟೋ ಮಂದಿ ಸಿಕ್ಕಸಿಕ್ಕದವರ ಮಕ್ಕಳನ್ನು ಕೊಲೆ ಮಾಡಿ ನರಬಲಿ ನೀಡುವ ಘಟನೆಗಳು ಒಂದೆಡೆ ನಡೆಯುತ್ತಿದ್ದರೆ, ತಾವೇ ಹೆತ್ತ ಮಕ್ಕಳನ್ನು ಕೊಲೆ ಮಾಡುವ ಘಟನೆಗಳೂ ವರದಿಯಾಗುತ್ತಿವೆ.
ಅಂಥದ್ದೇ ಒಂದು ಭಯಾನಕ ಘಟನೆ ಆಂಧ್ರಪ್ರದೇಶದ ಮದನಪಲ್ಲಿಯಲ್ಲಿ ನಡೆದಿದೆ. ತಂತ್ರವಾದಿಯ ಮಾತನ್ನು ಕೇಳಿದ ತಾಯಿಯೊಬ್ಬಳು ವಯಸ್ಸಿಗೆ ಬಂದ ತನ್ನ ಹೆಣ್ಣುಮಕ್ಕಳನ್ನು ಕೊಲೆ ಮಾಡಿರುವ ಘಟನೆ ಇದಾಗಿದೆ.
ಅನಕ್ಷರಸ್ಥರು, ಹಳ್ಳಿಗಾಡಿನಲ್ಲಿ ವಾಸಿಸುವವರು ಇಂಥದ್ದೊಂದು ಮೌಢ್ಯಕ್ಕೆ ಗುರಿಯಾಗುತ್ತಾರೆ ಎಂಬ ನಂಬಿಕೆ ಇದೆ.
ಆದರೆ ಅಚ್ಚರಿಯ ವಿಷಯವೆಂದರೆ, ಕಾಲೇಜೊಂದರ ಪ್ರಾಂಶುಪಾಲರಾಗಿದ್ದವರ ಪತ್ನಿಯೊಬ್ಬರು ಇಂಥದ್ದೊಂದು ಕೃತ್ಯ ಎಸಗಿದ್ದಾರೆ. ಸರ್ಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಪುರುಷೋತ್ತಮ ನಾಯ್ಡು ಅವರ ಪತ್ನಿಯ ಕೆಲಸವಿದು.
ಈಕೆಯ ಮೌಢ್ಯಕ್ಕೆ ಬಲಿಯಾದವರು 22 ಮತ್ತು 27 ವರ್ಷ ವಯಸ್ಸಿನ ಅಲೈಖ್ಯಾ ಮತ್ತು ಸಾಯಿ ದಿವ್ಯಾ ಸಹೋದರಿಯರು.
ಈ ಹೆಣ್ಣುಮಕ್ಕಳ ಮೃತದೇಹ ಬೆತ್ತಲೆಯಾಗಿ ಸಿಕ್ಕಿದೆ. ಇದರರ್ಥ ಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ ಈ ‘ಮಹಾತಾಯಿ’ ನಂತರ ಡಂಬಲ್ಸನಿಂದ ಹೊಡೆದು ಹತ್ಯೆಮಾಡಿದ್ದಾಳೆ.
ಮದನಪಲ್ಲಿ ಶಿವಾಲಯಂ ದೇವಾಲಯದ ರಸ್ತೆ ಬಳಿ ಘಟನೆ ನಡೆದಿದೆ. ಭಾನುವಾರ ರಾತ್ರಿ ಪೂಜೆ ಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ ದಂಪತಿ ಕೊಲೆ ಮಾಡಿದ್ದಾರೆ.
ಪೊಲೀಸರು ಬಂದು ವಿಚಾರಿಸಿದಾಗ ನನ್ನ ಮಕ್ಕಳು ಮೃತಪಟ್ಟಿಲ್ಲ. ಅವರನ್ನು ಮುಟ್ಟಬೇಡಿ. ನಾಳೆ ಅವರಿಗೆ ಜೀವ ಬರುತ್ತದೆ ಎಂದು ಹೇಳಿದ್ದಾಳೆ ಈ ತಾಯಿ.
ನಂತರ ಕಪಟ ಸ್ವಾಮಿಯೊಬ್ಬನ ಮಾತು ನಂಬಿ ಇಂತಹ ಕೃತ್ಯವೆಸಗಿರುವುದಾಗಿ ಪೊಲೀಸರಿಗೆ ತಿಳಿದುಬಂದಿದ್ದು, ತನಿಖೆ ಕೈಗೊಂಡಿದ್ದಾರೆ.
LATEST NEWS
ಬೈಕ್ ಅಪಘಾತ: ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಲೆ ಹರಿದ ಲಾರಿ- ಮೂವರು ಸ್ಥಳದಲ್ಲೇ ಸಾವು..!
ಶಿವಮೊಗ್ಗ: ಬೈಕ್ ಗಳ ಮದ್ಯೆ ನಡೆದ ಅಪಘಾತದಿಂದ ರಸ್ತೆಗೆ ಬಿದ್ದ ವ್ಯಕ್ತಿಗಳ ಮೇಳೆ ಲಾರಿ ಹರಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಹತೊಳಲು ಗ್ರಾಮದಲ್ಲಿ ನಡೆದಿದೆ.
ಹಳೆ ಜಂಬರಗಟ್ಟ ನಿವಾಸಿ ವಿಕಾಸ್ (18), ಯಶ್ವಂತ್ (17), ಹಾಗೂ ಶಶಾಂಕ್ (17) ಮೃತ ದುರ್ದೈವಿಗಳು.
ಎರಡು ಬೈಕ್ ಗಳ ಮಧ್ಯೆ ನಡೆದ ಅಪಘಾತದಲ್ಲಿ ಸವಾರರ ರಸ್ತೆ ಮೇಲೆ ಬಿದ್ದಿದ್ದಾರೆ.
ಇದೇ ವೇಳೆ ರಭಸವಾಗಿ ಬಂದ ಲಾರಿ ಆ ವ್ಯಕ್ತಿಗಳ ಮೇಲೆ ಹರಿದಿದೆ.
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
FILM
ಮೋದಿಗೆ ರಕ್ತದಲ್ಲಿ ಪತ್ರ ಬರೆದ ಚಿತ್ರ ನಟ ಪ್ರೇಮ್..!
ಚಿಕ್ಕಮಗಳೂರು: ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಯಬಿಡುವುದನ್ನು ಖಂಡಿಸಿದ ಕನ್ನಡ ಚಿತ್ರನಟ ಪ್ರೇಮ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಕಾವೇರಿ ವಿಚಾರವಾಗಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ ಎಂದು ರಾಜ್ಯದಾದ್ಯಂತ ಹೋರಾಟ ನಡೆಯುತ್ತಿದ್ದು, ಚಿತ್ರನಟ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ದಾರೆ.
‘ಕಾವೇರಿ ನಮ್ಮದು’ ಎಂದು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.
ಕಾವೇರಿ ನೀರಿನಿಂದ ರಾಜ್ಯಕ್ಕೆ ನ್ಯಾಯ ನೀಡಬೇಕೆಂದು ಪತ್ರದ ಮೂಲಕ ಪ್ರೇಮ್ ಅವರು ಮನವಿ ಮಾಡಿದ್ದಾರೆ.
ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
bengaluru
ನಟ ನಾಗಭೂಷಣ್ ಕಾರು ಅಪಘಾತ – ಮಹಿಳೆ ಸಾವು..!
ಬೆಂಗಳೂರು: ಕನ್ನಡದ ಹೆಸರಾಂತ ನಟ ನಾಗಭೂಷಣ್ ಅವರು ಚಲಾಯಿಸುತ್ತಿದ್ದ ಕಾರು ದಂಪತಿಗಳಿಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸಾವನಪ್ಪಿದ್ದು, ಆಕೆಯ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಿನ್ನೆ ರಾತ್ರಿ 9 ಗಂಟೆಯ ಹೊತ್ತಿಗೆ ಕುಮಾರಸ್ವಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಅವರನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ವಸಂತಪುರದ ನಿವಾಸಿ ಪ್ರೇಮಾ (48) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ನಾಗಭೂಷಣ್ ಶೂಟಿಂಗ್ ಮುಗಿಸಿಕೊಂಡು ಬರುವಾಗ ರಸ್ತೆಯಲ್ಲಿ ಅಡ್ಡಬಂದ ಪಾದಚಾರಿ ದಂಪತಿಗಳಾದ ಪ್ರೇಮಾ ಮತ್ತು ಕೃಷ್ಣ ಅವರಿಗೆ ಕಾರು ಡಿಕ್ಕಿ ಹೊಡೆದಿದೆ.
ಈ ಅಪಘಾತದಲ್ಲಿ ದಂಪತಿಗಳಿಬ್ಬರಿಗೂ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಖುದ್ದಾಗಿ ನಾಗಭೂಷಣ್ ಅವರೇ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ.
ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಪ್ರೇಮಾ ಅವರು ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಪತಿ ಕೃಷ್ಣ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನಾಗಭೂಷಣ್ ಅವರೇ ಸ್ವತಃ ಕಾರನ್ನು ಚಲಾಯಿಸುತ್ತಿದ್ದರಿಂದ ಅವರನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಮಾಹಿತಿ ಪಡೆಯುತ್ತಿದ್ದಾರೆ.
ಮೃತರ ಪುತ್ರನು ಕುಮಾರಸ್ವಾಮಿ ಲೇಔಟ್ ಪೊಲೀಸರಿಗೆ ದೂರು ನೀಡಿದ್ದು, ಫುಟ್ ಪಾತ್ ಮೇಲೆ ತಂದೆ ತಾಯಿ ವಾಕ್ ಮಾಡುವಾಗ ಕಾರು ಹಾಯ್ದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!
- DAKSHINA KANNADA6 days ago
Puttur: ಕಾಲೇಜು ವಿದ್ಯಾರ್ಥಿನಿ ಜಿವಾಂತ್ಯ..!
- DAKSHINA KANNADA6 days ago
Ullala: ರೈಲಿನಡಿಗೆ ತಲೆಯಿಟ್ಟು ಅವಿವಾಹಿತ ವ್ಯಕ್ತಿ ಜೀವಾಂತ್ಯ..!