Connect with us

    LATEST NEWS

    ಕುಡಿದ ಅಮಲಿನಲ್ಲಿ ನಟಿಯ ಜೊತೆ ದುರ್ವರ್ತನೆ..! ನಟನ ವಿರುದ್ಧ ಆಕ್ರೋಶ ಹೊರಹಾಕಿದ ನೆಟ್ಟಿಗರು

    Published

    on

    ಹೈದರಾಬಾದ್/ಮಂಗಳೂರು: ತೆಲುಗು ಚಿತ್ರರಂಗದ ಮಾಸ್‌ ಹೀರೋ ಮನಂದಮೂರಿ ಬಾಲಕೃಷ್ಣ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಸಿನೆಮಾವೊಂದರ ಪ್ರೊಮೋಷನ್ ವೇಳೆ ನಂದಮೂರಿ ಬಾಳಕೃಷ್ಣ ಅವರು ನಟಿ ಅಂಜಲಿಯನ್ನು ಸ್ಟೇಜ್‌ನಲ್ಲಿ ತಳ್ಳಿದ್ದಾರೆ. ಈ ಕುರಿತಾದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಮುಂದೆ ಓದಿ..; WATCH VIDEO : ಪೊಲೀಸ್ ಅಧಿಕಾರಿಗಳೊಂದಿಗೆ ಬಹುಭಾಷಾ ನಟಿ ಕಿರಿಕ್; ಡಿಕ್ಕಿ ತೆರೆಯಲ್ಲ ಅಂದಿದ್ಯಾಕೆ ನಟಿ!?

    ಬಾಲಕೃಷ್ಣ ತೆಲುಗು ಚಿತ್ರರಂಗದ ಪ್ರಮುಖ ಮಾಸ್ ಹೀರೋ. ವಯಸ್ಸು 63 ಆದ್ರೂ ಅವರಿಗೆ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ನಟ. ಬಾಲಕೃಷ್ಣ ಆಗಾಗ ನಾನಾ ವಿವಾದಗಳಲ್ಲಿ ಸಿಲುಕುತ್ತಿರುತ್ತಾರೆ. ಇತ್ತೀಚೆಗೆ ಹೈದರಾಬಾದ್‌ನಲ್ಲಿ ವಿಶ್ವಕ್ ಸೇನ್ ನಟನೆಯ ‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾದ ಕಾರ್ಯಕ್ರಮವಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ನಂದಮೂರಿ ಬಾಲಕೃಷ್ಣ ಆಗಮಿಸಿದ್ದರು. ‘ರಣವಿಕ್ರಮ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿರುವ ಅಂಜಲಿ ಕೂಡ ‘ಗ್ಯಾಂಗ್ಸ್ ಆಫ್ ಗೋದಾವರಿ’ ಸಿನಿಮಾದಲ್ಲಿ ನಟಿಸಿದ್ದು, ಅವರು ಕೂಡ ವೇದಿಕೆ ಮೇಲೆ ಇದ್ದರು. ಈ ವೇಳೆ ಧಿಡೀರನೇ ಅಂಜಲಿಯನ್ನು ಬಾಲಯ್ಯ ತಳ್ಳಿದ್ದಾರೆ. ಒಂದು ಕ್ಷಣ ಅಂಜಲಿ ದಿಗ್ಬ್ರಾಂತರಾಗಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.

    ಪಕ್ಕದಲ್ಲೇ ಇದ್ದ ನಟಿ ನೇಹಾ ಶೆಟ್ಟಿ, ಅಂಜಲಿಯನ್ನು ಹಿಡಿದುಕೊಂಡಿದ್ದಾರೆ. ನಂತರ ಸಾವರಿಸಿಕೊಂಡು ಬಾಲಯ್ಯರನ್ನು ನೋಡಿ ನಕ್ಕರು ಅಂಜಲಿ, ನಂತರ ಅವರ ಜೊತೆಗೆ ಮಾತುಕತೆಯಲ್ಲಿ ತಲ್ಲೀನರಾದರು. ಬಾಲಯ್ಯ ತಮಾಷೆಗಾಗಿ ಹೀಗೆ ಮಾಡಿದರೂ, ವಿಡಿಯೋ ನೋಡಿದವರಿಗೆ ಇದು ತಮಾಷೆ ಎನಿಸುವಂತೆ ಇರಲಿಲ್ಲ. ಕಾರ್ಯಕ್ರಮದಲ್ಲಿ ನಟನಿಗೆ ನೀರಿನ ಬದಲಾಗಿ ಆಲ್ಕೋಹಾಲ್ ಕೊಟ್ಟಿದ್ದಾರೆ. ನಶೆಯ ಅಮಲಿನಲ್ಲಿ ಹೀಗೆ ಮಾಡಿದ್ದಾರೆ ಎಂದು ಹೇಳಲಾಗಿದೆ ಇದೀಗ ಈ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಚಿಕ್ಕ ಪುಟ್ಟ ಮಕ್ಕಳನ್ನು ಕಾಡುತ್ತಿದೆ ವೈರಲ್ ಫಿವರ್..! 200ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ

    Published

    on

    ಬಾಗಲಕೋಟೆ/ಮಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಖಾಯಿಲೆಗಳು ವಕ್ಕರಿಸಿಕೊಳ್ಳುತ್ತದೆ.  ವಾತಾವರಣ ಹೆಚ್ಚಳದಿಂದ ವೈರಲ್ ಫಿವರ್ ಹಾವಳಿ ಕೂಡಾ ಹೆಚ್ಚಾಗುತ್ತಿದೆ. ಒಂದು ಕಡೆ ಡೆಂಗ್ಯೂ ಆಂತಕವಾದ್ರೆ ಇದೀಗ ವೈರಲ್ ಫಿವರ್ ಕಾಟ ಚಿಕ್ಕ ಪುಟ್ಟ ಮಕ್ಕಳ ಜೀವ ಹಿಂಡುತ್ತಿದೆ.

    ಈ ಮಧ್ಯೆ ಬಾಗಲಕೋಟೆ ಜಿಲ್ಲೆಯ ಆಸ್ಪತ್ರೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಹೌದು, ಜಿಲ್ಲೆಯಲ್ಲಿ ಪುಟಾಣಿ ಮಕ್ಕಳು ವೈರಲ್ ಫೀವರ್‌ನಿಂದ ಬಳಲುತ್ತಿದ್ದಾರೆ. ಶೀತ, ಕೆಮ್ಮು, ನೆಗಡಿ ಹಾಗೂ ಉಸಿರಾಟ ತೊಂದರೆಯಿಂದ ಮಕ್ಕಳು ಹೈರಾಣಾಗುತ್ತಿದ್ದಾರೆ.

    ಡೆಂಗ್ಯೂ ಜ್ವರದಿಂದ ಮಗುವಿನ ಜೀವಾಂ*ತ್ಯ..! ಸರ್ಕಾರಿ ಆಸ್ಪತ್ರೆ ಅಭಿವೃದ್ದಿಗೆ ತಂದೆಯ ಮನವಿ..!

    ಜಿಲ್ಲೆಯಲ್ಲಿ ಪ್ರತಿ ದಿನ 200ಕ್ಕೂ ಅಧಿಕ ಮಕ್ಕಳು ವೈರಲ್ ಫಿವರ್ ಗೆ ತುತ್ತಾಗಿ, ಜಿಲ್ಲೆಯ ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ.  ವೈರಲ್ ಫೀವರ್ ಹರಡುವುದರಿಂದ ಪೋಷಕರು ಮಕ್ಕಳ ಬಗ್ಗೆ ಭಯಭೀತರಾಗಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಶಾಲೆಗೆ ಕಳುಹಿಸುವುದಕ್ಕಿಂತ ಮನೆಯಲ್ಲಿ ಇರುವುದು ಒಳ್ಳೆಯದು ಅಂತ ಅನ್ನಿಸುತ್ತಿದೆ ಎಂದು ಪೋಷಕರು ಹೇಳುತ್ತಿದ್ದಾರೆ.

    ಇನ್ನು ಮಕ್ಕಳಿಗೆ ಚಳಿಯಾಗದಂತೆ, ಬಿಸಿಲಿಗೆ ಹೆಚ್ಚಾಗಿ ಓಡಾಡದಂತೆ ತಡೆಯಬೇಕು. ಮಕ್ಕಳ ಬಗ್ಗೆ ಹೆಚ್ಚು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಹಾಗಿದ್ದಲ್ಲಿ ಮಾತ್ರ ವೈರಲ್ ಫೀವರ್ ತಡೆಯಲು ಸಾಧ್ಯ ಎಂದು ವೈದ್ಯರು ಹೇಳಿದ್ದಾರೆ.

    ಒಟ್ಟಿನಲ್ಲಿ ಮಕ್ಕಳು ಮತ್ತು ವೃದ್ಧರು ಈ ವೈರಲ್ ಫೀವರ್‌ಗೆ ಹೈರಾಣಾಗುತ್ತಿದ್ದಾರೆ. ಜ್ವರ ಬರುವ ಮೊದಲೇ ಮುಂಜಾಗೃತಾ ಕ್ರಮ ಕೈಗೊಂಡರೆ ಇದರಿಂದ ಪಾರಾಗಬಹುದಾಗಿದೆ.

    Continue Reading

    DAKSHINA KANNADA

    ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಭೇಟಿ ಮಾಡಿದ ಸಂಸದ ಚೌಟ

    Published

    on

    ಮಂಗಳೂರು : ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಶೀರ್ವಾದ ಪಡೆದು ಪಡೆದು ವಿದ್ಯಮಾನಗಳ ಕುರಿತು ಮಾತನಾಡಿದರು.

    ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

    Continue Reading

    LATEST NEWS

    ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ

    Published

    on

    ಕೋಟ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ವಯೋಸಹಜ ಅಸೌಖ್ಯದಿಂದ ನಿನ್ನೆ(ಜೂ.30) ನಿಧ*ನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು.

    ಮೃ*ತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ನಿಧ*ನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಇದನ್ನೂ ಓದಿ : ‘ಎಲ್ಲಾ ಹಣೆಬರಹ..ನಾವೇನು ಮಾಡೋಕ್ಕಾಗಲ್ಲ…’ ದರ್ಶನ್ ಕೊಲೆ ಪ್ರಕರಣದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ

    Continue Reading

    LATEST NEWS

    Trending