Connect with us

LATEST NEWS

ಬೋರ್ ವೆಲ್ ನಲ್ಲಿ ಸುರಿದ ಹಾಲು – ಪಾತ್ರೆ ಹಿಡಿದು ಓಡೋಡಿ ಬಂದ ಜನ..!

Published

on

ಉತ್ತರ ಪ್ರದೇಶ: ಸಾಮನ್ಯವಾಗಿ ಬೋರ್ ವೆಲ್ ನಲ್ಲಿ ನೀರು ಬರುವದನ್ನು ನೋಡಿದ್ದೇವೆ ಆದರೆ ಇಲ್ಲೊಂದು ಕಡೆ ಹಾಲಿನ ಬಣ್ಣದ ನೀರು ಸುರಿದ ವಿಸ್ಮಯ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.


ಇಲ್ಲಿನ ಸಾರ್ವಜನಿಕ ಸ್ಥಳವೊಂದರಲ್ಲಿರುವ ಬೋರ್ ವೆಲ್ ನಲ್ಲಿ ನೀರಿನ ಬದಲು ಬಿಳಿ ಬಣ್ಣ ಇರುವ ನೀರು ಸುರಿದಿದೆ. ಇದನ್ನು ಕಂಡ ಸ್ಥಳಿಯರಿಗೆ ಅಚ್ಚರಿಯ ಪ್ರಶ್ನೆ ಮೂಡಿದೆ. ಅಲ್ಲದೆ ಇದೀಗ ಇದರ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಸ್ಥಳಕ್ಕೆ ಸಾಕಷ್ಟು ಜನ ಬಂದು ಸೇರಿದ್ದಾರೆ.


ಇದನ್ನು ಕಂಡ ಜನರು ಇದು ನೀರಲ್ಲ ಹಾಲು ಎಂದು ಪಾತ್ರ , ಬಾಟಲಿ ಹಾಗೂ ಕೈಗೆ ಸಿಕ್ಕಿದ ಪಾತ್ರವನ್ನು ಹಿಡಿದು ಓಡಾಡಿಕೊಂಡು ಬಂದು ಸರತಿ ಸಾಲಿನಲ್ಲಿ ನಿಂತು ತಮ್ಮ ಪಾತ್ರೆಗಳಿಗೆ ತುಮಬಿಸಿ ಮನೆಗೆ ಕೊಂಡೊಯ್ಯುತ್ತಿದ್ದರು. ಈ ವಿಚಾರ ತಿಳಿದ ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಇದು ಹಾಲಲ್ಲ ಇದು ಕಲುಷಿತ ನೀರು ಎಂದು ಸ್ಪಷ್ಟನೆ ನೀಡಿದ್ದಾರೆ. ಬೋರ್ ವೆಲ್ ನಲ್ಲಿರುವ ಹ್ಯಾಂಡ್ ಪಂಪ್ ನ ಕೆಳಭಾಗ ಹಾನಿಗೊಳಗಾದ ಕಾರಣ ಇದರಲ್ಲಿ ಹಾಲಿನ ಬಣ್ಣದ ಕಲುಷಿತ ನೀರು ಸೊರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದು ವರದಿಯಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಶುಭಾರಂಭ

Published

on

ಮಂಗಳೂರು : ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್‍ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಹೋಲಿಕ್ರಾಸ್ ಚರ್ಚ್ ನ ಬಳಿಯಿರುವ ಶರೂನ್ ಸ್ಟ್ರಕ್ಟರ್ ನ ಮೊದಲನೇ ಮಹಡಿಯಲ್ಲಿ ಬುಧವಾರ ಶುಭಾರಂಭಗೊಂಡಿತು.

ಸಾಮಾಜಿಕ ಕಳಕಳಿ ಶ್ಲಾಘನೀಯ : ಯು.ಟಿ.ಖಾದರ್

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ,  ಶ್ರೀಮಂತ ವರ್ಗದವರಿಗೆ ನಗರಪ್ರದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ಸ್ಥಾಪನೆಗೆ ಆದ್ಯತೆ ನೀಡಿದ್ದು, ಇದೀಗ ಎಲ್ಯಾರ್ ಪದವಿನಂತಹ ಹಿಂದುಳಿದ ಪ್ರದೇಶದಲ್ಲಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನೂತನ ಶಾಖೆಯನ್ನು ಆರಂಭಿಸುವ ಮೂಲಕ ಸಹಕಾರಿ ಕ್ಷೇತ್ರದ ನಿಜವಾದ ಧ್ಯೇಯ ಉದ್ಧೇಶವನ್ನು ಈ ಸಂಘ ಮಾಡಿ ತೋರಿಸಿದೆ. ಮೂರು ಗ್ರಾಮಗಳ ಸಮ್ಮಿಲನದ ಈ ಪ್ರದೇಶ ವಾಣಿಜ್ಯವಾಗಿ ಅಭಿವೃದ್ಧಿ ಹೊಂದಿಲ್ಲ. ಇಂತಹ ಪ್ರದೇಶದಲ್ಲಿ ಜನರಿಗೆ ಸಹಕಾರಿ ಸೇವೆಯನ್ನು ನೀಡುವ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದ್ದು, ಈ ಪ್ರದೇಶದ ಜನರ ಆರ್ಥಿಕ ಕಾರ್ಯಕ್ಕೆ ಬೆಂಬಲ ನೀಡುವ ಮೂಲಕ ಉತ್ತಮ ಗ್ರಾಹಕ ಸೇವೆಯೊಂದಿಗೆ ಪ್ರದೇಶದ ಅಭಿವೃದ್ಧಿಗೂ ಕೊಡುಗೆ ನೀಡಲಿ ಎಂದರು.’

ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆ : ಚಿತ್ತರಂಜನ್ ಬೋಳಾರ್

ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ ಮಾತನಾಡಿ, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಎರಡನೇ ಶಾಖೆ ಆರಂಭಗೊಂಡಿದ್ದು, ಉಳ್ಳಾಲದ ಮಾಡೂರಿನಲ್ಲಿ ಅಂದಿನಿಂದ ಇಂದಿನವರೆಗೆ ಯು.ಟಿ.ಖಾದರ್ ಅವರು ಸಂಘದ ಶಾಖೆಯನ್ನು ಉದ್ಘಾಟಿಸಿದ್ದು ಲಾಭದಾಯಕವಾಗಿ ನಡೆಯುತ್ತಿದೆ. ಸಂಘ ಯಶಸ್ವಿಯಾಗಿ ಇಷ್ಟು ಶಾಖೆಗಳು ಆರಂಭಗೊಳ್ಳಲು ಮತ್ತು ಹತ್ತನೇ ವರ್ಷದಲ್ಲಿ ಸ್ವಂತ ಪ್ರಧಾನ ಕಚೇರಿ ನಿರ್ಮಾಣಕ್ಕೆ ಮುಖ್ಯ ಕಾರಣ ಸಂಘದ ಗ್ರಾಹಕರು, ಸದಸ್ಯರು ಮತ್ತು ಸಂಘದ ಆಡಳಿತ ಮಂಡಳಿಯೊಂದಿಗೆ ಸಿಬಂದಿ ವರ್ಗ ಕಾರಣವಾಗಿದ್ದಾರೆ ಎಂದರು.

ಭದ್ರತಾಕೋಶ ಉದ್ಘಾಟನೆ : 

ಎಲ್ಯಾರ್ ಪದವು ಹೊಲಿ ಕ್ರಾಸ್ ಚರ್ಚ್‌ನ ಧರ್ಮಗುರು ಎಫ್.ಆರ್.ಜಾನ್ ಡಿ’ಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುತ್ತಾರು ಶ್ರೀ ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ದೆಬ್ಬೇಲಿ ಮಹಾಬಲ ಹೆಗ್ಡೆ ಮಾಗಣ್ತಡಿ ಭದ್ರತಾಕೋಶ ಉದ್ಘಾಟಿಸಿದರು.

ಕೊಣಾಜೆ ಬೆಳ್ಮ ಸಿಎಸ್‍ಐ ಬೆತಾನೀಯ ಚರ್ಚ್‌ನ ಧರ್ಮಗುರು ರೆ| ವಿನಯಲಾಲ್ ಬಂಗೇರ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಣಾಜೆ ಗ್ರಾ. ಪಂ. ಅಧ್ಯಕ್ಷೆ ಗೀತಾ ದಾಮೋದರ ಗಣಕೀಕೃತ ಬ್ಯಾಂಕಿಂಗ್‍ಗೆ ಚಾಲನೆ ನೀಡಿದರು. ಅಂಬ್ಲಮೊಗರು ಗ್ರಾ. ಪಂ. ಎಸ್.ಮಹಮ್ಮದ್ ಇಕ್ಬಾಲ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು.

ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಶ್ರೀ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಚಂದ್ರಹಾಸ್ ನಾಯ್ಕ ಉಳಿತಾಯ ಖಾತೆಗೆ ಚಾಲನೆ ನೀಡಿದರು.

ಇದನ್ನೂ ಓದಿ : ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರು, ಎಲ್ಯಾರ್ ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಎಡ್‍ಲೈನ್ ಐಮನ್, ಕಟ್ಟಡದ ಮಾಲಕ ರೆನೋಲ್ಡ್ ಜಿ ಅಮ್ಮಣ್ಣ .ಪಜೀರ್ ಗೋಶಾಲೆಯ ಟ್ರಸ್ಟಿ ಶಿವಪ್ರಸಾದ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿರ್ದೇಶಕರಾದ ಪಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಚಂದ್ರಹಾಸ ಮರೋಳಿ, ಗೋಪಾಲ್ ಎಂ. ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು.

ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯವಿಜಯ್ ಸ್ವಾಗತಿಸಿದರು. ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.

”ಕೊರೊನಾ ಸಂದರ್ಭದಲ್ಲಿ 10 ಕೋಟಿ ಇದ್ದ ಚಿನ್ನಾಭರಣ ಸಾಲ ಒಮ್ಮೆಲೇ 90 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಸಂಘ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದೆ. ನೂತನ ಶಾಖೆಯಿಂದ ಬೇರೆ ಬ್ಯಾಂಕ್‍ಗಳಿಗೆ ಡಿಪಾಸಿಟ್ ಮಾಡಲು ಆರ್ ಟಇ ಜಿ ಎಸ್ ಸೌಲಭ್ಯ, ಇ ಮುದ್ರಾಂಕ, ಆರೋಗ್ಯ ವಿಮೆ, ಸಾಲ ವಿಮಾ ಭದ್ರತೆ ಸೇರಿದಂತೆ ವಿವಿಧ ಬ್ಯಾಂಕಿಂಗ್ ಸವಲತ್ತುಗಳನ್ನು ಗ್ರಾಹಕರು ಪಡೆದುಕೊಳ್ಳಬಹುದು.”

ಸಹಕಾರ ರತ್ನ ಚಿತ್ತರಂಜನ್ ಬೋಳಾರ, ಅಧ್ಯಕ್ಷರು, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಮಂಗಳೂರು

Continue Reading

LATEST NEWS

ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಮೇಲೆ ಹ*ಲ್ಲೆ..! ಮುಖಕ್ಕೆ ಬ್ಲೇಡ್‌ನಿಂದ ಕೊಯ್ದು ಕೃ*ತ್ಯ..!!

Published

on

ದೆಹಲಿ: ಶಾಲಾ ಆವರಣದಲ್ಲೇ ವಿದ್ಯಾರ್ಥಿನಿಯ ಕೆನ್ನೆ ಮೇಲೆ ಬ್ಲೇಡ್‌ನಿಂದ ಹಲ್ಲೆಗೈದಿರುವ ಘೋರ ಘಟನೆ ದೆಹಲಿಯಲ್ಲಿ ನಡೆದಿದೆ. ಘಟನೆಯಿಂದ ವಿದ್ಯಾರ್ಥಿನಿಯ ಕೆನ್ನೆಯಿಂದ ರಕ್ತ ಹರಿಯುತ್ತಿದ್ದು, ನೋವು ತಾಳಲಾರದೇ ಹುಡುಗಿ ಕಿರುಚಾಡುತ್ತಿದ್ದಾಳೆ. ಈ ಘಟನೆ ನಡೆದಿರುವುದು ದೆಹಲಿಯ ಗುಲಾಬಿ ಬಾಗ್ ಟೈಪ್-1 CO-ED ಸರ್ವೋದಯ ವಿದ್ಯಾಲಯದಲ್ಲಿ ಎಂದು ಹೇಳಲಾಗುತ್ತಿದೆ.

ಮುಂದೆ ಓದಿ..; ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

ಶಾಲಾ ಆವರಣದಲ್ಲಿ ವಿದ್ಯಾರ್ಥಿನಿಯ ಕೆನ್ನೆಗೆ ಬ್ಲೇಡ್‌ನಿಂದ ಕೊಯ್ದಿದ್ದು ರಕ್ತ ಹೋಗುತ್ತಲೇ ಇದೆ. ಇದರಿಂದ ಜೊತೆಗಿದ್ದ ಗೆಳತಿಯರೂ ಕೂಡ ಗಾಬರಿಗೊಂಡಿದ್ದಾರೆ. ಆದರೆ ಈ ಕೃತ್ಯ ಎಸಗಿರುವುದು ಯಾರು ಎಂದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಈ ದೃಶ್ಯವನ್ನು ಅಲ್ಲೇ ಇದ್ದ ಮಹಿಳೆಯೋರ್ವರು ವೀಡಿಯೋ ಮಾಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

 

 

Continue Reading

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

LATEST NEWS

Trending