DAKSHINA KANNADA
ಮೂಡುಶೆಡ್ಡೆ ಅಹಿತಕರ ಘಟನೆಗಳಿಗೆ ಮಿಥುನ್ ರೈ ಪ್ರಚೋದನೆ ಕಾರಣ: ಉಮಾನಾಥ ಕೋಟ್ಯಾನ್
ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯ ಮೂಡುಶೆಡ್ಡೆಯಲ್ಲಿ ಮೇ 10ರಂದು ನಡೆದ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪ್ರಚೋದನಕಾರಿ ನಡವಳಿಕೆಯೇ ಕಾರಣ ಎಂದು ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಹೇಳಿದರು.
ಮಂಗಳೂರು: ಮೂಡುಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಫ್ತಿಯ ಮೂಡುಶೆಡ್ಡೆಯಲ್ಲಿ ಮೇ 10ರಂದು ನಡೆದ ಅಹಿತಕರ ಘಟನೆಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರ ಪ್ರಚೋದನಕಾರಿ ನಡವಳಿಕೆಯೇ ಕಾರಣ ಎಂದು ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಹೇಳಿದರು.
ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಅವರು, ನಿನ್ನೆ ನಡೆದ ಘಟನೆಗಳ ಕುರಿತು ವಾಸ್ತವ ಸಂಗತಿಗಳನ್ನು ವಿವರಿಸಿದರು.
ಮೂಡುಶೆಡ್ಡೆ ಮತಗಟ್ಟೆಯಲ್ಲಿ ಮತದಾನ ಮುಗಿದು ಅಧಿಕಾರಿಗಳು ಮತಯಂತ್ರಗಳನ್ನು ಡಿಮಸ್ಟರಿಂಗ್ ಕೇಂದ್ರಕ್ಕೆ ಬಸ್ಗಳಲ್ಲಿ ಒಯ್ಯುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸುತ್ತಿದ್ದರು.
ಅದೇ ವೇಳೆಗೆ ದಿಢೀರನೆ ಅಲ್ಲಿಗೆ ಬಂದ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಬಿಜೆಪಿ ಕಾರ್ಯಕರ್ತರು ಸೇರಿದ್ದ ಪಕ್ಷದ ಬೂತ್ ಎದುರೇ ಕಾರು ನಿಲ್ಲಿಸಿ, ಮೋದಿ ಪರ ಘೋಷಣೆ ಕೂಗುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪ್ರಶ್ನಿಸಿದ್ದಲ್ಲದೆ ತಳ್ಳಾಡಿದರು.
ಆಗ ಅವರ ಜತೆಗೆ ಬಂದಿದ್ದ ಬೆಂಬಲಿಗರು ಕೂಡ ಬಿಜೆಪಿ ಕಾರ್ಯಕರ್ತರು, ಮಹಿಳೆಯರು ಮತ್ತು ಮಕ್ಕಳ ಮೇಲೂ ಹಲ್ಲೆ ಮತ್ತು ಕಲ್ಲು ತೂರಾಟ ನಡೆಸಿದರು ಎಂದು ಘಟನೆಗೆ ಪ್ರತ್ಯಕ್ಷದರ್ಶಿಯಾಗಿದ್ದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷೆ ಹಾಗೂ ಬಿಜೆಪಿ ಕಾರ್ಯಕರ್ತೆ ಕವಿತಾ ದಿನೇಶ್ ಆರೋಪಿಸಿದರು.
ಮಿಥುನ್ ರೈ ಕಾರು ಬಾಗಿಲು ತೆಗೆದಾಗ ಕೆಲವು ಮಂದಿ ಕೆಳಗೆ ಬಿದ್ದು ಕಾಲ್ತುಳಿತಕ್ಕೆ ಒಳಗಾಗುವ ಸನ್ನಿವೇಶ ಉಂಟಾಗಿತ್ತು.
ಸ್ವತಃ ನನ್ನ ಮೇಲೂ ಕಾಂಗ್ರೆಸ್ ಕಾರ್ಯಕರ್ತರು ತೂರಿದ ಕಲ್ಲು ಬಿದ್ದು ಏಟಾಗಿದೆ.
ಬಿಜೆಪಿ ಬಗ್ಗೆ ಸುಳ್ಳು ಆರೋಪ ಮಾಡುವ ಬದಲು ನಿಮ್ಮ ಕಡೆಯಿಂದ ಆಗಿರುವ ತಪ್ಪುಗಳ ಬಗ್ಗೆ ಸ್ಪಷ್ಟನೆ ಕೊಡಿ ಎಂದು ಕವಿತಾ ದಿನೇಶ್ ಆಗ್ರಹಿಸಿದರು.
ಕಾಂಗ್ರೆಸ್ ಕಾರ್ಯಕರ್ತರ ಪ್ರಚೋದನಕಾರಿ ನಡವಳಿಕೆಗೆ ಬಿಜೆಪಿ ಹಾಗೂ ಪರಿವಾರ ಸಂಘಟನೆಗಳ ಕಾರ್ಯಕರ್ತರು ತೀವ್ರ ಪ್ರತಿರೋಧ ತೋರಿದರು.
ಅವರಿಗೆ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಿಕೊಡಲಾಗಿದೆ ಎಂದು ಉಮಾನಾಥ ಕೋಟ್ಯಾನ್ ತಿಳಿಸಿದರು.
ಕಾಂಗ್ರೆಸ್ ಆರೋಪವನ್ನು ಉಲ್ಲೇಖಿಸಿ ಮಾಧ್ಯಮ ಪ್ರತಿನಿಧಿಯೊಬ್ಬರು ಕೇಳಿದ ಪ್ರಶ್ನೆಗೆ, ಪ್ರಧಾನಿ ಮೋದಿ ಪರ ಘೋಷಣೆ ಕೂಗುವುದು ನಮ್ಮ ಜನ್ಮಸಿದ್ಧ ಹಕ್ಕು.
ಅವರ ಪರ ಬಿಜೆಪಿ ಕಾರ್ಯಕರ್ತರಲ್ಲದೆ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಹಾಕುವರೆ? ಅಂತಹ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನೇರವಾಗಿ ಬಿಜೆಪಿ ಕಾರ್ಯಕರ್ತರ ಗುಂಪಿನ ಎದುರೇ ಕಾರು ನಿಲ್ಲಿಸಿ ಪ್ರಚೋದನಕಾರಿಯಾಗಿ ನಡೆದುಕೊಂಡಿರುವುದು ತಪ್ಪು.
ಒಂದು ವೇಳೆ ಅವರು ಸಂಯಮವಹಿಸಿ ಸ್ವಲ್ಪ ದೂರ ಹೋಗಿ ಕಾಂಗ್ರೆಸ್ ಬೂತ್ ಎದುರೇ ಕಾರು ನಿಲ್ಲಿಸಿದ್ದರೆ ಅಹಿತಕರ ಘಟನೆಗಳಿಗೆ ಆಸ್ಪದವೇ ಇರಲಿಲ್ಲ ಎಂದು ಕೋಟ್ಯಾನ್ ಉತ್ತರಿಸಿದರು.
ಕಾಂಗ್ರೆಸ್ ಕಾರ್ಯಕರ್ತರ ಕಲ್ಲು ತೂರಾಟದಿಂದ ಪೊಲೀಸ್ ವಾಹನಗಳಿಗೂ ಹಾನಿಯಾಗಿದೆ.
ಕಾಂಗ್ರೆಸಿಗರು ಪೊಲೀಸರ ಮೇಲೂ ಹಲ್ಲೆ ನಡೆಸಿದ್ದಾರೆ.
ಸೋಲಿನ ಭೀತಿಯಿಂದ ಹತಾಶರಾದ ಕಾಂಗ್ರೆಸ್ ಅಭ್ಯರ್ಥಿ ಈ ರೀತಿ ಗಲಾಟೆ ಮಾಡಿಸಿ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳನ್ನು ಕೊಡಿಸಿದ್ದಾರೆ.
ಅವರ ನಡವಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕೋಟ್ಯಾನ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮೂಡುಬಿದಿರೆ ಬಿಜೆಪಿ ಮಂಡಲ ಅಧ್ಯಕ್ಷ ಸುನಿಲ್ ಆಳ್ವ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಉಮೇಶ್ ಶೆಟ್ಟಿ, ಮೂಡುಶೆಡ್ಡೆ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ, ಹಾಲಿ ಅಧ್ಯಕ್ಷೆ ಜಯಶ್ರೀ ಉಪಸ್ಥಿತರಿದ್ದರು.
DAKSHINA KANNADA
‘ನಾಟು ನಾಟು’ ರೀತಿಯ ಸಾಂಗ್..! ಕುತೂಹಲ ಮೂಡಿಸಿದ ‘ವಾರ್ 2’
2019 ರಲ್ಲಿ ಸೂಪರ್ ಹಿಟ್ ಆಗಿದ್ದ ‘ವಾರ್’ ಸಿನೆಮಾದ ಸೆಕಂಡ್ ವರ್ಷನ್ ‘ವಾರ್ 2’ ತೆರೆ ಮೇಲೆ ಬರಲು ಭರದ ಸಿದ್ಧತೆ ನಡೆಸಿದೆ. ‘ವಾರ್’ ಸಿನೆಮಾದಲ್ಲಿ ‘ ಜೈ ಜೈ ಶಿವಶಂಕರ್’ ಹಾಡು ಸುಪರ್ ಹಿಟ್ ಆಗಿದ್ದು ಫ್ಯಾನ್ಸ್ಗಳು ಹಾಡಿಗೆ ಫಿದಾ ಆಗಿದ್ರು. ಟೈಗರ್ ಶ್ರಾಫ್ ಹಾಗೂ ಹೃತಿಕ್ ರೋಷನ್ ನಟನೆಯ ‘ವಾರ್’ ಸಿನೆಮಾ ಬಳಿಕ ಈಗ ‘ವಾರ್ 2’ ರೆಡಿ ಆಗ್ತಾ ಇದೆ. ಇದರಲ್ಲಿ ಹೃತಿಕ್ ರೋಷನ್ ಹಾಗೂ ಜ್ಯೂನಿಯರ್ ಎನ್ಟಿಆರ್ ಜೊತೆಯಾಗಿದ್ದಾರೆ.
ಅದ್ಧೂರಿಯಾಗಿ ನಿರ್ಮಾಣ ಆಗ್ತಾ ಇರೋ ‘ವಾರ್ 2’ ಸಿನೆಮಾಗೆ ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲಾಗ್ತಾ ಇದೆ. ಯಶ್ ರಾಜ್ ಫಿಲಂಸ್ ಸಂಸ್ಥೆ ಈ ‘ವಾರ್ 2’ ಸಿನೆಮಾಗೆ ಬಂಡವಾಳ ಹಾಕುತ್ತಿದೆ. ‘ವಾರ್’ ಸಿನೆಮಾದಂತೆ ಈ ಸಿನೆಮಾದಲ್ಲೂ ವಿಶೇಷ ಹಾಡನ್ನ ಸಿನೆಮಾ ತಂಡ ಪ್ಲ್ಯಾನ್ ಮಾಡಿದೆ. ಜೂನಿಯರ್ ಎನ್ಟಿಆರ್ ಅವರ ಆಸ್ಕರ್ ಅವಾರ್ಡ್ ವಿನ್ ಆಗಿದ್ದ ‘ನಾಟು ನಾಟು” ಹಾಡಿನಂತೆ ಇರೋ ಹಾಡಿಗೆ ಹೃತಿಕ್ ಹಾಗೂ ಜ್ಯೂನಿಯರ್ ಎನ್ಟಿಆರ್ ಹೆಜ್ಜೆ ಹಾಕಲಿದ್ದಾರೆ ಎನ್ನಲಾಗಿದೆ. ‘ನಾಟು ನಾಟು’ ರೀತಿಯ ಹಾಡು ಹಾಗೂ ಡ್ಯಾನ್ಸ್ ‘ವಾರ್ 2’ ಸಿಎನಮಾದ ಹೈಲೈಟ್ ಆಗಲಿದೆ ಎಂದು ಬಾಲಿವುಡ್ ಹಂಗಾಮ ವರದಿ ಮಾಡಿದೆ.
ಈಗಾಗಲೇ ‘ವಾರ್ 2’ ಚಿತ್ರದ ಶೂಟಿಂಗ್ ಆರಂಭವಾಗಿದೆ. ಚಿತ್ರದ ಸೆಟ್ ಫೋಟೋಗಳು ಕೂಡಾ ಲೀಕ್ ಆಗಿವೆ. ಅಯಾನ್ ಮುಖರ್ಜಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಆದಿತ್ಯ ಚೋಪ್ರಾ ಅವರು ದೊಡ್ಡ ಬಜೆಟ್ನಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ‘ವಾರ್ 2’ ಚಿತ್ರದಲ್ಲಿ ಕಿಯಾರಾ ಅಡ್ವಾಣಿ ನಟಿಸುತ್ತಿದ್ದಾರೆ. ಈ ಸಿನಿಮಾ 2025ರಲ್ಲಿ ಆಗಸ್ಟ್ 14ರಂದು ರಿಲೀಸ್ ಆಗಲಿದೆ.
DAKSHINA KANNADA
ಕಡಬ: ಬಿಳಿನೆಲೆ ಕಾಡಿನಲ್ಲಿ ಅಸ್ಥಿಪಂಜರ ಪತ್ತೆ ..!
ಕಡಬ: ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿಯಿರುವ ಕಾಡಿನಲ್ಲಿ ಅಸ್ಥಿಪಂಜರ ಪತ್ತೆಯಾಗಿರುವ ಬಗ್ಗೆ ಎ.19ರಂದು ವರದಿಯಾಗಿದೆ. ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದ ಪಕ್ಕದಲ್ಲಿ ಅಸ್ಥಿಪಂಜರ ದೊರಕಿದೆ.
ಬಿಳಿನೆಲೆಯ ಚಂದ್ರಶೇಖರ್ ಎಂವರು ಕಾಡಿಗೆ ಸೌದೆ ತರಲು ಹೋಗಿದ್ದಾಗ ಕೊಳೆತ ವಾಸನೆ ಬಂದಿದೆ. ಈ ಬಗ್ಗೆ ಹುಡುಕಾಡಿದಾಗ ಮೃತ ವ್ಯಕ್ತಿಯ ಅಸ್ಥಿಪಂಜರ ಕಂಡುಬಂದಿದೆ. ದೂರದದಲ್ಲಿದ್ದ ಮರದ ಕೊಂಬೆಯಲ್ಲಿ ಬಟ್ಟೆಯೊಂದು ನೇತಾಡುವುದು ಕಂಡು ಬಂದಿದೆ.
Read More..;ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!
ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿ ಆರ್:12/2024 ಕಲಂ:174(3),(iv) CrPC ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
DAKSHINA KANNADA
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್
ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!