ಉಡುಪಿ: ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಖಾಸಗಿ ಬಸ್ ಕಂಡಕ್ಟರ್ಗೆ ಸ್ಥಳೀಯರು ಹಿಗ್ಗಾಮುಗ್ಗ ಗೂಸಾ ನೀಡಿದ ಘಟನೆ ಸಂತೆಕಟ್ಟೆಯ ನರ್ಸಿಂಗ್ ಕಾಲೇಜು ಬಳಿ ನಿನ್ನೆ ನಡೆದಿದೆ.
ಹೆಬ್ರಿಯ ಖಾಸಗಿ ಬಸ್ ನ ಕಂಡಕ್ಟರ್ ಉಪೇಂದ್ರ ಎನ್ನುವಾತ ಸಂತೆಕಟ್ಟೆಯ ನರ್ಸಿಂಗ್ ಕಾಲೇಜ್ ಬಳಿ ತನ್ನ ಸ್ಕೂಟಿಯಲ್ಲಿ ಬಂದು ಅಲ್ಲಿನ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಮಾತ್ರವಲ್ಲದೆ ಕೈಸನ್ನೆ, ಕಣ್ಣ್ ಸನ್ನೆ ಮಾಡುತ್ತ ಯುವತಿಯರ ಜೊತೆ ಅಶ್ಲೀಲವಾಗಿ ವರ್ತಿಸುತ್ತಿದ್ದ ಎಂದು ದೂರಲಾಗಿತ್ತು.
ಆದರೆ ನಿನ್ನೆ ಕಾಲೇಜ್ ನ ಮುಖ್ಯಸ್ಥರು, ವಿದ್ಯಾರ್ಥಿನಿಯರು ಇರುವಾಗಲೇ ತನ್ನ ಈತ ತನ್ನ ಎಂದಿನ ಆಟ ತೋರಿಸಿದ್ದಾನೆ ಇದನ್ನು ಕಂಡ ಅಲ್ಲೇ ಇದ್ದ ಕಾಲೇಜ್ ನ ಸಿಬ್ಬಂದಿ, ವಿದ್ಯಾರ್ಥಿಗಳು ಬಸ್ ಕಂಡಕ್ಟರ್ ನ ಅಟ್ಟಡಿಸಿದ್ದಾರೆ.
ಈ ವೇಳೆ ಅಲ್ಲಿಂದ ಎದ್ನೋ ಬಿದ್ನೋ ಅಂತ ತೆಂಕನಿಡಿಯೂರ್ ಓಡಿದ ಉಪೇಂದ್ರನ ಹಿಡಿದು ಬಾಯಿ ಬಿಡಿಸಿದಾಗ ಘಟನೆ ವಿವರಿಸುತ್ತಿದ್ದಂತೆ ನೇರ ಕಾಲೇಜ್ ಗೆ ಕರೆದುಕೊಂಡು ಹೋಗಿ ವಿದ್ಯಾರ್ಥಿನಿಯರ ಕೈಗೆ ಕಂಡಕ್ಟರ್ ನನ್ನು ನೀಡಿದ್ದಾರೆ.
ದಿನ ನಿತ್ಯ ಕಿರುಕುಳ ನೀಡುತ್ತಿದ್ದವನು ಈತನೇ ಎಂದು ತಿಳಿದು ಮತ್ತೆ ಉಪೇಂದ್ರನನ್ನು ನರ್ಸಿಂಗ್ ವಿದ್ಯಾರ್ಥಿನಿಯರು ಹಣ್ಣುಗಾಯಿ ನೀರುಗಾಯಿ ಮಾಡಿದ್ದಾರೆ. ಬಳಿಕ ಉಡುಪಿ ನಗರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಸದ್ಯ ಬಸ್ ಕಂಡಕ್ಟರ್ ಪೊಲೀಸರ ಅತಿಥಿಯಾಗಿದ್ದಾನೆ