LATEST NEWS
ಕಾರ್ಕಳ: ಅಪ್ರಾಪ್ತ ಬಾಲಕ ನೇಣಿಗೆ ಶರಣು
ಉಡುಪಿ: ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ಕಣಜಾರು ಗ್ರಾಮದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಣಜಾರು ಗ್ರಾಮದ ಕಡೆಬೆರ್ಕೆಯ ಸುರೇಂದ್ರ ಎಂಬವರ 16 ವರ್ಷ ಪ್ರಾಯದ ಪುತ್ರ ಸೂರಜ್ ಎಂದು ಗುರುತಿಸಲಾಗಿದೆ.
ಹಿಂದಿನಿಂದಲೂ ಕುಡಿತದ ಚಟವನ್ನು ಹೊಂದಿದ್ದ ಈತ, ಮನೆಯವರೊಂದಿಗೆ ಹೆಚ್ಚಾಗಿ ಬೆರೆಯದೇ ಏಕಾಂಗಿಯಾಗಿ ಇರುತಿದ್ದ ಎನ್ನಲಾಗಿದೆ.
ಇದೇ ಕಾರಣದಿಂದ ಸೋಮವಾರ ರಾತ್ರಿ 8ರಿಂದ 11:30ರ ನಡುವಿನ ಅವಧಿಯಲ್ಲಿ ಅಜಿತ್ ಶೆಟ್ಟಿ ಎಂಬವರಿಗೆ ಸೇರಿದ ಜಾಗದ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಬಗ್ಗೆ ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಆಭರಣ ಪ್ರಿಯರಿಗೆ ನಿರಾಸೆ….ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ…!
ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಿನ್ನೆಗಿಂತ ಇಂದು(ಮಾ.29) ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ.
ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.
ಎಷ್ಟಿದೆ ಬೆಲೆ ?
ಸದ್ಯ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 61,700 ರೂಪಾಯಿ ಇದ್ದು, 24 ಕ್ಯಾರೆಟ್ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 67,310 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 7,750 ರೂಪಾಯಿ ಇದೆ.
ಒಂದು ಗ್ರಾಂ ಚಿನ್ನದ ದರ
22 ಕ್ಯಾರೆಟ್ ಚಿನ್ನದ ದರ – 6,170 ರೂಪಾಯಿ
24 ಕ್ಯಾರೆಟ್ ಚಿನ್ನದ ದರ – 6,731 ರೂಪಾಯಿ
10 ಗ್ರಾಂ ಚಿನ್ನದ ದರ
22 ಕ್ಯಾರೆಟ್ ಆಭರಣ ಚಿನ್ನದ ದರ – 61,700 ರೂಪಾಯಿ
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – 67,310 ರೂಪಾಯಿ
8 ಗ್ರಾಂ ಚಿನ್ನದ ದರ
22 ಕ್ಯಾರೆಟ್ ಆಭರಣ ಚಿನ್ನದ ದರ – 49,360 ರೂಪಾಯಿ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
ಬೆಂಗಳೂರು- 61,700 ರೂಪಾಯಿ
ಚೆನ್ನೈ – 62,500 ರೂಪಾಯಿ
ಮುಂಬೈ – 61,700 ರೂಪಾಯಿ
ಕೇರಳ -61,700 ರೂಪಾಯಿ
ಕೋಲ್ಕತ್ತಾ – 61,700 ರೂಪಾಯಿ
ಜೈಪುರ್ -61,850 ರೂಪಾಯಿ
ಭುವನೇಶ್ವರ್- 61,700 ರೂಪಾಯಿ
ಅಹ್ಮದಾಬಾದ್- 61,750 ರೂಪಾಯಿ
ಲಕ್ನೋ – 61,850 ರೂಪಾಯಿ
ನವದೆಹಲಿ – 61,850 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ಬೆಂಗಳೂರು-7,750 ರೂಪಾಯಿ
ಚೆನ್ನೈ- 8,050 ರೂಪಾಯಿ
ಮುಂಬೈ-7,750 ರೂಪಾಯಿ
ಕೋಲ್ಕತ್ತಾ-7,750 ರೂಪಾಯಿ
ನವದೆಹಲಿ-7,750 ರೂಪಾಯಿ
LATEST NEWS
ಏಪ್ರಿಲ್ 3 ರ ವರೆಗೆ ಭಾರೀ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಮಳೆ?
ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ?
ಮಾರ್ಚ್ 29 ಮತ್ತು 30 ರಂದು ಪಶ್ಚಿಮ ಹಿಮಾಲಯ ಪ್ರದೇಶದ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಮಾರ್ಚ್ 29 ರಿಂದ 31 ರ ವರೆಗೆ ವಾಯುವ್ಯ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಸಾಧರಾಣ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?
ಚಂಡಮಾರುತದ ಪರಿಣಾಮವಾಗಿ, ಬಿಹಾರದ, ದಕ್ಷಿಣ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಚದುರಿದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳ, ಒಡಿಶಾ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 3ರ ವರೆಗೆ ಆರ್ದ್ರ ವಾತಾವರಣವನ್ನು ನಿರೀಕ್ಷಿಸಲಾಗಿದೆ. ಬಿಹಾರ ಮತ್ತು ಜಾರ್ಖಂಡ್ಗಳು ಮುಂದಿನ ಕೆಲವು ದಿನಗಳವರೆಗೆ ಮಳೆ ಸಾಧ್ಯತೆ ಇದೆ.
ಮಾರ್ಚ್ 31 ರಂದು ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಕೆಲವು ದಿನಗಳ ವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಇದಲ್ಲದೆ, ಅರುಣಾಚಲ ಪ್ರದೇಶದದಲ್ಲಿ ಏಪ್ರಿಲ್ 1 ರಂದು ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
DAKSHINA KANNADA
ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಲಕ್ಷಾಧಿಪತಿ….ಅವರ ಆಸ್ತಿ ವಿವರ ಇಲ್ಲಿದೆ!
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಆಸ್ತಿ ವಿವರ ಘೋಷಣೆ ಮಾಡಿದ್ದಾರೆ. ಅವರ ಸ್ಥಿರ ಮತ್ತು ಚರಾಸ್ತಿ ಒಟ್ಟು ಮೊತ್ತ 70,81,365 ಲಕ್ಷ ರೂ. ಆಗಿದೆ. ಸ್ಥಿರ ಆಸ್ತಿಯ ಒಟ್ಟು ಮೊತ್ತ 27,31,365 ಲಕ್ಷ ರೂ. ಆಗಿದೆ. ಚರಾಸ್ತಿಯ ಒಟ್ಟು ಮೊತ್ತ 43,50,000 ಲಕ್ಷ ರೂ., ಇನ್ನು ಒಟ್ಟು 9,62,010 ರೂ. ಅನ್ನು ಇನ್ನೋವಾ ಕಾರಿಗಾಗಿ ಸಾಲ ಮಾಡಿದ್ದಾರೆ.
ಇನ್ನು ಬಿಎಸ್ಸಿ ಶಿಕ್ಷಣದ ಜೊತೆಗೆ ಐಐಎಂ ಅನ್ನು ಇಂದೋರ್ನಲ್ಲಿ ಬ್ಯುಸಿನೆಸ್ ಮ್ಯಾನೇಜ್ಮೆಂಟ್ ಡಿಫೆನ್ಸ್ ಆಫೀಸರ್ ಸರ್ಟಿಫಿಕೇಟ್ ಕೋರ್ಸ್ ಮಾಡಿದ್ದಾರೆ. ಅವರು, ಅವಿವಾಹಿತರಾಗಿದ್ದು 42 ವರ್ಷ ಪ್ರಾಯದವರಾಗಿದ್ದಾರೆ.
ಬ್ರಿಜೇಶ್ ಚೌಟ ಯಾರು?
ಮಂಗಳೂರಿನ ರಥಬೀದಿಯಲ್ಲಿ ನೆಲೆಸಿರುವ ಕ್ಯಾಪ್ಟನ್ ಬೃಜೇಶ್ ಚೌಟ ಕಾಲೇಜು ದಿನಗಳಲ್ಲಿಯೇ ಎನ್ ಸಿಸಿಯಲ್ಲಿ ತೊಡಗಿಕೊಂಡಿದ್ದು, ಮಂಗಳೂರು ವಿವಿಯಲ್ಲಿ ಅತ್ಯುತ್ತಮ ಕೆಡೆಟ್ ಎಂಬ ಹೆಗ್ಗಳಿಕೆ ಪಡೆದಿದ್ದರು. ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ವಿಜ್ಞಾನ ಪದವಿಯನ್ನು ಪಡೆದ ಅವರು ಇಂದೋರ್ನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನಿಂದ ಆಡಳಿತ ವ್ಯವಹಾರ ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ.
ಯುಪಿಎಸ್ಸಿ ಮೂಲಕ ಡಿಫೆನ್ಸ್ ಪರೀಕ್ಷೆ ಬರೆದು ತೇರ್ಗಡೆಗೊಂಡು ಚೆನ್ನೈನಲ್ಲಿ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಭೂಸೇನೆ ಸೇರಿದ್ದರು. ಪ್ರತಿಷ್ಠಿತ ಎಂಟನೇ ಗೋರ್ಖಾ ರೈಫಲ್ಸ್ 7ನೇ ಬೆಟಾಲಿಯನ್ ನಲ್ಲಿ ಉತ್ತರ ಭಾರತ ಮತ್ತು ಈಶಾನ್ಯ ರಾಜ್ಯಗಳಲ್ಲಿ ಸೇವೆ ಸಲ್ಲಿಸಿ ಕ್ಯಾಪ್ಟನ್ ಹುದ್ದೆಗೇರಿದ್ದರು.
ಇದನ್ನೂ ಓದಿ ಐದು ವರ್ಷದಲ್ಲಿ ನಾಲ್ಕು ಪಟ್ಟು ಏರಿದ ಆಸ್ತಿ…! ಪ್ರಜ್ವಲ್ ರೇವಣ್ಣ ಘೋಷಿಸಿದ ಆಸ್ತಿ ವಿವರದಲ್ಲಿ ಬಹಿರಂಗ..!!
ನಳಿನ್ ಬದಲು ಚೌಟ ಕಣಕ್ಕೆ :
ಕಳೆದ 15 ವರ್ಷಗಳ ಹಿಂದೆ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಹಿಡಿತದಲ್ಲಿದೆ. ಸತತ ಮೂರು ಬಾರಿ ನಳಿನ್ ಕುಮಾರ್ ಕಟೀಲ್ ಅವರು ಗೆದ್ದುಕೊಂಡು ಬಂದಿದ್ದರು. ಈ ಬಾರಿ ಮಾಜಿ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಆ ಮೂಲಕ ನಳಿನ್ ಕುಮಾರ್ ಕಟೀಲ್ಗೆ ಟಿಕೆಟ್ ಕೈತಪ್ಪಿ ಹೋಗಿದೆ. ಇದೀಗ ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಏಪ್ರಿಲ್ 4 ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಅವರು ಸಲ್ಲಿಸಿರುವ ನಾಮಪತ್ರ ಅಫಿಡವಿಟ್ನಲ್ಲಿ ಲಕ್ಷಾಧಿಪತಿ ಎಂದು ಘೋಷಿಸಿಕೊಂಡಿದ್ದಾರೆ.
- FILM4 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ಫೋಟೋ!
- DAKSHINA KANNADA3 days ago
ಖತರ್ನಾಕ್ ಲ್ಯಾಪ್ಟಾಪ್ ಕಳ್ಳಿ…! ಈಕೆ ಬ್ಯಾಂಕ್ ಉದ್ಯೋಗಿ… !
- DAKSHINA KANNADA4 days ago
ಪಾರ್ಟ್ ಟೈಮ್ ಜಾಬ್ ಕೊಡಿಸುವುದಾಗಿ ನಂಬಿಸಿ ವಂಚನೆ; ಆರೋಪಿ ರಾಜಸ್ಥಾನದ ಸದ್ದಾಂ ಗೌರಿ ಬಂಧನ
- LATEST NEWS7 days ago
ಕೋಟಾ ಶ್ರೀನಿವಾಸ ಪೂಜಾರಿಗೆ ಅಭಿಮಾನಿ ಕೊಟ್ಟ ಕೊಡುಗೆ ಏನು ಗೊತ್ತಾ…?