Connect with us

LATEST NEWS

ಟೈಟಾನಿಕ್‌ ಅವಶೇಷ ನೋಡಲು ಹೋದವರ ದುರ್ಮರಣ: ಅಮೆರಿಕಾ ಕೋಸ್ಟ್ ಗಾರ್ಡ್‌ ಘೋಷಣೆ..!

Published

on

ಜಗತ್​ ಪ್ರಸಿದ್ಧಿ ಪಡೆದ ಟೈಟಾನಿಕ್ ಹಡಗಿನ ಅವಶೇಷಗಳನ್ನು ವೀಕ್ಷಿಸಲು ತೆರಳಿ ಅಟ್ಲಾಂಟಿಕ್​ ಸಾಗರದಲ್ಲಿ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ನಾಪತ್ತೆಯಾಗಿದ್ದ ಸಬ್​ಮೆರಿನ್​ಗಾಗಿ \ನಡೆಯುತ್ತಿದ್ದ ಶೋಧ ಫಲ ನೀಡಿಲ್ಲ. ಸತತ ಮೂರು ದಿನದಿಂದಲೂ ಹುಡುಕಾಟ ನಡೆಸಿದ್ದ ತಜ್ಞರಿಗೆ ಸಬ್‌ಮೆರಿನ್‌ ಸ್ಟೋಟಗೊಂಡು ಅದರಲ್ಲಿದ್ದ ಐವರೂ ,ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ.

ಲಂಡನ್‌: ದಶಕಗಳ ಹಿಂದೆಯೇ ಮುಳುಗಿ ಹೋಗಿರುವ ಟೈಟಾನಿಕ್‌ ಹಡಗಿನ ಅವಶೇಷಗಳನ್ನು ವೀಕ್ಷಿಸಲು ಹೋದ ಐವರು ದುರಂತದಲ್ಲಿ ಮೃತಪಟ್ಟಿರುವುದು ಖಚಿತಪಟ್ಟಿದೆ.

ಸತತ ನಾಲ್ಕೈದು ದಿನದಿಂದಲೂ ಹುಡುಕಾಟ ನಡೆಸಿ ಸಬ್‌ಮೆರಿನ್‌ ಸ್ಟೋಟಗೊಂಡು ಅದರಲ್ಲಿದ್ದ ಐವರೂ ,ಮೃತಪಟ್ಟಿರುವುದಾಗಿ ಘೋಷಿಸಲಾಗಿದೆ.

ಟೈಟಾನಿಕ್‌ ಹಡಗಿನ ಅವಶೇಷಗಳಿಂದ 1,600 ಮೀಟರ್‌ ಕೆಳಕ್ಕೆ ಕಂಡಿರುವ ತ್ಯಾಜ್ಯ ಆಧರಿಸಿ ಅಮೆರಿಕಾ ಕೋಸ್ಟಲ್‌ ಗಾರ್ಡ್‌ ಈ ನಿರ್ಧಾರಕ್ಕೆ ಬಂದಿದೆ.

ರಿಮೋಟ್‌ ಕಂಟ್ರೋಲ್‌ ವಾಹನ ನಡೆಸಿದ್ದ ತಪಾಸಣೆ ಹಾಗೂ ನೀಡಿದ ಮಾಹಿತಿ ಆಧರಿಸಿ ಸಬ್‌ ಮೆರಿನ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಮೃತಪಟ್ಟಿರುವುದು ಖಚಿತವಾಗಿದ್ದು, ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ ಎಂಧು ರಿಯರ್‌ ಅಡ್ಮಿರಲ್‌ ಜಾನ್‌ ಮಾಗರ್‌ ತಿಳಿಸಿದ್ದಾರೆ.

ಸಾಹಸ ಪ್ರವಾಸಿ ಚಟುವಟಿಕೆಗಳಲ್ಲಿ ಆಸಕ್ತಿ ಹೊಂದಿದ್ದ ಅಮೆರಿಕಾದ ಉದ್ಯಮಿ ಹಮಿಷ್‌ ಹರ್ಡಿಂಗ್‌ (58), ಫ್ರಾನ್ಸ್‌ನ ಪಾಲ್‌ ಹೆನ್ರಿ ನಾರ್ಗಿಯೋ ಲೆಟ್‌( 7 7), ಪಾಕಿಸ್ತಾನದ ಉದ್ಯಮಿ ಶಹಜಾದ ದಾವೂದ್‌( 48), ಅವರ ಪುತ್ರ ಸುಲೇಮಾನ್‌ ದಾವೂದ್‌( 19 ), ಈ ಸಾಹಸ ಯಾನ ಆಯೋಜಿಸಿದ್ದ ಓಷನ್‌ ಗೇಟ್‌ ಸಿಇಒ ಸ್ಟಾಕ್‌ಟನ್‌ ರಶ್‌(61) ಮೃತರು.

ಇವರೆಲ್ಲರೂ ನಿಜವಾಗಿಯೂ ಸಾಹಸ ಯಾನಗಳಲ್ಲಿ ಆಸಕ್ತಿ ಹೊಂದಿದವರು. ಅದರಲ್ಲೂ ಸಮುದ್ರದ ಆಳದ ವಿಶೇಷತೆಗಳನ್ನು ಅರಿಯುವ ಕುತೂಹಲ ಇದ್ದವರು.

ಬೇರೆ ಬೇರೆ ಕಡೆ ಇಂತಹ ಸಾಹಸ ಯಾನ ಮಾಡಿರುವ ಅನುಭವ ಇದ್ದವರು. ಈ ಬಾರಿ ಟೈಟಾನಿಕ್‌ ಹಡಗಿನ ಅವಶೇಷ ನೋಡಲು ಹೊರಟಿದ್ದರು.

ಅವರಿದ್ದ ಸಬ್‌ ಮೆರಿನ್‌ ನಾಪತ್ತೆಯಾಗಿತ್ತು. 96 ಗಂಟೆ ಕಾಲ ಆಮ್ಲಜನಕ ಪೂರೈಕೆ ಸಾಮರ್ಥ್ಯ ಇದ್ದ ಸಬ್‌ ಮೆರಿನ್‌ ಅವಧಿ ಮುಗಿದ ನಂತರ ಸ್ಪೋಟಗೊಂಡಿತ್ತು.

ಅದರ ಸಂಪರ್ಕವೂ ಆನಂತರ ತಜ್ಞರಿಗೆ ಸಿಕ್ಕಿರಲಿಲ್ಲ.

ವಿಶ್ವದ ನಾನಾ ಭಾಗಗಳ ತಜ್ಞರ ತಂಡ ಹಲವು ರೀತಿಯಲ್ಲಿ ಸಬ್‌ ಮೆರಿನ್‌ನಲ್ಲಿರುವ ಐವರ ರಕ್ಷಣೆಗೆ ಪ್ರಯತ್ನ ನಡೆಸಿತ್ತು.

ರೇಡಾರ್ ಸಾಮರ್ಥ್ಯವುಳ್ಳ ಎಸಿ-130 ವಿಮಾನವನ್ನು ಕಣ್ಮರೆಯಾದ ಸಬ್​ಮೆರಿನ್​ ಹುಟುಕಾಟಕ್ಕೆ ರವಾನಿಸಲಾಗಿತ್ತು.

ಒಂದು ಬಾರಿ ಸಬ್‌ ಮೆರಿನ್‌ ಭಾಗದಿಂದ ಶಬ್ದಗಳು ಬಂದಿದ್ದರಿಂದ ಹುಡುಕಾಟ ತೀವ್ರಗೊಂಡಿತ್ತು.

ಆನಂತರ ಆ ಶಬ್ದ ಇದರದ್ದಲ್ಲ ಎನ್ನುವುದು ತಿಳಿದುಬಂದಿತ್ತು.ಬೃಹತ್ ಪೈಪ್-ಲೇಯಿಂಗ್ ಹಡಗಿನ ಮೂಲಕ ಸುದೀರ್ಘವಾಗಿ ಶೋಧ ನಡೆಸಿವೆ.

1985ರಲ್ಲಿ ಟೈಟಾನಿಕ್ ಅನ್ನು ಕಂಡುಹಿಡಿಯಲು ಬಳಸಿದ ಆಪ್ಟಿಕಲ್ ಇಮೇಜಿಂಗ್ ಸಿಸ್ಟಮ್ ಅಭಿವೃದ್ಧಿಪಡಿಸಿದ ತಂಡಗಳೇ ಮೂರು ಪ್ರತ್ಯೇಕ ಸ್ಥಳಗಳಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ಮಿನಿ-ಸಬ್​ಮೆರಿನ್​ ಸಾಗರದಾಳದಲ್ಲಿ ಅಡಗಿದ್ದರೆ, ಅದನ್ನು ಗುರುತಿಸುವುದು ತುಂಬಾ ಕಷ್ಟ. ಸಮುದ್ರದ ತಳವು ಸಮತಟ್ಟಾಗಿಲ್ಲ.

ಸಾಕಷ್ಟು ಬೆಟ್ಟಗಳು ಮತ್ತು ಕಣಿವೆಗಳಿಂದ ಕೂಡಿದೆ. ಅವರನ್ನು ರಕ್ಷಿಸುವುದು ಸಾಹಸದಾಯಕ ಎಂದು ಬ್ರಿಟನ್‌ನ ಕೀಲೆ ವಿಶ್ವವಿದ್ಯಾನಿಲಯದ ಫೊರೆನ್ಸಿಕ್ ಜಿಯೋಸೈನ್ಸ್‌ನ ಪ್ರೊಫೆಸರ್ ಜೇಮೀ ಪ್ರಿಂಗಲ್ ಮೂರು ದಿನದ ಹಿಂದೆಯೇ ಮಾಹಿತಿ ನೀಡಿದ್ದರು.

ವಿಶ್ವವಿಖ್ಯಾತ ದೈತ್ಯ ಟೈಟಾನಿಕ್ ಹಡಗು ಮುಳುಗಿ ದಶಕಗಳು ಕಳೆದಿವೆ. ಅದರೂ ಆ ಹಡಗಿನ ಬಗೆಗಿನ ಕೌತುಕ ಹೆಚ್ಚಾಗುತ್ತಲೇ ಇದೆ.

ಈ ಹಡಗಿನ ಅವಶೇಷಗಳನ್ನು ನೋಡುವ ಕುತೂಹಲ ಎಲ್ಲರಿಗೂ ಇದೆ.

ಈ ಹಡಗು ಉತ್ತರ ಅಟ್ಲಾಂಟಿಕ್​ ಸಾಗರದಲ್ಲಿ ಮುಳುಗಿದ್ದು, ಅವಶೇಷಗಳನ್ನು ಕಣ್ತುಂಬಿಕೊಳ್ಳುವುದು ಕೂಡ ಪ್ರವಾಸೋದ್ಯಮದ ಭಾಗ. ಇದು ಬಲು ದುಬಾರಿ ಪ್ರವಾಸ.

ಟೈಟಾನಿಕ್ ಅವಶೇಷಗಳನ್ನು ಕಣ್ತುಂಬಿಕೊಳ್ಳಲು ಇಚ್ಛಿಸುವ ಪ್ರವಾಸಿಗರು 2,50,000 ಡಾಲರ್ (20,497,987) (ಒಂದು ಆಸನಕ್ಕೆ) ಶುಲ್ಕ ಪಾವತಿಸಿ ಹೊರಟಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ.

DAKSHINA KANNADA

ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!

Published

on

ಪುತ್ತೂರು : ಪುತ್ತೂರಿನ ಬೆಟ್ಟಂಪ್ಪಾಡಿಯಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾ*ವನ್ನಪ್ಪಿದ್ದು, ಈ ಬಗ್ಗೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿ ಮೃ*ತ ಯುವಕನ ತಾಯಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

 ಪಕ್ಕದ ಮನೆ ಕದ ತಟ್ಟಿದ ಮಗ; ಸಂಕೋಲೆ ಹಾಕಿ ಎಳೆತಂದ ತಾಯಿ :  

ಬೆಟ್ಟಂಪ್ಪಾಡಿಯ ನಿವಾಸಿ ಚೇತನ್ (33) ಮೃ*ತ ಪಟ್ಟಿರುವ ಯುವಕ. ನಿನ್ನೆ ರಾತ್ರಿ ಕುಡಿದು ಮನೆಗೆ ಬಂದಿದ್ದ ಚೇತನ್ ತಾಯಿ ಜತೆ ಜಗಳವಾಡಿದ್ದ.  ಬಳಿಕ ಪಕ್ಕದ ಯೂಸುಫ್ ಎನ್ನುವವರ ಮನೆ ಬಾಗಿಲು ಬಡಿದಿದ್ದ. ಈ ಬಗ್ಗೆ ಯೂಸುಫ್ ಅವರು ಚೇತನ್ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದರು.

ಕೂಡಲೇ ಯೂಸುಫ್ ಮನೆಗೆ ಬಂದ ಚೇತನ್ ತಾಯಿ ನಾಯಿಯನ್ನು ಕಟ್ಟುವ ಸಂಕೊಲೆಯನ್ನು ಚೇತನ್ ಸೊಂಟಕ್ಕೆ ಕಟ್ಟಿ ಮನೆಗೆ ಎಳೆದೊಯ್ದಿದ್ದರು. ಇದಕ್ಕೆ ಯೂಸುಫ್ ಸೇರಿದಂತೆ ಸ್ಥಳೀಯ ನಿವಾಸಿಗಳು ಸಾಥ್‌ ನೀಡಿದ್ದರು. ಎಳೆದೊಯ್ಯುವ ಸಂದರ್ಭದಲ್ಲಿ ಚೇತನ್‌ನ ಕುತ್ತಿಗೆಗೆ ಸಂಕೋಲೆ ಸುತ್ತಿಕೊಂಡಿದೆ ಎನ್ನಲಾಗಿದೆ.  ಇದರಿಂದಾಗಿ ಚೇತನ್‌ ಸಾ*ವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಆದರೆ ಚೇತನ್ ನೇಣು ಬಿಗಿದು ಸಾ*ವನ್ನಪ್ಪಿದ್ದಾನೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದರು.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್

ಮೃ*ತ ದೇಹ ನೋಡಿ ಅನುಮಾನಗೊಂಡ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಕೊಂಡಿದ್ದರು. ಘಟನೆಗೆ ಸಂಬಂಧಿಸಿ ತಾಯಿ ಉಮಾವತಿ ಸೇರಿದಂತೆ ಮೂವರನ್ನು ವಶಕ್ಕೆ ಪಡೆದಿರುವ ಪೋಲೀಸರು ಮೃ*ತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿಗೆ ರವಾನಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಾಗಿದೆ.

Continue Reading

DAKSHINA KANNADA

ಹೊಸ ಮನೆಗೆ ಸ್ಥಳಾಂತರಿಸುವಾಗ ಈ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿ

Published

on

ಮಂಗಳೂರು: ಪ್ರತಿಯೊಬ್ಬರಿಗೂ ತಮ್ಮದೇ ಆದ ಸ್ವಂತ ಮನೆಯನ್ನು ಹೊಂದಿರಬೇಕು ಎನ್ನುವ ಕನಸು, ಆಸೆ ಇದ್ದೇ ಇರುತ್ತದೆ. ಮನೆ ಕಟ್ಟುವುದು ಆಗಲಿ ಅಥವಾ ಕೊಂಡುಕೊಳ್ಳುವುದಾಗಲಿ ಅದೇನು ಸುಲಭದ ಮಾತಲ್ಲ. ಬ್ಯಾಂಕ್‌ನಲ್ಲಿ, ಸ್ನೇಹಿತರಲ್ಲಿ, ಕುಟುಂಬದವರಲ್ಲಿ ಸಾಲ ಮಾಡಿ ಹೇಗೊ ಮನೆ ಖರೀದಿಸುತ್ತೇವೆ. ಆದರೆ ಕನಸಿನ ಮನೆ ವಾಸ್ತವಕ್ಕೆ ಬಂದಾಗ ಅದರಲ್ಲಿ ಆಗುವ ಖುಷಿಯೇ ಬೇರೆ.

ಮನೆ ಬದಲು ಮಾಡುವಾಗ ಈ ವಿಷಯ ನೆನಪಿಡಿ

ತಮ್ಮ ಹೊಸ ಮನೆಗೆ ಹೋಗುವ ಖುಷಿಯಲ್ಲಿ ಜನರು ಸಾಮಾನ್ಯವಾಗಿ ಕೆಲವು ವಿಷಯಗಳನ್ನು ಮರೆತು ಬಿಡುತ್ತಾರೆ. ಇದರಿಂದಾಗಿ ಅವರಿಗೆ ನಂತರದ ದಿನಗಳಲ್ಲಿ ಸಮಸ್ಯೆ ಆಗಬಹುದು. ನೀವು ಮನೆ ಬದಲು ಮಾಡುವಾಗ ಕೆಲವು ಪ್ರಮುಖ ವಿಷಯಗಳನ್ನು ತಿಳಿದುಕೊಳ್ಳಿ.

ಮನೆಯ ಪ್ರತಿಯೊಂದು ಮೂಲೆಯನ್ನು ಪರಿಶೀಲಿಸಿ

ನೀವು ಹೊಸ ಮನೆಗೆ ಸ್ಥಳಾಂತರಗೊಳ್ಳುತ್ತಿದ್ದರೆ ಮೊದಲು ನೀವು ದಿನ ಬಳಕೆಯ ವಿಷಯಗಳತ್ತ ಗಮನ ಕೊಡಬೇಕು. ಆದುದರಿಂದ ನಿಮ್ಮ ಮನೆಯ ಪ್ರತಿಯೊಂದು ನಳ್ಳಿಯಲ್ಲಿ ನೀರು ಬರುತ್ತಿದ್ದೇಯೋ, ವಾಶ್ ರೂಂ ಅನ್ನು ಚೆನ್ನಾಗಿ ಪರಿಶೀಲಿಸಿ, ಮನೆಯ ಫ್ಯಾನ್, ಲೈಟ್ ಸರಿಯಾಗಿ ಇದೆಯೋ ಎಂದು ಗಮನಿಸಿ. ಇದರಿಂದ ಹೊಸ ಮನೆಗೆ ಬಂದ ತಕ್ಷಣ ಯಾವೂದೇ ಸಮಸ್ಯೆ ಎದುರಾಗುವುದಿಲ್ಲ.

ಶುಚಿಗೊಳಿಸುವಿಕೆಯನ್ನು ಮುಂಚಿತವಾಗಿ ಮಾಡಿ

ಹೊಸ ಮನೆಗೆ ಸ್ಥಳಾಂತರಗೊಳ್ಳುವ ಮೊದಲು ಒಮ್ಮೆ ಸ್ವಚ್ಛಗೊಳಿಸಬೇಕು. ಏಕೆಂದರೆ ವಸ್ತುಗಳನ್ನು ಸ್ಥಳಾಂತರಿಸಿದ ನಂತರ ನಿಮಗೆ ಸ್ವಚ್ಛಗೊಳಿಸಲು ಕಷ್ಟವಾಗಬಹುದು. ಮನೆಯನ್ನು ಬದಲಾಯಿಸಿದ ನಂತರವೂ ಕೊಳಕು ಕಾಣುತ್ತದೆ. ಹೀಗಾಗಿ ಹೊಸ ಮನೆಗೆ ಬಂದ ನಂತರ ಮೊದಲ ದಿನದಿಂದಲೇ ಮನೆಯನ್ನು ಶುಚಿಯಾಗಿಡಿ.

ಪ್ಯಾಕಿಂಗ್ ವಿಧಾನ

ಹೊಸ ಮನೆಗೆ ಬದಲಾಯಿಸುವ ಮೊದಲು ಹಳೆಯ ವಸ್ತುಗಳನ್ನು ಪ್ಯಾಕಿಂಗ್ ಮಾಡುವುದು ದೊಡ್ಡ ಸಮಸ್ಯೆಯಾಗಿದೆ. ಆದ್ಧರಿಂದ ಸರಕುಗಳನ್ನು ಪ್ಯಾಕ್ ಮಾಡುವಾಗ ಪೆಟ್ಟಿಗೆಯಲ್ಲಿ ಹೆಸರನ್ನು ಬರೆಯಿರಿ. ಇದರಿಂದಾಗಿ ಬಾಕ್ಸ್ ತೆರೆಯುವಾಗ ಯಾವೂದೇ ಗೊಂದಲ ಉಂಟಾಗುವುದಿಲ್ಲ.

ಪೀಠೋಪಕರಣಗಳ ಬಗ್ಗೆಯೂ ಕಾಳಜಿ ವಹಿಸಿ​

ಸ್ಥಳಾಂತರಗೊಳ್ಳುವ ಮೊದಲು, ಮನೆಯ ಪೀಠೋಪಕರಣಗಳು ನಿಮ್ಮ ಅಗತ್ಯಗಳಿಗೆ ಸರಿಹೊಂದುತ್ತವೆಯೇ ಅಥವಾ ಇಲ್ಲವೇ ಎಂಬುದನ್ನು ಸಹ ನೀವು ಪರಿಶೀಲಿಸಬೇಕು. ನಿಮಗೆ ಸರಿಹೊಂದುವ ಸ್ಥಳದಲ್ಲಿ ಹಾಗೂ ಕೆಲವೊಂದು ವಸ್ತುಗಳನ್ನು ವಾಸ್ತು ಪ್ರಕಾರವೇ ಇಡಬೇಕಾಗುತ್ತದೆ. ಆದ್ದರಿಂದ ಅದರ ಬಗ್ಗೆ ಕಾಳಜಿ ವಹಿಸಿ.

Continue Reading

LATEST NEWS

ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್

Published

on

ಚಿಕ್ಕಮಗಳೂರು : ಸದ್ಯ ಪ್ರಜ್ವಲ್ ಹೆಸರು ದೇಶದಾದ್ಯಂತ ಚಾಲ್ತಿಯಂತಿದೆ. ಆತ ಮಾಡಿರುವ ಕುಕೃತ್ಯಕ್ಕೆ ಆಕ್ರೋಶ ಕೇಳಿ ಬರುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಬಂಧಿಸಲಾಗಿದೆ.

ಮೂಡುಗೆರೆ ತಾಲೂಕಿನ ಸಂಸೆ ಗ್ರಾಮದ ಪ್ರಜ್ವಲ್ ಬಂಧಿತ. ಆರೋಪಿ ಪ್ರಜ್ವಲ್, ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ಎಂದು ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡಿದ್ದನು. ಪ್ರಜ್ವಲ್ ವಿರುದ್ಧ ಕುದುರೆಮುಖ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 67,67 (ಎ) ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಪ್ರಜ್ವಲ್​ ಟ್ರೋಲ್ ಪೇಜ್ ಅಡ್ಮಿನ್ ಆಗಿದ್ದ. ಸದ್ಯ ಪ್ರಜ್ವಲ್ ರೇವಣ್ಣ ಲೈಂ*ಗಿಕ ದೌರ್ಜ*ನ್ಯ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಜರ್ಮನಿಗೆ ಎಸ್ಕೇಪ್ ಆಗಿದ್ದಾರೆ. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ.

ಎಚ್ಚರಿಕೆ ನೀಡಿದ್ದ ಬಿ.ಕೆ.ಸಿಂಗ್ :

ಈ ಬಗ್ಗೆ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದರು. ಅಶ್ಲೀಲ ವಿಡಿಯೋಗಳನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೇ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ : ಶಾಲಾ ಬಾಲಕಿಗೆ ಆಟೋ ಚಾಲಕನಿಂದ ಲೈಂಗಿಕ ಕಿರುಕುಳ.! ಹೇಯ ಕೃತ್ಯ ಮೊಬೈಲ್‌ ನಲ್ಲಿ ಸೆರೆ

ಅಶ್ಲೀಲ ವಿಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದರು.

 

Continue Reading

LATEST NEWS

Trending