Friday, March 24, 2023

ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯನ ಪೀಡನೆಗೆ ಬೇಸತ್ತು ವೈದ್ಯೆ ಜೀವಾಂತ್ಯ..!

ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಪೀಡನೆಯಿಂದ ಮಾನಸಿಕವಾಗಿ ನೊಂದು ಯುವ ವೈದ್ಯೆಯೊಬ್ಬರು ಜೀವಾಂತ್ಯ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ಬೆಂಗಳೂರು: ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಪೀಡನೆಯಿಂದ ಮಾನಸಿಕವಾಗಿ ನೊಂದು ಯುವ ವೈದ್ಯೆಯೊಬ್ಬರು ಜೀವಾಂತ್ಯ ಮಾಡಿದ ದಾರುಣ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ.

ನಗರದ ಸಂಜಯ್ ನಗರದಲ್ಲಿ ಈ ಘಟನೆ ನಡೆದಿದ್ದು ಉತ್ತರ ಪ್ರದೇಶ ಲಕ್ನೋ ಮೂಲದ ಡಾ.ಪ್ರಿಯಾಂಶಿ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯಾಗಿದ್ದಾರೆ.

ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಗೆ ತಂದೆ ಸುಶೀಲ್ ತ್ರಿಪಾಠಿ ಪೊಲೀಸರಿಗೆ ದೂರು ನೀಡಿದ್ದಾರೆ.

ಎಂ.ಎಸ್.ರಾಮಯ್ಯ ಆಸ್ಪತ್ರೆಯ ವೈದ್ಯ ಡಾ.ಸುಮಿತ್ ಎಂಬಾತ ಪ್ರಿಯಾಂಶಿಗೆ ಪ್ರೇಮ ನಿವೇದನೆ ಮಾಡುತ್ತಿದ್ದು, ಮದುವೆಯಾಗುವಂತೆ ಪದೇಪದೇ ಪೀಡಿಸುತ್ತಿದ್ದ.

ಆದರೆ ಪ್ರಿಯಾಂಶಿ ಇದನ್ನು ನಿರಾಕರಿಸುತ್ತಾ ಬಂದಿದ್ದಳು ಈ ಹಿನ್ನೆಲೆಯಲ್ಲಿ ಆತ ಪ್ರಿಯಾಂಶಿ ನಡತೆಯ ಬಗ್ಗೆ ಅಪಪ್ರಚಾರ ಮಾಡಿದ್ದ ಎನ್ನಲಾಗಿದೆ.

ಇದರಿಂದ ಬೇಸತ್ತ ಪ್ರಿಯಾಂಶಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸುಶೀಲ್ ತ್ರಿಪಾಠಿ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಸಂಜಯ್ ನಗರ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics