BANTWAL
ಬಂಟ್ವಾಳ: ಅಪ್ರಾಪ್ತ ಬಾಲಕಿಯ ಗ್ಯಾಂಗ್ ರೇಪ್ ಪ್ರಕರಣ- ಮತ್ತಿಬ್ಬರು ಆರೋಪಿಗಳ ಬಂಧನ
ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಪೋಕ್ಸೋ ಕಾಯಿದೆಯಡಿ ಬಂಧಿಸಲಾಗಿದೆ.
ಅಜ್ಮಲ್, ಖಾಸಿಮ್ ಬಂಧಿತ ಆರೋಪಿಗಳು, ಸದ್ಯ ಈ ಪ್ರಕರಣದಲ್ಲಿ ರಿಜ್ವಾನ್ ಎಂಬಾತನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ನ.4ರಂದು ಬಂಟ್ವಾಳ ತಾಲೂಕಿನ ಮಹಿಳೆಯೋರ್ವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ಬಂದು ಅಪ್ರಾಪ್ತ ಬಾಲಕಿಯಾದ ತನ್ನ ಮಗಳಿಗೆ ಫರಂಗಿಪೇಟೆ ರಿಕ್ಷಾ ಚಾಲಕನು ಮೈ ಕೈ ಮುಟ್ಟಿ ಲೈಂಗಿಕ ಶೋಷಣೆ ಮಾಡಿದ್ದಾನೆಂಬ ದೂರಿನ ಮೇರೆಗೆ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಆಟೋ ಚಾಲಕ ರಿಜ್ವಾನ್ ಬಂಧನವಾಗಿದೆ.
ಅದಾದ ಮರುದಿನ ಅಂದರೆ ನ.5ರಂದು ಸಂತ್ರಸ್ತೆ ತನ್ನ ತಾಯಿಯೊಂದಿಗೆ ಠಾಣೆಗೆ ಹಾಜರಾಗಿ ಸುಮಾರು 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ತನ್ನನ್ನು ತಾವಿದ್ದಲ್ಲಿಗೆ ಕರೆಸಿಕೊಂಡು ತನ್ನ ಮೇಲೆ ಒಬ್ಬರಾದ ಮೇಲೇ ಇನ್ನೊಬ್ಬರು ಜೊತೆಯಲ್ಲಿ ಅತ್ಯಾಚಾರ ನಡೆಸಿ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ನೀಡಿದ್ದು,
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎರಡನೇ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳಿದ ಇಬ್ಬರು ಆರೋಪಿಗಳನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರ ಕ್ಷಿಪ್ರ ತನಿಖೆ ಮತ್ತು ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು, ಪ್ರಶಂಸಿರುತ್ತಾರೆ.
BANTWAL
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ
BANTWAL
ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ
ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.
ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.
ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.
BANTWAL
ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!
ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
- LATEST NEWS4 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ